Homeಕರ್ನಾಟಕಹೆಚ್ಚಿದ ನಿರುದ್ಯೋಗ: 15 ಹುದ್ದೆಗಳಿಗೆ 25,000ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಕೆ

ಹೆಚ್ಚಿದ ನಿರುದ್ಯೋಗ: 15 ಹುದ್ದೆಗಳಿಗೆ 25,000ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಕೆ

- Advertisement -
- Advertisement -

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಮುಂದುವರಿಯುತ್ತಲೇ ಇದೆ. ಲಕ್ಷಾಂತರ ಯುವಜನತೆ ಅರ್ಹ ಉದ್ಯೋಗವೇ ಇಲ್ಲವಾಗಿದೆ. ಉನ್ನತ ಪದವೀಧರರು ಈ ಮೊದಲು ಡೈವರ್‌ಗಳಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವುದು ಕಂಡು ಬಂದಿತ್ತು. ಇದೀಗ ಕಲ್ಯಾಣ ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿದ್ದ ಕೇವಲ 15 ಸೂಪರಿಂಟೆಂಡೆಂಟ್ ಹುದ್ದೆಗಳಿಗೆ 25,000ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ದೇಶದಲ್ಲಿನ ನಿರುದ್ಯೋಗದ ಚಿತ್ರಣವನ್ನು ಬಿಚ್ಚಿಟ್ಟಿದೆ.

15 ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಜನವರಿ 6 ಮತ್ತು 7 ರಂದು ಪರೀಕ್ಷೆಗಳನ್ನು ನಡೆಯಲಿದೆ. ಇದಕ್ಕೆ 25,000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳಿದ್ದರೂ, ಹುದ್ದೆಗಳು ಭರ್ತಿಯಾಗದೆ ಖಾಲಿ ಉಳಿದಿದೆ. ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ರಾಜ್ಯದಲ್ಲಿ 2.56 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಆದರೆ, ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವನೆಗೆ ಹಣಕಾಸು ಇಲಾಖೆಯು ಒಪ್ಪಿಗೆಯನ್ನು ನೀಡಲು ಸಾಧ್ಯವಾಗದ ಕಾರಣ ನೇಮಕಾತಿ ಬಾಕಿ ಉಳಿದಿದೆ.

ರಾಜ್ಯದ ಸರಕಾರಿ ಇಲಾಖೆಗಳು ಗಣನೀಯವಾಗಿ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ 75,000 ಖಾಲಿ ಹುದ್ದೆಗಳು, ಆರೋಗ್ಯ ಕ್ಷೇತ್ರದಲ್ಲಿ 35,000 ಮತ್ತು ಗೃಹ ಇಲಾಖೆಯಲ್ಲಿ 22,000 ಹುದ್ದೆಗಳು ಖಾಲಿ ಇದೆ. ಕಂದಾಯ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಪಶುಸಂಗೋಪನೆ, ಹಣಕಾಸು ಇಲಾಖೆಗಳಲ್ಲಿ ತಲಾ 10,000 ಖಾಲಿ ಹುದ್ದೆಗಳು ಖಾಲಿ ಇದೆ.

ಇತ್ತೀಚಿನ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಡೇಟಾ ಪ್ರಕಾರ, ಭಾರತದ ನಿರುದ್ಯೋಗ ದರವು ನವೆಂಬರ್ 2023ರಲ್ಲಿ 10.09%ಕ್ಕೆ ಹೆಚ್ಚಳವಾಗಿದ್ದು, ಇದು ಎರಡು ವರ್ಷಗಳಲ್ಲೇ ಗರಿಷ್ಠ ಮಟ್ಟವನ್ನು ತಲುಪಿರುವುದಾಗಿದೆ. ಸೆಪ್ಟೆಂಬರ್ 2023ರ ವೇಳೆ ನಿರುದ್ಯೋಗದ ದರವು 7.09% ಆಗಿತ್ತು. ಇದು ನವಂಬರ್‌ಗೆ ತಲುಪಿದಾಗ ಮೂರು ಶೇಕಡಾವಾರು ಹೆಚ್ಚಳವನ್ನು ಸೂಚಿಸುತ್ತದೆ. ಗ್ರಾಮೀಣ ನಿರುದ್ಯೋಗವು 6.2% ರಿಂದ 10.82% ಕ್ಕೆ ಏರಿದೆ ಮತ್ತು ನಗರ ಪ್ರದೇಶದಲ್ಲಿನ ನಿರುದ್ಯೋಗದ ದರವು ನವೆಂಬರ್‌ನಲ್ಲಿ 8.44% ಕ್ಕೆ ತಲುಪಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಈ ಕುರಿತು ಮಾತನಾಡಿದ್ದು, ಬಿಲ್ ಕಲೆಕ್ಟರ್‌ಗಳಂತಹ ಹುದ್ದೆಗಳಿಗೆ  ಇಂಜಿನಿಯರ್‌ಗಳು, ಎಂಬಿಎ ಪದವೀಧರರು ಸೇರಿ ಉನ್ನತ ಪದವಿ ಪಡೆದ ಯುವ ಜನತೆ ಅರ್ಜಿ ಸಲ್ಲಿಸುವುದನ್ನು ಕಾಣಬಹುದು. ಕಳೆದ ವರ್ಷ ಜಲಸಂಪನ್ಮೂಲ ಇಲಾಖೆಯಲ್ಲಿ 10 ಚಾಲಕರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, 1.8 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದರು. ಕೋವಿಡ್ ನಂತರ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವವರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ ಎಂದು ಹೇಳಿದ್ದಾರೆ.

ಈ ಕುರಿತು ಹೆಸರು ಹೇಳಲಿಚ್ಚಿಸದ ಹಿರಿಯ ಅಧಿಕಾರಿಯೋರ್ವರು ಪ್ರತಿಕ್ರಿಯಿಸಿದ್ದು, ನಾವು ದೊಡ್ಡ ಮಟ್ಟದಲ್ಲಿ ಹುದ್ದೆಗಳನ್ನು ತುಂಬಲು ಸಾಧ್ಯವಾಗುತ್ತಿಲ್ಲ. ಒಂದು ಇಲಾಖೆಯಲ್ಲಿ 100 ಹುದ್ದೆಗಳು ಖಾಲಿಯಿದ್ದರೆ, ಹಣಕಾಸು ಇಲಾಖೆ ಅನುಮತಿ ನೀಡದ ಕಾರಣ ನಾವು ಕನಿಷ್ಠ 10 ಹುದ್ದೆಯನ್ನು ಕೂಡ ಭರ್ತಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಅರ್ಜಿ ಆಹ್ವಾನಿಸಿತ್ತು. 50,000 ಖಾಲಿ ಹುದ್ದೆಗಳಿದ್ದರೂ, ಹಣಕಾಸು ಇಲಾಖೆಯು 15,000ಕ್ಕೆ ಮಾತ್ರ ತನ್ನ ಒಪ್ಪಿಗೆ ನೀಡಿದೆ. 1.3 ಲಕ್ಷಕ್ಕೂ ಹೆಚ್ಚು ಜನರು ಪರೀಕ್ಷೆಯನ್ನು ಬರೆಯುತ್ತಾರೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...