Homeಮುಖಪುಟಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

- Advertisement -
- Advertisement -

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ 3D ಸೆಲ್ಫಿ ಬೂತ್‌ ನಿರ್ಮಾಣದ ವೆಚ್ಚದ ವಿವರಗಳನ್ನು ನೀಡಿದ ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಿವರಾಜ್ ಮನಸ್ಪುರೆ ಅವರನ್ನು ಹಠಾತ್ತನೆ ವರ್ಗಾವಣೆ ಮಾಡಲಾಗಿದೆ.

2023ರ ಡಿ.29ರಂದು ಶಿವರಾಜ್ ಮನಸ್ಪುರೆ ಅವರನ್ನು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. ಅವರನ್ನು ಈ ಹುದ್ದೆಗೆ ನೇಮಿಸಿದ 7 ತಿಂಗಳಲ್ಲೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಮನಸ್ಪುರೆ ಅವರನ್ನು ಯಾವುದೇ ಕಾರಣ ನೀಡದೆ ಅಥವಾ ಮುಂದಿನ ಪೋಸ್ಟಿಂಗ್ ಎಲ್ಲಿ ಎಂದು ತಿಳಿಸದೆ ವರ್ಗಾಯಿಸಲಾಗಿದೆ.

ಮನಸ್ಪುರೆ ಬದಲಿಗೆ ಸ್ವಪ್ನಿಲ್ ಡಿ.ನೀಲಾ ಅವರನ್ನು ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ನೇಮಿಸಲಾಗಿದೆ. ಈ ಬಗ್ಗೆ ಸ್ವಪ್ನಿಲ್ ಡಿ.ನೀಲಾ ಪ್ರತಿಕ್ರಿಯಿಸಿಲು ನಿರಾಕರಿಸಿದ್ದಾರೆ. ಆದರೆ ಇದು ಉನ್ನತ ಮಟ್ಟದ ನಿರ್ಧಾರ ಎಂದು ಇತರ ಅಧಿಕಾರಿಗಳು ತಿಳಿಸಿದ್ದಾರೆ.

ಸೆಲ್ಫಿ ಬೂತ್‌ ಬಗ್ಗೆ ಮಾಹಿತಿ ಕೇಳಿದ್ದ ಅಜಯ್ ಬೋಸ್

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ  3D ಸೆಲ್ಫಿ ಬೂತ್‌ ನಿರ್ಮಾಣದ ಬಗ್ಗೆ ಅಮರಾವತಿ ಮೂಲದ ಸಾಮಾಜಿಕ ಕಾರ್ಯಕರ್ತ ಅಜಯ್ ಬೋಸ್ ಅವರು ಮಾಹಿತಿ ಹಕ್ಕು ಕಾಯಿದೆಯಡಿ ಕೇಂದ್ರ ರೈಲ್ವೆ, ಪಶ್ಚಿಮ, ದಕ್ಷಿಣ, ಉತ್ತರ ಮತ್ತು ವಾಯುವ್ಯ ರೈಲ್ವೇಗಳ 5 ವಲಯಗಳೊಂದಿಗೆ ಸೆಲ್ಫಿ ಬೂತ್‌ಗಳಿಗೆ ಸಂಬಂಧಿಸಿದ ವೆಚ್ಚಗಳ ವಿವರಗಳನ್ನು ಕೇಳಿದ್ದರು. ನಿರ್ದಿಷ್ಟ ವೆಚ್ಚಗಳ ಕುರಿತಾದ ಪ್ರಶ್ನೆಗೆ ಕೇಂದ್ರ ರೈಲ್ವೆಯು ಮಾತ್ರ ಪ್ರತಿಕ್ರಿಯಿಸಿತ್ತು. ಕೇಂದ್ರ ರೈಲ್ವೇ ವಲಯವೊಂದರಲ್ಲೇ ಸುಮಾರು 20 ಶಾಶ್ವತ ಸೆಲ್ಫಿ ಬೂತ್‌ಗಳನ್ನು ತಲಾ 6.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಅದರ ಒಟ್ಟು ವೆಚ್ಚ 1.25 ಕೋಟಿ ರೂ. ಎಂದು ಹೇಳಲಾಗಿತ್ತು. ಇನ್ನು 32 ತಾತ್ಕಾಲಿಕ ಸೆಲ್ಫಿ ಬೂತ್‌ಗಳನ್ನು ತಲಾ 1.25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದರ ಒಟ್ಟು ವೆಚ್ಚ 40 ಲಕ್ಷ ರೂ. ಎಂದು ಹೇಳಿದ್ದರು.

ನಿವೃತ್ತ ರೈಲ್ವೇ ಅಧಿಕಾರಿ ಅಜಯ್ ಬೋಸ್ ಅವರು ಆರ್‌ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಸೆಂಟ್ರಲ್ ರೈಲ್ವೇ ಡೆಪ್ಯುಟಿ ಜನರಲ್ ಮ್ಯಾನೇಜರ್ ಅಭಯ್ ಮಿಶ್ರಾ ಅವರು ಪ್ರತಿಕ್ರಿಯಿಸಿದ್ದು, ಮೋದಿ ಅವರ 3ಡಿ ಸೆಲ್ಫಿ ಬೂತ್‌ಗಳನ್ನು ಮುಂಬೈ, ಭೂಸಾವಲ್, ನಾಗಪುರ, ಪುಣೆ ಮತ್ತು ಸೊಲ್ಲಾಪುರಗಳ 50 ರೈಲು ನಿಲ್ದಾಣಗಳಲ್ಲಿ ಸ್ಥಾಪಿಸಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಕಲ್ಯಾಣ್, ನಾಗ್ಪುರ ಮತ್ತು ಬೇತುಲ್ ಸೇರಿದಂತೆ 30 ಕೆಟಗರಿ ಎ ಸ್ಟೇಷನ್‌ಗಳಲ್ಲಿ ತಾತ್ಕಾಲಿಕ ಬೂತ್‌ಗಳನ್ನು ಸ್ಥಾಪಿಸಿದರೆ, ಕರ್ಜತ್, ಲಾತೂರ್ ಮತ್ತು ಕೋಪರ್‌ಗಾಂವ್ ಸೇರಿದಂತೆ 20 ನಿಲ್ದಾಣಗಳಲ್ಲಿ ಶಾಶ್ವತ ಬೂತ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದರು.

ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ 3D ಸೆಲ್ಫಿ ಬೂತ್‌ಗಳ ತಾತ್ಕಾಲಿಕ ಸ್ಥಾಪನೆಗೆ 1.25 ಲಕ್ಷ ಮತ್ತು  ಶಾಶ್ವತ ಸ್ಥಾಪನೆಗೆ 6.25 ಲಕ್ಷ ದರಗಳನ್ನು ಅನುಮೋದಿಸಿದೆ ಎಂದು RTI ಮಾಹಿತಿಯು ಹೇಳಿತ್ತು.

ಕೇಂದ್ರ ರೈಲ್ವೇಯಲ್ಲಿನ ತಾತ್ಕಾಲಿಕ ಮತ್ತು ಶಾಶ್ವತ ಮೋದಿ ಪೋಟೋ ಇರುವ ಬೂತ್‌ಗಳ ನಿರ್ಮಾಣಕ್ಕೆ ಒಟ್ಟು ವೆಚ್ಚ 1.62 ಕೋಟಿ ಆಗಲಿದೆ. ಇದರಲ್ಲಿ ಶಾಶ್ವತ ಪೋಟೋ ಬೂತ್‌ಗಳಿಗೆ 1.25 ಕೋಟಿ ಮತ್ತು ತಾತ್ಕಾಲಿಕವಾಗಿ ಸ್ಥಾಪಿಸಲು 37.5 ಲಕ್ಷ ರೂ.ಆಗಲಿದೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ.

ಸೆಲ್ಫಿ ಬೂತ್‌ ಬಗ್ಗೆ ಟೀಕಿಸಿದ್ದ ಖರ್ಗೆ

ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿರುವ ಸೆಲ್ಫಿ ಬೂತ್‌ಗಳನ್ನು ರೈಲ್ವೇ ನಿಲ್ದಾಣಗಳಲ್ಲಿ ಸ್ಥಾಪಿಸುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಸೆಲ್ಫಿ ಬೂತ್‌ಗಳ ಸ್ಥಾಪನೆ ಮೂಲಕ ತೆರಿಗೆದಾರರ ಹಣದ ದುರ್ಬಳಕೆ ಮಾಡಲಾಗುತ್ತಿದೆ. ಮೋದಿ ಸರ್ಕಾರದ ಸ್ವಯಂ ಗೀಳಿನ ಪ್ರಚಾರಕ್ಕೆ ಯಾವುದೇ ಮಿತಿಯಿಲ್ಲ. ಮೋದಿ ಸರ್ಕಾರವು ರಾಜ್ಯಗಳಿಗೆ ಬರ ಮತ್ತು ಪ್ರವಾಹ ಪರಿಹಾರವನ್ನು ಒದಗಿಸಿಲ್ಲ. ವಿರೋಧ ಪಕ್ಷದ ಆಡಳಿತದ ರಾಜ್ಯಗಳಿಗೆ MGNREGA ಯೋಜನೆಯ ಹಣದ ಪಾವತಿ ಬಾಕಿ ಉಳಿದಿವೆ. ಆದರೆ ಈ ಕೀಳು ಮಟ್ಟದ ಚುನಾವಣಾ ಪ್ರಚಾರಕ್ಕೆ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಲಾಗುತ್ತಿದೆ ಎಂದು ಟೀಕಿಸಿದ್ದರು.

ಇದನ್ನು ಓದಿ: ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...