Homeಕರ್ನಾಟಕ'ನೈಸ್ ಯೋಜನೆ' ವಶಕ್ಕೆ ಪಡೆಯಿರಿ; ರಾಜ್ಯ ಸರ್ಕಾರಕ್ಕೆ ಮಾಜಿ ಪಿಎಂ ಆಗ್ರಹ

‘ನೈಸ್ ಯೋಜನೆ’ ವಶಕ್ಕೆ ಪಡೆಯಿರಿ; ರಾಜ್ಯ ಸರ್ಕಾರಕ್ಕೆ ಮಾಜಿ ಪಿಎಂ ಆಗ್ರಹ

- Advertisement -
- Advertisement -

ನೈಸ್ ಯೋಜನೆಯನ್ನು (ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸ್) ರಾಜ್ಯ ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ‘ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರೂ ಅವರು ಈವರೆಗೆ ಯಾವುದೇ ಕ್ರಮ ವಹಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಸಿದ್ದರಾಮಯ್ಯ ಬಡವರ ಪರ ಮಾತನಾಡುತ್ತಾರೆ. ಆ ಯೋಜನೆಯಲ್ಲಿ ಇಷ್ಟೊಂದು ಅಕ್ರಮ ಆಗಿದ್ದರೂ, ಬಡವರ ಭೂಮಿ ಲೂಟಿ ಹೊಡೆಯಲಾಗಿದ್ದರೂ ಏನು ಕ್ರಮ ತೆಗೆದುಕೊಂಡಿಲ್ಲ. ಬಡವರ ಪರ ಮಾತಾಡುವ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ’ ಎಂದು ಪ್ರಶ್ನಿಸಿದರು.

‘ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಈ ಕಪ್ಪುಚುಕ್ಕೆಯಿಂದ ಹೊರೆಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ದ ಅವರು ಕ್ರಮ ತೆಗೆದುಕೊಳ್ಳದೇ ಹೋದರೆ ಅವರ ರಾಜಕೀಯ ಜೀವನಕ್ಕೆ ಇದೇ ಕಪ್ಪುಚುಕ್ಕೆಯಾಗಿ ಉಳಿದು ಹೋಗುತ್ತದೆ’ ಎಂದರು.

‘ನೈಸ್ ರಸ್ತೆ ಯೋಜನೆ ವಿಷಯ ಎಲ್ಲರಿಗೂ ಗೊತ್ತಿದೆ. ಅದರಲ್ಲಿ ಏನೇನು ನಡೆದಿದೆ ಎನ್ನುವುದೂ ತಿಳಿದಿದೆ. ಬಡವರಿಗೆ ಇದರಿಂದ ಅನ್ಯಾಯ ಆಗಿದೆ. ನಮ್ಮ ಪಕ್ಷ ಇದರ ವಿರುದ್ದ ದನಿ ಎತ್ತಿದೆ. ವಿಧಾನಸಭೆಯಲ್ಲೂ ಈ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ವಿಧಾನಸಭೆಯಲ್ಲಿ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ನೇಮಕ ಮಾಡಲಾಗಿತ್ತು. ಆ ಸದನ ಸಮಿತಿ ವರದಿ ಕೊಟ್ಟಿದೆ. ಎಷ್ಟು ಅಕ್ರಮ ಮಾಡಿದೆ, ಈ ಯೋಜನೆಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ವರದಿ ಕೊಟ್ಟಿದೆ. ಆದರೆ, ಸರ್ಕಾರ ಅಂತಿಮ ನಿರ್ಧಾರ ಮಾಡಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ’ ಎಂದರು.

2023 ಅಕ್ಟೋಬರ್ 19 ರಂದು ನಾನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ನೈಸ್ ವಿಚಾರವಾಗಿ ಕ್ರಮಕ್ಕೆ ಆಗ್ರಹಿಸಿದ್ದೆ. ಈ ಬಗ್ಗೆ ಖುದ್ದು ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ ಎಂದು ಮಾಹಿತಿ ನೀಡಿದ ಮಾಜಿ ಪ್ರಧಾನಿಗಳು, ತಾವು ಬರೆದಿದ್ದ ಪತ್ರವನ್ನು ಮಾಧ್ಯಮಗೋಷ್ಟಿಯಲ್ಲಿ ಬಿಡುಗಡೆ ಮಾಡಿದರು.

‘13404 ಎಕರೆಯಷ್ಟು ರೈತರ ಭೂಮಿಯನ್ನು ನೈಸ್ ವಶಪಡಿಸಿಕೊಂಡಿದೆ. ಅದನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೆ. ಈ ಯೋಜನೆಯ ಮೌಲ್ಯ 7 ಸಾವಿರ ಕೋಟಿ ಎಂದು ಸದನ ಸಮಿತಿಯೇ ವರದಿ ಕೊಟ್ಟಿದೆ; ಅಧಿಕಾರಿಗಳೇ ಈ ವರದಿ ಕೊಟ್ಟಿದ್ದಾರೆ. ಹಿಂದೆ ಸೋನಿಯಾ ಗಾಂಧಿ ಅವರ ಬಳಿಯು ಈ ಯೋಜನೆಯ ಅಕ್ರಮಗಳ ಚರ್ಚೆ ಆಗಿದೆ. ಧರ್ಮಸಿಂಗ್ ಅವರ ಕಾಲದಲ್ಲಿಯೂ ಚರ್ಚೆ ಆಗಿತ್ತು. ಆಗ ಸೋನಿಯಾಗಾಂಧಿ ಅವರು ಧರ್ಮಸಿಂಗ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದರು’ ಎಂದು ಮಾಜಿ ಪ್ರಧಾನಿಗಳು ಹೇಳಿದರು.

‘ನಾನು ಜೀವನದಲ್ಲಿ ಒಂದೇ ಒಂದು ತಪ್ಪು ಮಾಡಿದೆ. ಒಳ್ಳೆಯ ರಸ್ತೆ ಆಗುತ್ತದೆ ಎಂಬ ಮಹಾತ್ವಕಾಂಕ್ಷೆಯಿಂದ ಮಾಡಿದೆ. ಮೈಸೂರಿಗೆ ಒಂದು ಗಂಟೆಯಲ್ಲಿ ಹೋಗಬಹುದು ಎಂಧೂ ಇದನ್ನು ಮಾಡಿದೆ. ಆದರೆ, ದೊಡ್ಡ ಪೆಟ್ಟು ಕೊಟ್ಟರು ಮಹಾನುಭಾವ ಸಿದ್ದರಾಮಯ್ಯನವರು ಇದನ್ನು ಸರಿ ಮಾಡಲಿ. ನಮ್ಮ ಪಕ್ಷ ನೈಸ್ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ನಾನು ನಮ್ಮ ಪಕ್ಷ, ರೈತರು, ಬಡವರ ಪರ ಹೋರಾಟ ಮಾಡುತ್ತೇವೆ’ ಎಂದು ಹೇಳಿದರು.

ದನ್ನೂ ಓದಿ; ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...