Homeಮುಖಪುಟಮಣಿಪುರ: ಪೊಲೀಸರ ತೆರವಿಗೆ ಕೇಂದ್ರವನ್ನು ಒತ್ತಾಯಿಸಿದ ಕುಕಿ ಗುಂಪುಗಳು

ಮಣಿಪುರ: ಪೊಲೀಸರ ತೆರವಿಗೆ ಕೇಂದ್ರವನ್ನು ಒತ್ತಾಯಿಸಿದ ಕುಕಿ ಗುಂಪುಗಳು

- Advertisement -
- Advertisement -

ಗಡಿ ಪಟ್ಟಣ ಮೊರೆಯಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಗಡಿ ಭದ್ರತಾ ಪಡೆ (ಬಿಎಸ್ಎಫ್)ಗಳ ಮೇಲಿನ ದಾಳಿಯಲ್ಲಿ ವಿದೇಶಿ ಬಂಡುಕೋರರು ಭಾಗಿಯಾಗಿರಬಹುದು ಎಂಬ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಆರೋಪವನ್ನು ಕುಕಿ ಗುಂಪುಗಳು ತಳ್ಳಿಹಾಕಿವೆ.

ಕುಕಿ ಬುಡಕಟ್ಟು ಜನಾಂಗದವರು ವಾಸಿಸುವ ಪ್ರದೇಶಗಳಲ್ಲಿ 24 ಗಂಟೆಗಳ ನಿಷೇಧಾಜ್ಞೆ ನಂತರ, ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಮತ್ತು ಬುಡಕಟ್ಟು ಏಕತೆಯ ಸಮಿತಿ (CoTU) ನೇತೃತ್ವದ ಗುಂಪುಗಳು ಬೇಡಿಕೆ ಮುಂದಿಟ್ಟಿದ್ದು, ಕುಕಿಗಳು ನೆಲೆಸಿರುವ ಬೆಟ್ಟದ ಪ್ರದೇಶಗಳಿಂದ ಮಣಿಪುರ ಪೊಲೀಸರನ್ನು ತೆರವುಗೊಳಿಸಿ, ಕೇಂದ್ರೀಯ ಪಡೆಗಳನ್ನು ಮಾತ್ರ ಇರಿಸುವಂತೆ ಒತ್ತಾಯಿಸಿವೆ.

ಕುಕಿ ಗುಂಪುಗಳು ಮಣಿಪುರ ಪೊಲೀಸರು ಹೇಗೆ ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದರ ಬಗ್ಗೆ ಆರೋಪಿಸಿದ್ದಾರೆ. ಇಡೀ ಇಂಫಾಲ ಕಣಿವೆಯಲ್ಲಿ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆಯನ್ನು (ಎಎಫ್ಎಸ್‌ಪಿಎ) ಮರು ಜಾರಿಗೊಳಿಸುವಂತೆ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದರು.

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ತಾನು ‘ಅತ್ಯಂತ ಅಸಮಾಧಾನಗೊಂಡಿದ್ದೇನೆ’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಎಎಫ್ಎಸ್‌ಪಿಎ ಮರುಸ್ಥಾಪನೆ ಸೇರಿದಂತೆ ಯಾವುದೇ ಕಟ್ಟುನಿಟ್ಟಿನ ಕೇಂದ್ರ ಸರ್ಕಾರದ ಕ್ರಮಕ್ಕೆ ಅದರಲ್ಲಿ ತೊಡಗಿರುವವರೆ ಜವಾಬ್ದಾರರಾಗಿರುತ್ತಾರೆ ಎಂದಿದ್ದಾರೆ.

‘ಸಮಾಜದಲ್ಲಿ ಈಗ ಏನೇ ನಡೆಯುತ್ತಿದ್ದರೂ ಅದು ವಿಪರೀತವಾಗಿದೆ. ಯಾರಾದರೂ ಅಥವಾ ಯಾವುದೇ ಗುಂಪು ಕಾನೂನನ್ನು ಕೈಗೆತ್ತಿಕೊಂಡರೆ ಸರ್ಕಾರಕ್ಕೆ ಸಹಿಸಿಕೊಳ್ಳುವುದು ನಿಜವಾಗಿಯೂ ಕಷ್ಟವಾಗುತ್ತದೆ. ಕೇಂದ್ರ ಸರ್ಕಾರವು ನೋಡುತ್ತಲೇ ಇಲ್ಲ. ಮತ್ತೆ ಎಎಫ್ಎಸ್‌ಪಿಎ ವಿಧಿಸಿದರೆ ಅವರನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು’ ಎಂದು ಅವರು ಈ ವಾರದ ಆರಂಭದಲ್ಲಿ ಮಣಿಪುರದ ತೌಬಲ್ ಜಿಲ್ಲೆಯ ಲಿಲಾಂಗ್ ಚಿಂಗ್ಜಾವೊ ಪ್ರದೇಶದಲ್ಲಿ ನಡೆದ ಗುಂಡಿನ ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ ನಂತರ ಹೇಳಿದರು.

ಸೋಮವಾರ ಲಿಲಾಂಗ್ ಚಿಂಗ್ಜಾವೊದಲ್ಲಿ ನಿಷೇಧಿತ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ) ಯ ರಾಜಕೀಯ ವಿಭಾಗವಾದ ರೆವಲ್ಯೂಷನರಿ ಪೀಪಲ್ಸ್ ಫ್ರಂಟ್ (ಆರ್‌ಪಿಎಫ್) ದಂಗೆಕೋರರು ನಾಲ್ವರನ್ನು ಕೊಂದಿದ್ದಾರೆ. ಘಟನೆಯಲ್ಲಿ ಹತ್ತು ಮಂದಿ ಗಾಯಗೊಂಡಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ರಮ ಡ್ರಗ್ಸ್ ದಂಧೆ ಮೂಲಕ ಸಂಗ್ರಹಿಸಿದ ಹಣದ ವಿವಾದದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ನಂತರ ಸ್ಥಳೀಯರು ದಾಳಿಕೋರರು ಆಗಮಿಸಿದ್ದ ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಇದಕ್ಕೂ ಮುನ್ನ ಜನವರಿ 2ರಂದು ಮಣಿಪುರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಏಳು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಮಣಿಪುರದ ಗಡಿ ಪಟ್ಟಣ ಮೊರೆಹ್‌ನಲ್ಲಿ ಶಂಕಿತ ಬಂಡುಕೋರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸ್ ಕಮಾಂಡೋಗಳು ಮತ್ತು ಮೂವರು ಬಿಎಸ್ಎಫ್ ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...