Homeಮುಖಪುಟಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣದ ಮರುತನಿಖೆ ಸುದ್ದಿ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣದ ಮರುತನಿಖೆ ಸುದ್ದಿ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

- Advertisement -
- Advertisement -

ಬಾಬಾಬುಡನ್ ಗಿರಿಯಲ್ಲಿ ನಡೆದ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎಂದು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಸುದ್ದಿ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕರಣದ ವಿವರ ಹಂಚಿಕೊಂಡಿರುವ ಸಿಎಂ, “2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು. 2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಆರೋಪಿಗಳಿಗೆ ಸಮನ್ಸ್ ಜಾರಿಯಾಗಿದೆ” ಎಂದು ತಿಳಿಸಿದ್ದಾರೆ.

“ಇದು ಸಹಜ ಕಾನೂನು ಪ್ರಕ್ರಿಯೆ, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು. ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಸಿಎಂ ಮನವಿ ಮಾಡಿದ್ದಾರೆ.

ಡಿಸೆಂಬರ್ 4ರಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರು ತನಿಖೆ ಮಾಡಿಸಿ ಕಾಂಗ್ರೆಸ್ ಸರ್ಕಾರ ದತ್ತಾತ್ರೇಯನ ಭಕ್ತರ ವಿರುದ್ಧವೂ ಷಡ್ಯಂತ್ರ ರೂಪಿಸಲು ಹೊರಟಿದೆ ಎಂದು ಆರೋಪಿಸಿದ್ದರು.

“ಮೊನ್ನೆ ಕರಸೇವಕರು, ಇಂದು ದತ್ತ ಪೀಠದ ಹೋರಾಟಗಾರರನ್ನು ಬೆನ್ನು ಹತ್ತಲು ಪೋಲಿಸರಿಗೆ ಸೂಚಿಸಿದ್ದೀರಿ. ನಿವೆಷ್ಟೇ ಭಯ ಹುಟ್ಟಿಸಿದರೂ ರಾಮ ಭಕ್ತರ ಅಯೋಧ್ಯೆ ಭೇಟಿಯ ಸಂಖ್ಯೆ ಕ್ಷೀಣಿಸಲು ಸಾಧ್ಯವಾಗದು, ಬದಲಾಗಿ ಅದು ವಿಸ್ತಾರಗೊಳ್ಳತ್ತಲೇ ಇರುತ್ತದೆ. ನಿಮ್ಮ ಹಿಂದೂ ದ್ವೇಷದ ಬೆಟ್ಟ ನಿಮಗೆಷ್ಟು ಬೇಕೋ ಅಗೆಯಿರಿ, ಇನ್ನಷ್ಟು ಆಳಕ್ಕೂ ಇಳಿದು ಬಗೆಯಿರಿ, ನಿಮಗೇನೂ ದಕ್ಕದು, ಹಿಂದೂ ಕಾರ್ಯಕರ್ತರ ಒಂದೇ ಒಂದು ರೋಮವನ್ನೂ ಕೊಂಕಿಸಲೂ‌ ಸಾಧ್ಯವಾಗದು. ರಾಮ ಜನ್ಮಭೂಮಿ ಹೋರಾಟದ 31 ವರ್ಷ ಹಳೆಯ ಪ್ರಕರಣಗಳನ್ನು ಕೆದಕಿ ಕರ ಸೇವಕರನ್ನು ಬಂಧಿಸಿದ್ದರ ಬೆನ್ನಲ್ಲೇ, ಇದೀಗ 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರು ತನಿಖೆ ಮಾಡಿಸಿ ಕಾಂಗ್ರೆಸ್ ಸರ್ಕಾರ ದತ್ತಾತ್ರೇಯನ ಭಕ್ತರ ವಿರುದ್ಧವೂ ಷಡ್ಯಂತ್ರ ರೂಪಿಸಲು ಹೊರಟಿದೆ. ಹನುಮನ ಸುಡಲು ಹೋಗಿ ಲಂಕೆಗೆ ಬೆಂಕಿ ಹಚ್ಚಿಸಿಕೊಂಡ ರಾವಣನ ಸ್ಥಿತಿಗೆ ನಿಮ್ಮ ಸರ್ಕಾರ ತಲುಪುತ್ತಿದೆ” ಎಂದು ವಿಜಯೇಂದ್ರ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ವಿಜಯೇಂದ್ರ ಪೋಸ್ಟ್‌ ಅನುಸರಿಸಿ ಅನೇಕ ದೃಶ್ಯ ಮಾಧ್ಯಮಗಳು ಸುದ್ದಿ ಬಿತ್ತರಿಸಿತ್ತು. ಈ ಬೆನ್ನಲ್ಲೇ ಸಿಎಂ ಸ್ಪಷ್ಟನೆ ನಿಡಿದ್ದಾರೆ.

ಏನಿದು ಪ್ರಕರಣ?

2017ರಲ್ಲಿ ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌ 2017ರ ಡಿಸೆಂಬರ್ 3 ರಂದು ದತ್ತ ಜಯಂತಿ ದಿನ ದರ್ಗಾದ ಆವರಣದಲ್ಲಿದ್ದ ಎರಡು ಗೋರಿಗಳನ್ನು ಧ್ವಂಸಗೊಳಿಸಲಾಗಿತ್ತು. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಭಜರಂಗದಳದ ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್, ರಾಮು ಸೇರಿ ಒಟ್ಟು 14 ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆರೋಪಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ : ಬೆಂಗಳೂರು ವಿಮಾನ ನಿಲ್ದಾಣದ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿ ನಾಪತ್ತೆ: ತಿಂಗಳಲ್ಲಿ ಎರಡನೇ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...