Homeಮುಖಪುಟಹರ್ಯಾಣ: ED ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕರಿಗೆ ಸೇರಿದ 20ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ

ಹರ್ಯಾಣ: ED ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕರಿಗೆ ಸೇರಿದ 20ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹರ್ಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಮತ್ತು ಐಎನ್‌ಎಲ್‌ಡಿ ಮಾಜಿ ಶಾಸಕ ದಿಲ್‌ಬಾಗ್ ಸಿಂಗ್ ನಿವಾಸ ಸೇರಿ ಹಲವೆಡೆ ದಾಳಿಯನ್ನು ನಡೆಸಿದ್ದಾರೆ.

ಶಾಸಕ ಸುರೇಂದರ್ ಪನ್ವಾರ್, ಮಾಜಿ ಐಎನ್‌ಎಲ್‌ಡಿ ಶಾಸಕ ದಿಲ್‌ಬಾಗ್ ಸಿಂಗ್‌ಗೆ ಸೇರಿದ 20 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಮುನಾ ನಗರ, ಸೋನಿಪತ್, ಮೊಹಾಲಿ, ಫರಿದಾಬಾದ್, ಚಂಡೀಗಢ ಮತ್ತು ಕರ್ನಾಲ್‌ನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇ.ಡಿ ಅಧಿಕಾರಿಗಳಿಗೆ ಕೇಂದ್ರೀಯ ಅರೆಸೇನಾ ಪಡೆಗಳ ಮೂಲಕ ರಕ್ಷಣೆಯನ್ನು ಕೂಡ ನೀಡಲಾಗಿದೆ.

ಸುರೇಂದರ್ ಪನ್ವಾರ್ ಸೋನಿಪತ್‌ ಕ್ಷೇತ್ರದ ಕಾಂಗ್ರೆಸ್‌ ಶಾಸಕರಾಗಿದ್ದು, ದಿಲ್‌ಬಾಗ್ ಸಿಂಗ್  ಅವರು ಭಾರತ ರಾಷ್ಟ್ರೀಯ ಲೋಕ ದಳದಿಂದ (ಐಎನ್‌ಎಲ್‌ಡಿ) ಯಮುನಾ ನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಈ ಹಿಂದೆ ಯಮುನಾ ನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಅಕ್ರಮ ಗಣಿಗಾರಿಕೆ  ಕುರಿತು ಹಲವು ಎಫ್‌ಐಆರ್‌ಗಳು ದಾಖಲಾದ ಬಳಿಕ ಇಡಿ ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದರು. ಗಣಿಗಾರಿಕ ನಡೆಸದಂತೆ ನ್ಯಾಯಾಲಯದ ಆದೇಶವಿದ್ದರೂ ಅಕ್ರಮವಾಗಿ ನಡೆಸುತ್ತಿರುವ  ಆರೋಪ ಕೇಳಿ ಬಂದಿತ್ತು.

ಇದಲ್ಲದೆ ತೆರಿಗೆಗಳ ಸಂಗ್ರಹವನ್ನು ಸರಳಗೊಳಿಸಲು ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ತೆರಿಗೆ ವಂಚನೆಯನ್ನು ತಡೆಗಟ್ಟಲು ಹರ್ಯಾಣ ಸರ್ಕಾರ 2020ರಲ್ಲಿ ಜಾರಿಗೆ ತಂದ ಆನ್‌ಲೈನ್ ಪೋರ್ಟಲ್ ‘ಇ-ರಾವಣ್’ ಯೋಜನೆಯಲ್ಲಿನ ವಂಚನೆಯನ್ನು ಕೂಡ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಜಾರ್ಖಂಡ್‌ ಮತ್ತು ರಾಜಸ್ಥಾನದಲ್ಲಿ ನಿನ್ನೆ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯವು ರಾಂಚಿಯಲ್ಲಿ ದಾಳಿ ನಡೆಸಿದೆ. ಇಡಿ ದಾಳಿಗೆ ಒಳಗಾಗಿರುವ ಅಭಿಷೇಕ್ ಪ್ರಸಾದ್ ಅವರು ಸಿಎಂ ಹೇಮಂತ್ ಅವರ ಮಾಧ್ಯಮ ಸಲಹೆಗಾರರಾಗಿದ್ದಾರೆ. ಅಭಿಷೇಕ್ ಪ್ರಸಾದ್ ಅವರ ನಿವಾಸ ಮತ್ತು ಸಾಹೇಬ್‌ಗಂಜ್ ಜಿಲ್ಲಾಧಿಕಾರಿ ನಿವಾಸ ಸೇರಿದಂತೆ 12 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗಿದೆ.

ಇಡಿ ನೀಡಿದ ಸಮನ್ಸ್‌ಗಳನ್ನು ಮುಖ್ಯಮಂತ್ರಿ ನಿರ್ಲಕ್ಷಿಸಿದ್ದರಿಂದ ಈ ದಾಳಿಗಳು ನಡೆಯುತ್ತಿದ್ದು, ಈಗಾಗಲೇ ಅವರು ತಮ್ಮ ಆಸ್ತಿಯ ಎಲ್ಲ ವಿವರಗಳನ್ನು ತನಿಖಾ ಸಂಸ್ಥೆಗೆ ಒದಗಿಸಿದ್ದಾರೆ. ಈಗ ನೀಡುತ್ತಿರುವ ಸಮನ್ಸ್ ಕಾನೂನುಬಾಹಿರವಾಗಿದೆ ಎಂದು ಹೇಮಂತ್ ಸೋರೆನ್ ಆಪ್ತರು ಹೇಳಿದ್ದರು.

ಇದನ್ನು ಓದಿ: ಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...