Homeಮುಖಪುಟಹರ್ಯಾಣ: ED ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕರಿಗೆ ಸೇರಿದ 20ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ

ಹರ್ಯಾಣ: ED ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕರಿಗೆ ಸೇರಿದ 20ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹರ್ಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಮತ್ತು ಐಎನ್‌ಎಲ್‌ಡಿ ಮಾಜಿ ಶಾಸಕ ದಿಲ್‌ಬಾಗ್ ಸಿಂಗ್ ನಿವಾಸ ಸೇರಿ ಹಲವೆಡೆ ದಾಳಿಯನ್ನು ನಡೆಸಿದ್ದಾರೆ.

ಶಾಸಕ ಸುರೇಂದರ್ ಪನ್ವಾರ್, ಮಾಜಿ ಐಎನ್‌ಎಲ್‌ಡಿ ಶಾಸಕ ದಿಲ್‌ಬಾಗ್ ಸಿಂಗ್‌ಗೆ ಸೇರಿದ 20 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಮುನಾ ನಗರ, ಸೋನಿಪತ್, ಮೊಹಾಲಿ, ಫರಿದಾಬಾದ್, ಚಂಡೀಗಢ ಮತ್ತು ಕರ್ನಾಲ್‌ನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇ.ಡಿ ಅಧಿಕಾರಿಗಳಿಗೆ ಕೇಂದ್ರೀಯ ಅರೆಸೇನಾ ಪಡೆಗಳ ಮೂಲಕ ರಕ್ಷಣೆಯನ್ನು ಕೂಡ ನೀಡಲಾಗಿದೆ.

ಸುರೇಂದರ್ ಪನ್ವಾರ್ ಸೋನಿಪತ್‌ ಕ್ಷೇತ್ರದ ಕಾಂಗ್ರೆಸ್‌ ಶಾಸಕರಾಗಿದ್ದು, ದಿಲ್‌ಬಾಗ್ ಸಿಂಗ್  ಅವರು ಭಾರತ ರಾಷ್ಟ್ರೀಯ ಲೋಕ ದಳದಿಂದ (ಐಎನ್‌ಎಲ್‌ಡಿ) ಯಮುನಾ ನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಈ ಹಿಂದೆ ಯಮುನಾ ನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಅಕ್ರಮ ಗಣಿಗಾರಿಕೆ  ಕುರಿತು ಹಲವು ಎಫ್‌ಐಆರ್‌ಗಳು ದಾಖಲಾದ ಬಳಿಕ ಇಡಿ ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದರು. ಗಣಿಗಾರಿಕ ನಡೆಸದಂತೆ ನ್ಯಾಯಾಲಯದ ಆದೇಶವಿದ್ದರೂ ಅಕ್ರಮವಾಗಿ ನಡೆಸುತ್ತಿರುವ  ಆರೋಪ ಕೇಳಿ ಬಂದಿತ್ತು.

ಇದಲ್ಲದೆ ತೆರಿಗೆಗಳ ಸಂಗ್ರಹವನ್ನು ಸರಳಗೊಳಿಸಲು ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ತೆರಿಗೆ ವಂಚನೆಯನ್ನು ತಡೆಗಟ್ಟಲು ಹರ್ಯಾಣ ಸರ್ಕಾರ 2020ರಲ್ಲಿ ಜಾರಿಗೆ ತಂದ ಆನ್‌ಲೈನ್ ಪೋರ್ಟಲ್ ‘ಇ-ರಾವಣ್’ ಯೋಜನೆಯಲ್ಲಿನ ವಂಚನೆಯನ್ನು ಕೂಡ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಜಾರ್ಖಂಡ್‌ ಮತ್ತು ರಾಜಸ್ಥಾನದಲ್ಲಿ ನಿನ್ನೆ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯವು ರಾಂಚಿಯಲ್ಲಿ ದಾಳಿ ನಡೆಸಿದೆ. ಇಡಿ ದಾಳಿಗೆ ಒಳಗಾಗಿರುವ ಅಭಿಷೇಕ್ ಪ್ರಸಾದ್ ಅವರು ಸಿಎಂ ಹೇಮಂತ್ ಅವರ ಮಾಧ್ಯಮ ಸಲಹೆಗಾರರಾಗಿದ್ದಾರೆ. ಅಭಿಷೇಕ್ ಪ್ರಸಾದ್ ಅವರ ನಿವಾಸ ಮತ್ತು ಸಾಹೇಬ್‌ಗಂಜ್ ಜಿಲ್ಲಾಧಿಕಾರಿ ನಿವಾಸ ಸೇರಿದಂತೆ 12 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗಿದೆ.

ಇಡಿ ನೀಡಿದ ಸಮನ್ಸ್‌ಗಳನ್ನು ಮುಖ್ಯಮಂತ್ರಿ ನಿರ್ಲಕ್ಷಿಸಿದ್ದರಿಂದ ಈ ದಾಳಿಗಳು ನಡೆಯುತ್ತಿದ್ದು, ಈಗಾಗಲೇ ಅವರು ತಮ್ಮ ಆಸ್ತಿಯ ಎಲ್ಲ ವಿವರಗಳನ್ನು ತನಿಖಾ ಸಂಸ್ಥೆಗೆ ಒದಗಿಸಿದ್ದಾರೆ. ಈಗ ನೀಡುತ್ತಿರುವ ಸಮನ್ಸ್ ಕಾನೂನುಬಾಹಿರವಾಗಿದೆ ಎಂದು ಹೇಮಂತ್ ಸೋರೆನ್ ಆಪ್ತರು ಹೇಳಿದ್ದರು.

ಇದನ್ನು ಓದಿ: ಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...