Homeಮುಖಪುಟಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

ಖಾಯಂ ನೇಮಕಾತಿಗೆ ಆಗ್ರಹಿಸಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವದಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಇಂದು (ಜ.5) ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಅತಿಥಿ ಉಪನ್ಯಾಸಕರು ನೇಮಕಾತಿ ಖಾಯಂ ಮಾಡುವ ಮೂಲಕ ಸೇವಾ ಭದ್ರತೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ, ಅತಿಥಿ ಉಪನ್ಯಾಸಕರ ಖಾಯಂ ನೇಮಕಾತಿಗೆ ಒತ್ತಾಯಿಸಿ ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ಸಿ&ಆರ್ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸುವಂತೆ ಕೋರಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ನಮಗೆ ಸೇವಾ ಭದ್ರತೆ ಕೊಡುತ್ತಿಲ್ಲ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಕೂಡ ಖಾಯಂ ನೇಮಕಾತಿಯ ಭರವಸೆ ನೀಡಿತ್ತು. ಈಗ ಕೇಳಿದರೆ ಕಾನೂನು ತೊಡಕಿನ ಸಬೂಬು ಹೇಳುತ್ತಿದ್ದಾರೆ. ಸಿದ್ದರಾಮಯ್ಯನವರು ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ಧರಣಿ ನಿರತ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅವರು ಪರ್ಯಾಯ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ನಮಗೆ ಪರ್ಯಾಯ ವ್ಯವಸ್ಥೆ ಬೇಡ, ನಮಗೆ ಸೇವಾ ಭದ್ರತೆ ಕೊಡಿ. ನಮಗೆ 5 ಸಾವಿರ ರೂಪಾಯಿ ವೇತನ ಹೆಚ್ಚಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ. ನಮಗೆ ವೇತನ ಹೆಚ್ಚಳ ಬೇಡ, ಅದನ್ನು ನಾವು ಕೇಳಿಲ್ಲ. ನಮಗೆ ಸೇವಾ ಭದ್ರತೆ ಕಲ್ಪಿಸಿ ಎಂದು ಆಗ್ರಹಿಸಿದರು.

ಖಾಯಂ ನೇಮಕಾತಿ ನಾವು ಕೇಳುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು

“ನೇಮಕಾತಿ ಖಾಯಮಾತಿ ನಾವು ಕೇಳುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು.ನಮಗೆ ಸೇವಾ ಭದ್ರತೆ ಕೊಡಿ.
ಸರ್ಕಾರ ನಾವು ಕೇಳದೆ ಇರುವ ಪರ್ಯಾಯ ಸೌಲಭ್ಯ ಕೊಡುತ್ತಿದೆ. 60 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಳಿಕ ಈಡಗಂಟು ಕೊಡ್ತೀವಿ, ಐದು ಸಾವಿರ ರೂಪಾಯಿ ವೇತನ ಹೆಚ್ಚಿಸುತ್ತೇವೆ ಎನ್ನುತ್ತಿದ್ದಾರೆ. ನಾವು ಈ ವರ್ಷ ಸೇವೆಯಲ್ಲಿದ್ದವರು ಮುಂದಿನ ವರ್ಷ ಸೇವೆಯಲ್ಲಿ ಇರುತ್ತೇವೆ ಎಂಬ ಗ್ಯಾರಂಟಿಯಿಲ್ಲ. ಸೇವಾ ಭದ್ರತೆ ಇಲ್ಲದ ಮೇಲೆ 60 ವರ್ಷದ ಬಳಿಕದ ಈಡಗಂಟು ಯಾರಿಗೆ ಸಿಗುತ್ತೆ? ಜೀವ ವಿಮೆ ಕೊಡುತ್ತೇವೆ ಎನ್ನುತ್ತಿದ್ದಾರೆ. ನಾವು ಸೇವೆಯಲ್ಲಿ ಮುಂದುವರೆದರೆ ತಾನೆ ಜೀವ ವಿಮೆ ಕೊಡುವುದು. ಹಾಗಾಗಿ ಅದು ಕೂಡ ನಮಗೆ ಧಕ್ಕದೇ ಇರುವಂತದ್ದು. 5 ಸಾವಿರ ರೂಪಾಯಿ ವೇತನ ಹೆಚ್ಚಿಸುತ್ತೇವೆ ಎನ್ನುತ್ತಿದ್ದಾರೆ. ನಾವು ವೇತನ ಹೆಚ್ಚಳ ಕೇಳುತ್ತಿಲ್ಲ, ನಾವು ಕೇಳಿದ್ದು ಸೇವಾ ಭದ್ರತೆ. ಉನ್ನತ ಶಿಕ್ಷಣ ಸಚಿವರು ನಾವು ಕೇಳದ ಆಶ್ವಾಸನೆ ಕೊಟ್ಟು ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಧರಣಿ ನಿರತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿಂಧನೂರಿನ ಅತಿಥಿ ಉಪನ್ಯಾಸಕ ಶಂಕರ್ ಗುರಿಕಾರ್ ಹೇಳಿದರು.

ಬೆಳಗಾವಿ ಅಧಿವೇಶನ ಸಮಯದಲ್ಲಿ ನಾವು ಖಾಯಂ ನೇಮಕಾತಿ ಕೇಳಿದ್ದೆವು. ಆಗ ಉನ್ನತ ಶಿಕ್ಷಣ ಸಚಿವರು ಕಾನೂನು ತೊಡಕಿದೆ. ಉಮಾದೇವಿ ಪ್ರಕರಣ ಅಡ್ಡ ಬರುತ್ತಿದೆ ಎಂದಿದ್ದರು. ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಸರ್ಕಾರಕ್ಕೆ ಪತ್ರ ಬರೆದು, ಸಿ &ಆರ್‌ ನಿಯಮಾವಳಿಗೆ ತಿದ್ದುಪಡಿ ತಂದು ಅತಿಥಿ ಉಪನ್ಯಾಸಕರಿಗೆ ಖಾಯಮಾತಿ ನೀಡುವಂತೆ ಆಗ್ರಹಿಸಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಅವರು ತಮ್ಮ ಮಾತು ಮರೆತಿದ್ದಾರೆ. ಜನವರಿ 1 ರಿಂದ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಬಂದು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಕುಳಿತು ಮೂರು ದಿನಗಳಾಯಿತು. ಉಪನ್ಯಾಸಕರು ಅಮರಣಾಂತ ಉಪವಾಸ ಕುಳಿತಿದ್ದಾರೆ. ಅವರನ್ನು ಸೌಜನ್ಯಕ್ಕಾದರು ಮಾತನಾಡಿಸಲು ಮುಖ್ಯಮಂತ್ರಿಗಳಾಲಿ, ಉನ್ನತ ಶಿಕ್ಷಣ ಸಚಿವರಾಗಲಿ ಅಥವಾ ಸರ್ಕಾರದ ಕಾರ್ಯದರ್ಶಿಗಳಾಗಲಿ ಬಂದಿಲ್ಲ. ಇವತ್ತೂ ಕೂಡ ಸರ್ಕಾರ ನಮ್ಮ ಅಳಲು ಕೇಳದಿದ್ದರೆ ನಮ್ಮ ಹೋರಾಟ ತೀವ್ರಗೊಳ್ಳಲಿದೆ. ಮುಂದೆ ಏನಾದರು ಅನಾಹುತಗಳಾದರೆ ಅದಕ್ಕೆ ಸರ್ಕಾರಕ್ಕೆ ನೇರ ಹೊಣೆಯಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.

ದೇಶದ ಭವಿಷ್ಯ ರೂಪಿಸುವ ನಮ್ಮ ಭವಿಷ್ಯಕ್ಕೆ ಭದ್ರತೆಯಿಲ್ಲ

ಧರಣಿ ನಿರತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಲಘಟಗಿ, ಹುಬ್ಬಳ್ಳಿಯ ಅತಿಥಿ ಉಪನ್ಯಾಸಕಿ ಡಾ. ನಯನ ಸೋಮಣ್ಣನವರ್ ಮಾತನಾಡಿ, “ನಮ್ಮ ಹೋರಾಟ ಪ್ರಾರಂಭಗೊಂಡು 44 ದಿನಗಳಾಯಿತು. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಧರಣಿ ಕುಳಿತಿದ್ದೇವೆ.
ಪ್ರತಿ ವರ್ಷ ಕೌನ್ಸಿಲಿಂಗ್ ಮಾಡ್ತಾರೆ, ಪ್ರತಿ ವರ್ಷ ಆಯ್ಕೆ ಮಾಡ್ತಾರೆ. ನಮಗೆ ಯಾವ ಕಾಲೇಜು ಸಿಗುತ್ತದೆ ಎಂದು ಗೊತ್ತಿರುವುದಿಲ್ಲ. ಪ್ರಸ್ತುತ ನಾವು 5-6 ಗಂಟೆಗಳ ಕಾಲ ಪ್ರಯಾಣ ಮಾಡಿ ಕಾಲೇಜಿಗೆ ತೆರಳುತ್ತಿದ್ದೇವೆ. ಇದರಿಂದ ಮಹಿಳೆಯರಾದ ನಮಗೆ ಆರೋಗ್ಯ ಹದೆಗೆಡುತ್ತಿದೆ. ಕಾಲೇಜು ಬಳಿಯೇ ಮನೆ ಮಾಡೋಣ ಎಂದರೆ ನಮಗೆ ಸೇವಾ ಭದ್ರತೆ ಇಲ್ಲ. ಮುಂದಿನ ವರ್ಷ ನಮ್ಮನ್ನು ಬೇರೆ ಕಾಲೇಜಿಗೆ ಹಾಕಿದರೆ ಅಲ್ಲಿ ಮನೆ ಮಾಡಬೇಕಾಗುತ್ತದೆ. ಉನ್ನತ ಶಿಕ್ಷಣ ಸಚಿವರು ನಮಗೆ 5 ಸಾವಿರ ರೂಪಾಯಿ ವೇತನ ಹೆಚ್ಚಿಸುವ ಭರವಸೆ ನೀಡಿದ್ದಾರೆ. ನಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ವೇತನ ಹೆಚ್ಚಳ ಮಾಡಿರುವುದನ್ನು ಪಡೆದುಕೊಳ್ಳಲು ನಮಗೆ ಕಲಸದ ಖಾತ್ರಿಯಿಲ್ಲ. ಮುಂದಿನ ವರ್ಷ ನಮ್ಮ ಕೆಲಸ ಹೋದರೂ ಹೊಯಿತು. ಸರ್ಕಾರದಿಂದ ಹೊಸ ನೇಮಕಾತಿಯಾದರೆ, ಡೆಪ್ಯುಟೇಷನ್ ಉಪನ್ಯಾಸಕರು ಬಂದರೆ ನಾವು ಕೆಲಸ ಕಳೆದುಕೊಳ್ಳುತ್ತೇವೆ. ಹೀಗಾದರೆ ನಮ್ಮನ್ನೇ ನಂಬಿರುವ ಕುಟುಂಬದ ಗತಿಯೇನು? ಎಂದು ಪ್ರಶ್ನಿಸಿದರು.

ಪ್ರಸ್ತುತ ಇರುವ ವೇತನ ಕೂಡ ಸರಿಯಾಗಿ ಬರುತ್ತಿಲ್ಲ. ಕಳೆದ ತಿಂಗಳ ವೇತನ ಇನ್ನೂ ಬಂದಿಲ್ಲ. ಎಷ್ಟೋ ಜನ ಉಪನ್ಯಾಸಕರು ಇಲ್ಲಿಗೆ ಬಂದಿಲ್ಲ. ಯಾಕೆಂದರೆ ಅವರತ್ರ ಬರಲು ದುಡ್ಡಿಲ್ಲ. 25-30 ಜನ ಉಪನ್ಯಾಸಕರು ಅಮರಣಾಂತ ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ. ಕನಿಷ್ಠ ಪಕ್ಷ ಅವರನ್ನು ನೋಡಲೂ ಯಾರೂ ಬಂದಿಲ್ಲ. ಹಾಗಾದರೆ ನಮ್ಮ ಜೀವಕ್ಕೆ ಬೆಲೆ ಇಲ್ಲವೇ? ದೇಶದ ಭವಿಷ್ಯ ರೂಪಿಸುವ ನಮ್ಮ ಭವಿಷ್ಯಕ್ಕೆ ಭದ್ರತೆಯಿಲ್ಲ ಎಂದು ಅಳಲು ತೋಡಿಕೊಂಡರು.

ಸಿದ್ದರಾಮಯ್ಯನವರು ನಿರುದ್ಯೋಗ ಭಾಗ್ಯ ಕೊಡಲಿ 

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಗದಗದ ಅತಿಥಿ ಉಪನ್ಯಾಸಕಿ ಡಾ. ಸುಜಾತ ಎಸ್ ಬರಗೂರು ಮಾತನಾಡಿ, ಉನ್ನತ ಶಿಕ್ಷಣ ಸಚಿವರು ನಮಗೆ ನಾಲ್ಕು ಭರವಸೆಗಳನ್ನು ಕೊಟ್ಟಿದ್ದಾರೆ. ಈ ಪೈಕಿ ನಾವು ನಿವೃತ್ತಿ ಹೊಂದಿದ ಬಳಿಕ ಐದು ಲಕ್ಷ ರೂಪಾಯಿ ಕೊಡೋದು ಒಂದು. ಸಚಿವರು ಹೇಳಿದಂತೆ ನಾವು ಕನಿಷ್ಠ 10 ವರ್ಷಗಳ ಕಾಲ ಕೆಲಸ ಮಾಡಿದ ಬಳಿಕ ವರ್ಷಕ್ಕೆ 50 ಸಾವಿರದಂತೆ 10 ವರ್ಷ ದುಡ್ಡು ಸಿಗಲಿದೆ. ಈ ನಿಯಮ ಒಪ್ಪಿಕೊಂಡರೆ ಈಗಾಗಲೇ 40-45 ವರ್ಷ ಸೇವೆ ಸಲ್ಲಿಸಿದವರಿಗೆ ಯಾವ ಲಾಭವೂ ಇಲ್ಲ. ಪ್ರಸ್ತುತ 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರು ಕೂಡ 10 ವರ್ಷ ಪೂರೈಸಿದ ಬಳಿಕವಷ್ಟೇ ಈ ಸೌಲಭ್ಯ ಸಿಗಲಿದೆ. ಇದರಿಂದ ಎಲ್ಲರಿಗೆ ಸಮಾನ ನ್ಯಾಯ ಸಿಗುವುದಿಲ್ಲ ಎಂದರು.

ಪರೀಕ್ಷೆ ಬರೆಯುವ ಬರೆಯುವ ವೇಳೆ ಕೃಪಾಂಕ ಕೊಡುವ ಭರವಸೆಯನ್ನೂ ಸಚಿವರು ನೀಡಿದ್ದಾರೆ. ವಯೋಮಿತಿ ಮೀರಿದವರಿಗೆ ಪರೀಕ್ಷೆ ಬರೆಯಲು ಅವಕಾಶವೇ ಇಲ್ಲ. ಇನ್ನೆಲ್ಲಿಂದ ಕೃಪಾಂಕ? ಸಚಿವರು ಕೊಟ್ಟ ನಾಲ್ಕೂ ಭರವಸೆಗಳು ಯಾವುದೇ ಅತಿಥಿ ಉಪನ್ಯಾಸಕರಿಗೆ ನ್ಯಾಯ ಕೊಡುವುದಿಲ್ಲ. ಈ ಕಾರಣಕ್ಕೆ ನಾವು ಅದನ್ನು ತಿರಸ್ಕರಿಸಿದ್ದೇವೆ. ಮಹಿಳೆಯರಿಗೆ ಹಲವು ಗ್ಯಾರಂಟಿಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರು ಸೇವಾ ಭದ್ರತೆಯ ಗ್ಯಾರಂಟಿಯನ್ನೂ ಕೊಡಲಿ. ಅದು ಆಗುವುದಿಲ್ಲ ಎಂದರೆ ನಿರುದ್ಯೋಗ ಭಾಗ್ಯ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನವರಿ 1ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಕೈಗೊಂಡ ಅತಿಥಿ ಉಪನ್ಯಾಸಕರು, ಸುಮಾರು 80 ಕಿ.ಮೀ ನಡೆದು ಜನವರಿ 3ರಂದು ಬೆಂಗಳೂರು ತಲುಪಿದ್ದಾರೆ. ಈ ನಡುವೆ ಪೊಲೀಸರು ಅವರನ್ನು ತಡೆದ ಪ್ರಸಂಗವೂ ನಡೆದಿದೆ. ಜನವರಿ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಧರಣಿ ಕುಳಿತಿದ್ದಾರೆ. ಈ ಪೈಕಿ ಸುಮಾರು 25-30 ಜನರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ ಲೋಕ ಅಖಾಡ: ಮತ್ತೆ ಬಂಗಾರಪ್ಪ-ಯಡಿಯೂರಪ್ಪ ಕುಟುಂಬ ಪ್ರತಿಷ್ಠೆಯ ಕದನ ಕುತೂಹಲ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...