Homeಮುಖಪುಟನಿರ್ಮಲಾ ಸೀತಾರಾಮನ್ ವಜಾಗೊಳಿಸಿ, ಇಡಿ ರಕ್ಷಿಸಿ: IRS ಅಧಿಕಾರಿಯಿಂದ ರಾಷ್ಟ್ರಪತಿಗೆ ಆಗ್ರಹ

ನಿರ್ಮಲಾ ಸೀತಾರಾಮನ್ ವಜಾಗೊಳಿಸಿ, ಇಡಿ ರಕ್ಷಿಸಿ: IRS ಅಧಿಕಾರಿಯಿಂದ ರಾಷ್ಟ್ರಪತಿಗೆ ಆಗ್ರಹ

- Advertisement -
- Advertisement -

ತಮಿಳುನಾಡಿನಲ್ಲಿ 6.5 ಎಕರೆ ಜಮೀನು ಹೊಂದಿರುವ ಇಬ್ಬರು ರೈತರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ನೀಡಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಮುಂದಿನ ತಿಂಗಳು ನಿವೃತ್ತರಾಗಲಿರುವ ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿಯೊಬ್ಬರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಚೆನ್ನೈ (ಉತ್ತರ) ಜಿಎಸ್‌ಟಿ ಮತ್ತು ಸೆಂಟ್ರಲ್ ಎಕ್ಸೈಸ್‌ನ ಡೆಪ್ಯುಟಿ ಕಮಿಷನರ್ ಬಿ ಬಾಲಮುರುಗನ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ನಿರ್ಮಲಾ ಸೀತಾರಾಮನ್‌ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದಾರೆ.

ರೈತರು ತಮ್ಮ ಜಮೀನು ಕಬಳಿಸುವ ಪ್ರಯತ್ನವನ್ನು ವಿರೋಧಿಸಿದ್ದಕ್ಕೆ ಟಾರ್ಗೆಟ್ ಮಾಡಲಾಗಿದೆ ಎಂದು ಅಧಿಕಾರಿ ಆರೋಪಿಸಿದ್ದಾರೆ.

ಈ ಪ್ರಕರಣವು ಜಾರಿ ನಿರ್ದೇಶನಾಲಯವು ಹೇಗೆ ಬಿಜೆಪಿಯ ವಿಸ್ತೃತ ಅಂಗವಾಗಿದೆ ಎಂಬುವುದನ್ನು ತೋರಿಸುತ್ತದೆ. ವಾಸ್ತವವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಧಿಕಾರ ವಹಿಸಿಕೊಂಡ ನಂತರ ಜಾರಿ ನಿರ್ದೇಶನಾಲಯವನ್ನು ಬಿಜೆಪಿ ನೀತಿ ಜಾರಿ ನಿರ್ದೇಶನಾಲಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಬಾಲಮುರುಗನ್ ಹೇಳಿದ್ದಾರೆ.

ಬಡ ದಲಿತ ರೈತರಿಗೆ ನ್ಯಾಯ ಒದಗಿಸಲು ಮತ್ತು ಜಾರಿ ನಿರ್ದೇಶನಾಲಯವನ್ನು ಉಳಿಸಲು ಸೀತಾರಾಮನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ರಾಷ್ಟ್ರಪತಿಯನ್ನು ಒತ್ತಾಯಿಸಿದ್ದಾರೆ.

ಅಧಿಕಾರಿ ಬಾಲಮುರುಗನ್ ಅವರು ಈ ಹಿಂದೆ ತನ್ನ ಸಾರ್ವಜನಿಕ ಸೇವೆಯಿಂದ ಸ್ವಯಂ ನಿವೃತ್ತಿ (ವಿಆರ್‌ಎಸ್) ಕೋರಿದ್ದರು. ಆದರೆ, ಹಣಕಾಸು ಇಲಾಖೆ ಅದನ್ನು ಮಾನ್ಯ ಮಾಡಿರಲಿಲ್ಲ. ಇದೇ ಜನವರಿ 31ರಂದು ಅವರು ವಯೋ ನಿವೃತ್ತಿ ಹೊಂದಲಿದ್ದಾರೆ.

2020ರಲ್ಲಿ ತನ್ನ ಸಹೋದ್ಯೋಗಿಗಳ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಅಧಿಕಾರಿ ಬಾಲಮುರುಗನ್ ಸುದ್ದಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಬಗ್ಗೆಯೂ ಇವರು ಅನುಮಾನ ವ್ಯಕ್ತಪಡಿಸಿದ್ದರು.

ತಮಿಳುನಾಡಿನ ಸೇಲಂ ಜಿಲ್ಲೆಯ ಅತ್ತೂರಿನ ಕಣ್ಣಯ್ಯನ್ ಮತ್ತು ಕೃಷ್ಣನ್ ಎಂಬ ಇಬ್ಬರು ರೈತರಿಗೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಇಡಿ ನೋಟಿಸ್ ನೀಡಿದೆ. ಇವರ ವಿರುದ್ಧ ಎರಡು ಭಾರತೀಯ ಕಾಡೆಮ್ಮೆಗಳ ಸಾವಿಗೆ ಕಾರಣವಾದ ಅಕ್ರಮ ವಿದ್ಯುತ್ ಬೇಲಿಯನ್ನು ನಿರ್ಮಿಸಿದ್ದಕ್ಕಾಗಿ 2017 ರಲ್ಲಿ ವನ್ಯಜೀವಿ (ರಕ್ಷಣೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಆದರೆ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಅತ್ತೂರಿನ ಸ್ಥಳೀಯ ನ್ಯಾಯಾಲಯವು ಇಬ್ಬರನ್ನು ಖುಲಾಸೆಗೊಳಿಸಿತ್ತು. ವನ್ಯಜೀವಿ (ರಕ್ಷಣೆ) ಕಾಯ್ದೆಯಡಿ ದಾಖಲಿಸಲಾದ ಪ್ರಕರಣಗಳನ್ನು ತನಿಖೆ ಮಾಡಲು ಇಡಿಗೆ ಅಧಿಕಾರವಿದ್ದರೂ, 2021 ರಲ್ಲಿ ರೈತರನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯಕ್ಕೆ ಸೂಚಿಸಿದೆ. ಇದಾಗಿ ಎರಡು ವರ್ಷಗಳ ನಂತರ ಇಡಿ ನೋಟಿಸ್ ನೀಡಿದೆ ಎಂದು ಅಧಿಕಾರಿ ಬಾಲಮುರುಗನ್‌ ಹೇಳಿದ್ದಾರೆ.

ಜೂನ್ 2023ರಲ್ಲಿ ಇಬ್ಬರು ರೈತ ಸಹೋದರರಿಗೆ ಇಡಿ ನೋಟಿಸ್ ಜಾರಿ ಮಾಡಿತ್ತು. ಈ ಸಂಬಂಧ ಸ್ಥಳೀಯ ವಕೀಲರ ಸಹಾಯದಿಂದ ಇಬ್ಬರು ಇಡಿ ಮುಂದೆ ಹಾಜರಾಗಿದ್ದರು. ಇಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಚೆನ್ನೈನ ನುಂಗಂಬಾಕ್ಕಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ ಈ ವಿಷಯ ಬಯಲಾಗಿತ್ತು.

ಇದನ್ನೂ ಓದಿ : ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...