Homeಮುಖಪುಟಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

- Advertisement -
- Advertisement -

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ 3D ಸೆಲ್ಫಿ ಬೂತ್‌ ನಿರ್ಮಾಣದ ವೆಚ್ಚದ ವಿವರಗಳನ್ನು ನೀಡಿದ ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಿವರಾಜ್ ಮನಸ್ಪುರೆ ಅವರನ್ನು ಹಠಾತ್ತನೆ ವರ್ಗಾವಣೆ ಮಾಡಲಾಗಿದೆ.

2023ರ ಡಿ.29ರಂದು ಶಿವರಾಜ್ ಮನಸ್ಪುರೆ ಅವರನ್ನು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. ಅವರನ್ನು ಈ ಹುದ್ದೆಗೆ ನೇಮಿಸಿದ 7 ತಿಂಗಳಲ್ಲೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಮನಸ್ಪುರೆ ಅವರನ್ನು ಯಾವುದೇ ಕಾರಣ ನೀಡದೆ ಅಥವಾ ಮುಂದಿನ ಪೋಸ್ಟಿಂಗ್ ಎಲ್ಲಿ ಎಂದು ತಿಳಿಸದೆ ವರ್ಗಾಯಿಸಲಾಗಿದೆ.

ಮನಸ್ಪುರೆ ಬದಲಿಗೆ ಸ್ವಪ್ನಿಲ್ ಡಿ.ನೀಲಾ ಅವರನ್ನು ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ನೇಮಿಸಲಾಗಿದೆ. ಈ ಬಗ್ಗೆ ಸ್ವಪ್ನಿಲ್ ಡಿ.ನೀಲಾ ಪ್ರತಿಕ್ರಿಯಿಸಿಲು ನಿರಾಕರಿಸಿದ್ದಾರೆ. ಆದರೆ ಇದು ಉನ್ನತ ಮಟ್ಟದ ನಿರ್ಧಾರ ಎಂದು ಇತರ ಅಧಿಕಾರಿಗಳು ತಿಳಿಸಿದ್ದಾರೆ.

ಸೆಲ್ಫಿ ಬೂತ್‌ ಬಗ್ಗೆ ಮಾಹಿತಿ ಕೇಳಿದ್ದ ಅಜಯ್ ಬೋಸ್

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ  3D ಸೆಲ್ಫಿ ಬೂತ್‌ ನಿರ್ಮಾಣದ ಬಗ್ಗೆ ಅಮರಾವತಿ ಮೂಲದ ಸಾಮಾಜಿಕ ಕಾರ್ಯಕರ್ತ ಅಜಯ್ ಬೋಸ್ ಅವರು ಮಾಹಿತಿ ಹಕ್ಕು ಕಾಯಿದೆಯಡಿ ಕೇಂದ್ರ ರೈಲ್ವೆ, ಪಶ್ಚಿಮ, ದಕ್ಷಿಣ, ಉತ್ತರ ಮತ್ತು ವಾಯುವ್ಯ ರೈಲ್ವೇಗಳ 5 ವಲಯಗಳೊಂದಿಗೆ ಸೆಲ್ಫಿ ಬೂತ್‌ಗಳಿಗೆ ಸಂಬಂಧಿಸಿದ ವೆಚ್ಚಗಳ ವಿವರಗಳನ್ನು ಕೇಳಿದ್ದರು. ನಿರ್ದಿಷ್ಟ ವೆಚ್ಚಗಳ ಕುರಿತಾದ ಪ್ರಶ್ನೆಗೆ ಕೇಂದ್ರ ರೈಲ್ವೆಯು ಮಾತ್ರ ಪ್ರತಿಕ್ರಿಯಿಸಿತ್ತು. ಕೇಂದ್ರ ರೈಲ್ವೇ ವಲಯವೊಂದರಲ್ಲೇ ಸುಮಾರು 20 ಶಾಶ್ವತ ಸೆಲ್ಫಿ ಬೂತ್‌ಗಳನ್ನು ತಲಾ 6.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಅದರ ಒಟ್ಟು ವೆಚ್ಚ 1.25 ಕೋಟಿ ರೂ. ಎಂದು ಹೇಳಲಾಗಿತ್ತು. ಇನ್ನು 32 ತಾತ್ಕಾಲಿಕ ಸೆಲ್ಫಿ ಬೂತ್‌ಗಳನ್ನು ತಲಾ 1.25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದರ ಒಟ್ಟು ವೆಚ್ಚ 40 ಲಕ್ಷ ರೂ. ಎಂದು ಹೇಳಿದ್ದರು.

ನಿವೃತ್ತ ರೈಲ್ವೇ ಅಧಿಕಾರಿ ಅಜಯ್ ಬೋಸ್ ಅವರು ಆರ್‌ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಸೆಂಟ್ರಲ್ ರೈಲ್ವೇ ಡೆಪ್ಯುಟಿ ಜನರಲ್ ಮ್ಯಾನೇಜರ್ ಅಭಯ್ ಮಿಶ್ರಾ ಅವರು ಪ್ರತಿಕ್ರಿಯಿಸಿದ್ದು, ಮೋದಿ ಅವರ 3ಡಿ ಸೆಲ್ಫಿ ಬೂತ್‌ಗಳನ್ನು ಮುಂಬೈ, ಭೂಸಾವಲ್, ನಾಗಪುರ, ಪುಣೆ ಮತ್ತು ಸೊಲ್ಲಾಪುರಗಳ 50 ರೈಲು ನಿಲ್ದಾಣಗಳಲ್ಲಿ ಸ್ಥಾಪಿಸಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಕಲ್ಯಾಣ್, ನಾಗ್ಪುರ ಮತ್ತು ಬೇತುಲ್ ಸೇರಿದಂತೆ 30 ಕೆಟಗರಿ ಎ ಸ್ಟೇಷನ್‌ಗಳಲ್ಲಿ ತಾತ್ಕಾಲಿಕ ಬೂತ್‌ಗಳನ್ನು ಸ್ಥಾಪಿಸಿದರೆ, ಕರ್ಜತ್, ಲಾತೂರ್ ಮತ್ತು ಕೋಪರ್‌ಗಾಂವ್ ಸೇರಿದಂತೆ 20 ನಿಲ್ದಾಣಗಳಲ್ಲಿ ಶಾಶ್ವತ ಬೂತ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದರು.

ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ 3D ಸೆಲ್ಫಿ ಬೂತ್‌ಗಳ ತಾತ್ಕಾಲಿಕ ಸ್ಥಾಪನೆಗೆ 1.25 ಲಕ್ಷ ಮತ್ತು  ಶಾಶ್ವತ ಸ್ಥಾಪನೆಗೆ 6.25 ಲಕ್ಷ ದರಗಳನ್ನು ಅನುಮೋದಿಸಿದೆ ಎಂದು RTI ಮಾಹಿತಿಯು ಹೇಳಿತ್ತು.

ಕೇಂದ್ರ ರೈಲ್ವೇಯಲ್ಲಿನ ತಾತ್ಕಾಲಿಕ ಮತ್ತು ಶಾಶ್ವತ ಮೋದಿ ಪೋಟೋ ಇರುವ ಬೂತ್‌ಗಳ ನಿರ್ಮಾಣಕ್ಕೆ ಒಟ್ಟು ವೆಚ್ಚ 1.62 ಕೋಟಿ ಆಗಲಿದೆ. ಇದರಲ್ಲಿ ಶಾಶ್ವತ ಪೋಟೋ ಬೂತ್‌ಗಳಿಗೆ 1.25 ಕೋಟಿ ಮತ್ತು ತಾತ್ಕಾಲಿಕವಾಗಿ ಸ್ಥಾಪಿಸಲು 37.5 ಲಕ್ಷ ರೂ.ಆಗಲಿದೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ.

ಸೆಲ್ಫಿ ಬೂತ್‌ ಬಗ್ಗೆ ಟೀಕಿಸಿದ್ದ ಖರ್ಗೆ

ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿರುವ ಸೆಲ್ಫಿ ಬೂತ್‌ಗಳನ್ನು ರೈಲ್ವೇ ನಿಲ್ದಾಣಗಳಲ್ಲಿ ಸ್ಥಾಪಿಸುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಸೆಲ್ಫಿ ಬೂತ್‌ಗಳ ಸ್ಥಾಪನೆ ಮೂಲಕ ತೆರಿಗೆದಾರರ ಹಣದ ದುರ್ಬಳಕೆ ಮಾಡಲಾಗುತ್ತಿದೆ. ಮೋದಿ ಸರ್ಕಾರದ ಸ್ವಯಂ ಗೀಳಿನ ಪ್ರಚಾರಕ್ಕೆ ಯಾವುದೇ ಮಿತಿಯಿಲ್ಲ. ಮೋದಿ ಸರ್ಕಾರವು ರಾಜ್ಯಗಳಿಗೆ ಬರ ಮತ್ತು ಪ್ರವಾಹ ಪರಿಹಾರವನ್ನು ಒದಗಿಸಿಲ್ಲ. ವಿರೋಧ ಪಕ್ಷದ ಆಡಳಿತದ ರಾಜ್ಯಗಳಿಗೆ MGNREGA ಯೋಜನೆಯ ಹಣದ ಪಾವತಿ ಬಾಕಿ ಉಳಿದಿವೆ. ಆದರೆ ಈ ಕೀಳು ಮಟ್ಟದ ಚುನಾವಣಾ ಪ್ರಚಾರಕ್ಕೆ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಲಾಗುತ್ತಿದೆ ಎಂದು ಟೀಕಿಸಿದ್ದರು.

ಇದನ್ನು ಓದಿ: ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...