Homeಕರ್ನಾಟಕಗೊಲ್ಲರ ಬೀದಿಗೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ; ದಂಡ ಕಟ್ಟಿಸಿಕೊಂಡ ಮುಖಂಡರು

ಗೊಲ್ಲರ ಬೀದಿಗೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ; ದಂಡ ಕಟ್ಟಿಸಿಕೊಂಡ ಮುಖಂಡರು

- Advertisement -
- Advertisement -

ಹಳೆ ಮನೆ ಕೆಡವಲು ಗೊಲ್ಲರಟ್ಟಿಗೆ ತೆರಳಿದ್ದ ದಲಿತ ಸಮುದಾಯದ ಜೆಸಿಬಿ ಆಪರೇಟರ್ ಯುವಕನನ್ನು, ಗೊಲ್ಲ ಸಮುದಾಯದ ಜನರು ಅಮಾನವೀಯವಾಗಿ ಥಳಿಸಿ, ದಂಡ ಕಟ್ಟಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದಲ್ಲಿ ಹೊಸ ವರ್ಷದ ದಿನದಂದೆ ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆದಿದ್ದು, ದಲಿತ ಸಂಘರ್ಷ ಸಮಿತಿ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಗೊಲ್ಲರ ಬೀದಿಯಲ್ಲಿರುವ ಗ್ರಾಮದ ದೇವಸ್ಥಾನಕ್ಕೆ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದಾಗ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು. ಆದರೆ, ಹಿರಿಯ ದಲಿತ ಮುಖಂಡರು ಹಾಗೂ ಪೊಲೀಸರು ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೆಸಿಬಿ ಆಪರೇಟರ್ ಮಾರುತಿ ಗೇರಮರಡಿ ಗ್ರಾಮದಲ್ಲಿ ಹಳೆ ಮನೆ ಕೆಡವಲು ತೆರಳಿದ್ದರು.

ನಡೆದದ್ದೇನು?

ತರೀಕೆರೆ ತಾಲೂಕಿನ ಎಚ್. ರಂಗಾಪುರ ಗ್ರಾಮದ ನಿವಾಸಿ, ಮಾದಿಗ ಸಮುದಾಯದ ಮಾರುತಿ ಎಂಬ ಜೆಸಿಬಿ ಆಪರೇಟರ್‌ನನ್ನು ಗೇರಮರಡಿ ಗ್ರಾಮದಲ್ಲಿ ಮನೆ ಕೆಡವುದಕ್ಕೆಂದು ಜನವರಿ 1ರಂದು ಕರೆಸಿಕೊಂಡಿದ್ದರು. ಆತ ತನ್ನ ಕೆಲಸ ಮುಗಿಸುವವರೆಗೂ ಸುಮ್ಮನಿದ್ದ ಗೊಲ್ಲ ಸಮುದಾಯದ ವ್ಯಕ್ತಿಗಳು, ಹಣ ನೀಡುವಾಗ ಆತನ ಹಿನ್ನೆಲೆ ಕೇಳಿದ್ದಾರೆ. ಸಹಜವಾಗಿಯೇ ಆತ ತನ್ನ ಊರು ಹಾಗೂ ಜಾತಿಯ ಗುರುತನ್ನು ಅವರ ಮುಂದೆ ಹೇಳಿದ್ದಾರೆ. ಮಾರುತಿ ಮಾದಿಗ ಸಮುದಾಯಕ್ಕೆ ಸೇರಿದವನು ಎಂದು ಗೊತ್ತಾಗುತ್ತಿದ್ದಂತೆಯೇ ಎಲ್ಲರೂ ಸೇರಿ ಆತನನ್ನು ಥಳಿಸಿದ್ದಾರೆ. ‘ಮಾದಿಗ ಸಮುದಾಯದ ನೀನು ನಮ್ಮ ಬೀದಿಗೆ ಯಾಕೆ ಬಂದಿದ್ದೀಯಾ’ ಎಂದು ಸ್ಥಳದಲ್ಲೇ ಕೂರಿಸಿಕೊಂಡು ಪಂಚಾಯಿತಿ ಮಾಡಿ, ಆತನಿಂದ ದಂಡ ಕಟ್ಟಿಸಿಕೊಂಡಿದ್ದಾರೆ ಎಂದು ದಸಂಸ ಮುಖಂಡರು ‘ನಾನುಗೌರಿ.ಕಾಂ‘ಗೆ ಮಾಹಿತಿ ನೀಡಿದ್ದಾರೆ.

ದಂಡ ಕಟ್ಟಿ ಗ್ರಾಮದಿಂದ ಹೊರಬಂದ ಮಾರುತಿ, ತನ್ನ ಮೇಲೆ ನಡೆದ ಹಲ್ಲೆ ಹಾಗೂ ದಂಡ ಕಟ್ಟಿದ್ದರ ಬಗ್ಗೆ ತನ್ನ ಆಪ್ತರು ಹಾಗೂ ದಸಂಸ ಮುಖಂಡರ ಬಳಿ ಹೇಳಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆ ಕುರಿತು ‘ನಾನುಗೌರಿ.ಕಾಂ’ ಜತೆಗೆ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಅಣ್ಣಯ್ಯ ಮರ್ಲೆ, ‘ಗ್ರಾಮದಲ್ಲಿ ದಲಿತರ ಮೇಲೆ ಹೇರಲಾಗಿರುವ ಸಾಮಾಜಿಕ ಬಹಿಷ್ಕಾರವನ್ನು ಈ ಕೂಡಲೇ ತೆಗೆಯಬೇಕು. ಗ್ರಾಮಕ್ಕೆ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಬೇಕು. ಹಲ್ಲೆ ಮಾಡಿದವರಿಗೆ ಶಾಸಕರ ಬೆಂಬಲ ಇದೆ, ಅವರು ಸಾಮಾಜಿಕ ನ್ಯಾಯಯದ ಪರವಾಗಿ ಇರಬೇಕು. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಂಡು, ಥಳಿತಕ್ಕೆ ಒಳಗಾದ ದಲಿತ ಯುವಕನಿಗೆ ಸರ್ಕಾರ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

‘ಹೊಸ ವರ್ಷದ ದಿನದಂದು ಗ್ರಾಮದ ಗೊಲ್ಲ ಬೀದಿಯ ನಿವಾಸಿಗಳು ಮಾರುತಿ (34) ಎಂಬ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ತರೀಕೆರೆ ವೃತ್ತ ನಿರೀಕ್ಷಕ ವೀರೇಂದ್ರ ತಿಳಿಸಿದ್ದಾರೆ.

‘ನಾವು 30-35 ಜನರ ವಿರುದ್ಧ ಭಾರತೀಯ ದಂಡನೆಯ ಸೆಕ್ಷನ್ 143 (ಕಾನೂನುಬಾಹಿರ ಸಭೆ), 149 (ಕಾನೂನುಬಾಹಿರ ಸಭೆ), 504 (ಉದ್ದೇಶಪೂರ್ವಕ ಅವಮಾನ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506 (ಜೀವ ಬೆದರಿಕೆ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದೇವೆ. ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿಯೂ ತನಿಖೆ ನಡೆಯುತ್ತಿದೆ’ ಎಂದು ವೀರೇಂದ್ರ ಹೇಳಿದರು.

‘ಗೊಲ್ಲ ಸಮುದಾಯದ ಜನರು ಮಾರುತಿಯವರ ದಲಿತ ಗುರುತನ್ನು ಆಧರಿಸಿ, ಧಾರ್ಮಿಕ ಭಾವನೆಗಳನ್ನು ಕೆರಳಿಸಿದ್ದಾರೆ. ದಲಿತರು ದೇವಸ್ಥಾನದ ಬಳಿ ಬುರುವುದು ಸೂಕ್ತವಲ್ಲ ಎಂದು ಹಲ್ಲೆ ಮಾಡಿದ್ದಾರೆ’ ಎಂದು ದಸಂಸ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಮಾರುತಿ ಮೇಲಿನ ಹಲ್ಲೆಗೆ ಪ್ರತಿಯಾಗಿ ದಲಿತ ಮುಖಂಡರು ಗ್ರಾಮದಲ್ಲಿ ಮೆರವಣಿಗೆ ನಡೆಸಿದ್ದಾರೆ. ದಲಿತರ ಮೇಲಿನ ಹಿಂಸಾಚಾರವನ್ನು ವಿರೋಧಿಸಿ, ಸಂತ್ರಸ್ತ ಮಾರುತಿಗೆ ನ್ಯಾಯಕ್ಕಾಗಿ ಒತ್ತಾಯಿಸಿದರು. ಕೆಲವು ದಲಿತ ಮುಖಂಡರು ದೇವಸ್ಥಾನವನ್ನು ಪ್ರವೇಶಿಸಲು ಮುಂದಾದರು; ಕೂಡಲೇ ದೇವಾಲಯವನ್ನು ಮುಚ್ಚಲಾಯಿತು. ತಹಶೀಲ್ದಾರ್ ರಾಜೀವ್ ಮತ್ತು ಪೊಲೀಸರ ಮಧ್ಯಪ್ರವೇಶದಿಂದ ಮುಖಂಡರು ತಣ್ಣಗಾಗಿದ್ದಾರೆ.

ಹಲ್ಲೆಗೊಳಗಾದ ಮಾರುತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಹಿಂದಿನ ದಿನಗಳಲ್ಲಿ, ದಲಿತರಿಗೆ ಗೊಲ್ಲರ ಬೀದಿಗೆ ಪ್ರವೇಶಿಸಲು ಅವಕಾಶವಿರಲಿಲ್ಲ. ಆದರೆ ಈಗ ಪರಿಸ್ಥಿತಿ ಸಾಕಷ್ಟು ಬದಲಾಗಿದ್ದು, ಜಾತಿ ಆಧಾರಿತ ತಾರತಮ್ಯವಿಲ್ಲ’ ಎಂದು ಗೊಲ್ಲ ಸಮುದಾಯದ ಮುಖಂಡ ಹನುಮಪ್ಪ ಸುದ್ದಿಗಾರರಿಗೆ ತಿಳಿಸಿದರು. ದಲಿತ ಯುವಕನ ಮೇಲಿನ ಹಲ್ಲೆಯು ಕೇವಲ ವೈಯಕ್ತಿಕ ನೆಲೆಯಲ್ಲಿ ಆಗಿದೆಯೇ ಹೊರತು ಜಾತಿ ಆಧಾರಿತ ತಾರತಮ್ಯವಲ್ಲ. ಆದರೆ ದಲಿತ ಸಮುದಾಯವು ಸುಳ್ಳು ಆರೋಪ ಹೊರಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...