Homeಮುಖಪುಟಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣದ ಮರುತನಿಖೆ ಸುದ್ದಿ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣದ ಮರುತನಿಖೆ ಸುದ್ದಿ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

- Advertisement -
- Advertisement -

ಬಾಬಾಬುಡನ್ ಗಿರಿಯಲ್ಲಿ ನಡೆದ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎಂದು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಸುದ್ದಿ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕರಣದ ವಿವರ ಹಂಚಿಕೊಂಡಿರುವ ಸಿಎಂ, “2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು. 2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಆರೋಪಿಗಳಿಗೆ ಸಮನ್ಸ್ ಜಾರಿಯಾಗಿದೆ” ಎಂದು ತಿಳಿಸಿದ್ದಾರೆ.

“ಇದು ಸಹಜ ಕಾನೂನು ಪ್ರಕ್ರಿಯೆ, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು. ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಸಿಎಂ ಮನವಿ ಮಾಡಿದ್ದಾರೆ.

ಡಿಸೆಂಬರ್ 4ರಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರು ತನಿಖೆ ಮಾಡಿಸಿ ಕಾಂಗ್ರೆಸ್ ಸರ್ಕಾರ ದತ್ತಾತ್ರೇಯನ ಭಕ್ತರ ವಿರುದ್ಧವೂ ಷಡ್ಯಂತ್ರ ರೂಪಿಸಲು ಹೊರಟಿದೆ ಎಂದು ಆರೋಪಿಸಿದ್ದರು.

“ಮೊನ್ನೆ ಕರಸೇವಕರು, ಇಂದು ದತ್ತ ಪೀಠದ ಹೋರಾಟಗಾರರನ್ನು ಬೆನ್ನು ಹತ್ತಲು ಪೋಲಿಸರಿಗೆ ಸೂಚಿಸಿದ್ದೀರಿ. ನಿವೆಷ್ಟೇ ಭಯ ಹುಟ್ಟಿಸಿದರೂ ರಾಮ ಭಕ್ತರ ಅಯೋಧ್ಯೆ ಭೇಟಿಯ ಸಂಖ್ಯೆ ಕ್ಷೀಣಿಸಲು ಸಾಧ್ಯವಾಗದು, ಬದಲಾಗಿ ಅದು ವಿಸ್ತಾರಗೊಳ್ಳತ್ತಲೇ ಇರುತ್ತದೆ. ನಿಮ್ಮ ಹಿಂದೂ ದ್ವೇಷದ ಬೆಟ್ಟ ನಿಮಗೆಷ್ಟು ಬೇಕೋ ಅಗೆಯಿರಿ, ಇನ್ನಷ್ಟು ಆಳಕ್ಕೂ ಇಳಿದು ಬಗೆಯಿರಿ, ನಿಮಗೇನೂ ದಕ್ಕದು, ಹಿಂದೂ ಕಾರ್ಯಕರ್ತರ ಒಂದೇ ಒಂದು ರೋಮವನ್ನೂ ಕೊಂಕಿಸಲೂ‌ ಸಾಧ್ಯವಾಗದು. ರಾಮ ಜನ್ಮಭೂಮಿ ಹೋರಾಟದ 31 ವರ್ಷ ಹಳೆಯ ಪ್ರಕರಣಗಳನ್ನು ಕೆದಕಿ ಕರ ಸೇವಕರನ್ನು ಬಂಧಿಸಿದ್ದರ ಬೆನ್ನಲ್ಲೇ, ಇದೀಗ 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರು ತನಿಖೆ ಮಾಡಿಸಿ ಕಾಂಗ್ರೆಸ್ ಸರ್ಕಾರ ದತ್ತಾತ್ರೇಯನ ಭಕ್ತರ ವಿರುದ್ಧವೂ ಷಡ್ಯಂತ್ರ ರೂಪಿಸಲು ಹೊರಟಿದೆ. ಹನುಮನ ಸುಡಲು ಹೋಗಿ ಲಂಕೆಗೆ ಬೆಂಕಿ ಹಚ್ಚಿಸಿಕೊಂಡ ರಾವಣನ ಸ್ಥಿತಿಗೆ ನಿಮ್ಮ ಸರ್ಕಾರ ತಲುಪುತ್ತಿದೆ” ಎಂದು ವಿಜಯೇಂದ್ರ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ವಿಜಯೇಂದ್ರ ಪೋಸ್ಟ್‌ ಅನುಸರಿಸಿ ಅನೇಕ ದೃಶ್ಯ ಮಾಧ್ಯಮಗಳು ಸುದ್ದಿ ಬಿತ್ತರಿಸಿತ್ತು. ಈ ಬೆನ್ನಲ್ಲೇ ಸಿಎಂ ಸ್ಪಷ್ಟನೆ ನಿಡಿದ್ದಾರೆ.

ಏನಿದು ಪ್ರಕರಣ?

2017ರಲ್ಲಿ ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌ 2017ರ ಡಿಸೆಂಬರ್ 3 ರಂದು ದತ್ತ ಜಯಂತಿ ದಿನ ದರ್ಗಾದ ಆವರಣದಲ್ಲಿದ್ದ ಎರಡು ಗೋರಿಗಳನ್ನು ಧ್ವಂಸಗೊಳಿಸಲಾಗಿತ್ತು. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಭಜರಂಗದಳದ ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್, ರಾಮು ಸೇರಿ ಒಟ್ಟು 14 ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆರೋಪಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ : ಬೆಂಗಳೂರು ವಿಮಾನ ನಿಲ್ದಾಣದ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿ ನಾಪತ್ತೆ: ತಿಂಗಳಲ್ಲಿ ಎರಡನೇ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...