Homeಕರ್ನಾಟಕರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರ 'ಬಿಜೆಪಿ' ಪ್ರತಿಭಟನೆ

ರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರ ‘ಬಿಜೆಪಿ’ ಪ್ರತಿಭಟನೆ

- Advertisement -
- Advertisement -

ಹುಬ್ಬಳ್ಳಿಯಲ್ಲಿ ಮಳಿಗೆಗೆ ಬೆಂಕಿ ಹಚ್ಚಿ ಹಿಂಸಾಚಾರವನ್ನು ನಡೆಸಿದ್ದ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಇತ್ತೀಚೆಗೆ 31 ವರ್ಷಗಳ ಬಳಿಕ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದರು. ಹಳೆಯ ಕೇಸ್‌ ವಿಲೇವಾರಿ ಭಾಗವಾಗಿ  ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಇದೀಗ ಆರೋಪಿಯ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆಯನ್ನು ನಡೆಸುತ್ತಿದೆ. ಲೋಕಸಭೆ ಚುನಾವಣೆ ಹಿನ್ನೆಲೆ  ಹದ್ದಿನಂತೆ ಕಾಯುತ್ತಿದ್ದ ಬಿಜೆಪಿ ಇದನ್ನೇ ರಾಜಕೀಯಕ್ಕೆ ಬಳಸಿಕೊಂಡಿದ್ದು, ತಮ್ಮ ಕೀಳು ಮಟ್ಟದ ರಾಜಕೀಯಕ್ಕೆ ಕ್ರಿಮಿನಲ್‌ ಓರ್ವನ ಬಂಧನವನ್ನು ಅಸ್ತ್ರವಾಗಿ ಬಳಸಿರುವುದು ವಿಪರ್ಯಾಸವೇ ಆಗಿದೆ.

ಹುಬ್ಬಳ್ಳಿ ಶಹರ ಠಾಣೆ ಪೊಲೀಸರಿಂದ ಬಂಧಿತ ಶ್ರೀಕಾಂತ ಪೂಜಾರಿಯ ಹಿನ್ನೆಲೆ ನೋಡಿದಾಗ ಆತ ಕ್ರಿಮಿನಲ್‌ ಎನ್ನುವುದು ಬಯಲಾಗಿದೆ. ಆತನ ಮೇಲೆ ಒಟ್ಟು 15 ಪ್ರಕರಣಗಳಿರುವ ಬಗ್ಗೆ ವರದಿಯಾಗಿದೆ. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ, ಹಳೇಹುಬ್ಬಳ್ಳಿ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಹಾಗೂ ಶಹರ ಪೊಲೀಸ್‌ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣಗಳಿವೆ. ಇದರಲ್ಲಿ 11 ಕೇಸ್ ಗಳು ಅಕ್ರಮ ಸರಾಯಿ ಮಾರಾಟದ ಕುರಿತು ಕೇಸ್‌ಗಳಾಗಿದೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ 3 ಕೇಸ್ ಹಾಗೂ ಶಹರ ಠಾಣೆಯಲ್ಲಿ ಅಂಗಡಿಗೆ ಬೆಂಕಿ ಹಚ್ಚಿದ ಕೇಸ್ ದಾಖಲಾಗಿದೆ.

ಶ್ರೀಕಾಂತ್‌ಗೆ ‘ಕರಸೇವಕನ’ ಹಣೆ ಪಟ್ಟಿ ಕಟ್ಟಿ ಬಂಧನ ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ಶಹರ ಪೊಲೀಸ್‌ ಠಾಣೆಗೆ ಮುತ್ತಗೆ ಹಾಕಲು ಯತ್ನಿಸಿದ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಸೇರಿದಂತೆ  ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

1992ರ ಡಿ.5ರಂದು ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ 8 ಜನರ ವಿರುದ್ಧ ಹುಬ್ಬಳ್ಳಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಮೂವರು ಈಗಾಗಲೇ ಮೃತಪಟ್ಟಿದ್ದು, ಇತರ ಆರೋಪಿಗಳ ಪತ್ತೆಗೆ ಇತ್ತೀಚೆಗೆ ಪೊಲೀಸರು ಬಲೆ ಬೀಸಿದ್ದರು. ಆ ಮೂಲಕ 1992ರ ಹಬ್ಬಳ್ಳಿ ಗಲಭೆ ಕೇಸ್‌ ಮರುಜೀವ ಪಡೆದುಕೊಂಡಿತ್ತು. ಇನ್ನುಳಿದ ಆರೋಪಿಗಳಾದ ರಾಜು ಧರ್ಮದಾಸ್, ಶ್ರೀಕಾಂತ್ ಪೂಜಾರಿ, ಅಶೋಕ್ ಕಲಬುರಗಿ, ಷಣ್ಮುಖ ಕಾಟಗಾರ, ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರಗಿ ಹಾಗೂ ಅಮೃತ ಕಲಬುರಗಿಗಾಗಿ ಪೊಲೀಸರು ಹುಡುಕಾಟ ನಡೆಸಲು ತಂಡ ರಚನೆ ಮಾಡಿದ್ದರು.

ಬಿಜೆಪಿಯ ಈ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹಿಂದುತ್ವ ಮುಂದಿಟ್ಟುಕೊಂಡು ತಪ್ಪು ಮಾಡಿದವರನ್ನು ರಕ್ಷಿಸಿ ಶಿಕ್ಷೆ ನೀಡಬಾರದೆಂದು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಶ್ನೆಯನ್ನು ಮಾಧ್ಯಮದವರು ಬಿಜೆಪಿಯವರಿಗೆ ಕೇಳಬೇಕು. ಅಪರಾಧ ಮಾಡಿರುವವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ. ನಿರಪರಾಧಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಪ್ರಸಾದ್ ಅಬ್ಬಯ್ಯ, ಕ್ರಿಮಿನಲ್‌ಗಳ ಪರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜಕೀಯಕ್ಕಾಗಿ ರೌಡಿಶೀಟರ್‌ಗಳ ಪರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ರಾಜ್ಯದಲ್ಲಿ ನಾನಾ ಸಮಸ್ಯೆಗಳಿವೆ. ಅವುಗಳ ಬಗ್ಗೆ ಬಿಜೆಪಿ ಗಮನ ಹರಿಸುತ್ತಿಲ್ಲ. ಬದಲಾಗಿ ರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇದು ಬಿಜೆಪಿಯ ಹತಾಶೆಯನ್ನು ಸೂಚಿಸುತ್ತದೆ. ಬಿಜೆಪಿಗರಿಗೆ ಕ್ರಿಮಿನಲ್​ಗಳ ಮೇಲೆ ಪ್ರೀತಿ ಇದ್ದರೆ, ತಮ್ಮದೇ ಸರ್ಕಾರ ಇದ್ದಾಗ ತಮ್ಮ ಭಕ್ತರ ಮೇಲಿನ ಪ್ರಕರಣಗಳನ್ನು ಖುಲಾಸೆ ಮಾಡಿಕೊಳ್ಳಬೇಕಿತ್ತು. ಅವರಿಗೆ ತಮ್ಮ ಕಾರ್ಯಕರ್ತರ ಮೇಲೆ ಪ್ರಕರಣಗಳು ಇರಬೇಕು. ಅವರು ಓಡಾಡಬೇಕೆಂಬ ದುರುದ್ದೇಶವಿದೆ ಎಂದು ಹೇಳಿದ್ದಾರೆ.

ಶ್ರೀಕಾಂತ್‌ ಬಂಧನದ ಕುರಿತು ಮಾತನಾಡಿದ ಬಿಕೆ ಹರಿಪ್ರಸಾದ್‌, ಹೋರಾಟಕ್ಕೂ ಅಪರಾಧಕ್ಕೂ ವ್ಯತ್ಯಾಸ ಇದೆ. ಕರಸೇವಕ ಅಂತಾ ಯಾವುದೋ ಅಪರಾಧ ಪ್ರಕರಣದಲ್ಲಿ ಇರುವವರನ್ನು ಹಾಗೆಯೇ ಬಿಡಲು ಆಗುವುದಿಲ್ಲ. ಬಂಧಿತನ ಮೇಲೆ 13 ಪ್ರಕರಣಗಳಿವೆ. ಕಾನೂನುಬಾಹಿರ ಅಪರಾಧ ಮಾಡಿದ್ದಾರೆ. ಧರ್ಮದ ಹೆಸರಲ್ಲಿ ಏನೇನು ಕೆಲಸ ಮಾಡಿದ್ದಾರೆ ಅಂತಾ ಗೊತ್ತಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್‌, ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ, ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಇದರಲ್ಲಿ ವಿಶೇಷ ಏನೂ ಇಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ್ದ ಗೃಹಸಚಿವ ಡಾ.ಜಿ.ಪರಮೇಶ್ವರ್‌, ದೀರ್ಘಕಾಲದಿಂದ ಬಾಕಿ ಉಳಿದಿರುವ ಹಳೆಯ ಪ್ರಕರಣ​ಗಳನ್ನು ಕ್ಲಿಯರ್ ಮಾಡುವಂತೆ ಆದೇಶ ಕೊಟ್ಟಿದ್ದೇವೆ. ಇದರ ಭಾಗವಾಗಿ ಬಾಬರಿ ಮಸೀದಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ಗಲಭೆ ಕೇಸ್‌ಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಹಿಂದೂ ಕಾರ್ಯಕರ್ತರ ಬಣ್ಣ ಹಚ್ಚುವುದು ಸೂಕ್ತವಲ್ಲ. ಕಾನೂನಿನ ಅಡಿಯಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆ. ಉದ್ದೇಶ ಪೂರಕವಾಗಿ ಯಾವುದನ್ನು ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಕೆಪಿಸಿಸಿ ವಕ್ತಾರ ರಮೇಶ್‌ ಈ ಬಗ್ಗೆ ಮಾತನಾಡಿದ್ದು, ಶ್ರೀಕಾಂತ್ ಪೂಜಾರಿ ಬಂಧನವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಲೋಕಸಭಾ ಚುನಾವಣೆಗೆ ಬಳಸಿಕೊಳ್ಳುವ ವ್ಯವಸ್ಥಿತ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ:CAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...