Homeಮುಖಪುಟಸಿಎಂ ಒಪ್ಪಿಗೆಯಿಲ್ಲದೆ ಪದಚ್ಯುತಗೊಳಿಸಲು ಸಾಧ್ಯವಿಲ್ಲ; ಸೆಂಥಿಲ್ ಬಾಲಾಜಿಗೆ ಸುಪ್ರೀಂ ರಿಲೀಫ್

ಸಿಎಂ ಒಪ್ಪಿಗೆಯಿಲ್ಲದೆ ಪದಚ್ಯುತಗೊಳಿಸಲು ಸಾಧ್ಯವಿಲ್ಲ; ಸೆಂಥಿಲ್ ಬಾಲಾಜಿಗೆ ಸುಪ್ರೀಂ ರಿಲೀಫ್

- Advertisement -
- Advertisement -

ಬಂಧಿತ ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ಮುಖ್ಯಮಂತ್ರಿ ಒಪ್ಪಿಗೆಯಿಲ್ಲದೆ ಪದಚ್ಯುತಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದ್ದು, ಅವರನ್ನು ಪದಚ್ಯುತಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆಯ ಸಚಿವ ಬಾಲಾಜಿ ಅವರನ್ನು ರಾಜ್ಯ ಕ್ಯಾಬಿನೆಟ್ಟಿನಲ್ಲಿ ಖಾತೆಯಿಲ್ಲದ ಸಚಿವ ಸ್ಥಾನದಿಂದ ತೆಗೆದುಹಾಕಬೇಕೆ ಎಂಬುದನ್ನು ಮುಖ್ಯಮಂತ್ರಿ ನಿರ್ಧರಿಸಬಹುದು ಎಂದು ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

‘ರಾಜ್ಯಪಾಲರಿಗೆ ಸಚಿವರನ್ನು ವಜಾ ಮಾಡುವ ಅಧಿಕಾರವಿದೆಯೇ ಎಂಬುದನ್ನು ಪರಿಗಣಿಸಲು ಹೈಕೋರ್ಟ್ ಸೂಕ್ತವಾಗಿದ್ದು, ಸಂಬಂಧಪಟ್ಟವರು ಸಚಿವರಾಗಿ ಮುಂದುವರಿಯಬೇಕೇ ಎಂಬುದನ್ನು ನಿರ್ಧರಿಸಲು ಮುಖ್ಯಮಂತ್ರಿಗೆ ಬಿಟ್ಟಿದ್ದಾರೆ’ ಎಂದು ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಇಂದು ಹೇಳಿದೆ.

ಇದರಲ್ಲಿ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ನಾವು ಭಾವಿಸುತ್ತೇವೆ. ಮದ್ರಾಸ್ ಹೈಕೋರ್ಟಿನ ದೃಷ್ಟಿಕೋನವನ್ನು ನಾವು ಒಪ್ಪುತ್ತೇವೆ ಮತ್ತು ಯಾವುದೇ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದರೂ ತಮಿಳುನಾಡು ಸರ್ಕಾರದಲ್ಲಿ ಸಚಿವರಾಗಿ ಮುಂದುವರಿಯಬೇಕು ಎಂದು ಮದ್ರಾಸ್ ಹೈಕೋರ್ಟಿನ ತೀರ್ಪನ್ನು ಸಾಮಾಜಿಕ ಕಾರ್ಯಕರ್ತ ಎಂಎಲ್ ರವಿ ಪ್ರಶ್ನಿಸಿದ್ದರು.

ಪ್ರಕರಣದ ಹಿನ್ನೆಲೆ:

ಬರೋಬ್ಬರಿ 18 ಗಂಟೆಗಳ ವಿಚಾರಣೆ ಬಳಿಕ ತಮಿಳುನಾಡಿನ ವಿದ್ಯುತ್ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು 203ರ ಜೂನ್ 14ರಂದು ಬಂಧಿಸಿದ್ದರು. ಬಂಧನವಾದ ಬಳಿಕ ಸೆಂಥಿಲ್ ಬಾಲಾಜಿ ಬಿಕ್ಕಿ ಬಿಕ್ಕಿ ಅಳುತ್ತಿರುವ ದೃಶ್ಯಗಳು ಎಲ್ಲೆಡೆ ವೈರಲ್ ಆಗಿತ್ತು. ಸೆಂಥಿಲ್ ಬಂಧನದ ನಂತರ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದವು.

ಹಿಂದಿನ ಜಯಲಲಿತಾ ಸರ್ಕಾರದಲ್ಲಿ ಸಚಿವರಾಗಿದ್ದ ಸೆಂಥಿಲ್, 2011 ರಿಂದ 2016ರ ಅವಧಿಯಲ್ಲಿ ಸಾರಿಗೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಉದ್ಯೋಗಕ್ಕಾಗಿ ಲಂಚ ಪಡೆದ ಹಗರಣದಲ್ಲಿ ಅವರನ್ನು ಇಡಿ ಬಂಧಿಸಿದೆ. ಈ ಅವಧಿಯಲ್ಲಿ ತಮಿಳುನಾಡಿನಲ್ಲಿ ಇದ್ದ ಎಐಎಡಿಎಂಕೆಯ ಜಯಲಲಿತಾ ನೇತೃತ್ವದ ಸರ್ಕಾರದಲ್ಲಿ ಸೆಂಥಿಲ್ ಬಾಲಾಜಿ ಸಾರಿಗೆ ಸಚಿವರಾಗಿದ್ದರು. ಸದ್ಯ ಅವರು ಎಂಕೆ ಸ್ಟಾಲಿನ್ ಸಂಪುಟದಲ್ಲಿ ವಿದ್ಯುತ್ ಮತ್ತು ಅಬಕಾರಿ ಖಾತೆಗಳನ್ನು ನಿರ್ವಹಿಸುತ್ತಿದ್ದರು.

ಸೆಂಥಿಲ್ ಬಾಲಾಜಿ ಅವರು 1975, ಅಕ್ಟೋಬರ್ 21 ರಂದು ತಮಿಳುನಾಡಿನ ಕರೂರು ಜಿಲ್ಲೆಯ ರಾಮೇಶ್ವರಪಟ್ಟಿ ಎಂಬಲ್ಲಿ ಜನಿಸಿದ್ದಾರೆ. ನಾಲ್ಕು ಬಾರಿಯ ಶಾಸಕರಾಗಿರುವ ಸೆಂಥಿಲ್ ಬಾಲಾಜಿ ಎಐಎಡಿಎಂಕೆ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ. 2006ರಲ್ಲಿ ಶಾಸಕರಾಗಿ ತಮಿಳುನಾಡು ವಿಧಾನಸಭೆಯನ್ನು ಪ್ರವೇಶಿಸಿದ ಸೆಂಥಿಲ್ ಬಾಲಾಜಿ, 2011 ರಿಂದ 2015ರಲ್ಲಿ ಜೆ ಜಯಲಲಿತಾ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ, 2018ರಲ್ಲಿ ಸೆಂಥಿಲ್ ಡಿಎಂಕೆ ಪಕ್ಷದ ಕಡೆ ಹೆಜ್ಜೆ ಹಾಕಿದರು.

ಇದನ್ನೂ ಓದಿ; ರಾಜ್ಯಸಭೆಗೆ ನಾಮನಿರ್ದೇಶನಗೊಂಡ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...