Homeಮುಖಪುಟರಾಜ್ಯಸಭೆ ನಾಮನಿರ್ದೇಶನಕ್ಕೆ ಸಹಿ ಹಾಕಲು ಸಂಜಯ್ ಸಿಂಗ್‌ಗೆ ಕೋರ್ಟ್‌ ಅನುಮತಿ

ರಾಜ್ಯಸಭೆ ನಾಮನಿರ್ದೇಶನಕ್ಕೆ ಸಹಿ ಹಾಕಲು ಸಂಜಯ್ ಸಿಂಗ್‌ಗೆ ಕೋರ್ಟ್‌ ಅನುಮತಿ

- Advertisement -
- Advertisement -

ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರ ರಾಜ್ಯಸಭೆಗೆ ಮರು ನಾಮನಿರ್ದೇಶನಕ್ಕಾಗಿ ದಾಖಲೆಗಳಿಗೆ ಸಹಿ ಹಾಕಲು ದೆಹಲಿ ನ್ಯಾಯಾಲಯವು ಅನುಮತಿ ನೀಡಿದ್ದು, ಸಂಜಯ್ ಸಿಂಗ್ ಅವರ ಅಧಿಕಾರಾವಧಿ ಜನವರಿ 27ಕ್ಕೆ ಕೊನೆಗೊಳ್ಳಲಿದೆ.

ಅರ್ಜಿದಾರರಾದ ಸಂಜಯ್ ಸಿಂಗ್ ಅವರಿಗೆ ರಾಜ್ಯಸಭೆಯಿಂದ ‘ನಿರಾಕ್ಷೇಪಣಾ ಪ್ರಮಾಣ ಪತ್ರ’ ಪಡೆಯುವ ಸಂಬಂಧದ ಅಗತ್ಯವಿರುವ ಪತ್ರಗಳಲ್ಲಿ ಸಿಂಗ್ ಅವರ ಸಹಿ ತೆಗೆದುಕೊಳ್ಳಲು ಅನುಮತಿಗಾಗಿ ದೆಹಲಿಯ ರೂಸ್ ಅವೆನ್ಯೂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಯಿತು.

ರಾಜ್ಯಸಭಾ ಸದಸ್ಯರಾಗಿರುವ ಅವರ ಹಾಲಿ ಅವಧಿ ಜನವರಿ 27ಕ್ಕೆ ಮುಕ್ತಾಯವಾಗುತ್ತಿದ್ದು, ‘ಜನವರಿ 2ರಂದು ಚುನಾವಣೆ ನಡೆಸಲು ಚುನಾವಣಾಧಿಕಾರಿ ನೋಟಿಸ್ ಜಾರಿಗೊಳಿಸಿದ್ದಾರೆ’ ಎಂದು ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಈ ಆದೇಶ ನೀಡಿದ್ದಾರೆ. ನಾಮಪತ್ರಗಳನ್ನು ಜನವರಿ 9 ರೊಳಗೆ ಸಲ್ಲಿಸಬೇಕು ಎನ್ನಲಾಗಿದೆ.

ಅರ್ಜಿಯು ದಾಖಲೆಗಳಿಗೆ ಸಹಿ ಹಾಕಲು ಸಿಂಗ್‌ಗೆ ಅನುಮತಿ ನೀಡುವಂತೆ ತಿಹಾರ್ ಜೈಲು ಅಧೀಕ್ಷಕರಿಂದ ನಿರ್ದೇಶನವನ್ನು ಕೋರಿದೆ.

‘ಜನವರಿ 6, 2024 ರಂದು ಜೈಲು ಅಧಿಕಾರಿಗಳ ಮುಂದೆ ಸಿಂಗ್ ಪರ ವಕೀಲರು ದಾಖಲೆಗಳನ್ನು ಹಾಜರುಪಡಿಸಿದರೆ, ಜೈಲು ಅಧೀಕ್ಷಕರು ಆರೋಪಿಯ ಸಹಿಯನ್ನು ಈ ದಾಖಲೆಗಳಲ್ಲಿ ತೆಗೆದುಕೊಳ್ಳಲು ಅನುಮತಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಅವರನ್ನು ಭೇಟಿ ಮಾಡಲು ಸಹ ಅನುಮತಿಸಲಾಗಿದ್ದು, ನಾಮನಿರ್ದೇಶನ ಸಲ್ಲಿಕೆಗೆ ಸಂಬಂಧಿಸಿದಂತೆ ವಿಧಾನಗಳ ಬಗ್ಗೆ ಚರ್ಚಿಸಲು ಅವರ ವಕೀಲರು ಅರ್ಧ ಘಂಟೆ ಸಮಾಯವಾಕಾಶ ನೀಡಬೇಕು’ ಎಂದು ನ್ಯಾಯಾಧೀಶರು ಗುರುವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದ ಮನಿ ಲಾಂಡರಿಂಗ್ ಪ್ರಕರಣದಲ್ಲಿ, ಜಾರಿ ನಿರ್ದೇಶನಾಲಯವು ಅಕ್ಟೋಬರ್ 4 ರಂದು ಸಿಂಗ್ ಅವರನ್ನು ಬಂಧಿಸಿತ್ತು. ಕೆಲವು ಮದ್ಯ ತಯಾರಕರು, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ವಿತ್ತೀಯ ಪರಿಗಣನೆಗಾಗಿ ಲಾಭದಾಯಕವಾದ ಈಗ ರದ್ದಾದ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ. ಆದರೆ, ಎಎಪಿ ನಾಯಕರು ಈ ಆರೋಪವನ್ನು ಬಲವಾಗಿ ತಳ್ಳಿಹಾಕಿದ್ದಾರೆ.

ಇದನ್ನೂ ಓದಿ; ಲೋಕಸಭೆ ಚುನಾವಣೆ ಸಿದ್ಧತೆ: ಜನವರಿ 7ರಿಂದ ರಾಜ್ಯಗಳಿಗೆ ಚುನಾವಣಾ ಆಯೋಗ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...