Homeಕರ್ನಾಟಕಮಲ ಹೊರುವ ಪದ್ಧತಿ ಇನ್ನೂ ಜೀವಂತ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್‌

ಮಲ ಹೊರುವ ಪದ್ಧತಿ ಇನ್ನೂ ಜೀವಂತ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್‌

- Advertisement -
- Advertisement -

ಕಾನೂನಾತ್ಮಕ ನಿಷೇಧದ ಹೊರತಾಗಿಯೂ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಮಲ ತೆಗೆಯುವ, ಹೊರುವ ಪದ್ದತಿಯ ಸಂಬಂಧ ಪ್ರಕಟಗೊಂಡಿರುವ ಮಾಧ್ಯಮ ವರದಿಯನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ ಪ್ರಕರಣ ದಾಖಲಿಸಲು ರಿಜಿಸ್ಟ್ರಿಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಮಲ ಹೊರುವ ಪದ್ದತಿಯಲ್ಲಿ ಜಾತಿ ತಾರತಮ್ಯ ಒಳಗೊಂಡಿರುವುದನ್ನು ಒತ್ತಿ ಹೇಳಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 60 ವರ್ಷಗಳಿಗಿಂತ ಹೆಚ್ಚು ಸಮಯ ಕಳೆದರೂ, ಸಮಾಜದಲ್ಲಿರುವ ನಮ್ಮದೇ ಸಹೋದರರು ಜಾತಿಯ ಕಾರಣಕ್ಕೆ ಈ ರೀತಿ ಕೆಲಸ ಮಾಡಬೇಕಿದೆ ಎಂದಿದೆ.

ಹೈಕೋರ್ಟ್‌ ಕಲಾಪ ಆರಂಭವಾಗುತ್ತಿದ್ದಂತೆ ಆಂಗ್ಲ ಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ಸುದ್ದಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠವು ಉಲ್ಲೇಖಿಸಿತು.

“ಇದು ಪ್ರತಿಯೊಬ್ಬರ ಆತ್ಮಸಾಕ್ಷಿಯನ್ನು ಕೆಣಕುತ್ತದೆ. ಸ್ವಾತಂತ್ರ್ಯ ಬಂದು 60 ವರ್ಷಗಳ ಬಳಿಕವೂ ನಿರ್ದಿಷ್ಟ ಸಮುದಾಯದಲ್ಲಿ ಜನಿಸಿದ, ತನ್ನದಲ್ಲದ ದುರದೃಷ್ಟಕ್ಕೆ ಅವರು ಈ ಕೆಲಸ ಮಾಡಬೇಕಿದೆ. ಇದು ಮಾನವೀಯತೆಗೆ ನಾಚಿಕೆಯಾಗುವ ಸಂಗತಿಯಲ್ಲವೇ? ಈ ಕಾರಣಕ್ಕಾಗಿ ನಾವೆಲ್ಲ ಇಲ್ಲಿ ಇದ್ದೇವೆಯೇ?” ಎಂದು ಪೀಠವು ಮೌಖಿವಾಗಿ ಕೇಳಿದೆ.

“ಯಾರೋ ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದಾರೆ ಎಂದ ಮಾತ್ರಕ್ಕೆ ಪ್ರಾಣಿಗಿಂತ ಕೆಟ್ಟ ಬದುಕು ಬದುಕಬೇಕೆ? ನಾವೆಲ್ಲಾ ದೇವರ ಮಕ್ಕಳು, ಇದೇನಿದು? ಯಂತ್ರೋಪಕರಣಗಳು ಇದ್ದೂ ಹೀಗೇಕೆ? ಮಲಗುಂಡಿ ಸ್ವಚ್ಛಗೊಳಿಸಲು ಒಂದು ತಾಸಿಗೆ ಎರಡು ಸಾವಿರ ರೂಪಾಯಿ ವೆಚ್ಚವಾಗುತ್ತದೆಯಷ್ಟೇ” ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿದ್ದಾಗಿ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ವಕೀಲ ಶ್ರೀಧರ್‌ ಪ್ರಭು ಅವರನ್ನು ಅಮಿಕಸ್‌ ಕ್ಯೂರಿಯನ್ನಾಗಿ ನೇಮಕ ಮಾಡಿ, ಸಾರ್ವಜನಿಕ ಹಿತಾಸಕ್ತ ಅರ್ಜಿ ಸಿದ್ಧಪಡಿಸಿ ಶುಕ್ರವಾರದ ಒಳಗೆ ರಿಜಿಸ್ಟ್ರಿಗೆ ಸಲ್ಲಿಸಬೇಕು. ರಿಜಿಸ್ಟ್ರಿ ಅರ್ಜಿಯನ್ನು ವಿಚಾರಣೆಗೆ ಸೋಮವಾರಕ್ಕೆ ಪಟ್ಟಿ ಮಾಡಬೇಕು ಎಂದು ಪೀಠ ನಿರ್ದೇಶನ ನೀಡಿರುವುದಾಗಿ ತಿಳಿದು ಬಂದಿದೆ.

ಕೋಲಾರದಲ್ಲಿ ದಲಿತ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಶಿಕ್ಷಕರು:

ಕೋಲಾರದ ಮಾಲೂರು ತಾಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆ ಇತ್ತೀಚೆಗೆ ದೇಶದಾದ್ಯಂತ ಸುದ್ದಿಯಾಗಿತ್ತು. ಗುಂಡಿಗೆ ಇಳಿದ ಎಲ್ಲಾ ಮಕ್ಕಳು ಪರಿಶಿಷ್ಟ ಸಮುದಾಯಕ್ಕೆ ಸೇರಿದವರು ಎಂಬುವುದು ಮಾತ್ರ ಶಿಕ್ಷಕರೊಳಗಿನ ಜಾತಿಕ್ರೌರ್ಯಕ್ಕೆ ಹಿಡಿದ ಕನ್ನಡಿ ಎನ್ನಬಹುದು. ಡಿಸೆಂಬರ್ 1ರಂದು ಈ ಘಟನೆ ನಡೆದಿದ್ದು, ಡಿ.17ರಂದು ಪ್ರಕರಣ ಬೆಳಕಿದೆ ಬಂದಿದೆ. ಇದೇ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ, ಮಕ್ಕಳು ಮಲದ ಗುಂಡಿ ಸ್ವಚ್ಛಗೊಳಿಸುತ್ತಿರುವುದನ್ನು ವಿಡಿಯೋ ಮಾಡಿದ್ದು, ಅದನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಗೆ ಕಳಿಸಿದ್ದರು. ಕನ್ನಡದ ಪ್ರಮುಖ ಪತ್ರಿಕೆಯೊಂದು ಈ ವಿಷಯವನ್ನು ವರದಿ ಮಾಡಿ ಸರ್ಕಾರದ ಗಮನ ಸೆಳೆದಿತ್ತು.

ಈ ಪ್ರಕರಣದ ಕುರಿತು ನಾನು ಗೌರಿಯಲ್ಲಿ ಪ್ರಕಟವಾದ ವಿಸ್ಕೃತ ವರದಿ ಇಲ್ಲಿದೆ :
ದಲಿತ ಚಳವಳಿಯ ನೆಲ ಕೋಲಾರದಲ್ಲಿ ’ಅಮಾನವೀಯ ಕೃತ್ಯ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...