Homeಮುಖಪುಟಬ್ರಿಜ್ ಭೂಷಣ್ ಬೆಂಬಲಿಗರಿಂದ ನನ್ನ ತಾಯಿಗೆ ಬೆದರಿಕೆ ಕರೆಗಳು ಬರುತ್ತಿವೆ: ಸಾಕ್ಷಿ ಮಲಿಕ್

ಬ್ರಿಜ್ ಭೂಷಣ್ ಬೆಂಬಲಿಗರಿಂದ ನನ್ನ ತಾಯಿಗೆ ಬೆದರಿಕೆ ಕರೆಗಳು ಬರುತ್ತಿವೆ: ಸಾಕ್ಷಿ ಮಲಿಕ್

- Advertisement -
- Advertisement -

ತನ್ನ ತಾಯಿಗೆ ಬ್ರಿಜ್ ಭೂಷಣ್ ಸಿಂಗ್ ಬೆಂಬಲಿಗರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬ್ರಿಜ್ ಭೂಷಣ್ ಸಿಂಗ್ ಅವರ ಗೂಂಡಾಗಳು ಸಕ್ರಿಯರಾಗಿದ್ದಾರೆ. ನನ್ನ ತಾಯಿಗೆ ಫೋನ್ ಮುಖಾಂತರ ಬೆದರಿಕೆ ಹಾಕುತ್ತಿದ್ದಾರೆ. ನಮ್ಮ ರಕ್ಷಣೆ ಸರ್ಕಾರದ ಹೊಣೆ” ಎಂದು ಹೇಳಿದ್ದಾರೆ.

ಬ್ರಿಜ್ ಭೂಷಣ್ ಪ್ರಭಾವಿ ಎಂದು ನಮಗೆ ಗೊತ್ತಿತ್ತು. ಆದರೆ, ಅವರು ಯಾರೊಂದಿಗೂ ಚರ್ಚಿಸದೆ ತಮ್ಮ ಊರಿನಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಘೋಷಣೆ ಮಾಡುವಷ್ಟು ಶಕ್ತಿಶಾಲಿ ಎಂದು ತಿಳಿದಿರಲಿಲ್ಲ. ಈಗ ನಾವು ಕಿರಿಯ ಕುಸ್ತಿಪಟುಗಳ ಭವಿಷ್ಯ ಹಾಳು ಮಾಡಿದ ಆರೋಪ ಎದುರಿಸುತ್ತಿದ್ದೇವೆ. ನಾನು ಕುಸ್ತಿಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ನನ್ನಿಂದ ಸಾಧ್ಯವಾಗದಿದ್ದನ್ನು ನನ್ನ ಜೂನಿಯರ್ ಹುಡುಗಿಯರು ಮಾಡಬೇಕೆಂದು ನಾನು ಬಯಸುತ್ತೇನೆ. ಅವರು ದೇಶಕ್ಕಾಗಿ ಬೆಳ್ಳಿ, ಚಿನ್ನ ಗೆಲ್ಲಬೇಕೆಂದು ಆಶಿಸುತ್ತೇನೆ. ಯಾವುದೇ ಜೂನಿಯರ್ ನಮಗಾಗಿ ನೋವು ಅನುಭವಿಸುವುದು ಬೇಡ ಎಂದಿದ್ದಾರೆ.

ಕುಸ್ತಿ ಫೆಡರೇಶನ್‌ನ ಹೊಸ ಆಡಳಿತ ಸಮಿತಿ ಅಥವಾ ತಾತ್ಕಾಲಿಕ ನಿರ್ವಹಣಾ ಸಮಿತಿ ಜೊತೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಜೊತೆ ಮಾತ್ರ ನಮ್ಮ ವಿರೋಧ ಇತ್ತು ಎಂದು ಸಾಕ್ಷಿ ತಿಳಿಸಿದ್ದಾರೆ.

ಕಳೆದ ವರ್ಷದಿಂದ ನಾನು ಮಾನಸಿಕವಾಗಿ ಮತ್ತು ದೈಹಿಕವಾಗಿ ದಣಿದಿದ್ದೇನೆ. ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುತ್ತಾರೆ ಎಂಬ ಕಲ್ಪನೆ ನನಗಿರಲಿಲ್ಲ. ಅವರು ಆಯ್ಕೆಗೊಂಡಾಗ ಬೇಸರಗೊಂಡು ಕುಸ್ತಿಗೆ ವಿದಾಯ ಹೇಳಿದ್ದೇನೆ. ಮುಂದೆ ಏನು ಮಾಡಬೇಕು ಎಂದು ನನಗೆ ಗೊತ್ತಿಲ್ಲ ಎಂದು ಸಾಕ್ಷಿ ಮಲಿಕ್ ಬೇಸರ ಹೊರ ಹಾಕಿದ್ದಾರೆ.

ಬಿಜೆಪಿ, ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಬೇಸರಗೊಂಡು ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದ್ದಾರೆ.

ಡಿಸೆಂಬರ್ 21ರಂದು ಭಾರತೀಯ ಕುಸ್ತಿ ಫೆಡರೇಶನ್‌(ಡಬ್ಲ್ಯುಎಫ್‌ಐ)ಗೆ ನಡೆದ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್‌ ಸಿಂಗ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಸಾಕ್ಷಿ ಮಲಿಕ್ ತಮ್ಮ ಬೂಟು ಕಳಚಿಟ್ಟು ಕುಸ್ತಿಗೆ ವಿದಾಯ ಹೇಳಿದ್ದರು.

ಸಾಕ್ಷಿ ಮಲಿಕ್‌ ಬೆಂಬಲಿಸಿದ್ದ ಮತ್ತೋರ್ವ ಕುಸ್ತಿಪಟು ಬಜರಂಗ್ ಪೂನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ದೆಹಲಿಯ ಕರ್ತವ್ಯ ಪಥದಲ್ಲಿ ಇಟ್ಟು ಪ್ರಧಾನಿಗೆ ತಲುಪಿಸುವಂತೆ ಹೇಳಿ ಹೊರಟು ಹೋಗಿದ್ದರು. ಇದರ ಬೆನ್ನಲ್ಲೇ ಕುಸ್ತಿಪಟು ವಿರೇಂದರ್ ಯಾದವ್ ತಮ್ಮ ಪದ್ಮಶ್ರೀ ಪ್ರಶಸ್ತಿ ಮರಳಿಸುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಘೋಷಿಸಿದ್ದರು. ಬಳಿಕ ಕುಸ್ತಿಪಟು ವಿನೇಶ್ ಫೋಗಟ್ ಕೂಡ ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ದೆಹಲಿಯ ಕರ್ತವ್ಯ ಪಥದ ಪಾದಾಚಾರಿ ಮಾರ್ಗದಲ್ಲಿಟ್ಟು ತೆರಳಿದ್ದರು.

ಜೂನಿಯರ್ ಕುಸ್ತಿಪಟುಗಳಿಂದ ಪ್ರತಿಭಟನೆ

ಕುಸ್ತಿ ಫೆಡರೇಶ್‌ನ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್ ವಿರುದ್ದ ಹೋರಾಟ ನಡೆಸಿದ್ದ ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತು ವಿನೇಶ್ ಫೋಗಟ್ ವಿರುದ್ದವೇ ಇಂದು ಜೂನಿಯರ್ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಜಮಾಯಿಸಿದ ಜೂನಿಯರ್ ಕುಸ್ತಿಪಟುಗಳು ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತು ವಿನೇಶ್ ಫೋಗಟ್ ಒಂದು ವರ್ಷದಿಂದ ನಮ್ಮ ಕುಸ್ತಿ ತರಬೇತಿಯನ್ನು ಹಾಳುಗೆಡವಿದ್ದಾರೆ. ಅವರಿಂದಾಗಿ ನಾವು ಅತಂತ್ರರಾಗಿದ್ದೇವೆ. ಈ ಮೂವರಿಂದ ಕುಸ್ತಿ ಫೆಡರೇಶನ್‌ ರಕ್ಷಿಸಿ ಎಂದು ಬ್ಯಾನರ್ ಹಿಡಿದು ಘೋಷಣೆ ಕೂಗಿದ್ದಾರೆ.

ಇದನ್ನೂ ಓದಿ : ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...