Homeಕರ್ನಾಟಕಗೊಲ್ಲರ ಬೀದಿಗೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ; ದಂಡ ಕಟ್ಟಿಸಿಕೊಂಡ ಮುಖಂಡರು

ಗೊಲ್ಲರ ಬೀದಿಗೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ; ದಂಡ ಕಟ್ಟಿಸಿಕೊಂಡ ಮುಖಂಡರು

- Advertisement -
- Advertisement -

ಹಳೆ ಮನೆ ಕೆಡವಲು ಗೊಲ್ಲರಟ್ಟಿಗೆ ತೆರಳಿದ್ದ ದಲಿತ ಸಮುದಾಯದ ಜೆಸಿಬಿ ಆಪರೇಟರ್ ಯುವಕನನ್ನು, ಗೊಲ್ಲ ಸಮುದಾಯದ ಜನರು ಅಮಾನವೀಯವಾಗಿ ಥಳಿಸಿ, ದಂಡ ಕಟ್ಟಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದಲ್ಲಿ ಹೊಸ ವರ್ಷದ ದಿನದಂದೆ ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆದಿದ್ದು, ದಲಿತ ಸಂಘರ್ಷ ಸಮಿತಿ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಗೊಲ್ಲರ ಬೀದಿಯಲ್ಲಿರುವ ಗ್ರಾಮದ ದೇವಸ್ಥಾನಕ್ಕೆ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದಾಗ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು. ಆದರೆ, ಹಿರಿಯ ದಲಿತ ಮುಖಂಡರು ಹಾಗೂ ಪೊಲೀಸರು ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೆಸಿಬಿ ಆಪರೇಟರ್ ಮಾರುತಿ ಗೇರಮರಡಿ ಗ್ರಾಮದಲ್ಲಿ ಹಳೆ ಮನೆ ಕೆಡವಲು ತೆರಳಿದ್ದರು.

ನಡೆದದ್ದೇನು?

ತರೀಕೆರೆ ತಾಲೂಕಿನ ಎಚ್. ರಂಗಾಪುರ ಗ್ರಾಮದ ನಿವಾಸಿ, ಮಾದಿಗ ಸಮುದಾಯದ ಮಾರುತಿ ಎಂಬ ಜೆಸಿಬಿ ಆಪರೇಟರ್‌ನನ್ನು ಗೇರಮರಡಿ ಗ್ರಾಮದಲ್ಲಿ ಮನೆ ಕೆಡವುದಕ್ಕೆಂದು ಜನವರಿ 1ರಂದು ಕರೆಸಿಕೊಂಡಿದ್ದರು. ಆತ ತನ್ನ ಕೆಲಸ ಮುಗಿಸುವವರೆಗೂ ಸುಮ್ಮನಿದ್ದ ಗೊಲ್ಲ ಸಮುದಾಯದ ವ್ಯಕ್ತಿಗಳು, ಹಣ ನೀಡುವಾಗ ಆತನ ಹಿನ್ನೆಲೆ ಕೇಳಿದ್ದಾರೆ. ಸಹಜವಾಗಿಯೇ ಆತ ತನ್ನ ಊರು ಹಾಗೂ ಜಾತಿಯ ಗುರುತನ್ನು ಅವರ ಮುಂದೆ ಹೇಳಿದ್ದಾರೆ. ಮಾರುತಿ ಮಾದಿಗ ಸಮುದಾಯಕ್ಕೆ ಸೇರಿದವನು ಎಂದು ಗೊತ್ತಾಗುತ್ತಿದ್ದಂತೆಯೇ ಎಲ್ಲರೂ ಸೇರಿ ಆತನನ್ನು ಥಳಿಸಿದ್ದಾರೆ. ‘ಮಾದಿಗ ಸಮುದಾಯದ ನೀನು ನಮ್ಮ ಬೀದಿಗೆ ಯಾಕೆ ಬಂದಿದ್ದೀಯಾ’ ಎಂದು ಸ್ಥಳದಲ್ಲೇ ಕೂರಿಸಿಕೊಂಡು ಪಂಚಾಯಿತಿ ಮಾಡಿ, ಆತನಿಂದ ದಂಡ ಕಟ್ಟಿಸಿಕೊಂಡಿದ್ದಾರೆ ಎಂದು ದಸಂಸ ಮುಖಂಡರು ‘ನಾನುಗೌರಿ.ಕಾಂ‘ಗೆ ಮಾಹಿತಿ ನೀಡಿದ್ದಾರೆ.

ದಂಡ ಕಟ್ಟಿ ಗ್ರಾಮದಿಂದ ಹೊರಬಂದ ಮಾರುತಿ, ತನ್ನ ಮೇಲೆ ನಡೆದ ಹಲ್ಲೆ ಹಾಗೂ ದಂಡ ಕಟ್ಟಿದ್ದರ ಬಗ್ಗೆ ತನ್ನ ಆಪ್ತರು ಹಾಗೂ ದಸಂಸ ಮುಖಂಡರ ಬಳಿ ಹೇಳಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆ ಕುರಿತು ‘ನಾನುಗೌರಿ.ಕಾಂ’ ಜತೆಗೆ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಅಣ್ಣಯ್ಯ ಮರ್ಲೆ, ‘ಗ್ರಾಮದಲ್ಲಿ ದಲಿತರ ಮೇಲೆ ಹೇರಲಾಗಿರುವ ಸಾಮಾಜಿಕ ಬಹಿಷ್ಕಾರವನ್ನು ಈ ಕೂಡಲೇ ತೆಗೆಯಬೇಕು. ಗ್ರಾಮಕ್ಕೆ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಬೇಕು. ಹಲ್ಲೆ ಮಾಡಿದವರಿಗೆ ಶಾಸಕರ ಬೆಂಬಲ ಇದೆ, ಅವರು ಸಾಮಾಜಿಕ ನ್ಯಾಯಯದ ಪರವಾಗಿ ಇರಬೇಕು. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಂಡು, ಥಳಿತಕ್ಕೆ ಒಳಗಾದ ದಲಿತ ಯುವಕನಿಗೆ ಸರ್ಕಾರ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

‘ಹೊಸ ವರ್ಷದ ದಿನದಂದು ಗ್ರಾಮದ ಗೊಲ್ಲ ಬೀದಿಯ ನಿವಾಸಿಗಳು ಮಾರುತಿ (34) ಎಂಬ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ತರೀಕೆರೆ ವೃತ್ತ ನಿರೀಕ್ಷಕ ವೀರೇಂದ್ರ ತಿಳಿಸಿದ್ದಾರೆ.

‘ನಾವು 30-35 ಜನರ ವಿರುದ್ಧ ಭಾರತೀಯ ದಂಡನೆಯ ಸೆಕ್ಷನ್ 143 (ಕಾನೂನುಬಾಹಿರ ಸಭೆ), 149 (ಕಾನೂನುಬಾಹಿರ ಸಭೆ), 504 (ಉದ್ದೇಶಪೂರ್ವಕ ಅವಮಾನ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506 (ಜೀವ ಬೆದರಿಕೆ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದೇವೆ. ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿಯೂ ತನಿಖೆ ನಡೆಯುತ್ತಿದೆ’ ಎಂದು ವೀರೇಂದ್ರ ಹೇಳಿದರು.

‘ಗೊಲ್ಲ ಸಮುದಾಯದ ಜನರು ಮಾರುತಿಯವರ ದಲಿತ ಗುರುತನ್ನು ಆಧರಿಸಿ, ಧಾರ್ಮಿಕ ಭಾವನೆಗಳನ್ನು ಕೆರಳಿಸಿದ್ದಾರೆ. ದಲಿತರು ದೇವಸ್ಥಾನದ ಬಳಿ ಬುರುವುದು ಸೂಕ್ತವಲ್ಲ ಎಂದು ಹಲ್ಲೆ ಮಾಡಿದ್ದಾರೆ’ ಎಂದು ದಸಂಸ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಮಾರುತಿ ಮೇಲಿನ ಹಲ್ಲೆಗೆ ಪ್ರತಿಯಾಗಿ ದಲಿತ ಮುಖಂಡರು ಗ್ರಾಮದಲ್ಲಿ ಮೆರವಣಿಗೆ ನಡೆಸಿದ್ದಾರೆ. ದಲಿತರ ಮೇಲಿನ ಹಿಂಸಾಚಾರವನ್ನು ವಿರೋಧಿಸಿ, ಸಂತ್ರಸ್ತ ಮಾರುತಿಗೆ ನ್ಯಾಯಕ್ಕಾಗಿ ಒತ್ತಾಯಿಸಿದರು. ಕೆಲವು ದಲಿತ ಮುಖಂಡರು ದೇವಸ್ಥಾನವನ್ನು ಪ್ರವೇಶಿಸಲು ಮುಂದಾದರು; ಕೂಡಲೇ ದೇವಾಲಯವನ್ನು ಮುಚ್ಚಲಾಯಿತು. ತಹಶೀಲ್ದಾರ್ ರಾಜೀವ್ ಮತ್ತು ಪೊಲೀಸರ ಮಧ್ಯಪ್ರವೇಶದಿಂದ ಮುಖಂಡರು ತಣ್ಣಗಾಗಿದ್ದಾರೆ.

ಹಲ್ಲೆಗೊಳಗಾದ ಮಾರುತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಹಿಂದಿನ ದಿನಗಳಲ್ಲಿ, ದಲಿತರಿಗೆ ಗೊಲ್ಲರ ಬೀದಿಗೆ ಪ್ರವೇಶಿಸಲು ಅವಕಾಶವಿರಲಿಲ್ಲ. ಆದರೆ ಈಗ ಪರಿಸ್ಥಿತಿ ಸಾಕಷ್ಟು ಬದಲಾಗಿದ್ದು, ಜಾತಿ ಆಧಾರಿತ ತಾರತಮ್ಯವಿಲ್ಲ’ ಎಂದು ಗೊಲ್ಲ ಸಮುದಾಯದ ಮುಖಂಡ ಹನುಮಪ್ಪ ಸುದ್ದಿಗಾರರಿಗೆ ತಿಳಿಸಿದರು. ದಲಿತ ಯುವಕನ ಮೇಲಿನ ಹಲ್ಲೆಯು ಕೇವಲ ವೈಯಕ್ತಿಕ ನೆಲೆಯಲ್ಲಿ ಆಗಿದೆಯೇ ಹೊರತು ಜಾತಿ ಆಧಾರಿತ ತಾರತಮ್ಯವಲ್ಲ. ಆದರೆ ದಲಿತ ಸಮುದಾಯವು ಸುಳ್ಳು ಆರೋಪ ಹೊರಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...