Homeಮುಖಪುಟಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

ಖಾಯಂ ನೇಮಕಾತಿಗೆ ಆಗ್ರಹಿಸಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವದಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಇಂದು (ಜ.5) ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಅತಿಥಿ ಉಪನ್ಯಾಸಕರು ನೇಮಕಾತಿ ಖಾಯಂ ಮಾಡುವ ಮೂಲಕ ಸೇವಾ ಭದ್ರತೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ, ಅತಿಥಿ ಉಪನ್ಯಾಸಕರ ಖಾಯಂ ನೇಮಕಾತಿಗೆ ಒತ್ತಾಯಿಸಿ ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ಸಿ&ಆರ್ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸುವಂತೆ ಕೋರಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ನಮಗೆ ಸೇವಾ ಭದ್ರತೆ ಕೊಡುತ್ತಿಲ್ಲ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಕೂಡ ಖಾಯಂ ನೇಮಕಾತಿಯ ಭರವಸೆ ನೀಡಿತ್ತು. ಈಗ ಕೇಳಿದರೆ ಕಾನೂನು ತೊಡಕಿನ ಸಬೂಬು ಹೇಳುತ್ತಿದ್ದಾರೆ. ಸಿದ್ದರಾಮಯ್ಯನವರು ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ಧರಣಿ ನಿರತ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅವರು ಪರ್ಯಾಯ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ನಮಗೆ ಪರ್ಯಾಯ ವ್ಯವಸ್ಥೆ ಬೇಡ, ನಮಗೆ ಸೇವಾ ಭದ್ರತೆ ಕೊಡಿ. ನಮಗೆ 5 ಸಾವಿರ ರೂಪಾಯಿ ವೇತನ ಹೆಚ್ಚಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ. ನಮಗೆ ವೇತನ ಹೆಚ್ಚಳ ಬೇಡ, ಅದನ್ನು ನಾವು ಕೇಳಿಲ್ಲ. ನಮಗೆ ಸೇವಾ ಭದ್ರತೆ ಕಲ್ಪಿಸಿ ಎಂದು ಆಗ್ರಹಿಸಿದರು.

ಖಾಯಂ ನೇಮಕಾತಿ ನಾವು ಕೇಳುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು

“ನೇಮಕಾತಿ ಖಾಯಮಾತಿ ನಾವು ಕೇಳುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು.ನಮಗೆ ಸೇವಾ ಭದ್ರತೆ ಕೊಡಿ.
ಸರ್ಕಾರ ನಾವು ಕೇಳದೆ ಇರುವ ಪರ್ಯಾಯ ಸೌಲಭ್ಯ ಕೊಡುತ್ತಿದೆ. 60 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಳಿಕ ಈಡಗಂಟು ಕೊಡ್ತೀವಿ, ಐದು ಸಾವಿರ ರೂಪಾಯಿ ವೇತನ ಹೆಚ್ಚಿಸುತ್ತೇವೆ ಎನ್ನುತ್ತಿದ್ದಾರೆ. ನಾವು ಈ ವರ್ಷ ಸೇವೆಯಲ್ಲಿದ್ದವರು ಮುಂದಿನ ವರ್ಷ ಸೇವೆಯಲ್ಲಿ ಇರುತ್ತೇವೆ ಎಂಬ ಗ್ಯಾರಂಟಿಯಿಲ್ಲ. ಸೇವಾ ಭದ್ರತೆ ಇಲ್ಲದ ಮೇಲೆ 60 ವರ್ಷದ ಬಳಿಕದ ಈಡಗಂಟು ಯಾರಿಗೆ ಸಿಗುತ್ತೆ? ಜೀವ ವಿಮೆ ಕೊಡುತ್ತೇವೆ ಎನ್ನುತ್ತಿದ್ದಾರೆ. ನಾವು ಸೇವೆಯಲ್ಲಿ ಮುಂದುವರೆದರೆ ತಾನೆ ಜೀವ ವಿಮೆ ಕೊಡುವುದು. ಹಾಗಾಗಿ ಅದು ಕೂಡ ನಮಗೆ ಧಕ್ಕದೇ ಇರುವಂತದ್ದು. 5 ಸಾವಿರ ರೂಪಾಯಿ ವೇತನ ಹೆಚ್ಚಿಸುತ್ತೇವೆ ಎನ್ನುತ್ತಿದ್ದಾರೆ. ನಾವು ವೇತನ ಹೆಚ್ಚಳ ಕೇಳುತ್ತಿಲ್ಲ, ನಾವು ಕೇಳಿದ್ದು ಸೇವಾ ಭದ್ರತೆ. ಉನ್ನತ ಶಿಕ್ಷಣ ಸಚಿವರು ನಾವು ಕೇಳದ ಆಶ್ವಾಸನೆ ಕೊಟ್ಟು ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಧರಣಿ ನಿರತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿಂಧನೂರಿನ ಅತಿಥಿ ಉಪನ್ಯಾಸಕ ಶಂಕರ್ ಗುರಿಕಾರ್ ಹೇಳಿದರು.

ಬೆಳಗಾವಿ ಅಧಿವೇಶನ ಸಮಯದಲ್ಲಿ ನಾವು ಖಾಯಂ ನೇಮಕಾತಿ ಕೇಳಿದ್ದೆವು. ಆಗ ಉನ್ನತ ಶಿಕ್ಷಣ ಸಚಿವರು ಕಾನೂನು ತೊಡಕಿದೆ. ಉಮಾದೇವಿ ಪ್ರಕರಣ ಅಡ್ಡ ಬರುತ್ತಿದೆ ಎಂದಿದ್ದರು. ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಸರ್ಕಾರಕ್ಕೆ ಪತ್ರ ಬರೆದು, ಸಿ &ಆರ್‌ ನಿಯಮಾವಳಿಗೆ ತಿದ್ದುಪಡಿ ತಂದು ಅತಿಥಿ ಉಪನ್ಯಾಸಕರಿಗೆ ಖಾಯಮಾತಿ ನೀಡುವಂತೆ ಆಗ್ರಹಿಸಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಅವರು ತಮ್ಮ ಮಾತು ಮರೆತಿದ್ದಾರೆ. ಜನವರಿ 1 ರಿಂದ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಬಂದು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಕುಳಿತು ಮೂರು ದಿನಗಳಾಯಿತು. ಉಪನ್ಯಾಸಕರು ಅಮರಣಾಂತ ಉಪವಾಸ ಕುಳಿತಿದ್ದಾರೆ. ಅವರನ್ನು ಸೌಜನ್ಯಕ್ಕಾದರು ಮಾತನಾಡಿಸಲು ಮುಖ್ಯಮಂತ್ರಿಗಳಾಲಿ, ಉನ್ನತ ಶಿಕ್ಷಣ ಸಚಿವರಾಗಲಿ ಅಥವಾ ಸರ್ಕಾರದ ಕಾರ್ಯದರ್ಶಿಗಳಾಗಲಿ ಬಂದಿಲ್ಲ. ಇವತ್ತೂ ಕೂಡ ಸರ್ಕಾರ ನಮ್ಮ ಅಳಲು ಕೇಳದಿದ್ದರೆ ನಮ್ಮ ಹೋರಾಟ ತೀವ್ರಗೊಳ್ಳಲಿದೆ. ಮುಂದೆ ಏನಾದರು ಅನಾಹುತಗಳಾದರೆ ಅದಕ್ಕೆ ಸರ್ಕಾರಕ್ಕೆ ನೇರ ಹೊಣೆಯಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.

ದೇಶದ ಭವಿಷ್ಯ ರೂಪಿಸುವ ನಮ್ಮ ಭವಿಷ್ಯಕ್ಕೆ ಭದ್ರತೆಯಿಲ್ಲ

ಧರಣಿ ನಿರತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಲಘಟಗಿ, ಹುಬ್ಬಳ್ಳಿಯ ಅತಿಥಿ ಉಪನ್ಯಾಸಕಿ ಡಾ. ನಯನ ಸೋಮಣ್ಣನವರ್ ಮಾತನಾಡಿ, “ನಮ್ಮ ಹೋರಾಟ ಪ್ರಾರಂಭಗೊಂಡು 44 ದಿನಗಳಾಯಿತು. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಧರಣಿ ಕುಳಿತಿದ್ದೇವೆ.
ಪ್ರತಿ ವರ್ಷ ಕೌನ್ಸಿಲಿಂಗ್ ಮಾಡ್ತಾರೆ, ಪ್ರತಿ ವರ್ಷ ಆಯ್ಕೆ ಮಾಡ್ತಾರೆ. ನಮಗೆ ಯಾವ ಕಾಲೇಜು ಸಿಗುತ್ತದೆ ಎಂದು ಗೊತ್ತಿರುವುದಿಲ್ಲ. ಪ್ರಸ್ತುತ ನಾವು 5-6 ಗಂಟೆಗಳ ಕಾಲ ಪ್ರಯಾಣ ಮಾಡಿ ಕಾಲೇಜಿಗೆ ತೆರಳುತ್ತಿದ್ದೇವೆ. ಇದರಿಂದ ಮಹಿಳೆಯರಾದ ನಮಗೆ ಆರೋಗ್ಯ ಹದೆಗೆಡುತ್ತಿದೆ. ಕಾಲೇಜು ಬಳಿಯೇ ಮನೆ ಮಾಡೋಣ ಎಂದರೆ ನಮಗೆ ಸೇವಾ ಭದ್ರತೆ ಇಲ್ಲ. ಮುಂದಿನ ವರ್ಷ ನಮ್ಮನ್ನು ಬೇರೆ ಕಾಲೇಜಿಗೆ ಹಾಕಿದರೆ ಅಲ್ಲಿ ಮನೆ ಮಾಡಬೇಕಾಗುತ್ತದೆ. ಉನ್ನತ ಶಿಕ್ಷಣ ಸಚಿವರು ನಮಗೆ 5 ಸಾವಿರ ರೂಪಾಯಿ ವೇತನ ಹೆಚ್ಚಿಸುವ ಭರವಸೆ ನೀಡಿದ್ದಾರೆ. ನಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ವೇತನ ಹೆಚ್ಚಳ ಮಾಡಿರುವುದನ್ನು ಪಡೆದುಕೊಳ್ಳಲು ನಮಗೆ ಕಲಸದ ಖಾತ್ರಿಯಿಲ್ಲ. ಮುಂದಿನ ವರ್ಷ ನಮ್ಮ ಕೆಲಸ ಹೋದರೂ ಹೊಯಿತು. ಸರ್ಕಾರದಿಂದ ಹೊಸ ನೇಮಕಾತಿಯಾದರೆ, ಡೆಪ್ಯುಟೇಷನ್ ಉಪನ್ಯಾಸಕರು ಬಂದರೆ ನಾವು ಕೆಲಸ ಕಳೆದುಕೊಳ್ಳುತ್ತೇವೆ. ಹೀಗಾದರೆ ನಮ್ಮನ್ನೇ ನಂಬಿರುವ ಕುಟುಂಬದ ಗತಿಯೇನು? ಎಂದು ಪ್ರಶ್ನಿಸಿದರು.

ಪ್ರಸ್ತುತ ಇರುವ ವೇತನ ಕೂಡ ಸರಿಯಾಗಿ ಬರುತ್ತಿಲ್ಲ. ಕಳೆದ ತಿಂಗಳ ವೇತನ ಇನ್ನೂ ಬಂದಿಲ್ಲ. ಎಷ್ಟೋ ಜನ ಉಪನ್ಯಾಸಕರು ಇಲ್ಲಿಗೆ ಬಂದಿಲ್ಲ. ಯಾಕೆಂದರೆ ಅವರತ್ರ ಬರಲು ದುಡ್ಡಿಲ್ಲ. 25-30 ಜನ ಉಪನ್ಯಾಸಕರು ಅಮರಣಾಂತ ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ. ಕನಿಷ್ಠ ಪಕ್ಷ ಅವರನ್ನು ನೋಡಲೂ ಯಾರೂ ಬಂದಿಲ್ಲ. ಹಾಗಾದರೆ ನಮ್ಮ ಜೀವಕ್ಕೆ ಬೆಲೆ ಇಲ್ಲವೇ? ದೇಶದ ಭವಿಷ್ಯ ರೂಪಿಸುವ ನಮ್ಮ ಭವಿಷ್ಯಕ್ಕೆ ಭದ್ರತೆಯಿಲ್ಲ ಎಂದು ಅಳಲು ತೋಡಿಕೊಂಡರು.

ಸಿದ್ದರಾಮಯ್ಯನವರು ನಿರುದ್ಯೋಗ ಭಾಗ್ಯ ಕೊಡಲಿ 

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಗದಗದ ಅತಿಥಿ ಉಪನ್ಯಾಸಕಿ ಡಾ. ಸುಜಾತ ಎಸ್ ಬರಗೂರು ಮಾತನಾಡಿ, ಉನ್ನತ ಶಿಕ್ಷಣ ಸಚಿವರು ನಮಗೆ ನಾಲ್ಕು ಭರವಸೆಗಳನ್ನು ಕೊಟ್ಟಿದ್ದಾರೆ. ಈ ಪೈಕಿ ನಾವು ನಿವೃತ್ತಿ ಹೊಂದಿದ ಬಳಿಕ ಐದು ಲಕ್ಷ ರೂಪಾಯಿ ಕೊಡೋದು ಒಂದು. ಸಚಿವರು ಹೇಳಿದಂತೆ ನಾವು ಕನಿಷ್ಠ 10 ವರ್ಷಗಳ ಕಾಲ ಕೆಲಸ ಮಾಡಿದ ಬಳಿಕ ವರ್ಷಕ್ಕೆ 50 ಸಾವಿರದಂತೆ 10 ವರ್ಷ ದುಡ್ಡು ಸಿಗಲಿದೆ. ಈ ನಿಯಮ ಒಪ್ಪಿಕೊಂಡರೆ ಈಗಾಗಲೇ 40-45 ವರ್ಷ ಸೇವೆ ಸಲ್ಲಿಸಿದವರಿಗೆ ಯಾವ ಲಾಭವೂ ಇಲ್ಲ. ಪ್ರಸ್ತುತ 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರು ಕೂಡ 10 ವರ್ಷ ಪೂರೈಸಿದ ಬಳಿಕವಷ್ಟೇ ಈ ಸೌಲಭ್ಯ ಸಿಗಲಿದೆ. ಇದರಿಂದ ಎಲ್ಲರಿಗೆ ಸಮಾನ ನ್ಯಾಯ ಸಿಗುವುದಿಲ್ಲ ಎಂದರು.

ಪರೀಕ್ಷೆ ಬರೆಯುವ ಬರೆಯುವ ವೇಳೆ ಕೃಪಾಂಕ ಕೊಡುವ ಭರವಸೆಯನ್ನೂ ಸಚಿವರು ನೀಡಿದ್ದಾರೆ. ವಯೋಮಿತಿ ಮೀರಿದವರಿಗೆ ಪರೀಕ್ಷೆ ಬರೆಯಲು ಅವಕಾಶವೇ ಇಲ್ಲ. ಇನ್ನೆಲ್ಲಿಂದ ಕೃಪಾಂಕ? ಸಚಿವರು ಕೊಟ್ಟ ನಾಲ್ಕೂ ಭರವಸೆಗಳು ಯಾವುದೇ ಅತಿಥಿ ಉಪನ್ಯಾಸಕರಿಗೆ ನ್ಯಾಯ ಕೊಡುವುದಿಲ್ಲ. ಈ ಕಾರಣಕ್ಕೆ ನಾವು ಅದನ್ನು ತಿರಸ್ಕರಿಸಿದ್ದೇವೆ. ಮಹಿಳೆಯರಿಗೆ ಹಲವು ಗ್ಯಾರಂಟಿಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರು ಸೇವಾ ಭದ್ರತೆಯ ಗ್ಯಾರಂಟಿಯನ್ನೂ ಕೊಡಲಿ. ಅದು ಆಗುವುದಿಲ್ಲ ಎಂದರೆ ನಿರುದ್ಯೋಗ ಭಾಗ್ಯ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನವರಿ 1ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಕೈಗೊಂಡ ಅತಿಥಿ ಉಪನ್ಯಾಸಕರು, ಸುಮಾರು 80 ಕಿ.ಮೀ ನಡೆದು ಜನವರಿ 3ರಂದು ಬೆಂಗಳೂರು ತಲುಪಿದ್ದಾರೆ. ಈ ನಡುವೆ ಪೊಲೀಸರು ಅವರನ್ನು ತಡೆದ ಪ್ರಸಂಗವೂ ನಡೆದಿದೆ. ಜನವರಿ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಧರಣಿ ಕುಳಿತಿದ್ದಾರೆ. ಈ ಪೈಕಿ ಸುಮಾರು 25-30 ಜನರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ ಲೋಕ ಅಖಾಡ: ಮತ್ತೆ ಬಂಗಾರಪ್ಪ-ಯಡಿಯೂರಪ್ಪ ಕುಟುಂಬ ಪ್ರತಿಷ್ಠೆಯ ಕದನ ಕುತೂಹಲ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...