Homeಮುಖಪುಟಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!

ಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!

- Advertisement -
- Advertisement -

ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನರೇಂದ್ರ ಮೋದಿ ಭಾರತದಲ್ಲಿ ಒಂದೇ ಒಂದು ಪತ್ರಿಕಾಗೋಷ್ಟಿಯನ್ನು ನಡೆಸಿಲ್ಲ, ಪತ್ರಕರ್ತರನ್ನು ಎದುರಿಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿಲ್ಲ. ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ವ್ಯಕ್ತಿಯೋರ್ವರು ‘ಕೊನೆಯ ಪತ್ರಿಕಾಗೋಷ್ಠಿ’ಯನ್ನು ನಡೆಸಿ ಇಂದಿಗೆ ಸರಿಸುಮಾರು 10 ವರ್ಷಗಳು ಕಳೆದಿದೆ ಎಂದು ಪತ್ರಕರ್ತ ಪಂಕಜ್ ಪಚೌರಿ ಹೇಳಿಕೊಂಡಿದ್ದಾರೆ.

2014ರ ಜ.3ರಂದು ಅಂದಿನ ಭಾರತದ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಪತ್ರಿಕಾಗೋಷ್ಟಿಯನ್ನು ನಡೆಸಿದ್ದರು. ಪತ್ರಿಕಾಗೋಷ್ಠಿಯ ವೀಡಿಯೋವನ್ನು ಪಂಕಜ್ ಪಚೌರಿ ಹಂಚಿಕೊಂಡಿದ್ದು, ಈ ಪತ್ರಿಕಾಗೋಷ್ಠಿಯಲ್ಲಿ 62 ಪೂರ್ವ ನಿರ್ಧರಿತವಲ್ಲದ ಪ್ರಶ್ನೆಗಳನ್ನು 100ಕ್ಕೂ ಅಧಿಕ ಪತ್ರಕರ್ತರ ಸಮ್ಮುಖದಲ್ಲಿ ಉತ್ತರಿಸಲಾಗಿತ್ತು ಎಂದು ಪಂಕಜ್ ಪಚೌರಿ ತಮ್ಮ ಪೋಸ್ಟ್ ನಲ್ಲಿ ಹೇಳಿದ್ದಾರೆ.

ಪಂಕಜ್ ಪಚೌರಿ ಅವರು ಮನಮೋಹನ್‌ ಸಿಂಗ್‌ ಅವರ ಸರಕಾರದಲ್ಲಿ ಪ್ರಧಾನಿಯ ಮಾಹಿತಿ ಮತ್ತು ಸಂವಹನ ಸಲಹೆಗಾರರಾಗಿದ್ದರು. ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ‘ಪ್ರಧಾನಿ’ ಮೌನವಾಗಿದ್ದಾರೆಂದು ಬಿಜೆಪಿ ಟೀಕಿಸುತ್ತಿತ್ತು.

ಮನಮೋಹನ್‌ ಸಿಂಗ್‌ ನಡೆಸಿದ ಪತ್ರಿಕಾಗೋಷ್ಟಿ ಭಾರತದ ಪ್ರಧಾನಿಯವರ ಕೊನೆಯ ಪತ್ರಿಕಾಗೋಷ್ಠಿ ಎಂದು ಹೇಳಬಹುದು. ಏಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಿ 2014ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅವರು ಪತ್ರಿಕಾಗೋಷ್ಠಿಯನ್ನು ನಡೆಸಲು ನಿರಾಕರಿಸಿದ್ದಾರೆ. ಅವರು 2023ರ ಯುಎಸ್ ಪ್ರವಾಸದ ಸಮಯದಲ್ಲಿ ಶ್ವೇತಭವನದಲ್ಲಿ ಪತ್ರಕರ್ತರ ಎರಡು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. 2014ರಲ್ಲಿ ಅಧಿಕಾರಕ್ಕೆ ಬಂದ ಮೋದಿ ಆ ಬಳಿಕ ಭಾರತದಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡಿಲ್ಲ.

ಮೋದಿ ಸಾರ್ವಜನಿಕ ಸಮಾರಂಭಗಳಲ್ಲಿ ಭಾಷಣಗಳನ್ನು ಮಾಡುತ್ತಾರೆ ಮತ್ತು ರಾಷ್ಟ್ರಕ್ಕೆ ಸಂದೇಶಗಳನ್ನು ಕಳುಹಿಸಲು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ ಆಯೋಜಿಸುತ್ತಾರೆ. ಆದರೆ ಸ್ಕ್ರಿಪ್ಟ್‌ ಇಲ್ಲದ ಯಾವುದೇ ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿರುವುದು ಅಪರೂಪವಾಗಿತ್ತು. ಇದನ್ನು ನ್ಯೂಯಾರ್ಕ್‌ ಟೈಮ್ಸ್‌ ಕೂಡ ಉಲ್ಲೇಖಿಸಿತ್ತು.

ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿ ನಡೆಸಿದ ಕೊನೆಯ ಪತ್ರಿಕಾಗೋಷ್ಠಿಯಲ್ಲಿ ಮುಕ್ತವಾಗಿ ತಮ್ಮ ಸರ್ಕಾರದ ಸಾಧನೆ ಮತ್ತು ವೈಫಲ್ಯಗಳ ಬಗ್ಗೆ ಮಾತನಾಡಿದ್ದರು. ಕಾಂಗ್ರೆಸ್‌ ಪಕ್ಷದ ವೈಫಲ್ಯ, ಉತ್ಪಾದನಾ ರಂಗದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗಿರುವುದರ ಬಗ್ಗೆ ಮಾತನಾಡಿದ್ದರು.

ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ಒಂದೇ ಒಂದು ಪತ್ರಿಕಾಗೋಷ್ಟಿ ನಡೆಸಿಲ್ಲ ಎಂದು ಈ ಮೊದಲು ಪ್ರತಿಪಕ್ಷಗಳು ನಿರಂತರವಾಗಿ ಆರೋಪಿಸಿದ್ದವು. ನಿರುದ್ಯೋಗ, ಹಣದುಬ್ಬರ, ಪುಲ್ವಮಾ ಘಟನೆ ಸೇರಿ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮಾತನಾಡುವಂತೆ ಪ್ರತಿಪಕ್ಷಗಳು ಆಗ್ರಹಿಸಿದ್ದವು.

ಪಚೌರಿ ಅವರ ಪೋಸ್ಟ್‌ನ್ನು  ಶೇರ್‌ ಮಾಡಿದ ಕಾಂಗ್ರೆಸ್‌ ಸಂಸದ ಮನೀಶ್‌ ತಿವಾರಿ, ತಮ್ಮ 10 ವರ್ಷದ ಸೇವಾವಧಿಯಲ್ಲಿ ಮನಮೋಹನ್‌ ಸಿಂಗ್‌ 117 ಪತ್ರಿಕಾಗೋಷ್ಠಿ ನಡೆಸಿದ್ದಾರೆಂದು ಹೇಳಿದ್ದಾರೆ.

ಇದನ್ನು ಓದಿ: CAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...