Homeಮುಖಪುಟ2005ರ ನವೆಂಬರ್‌ ಬಳಿಕ ಸೇವೆಗೆ ಸೇರಿದವರಿಗೂ ಒಪಿಎಸ್: ಮಹಾರಾಷ್ಟ್ರ ಸರ್ಕಾರ

2005ರ ನವೆಂಬರ್‌ ಬಳಿಕ ಸೇವೆಗೆ ಸೇರಿದವರಿಗೂ ಒಪಿಎಸ್: ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ನವೆಂಬರ್ 2005ರ ನಂತರ ಸೇವೆಗೆ ಸೇರ್ಪಡೆಗೊಂಡ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಆಯ್ದುಕೊಳ್ಳಲು ಅವಕಾಶ ನೀಡುವ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅನುಮೋದಿಸಿದೆ.

ಒಪಿಎಸ್ ಮರುಸ್ಥಾಪಿಸಲು ಒತ್ತಾಯಿಸಿ ಕಳೆದ ವರ್ಷ ಎರಡು ಬಾರಿ ನೌಕರರು ಮುಷ್ಕರ ನಡೆಸಿದ್ದರು. ಇದೀಗ ಸರ್ಕಾರ ಒಪಿಸ್ ಆಯ್ದುಕೊಳ್ಳಲು ಅವಕಾಶ ನೀಡಲು ಮುಂದಾಗಿರುವುದರಿಂದ ಸರಿ ಸುಮಾರು 26,000 ರಾಜ್ಯ ಸರ್ಕಾರಿ ಉದ್ಯೋಗಿಗಳಿಗೆ ಪ್ರಯೋಜನವಾಗಲಿದೆ.

“ರಾಜ್ಯ ಸಚಿವ ಸಂಪುಟ ಅನುಮೋದಿಸಿದ ಪ್ರಸಾವನೆಯ ಪ್ರಕಾರ, ರಾಜ್ಯ ಸರ್ಕಾರಿ ನೌಕರರು ನವೆಂಬರ್ 2005ರ ನಂತರ ಸೇವೆಗಳಿಗೆ ಸೇರಿದ್ದರೆ, ಅಂದರೆ ನವೆಂಬರ್ 2005ರ ಮೊದಲು ಜಾಹೀರಾತು ಮಾಡಲಾದ ಹುದ್ದೆಗಳಿಗೆ ಒಪಿಎಸ್ ಆಯ್ಕೆಯನ್ನು ಪಡೆಯಲಿದ್ದಾರೆ. ಇದು ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿದೆ ಮತ್ತು ಕೇಂದ್ರ ಸರ್ಕಾರ ಇದರಲ್ಲಿ ಬದಲಾವಣೆಗಳನ್ನು ಮಾಡಿದೆ” ಎಂದು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ನಿತಿನ್ ಕರೀರ್ ತಿಳಿಸಿದ್ದಾರೆ.

ಒಪಿಎಸ್ ಆಯ್ಕೆ ಮಾಡಿಕೊಳ್ಳಲು ಆರು ತಿಂಗಳ ಸೀಮಿತ ಸಮಯ ನೀಡಲಾಗಿದೆ. ನಂತರ ಉದ್ಯೋಗಿಗಳು ಎನ್‌ಪಿಎಸ್‌ನಿಂದ ಒಪಿಎಸ್‌ ಅಥವಾ ಒಪಿಎಸ್‌ನಿಂದ ಎನ್‌ಪಿಎಸ್‌ಗೆ ಬದಲಾವಣೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಹೊರಡಿಸಿದ ಪ್ರಕಟನೆಯಲ್ಲಿ ಹೇಳಿದೆ.

ಒಪಿಎಸ್ ಆಯ್ದುಕೊಳ್ಳುವವರು, ಅದಕ್ಕಾಗಿ ಗೊತ್ತುಪಡಿಸಿದ ಪ್ರಾಧಿಕಾರವನ್ನು ಸಂಪರ್ಕಿಸಬೇಕು. ಪ್ರಾಧಿಕಾರ ಅನುಮೋದಿಸಿದರೆ ಉದ್ಯೋಗಿಗಳು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ನಿಂದ ಒಪಿಎಸ್‌ ಬದಲಾಗಳಿದ್ದಾರೆ. ಎನ್‌ಪಿಎಸ್‌ನಲ್ಲಿ ಉದ್ಯೋಗಿಗಳ ಕೊಡುಗೆಯನ್ನು ವ್ಯಕ್ತಿಯ ಸಾಮಾನ್ಯ ಭವಿಷ್ಯ ನಿಧಿಗೆ (ಜಿಪಿಎಫ್) ಜಮಾ ಮಾಡಲಾಗುತ್ತದೆ ಎಂದು ಸಿಎಂ ಕಚೇರಿ ತಿಳಿಸಿದೆ.

ಒಪಿಎಸ್ ಆಯ್ದುಕೊಳ್ಳಲು ಅವಕಾಶ ನೀಡುವ ನಿರ್ಧಾರದಿಂದ ನವೆಂಬರ್ 2005 ರ ನಂತರ ರಾಜ್ಯ ಸರ್ಕಾರದ ಹುದ್ದೆಗಳಿಗೆ ಆಯ್ಕೆಯಾದ ಸುಮಾರು 26,000 ನೌಕರರಿಗೆ ಪ್ರಯೋಜನವಾಗಲಿದೆ. ನವೆಂಬರ್ 2005ರ ಮೊದಲು ಸೇವೆಗೆ ಸೇರಿದ 9.5 ಲಕ್ಷ ರಾಜ್ಯ ಸರ್ಕಾರಿ ಉದ್ಯೋಗಿಗಳು ಈಗಾಗಲೇ ಒಪಿಎಸ್ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಶ್ವಾಸ್ ಕಾಟ್ಕರ್ ಹೇಳಿದ್ದಾರೆ.

ಮಹಾರಾಷ್ಟ್ರದ 1.6 ದಶ ಲಕ್ಷಕ್ಕೂ ಹೆಚ್ಚು ರಾಜ್ಯ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಪರಿಚಯಿಸಲು ಒತ್ತಾಯಿಸುತ್ತಿದ್ದಾರೆ. ಇದಕ್ಕಾಗಿ ಅವರು ಕಳೆದ ವರ್ಷ ಎರಡು ಬಾರಿ ಮುಷ್ಕರ ನಡೆಸಿದ್ದಾರೆ. ಒಪಿಎಸ್ ಮರುಸ್ಥಾಪನೆಯ ಕಾರ್ಯಸಾಧ್ಯತೆಯ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ಸುಬೋಧ್ ಕುಮಾರ್ ನೇತೃತ್ವದ ಸಮಿತಿಯನ್ನು ರಚಿಸಿದ್ದು, ಅದು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಡಿಸೆಂಬರ್ 2023ರಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿ ಕುರಿತು ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

1.6 ದಶ ಲಕ್ಷಕ್ಕಿಂತಲೂ ಹೆಚ್ಚು ಸರ್ಕಾರಿ ಉದ್ಯೋಗಿಗಳಲ್ಲಿ ಅರ್ಧದಷ್ಟು ಜನರು 2005ರ ನಂತರ ಸೇವೆಗೆ ಸೇರಿದ್ದಾರೆ ಮತ್ತು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಇದು ಒಪಿಎಸ್‌ನಷ್ಟು ಲಾಭದಾಯಕವಲ್ಲ. ಎನ್‌ಪಿಎಸ್ ಅಡಿಯಲ್ಲಿ, ರಾಜ್ಯ ಸರ್ಕಾರಿ ನೌಕರನು ತಮ್ಮ ಮೂಲ ವೇತನದ ಶೇ.10 ಮತ್ತು ತುಟ್ಟಿ ಭತ್ಯೆಯನ್ನು ರಾಜ್ಯವು ಹೊಂದಾಣಿಕೆಯ ಕೊಡುಗೆಯಾಗಿ ನೀಡಬೇಕಾಗುತ್ತದೆ. ಈ ಹಣವನ್ನು ನಂತರ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA)ಅನುಮೋದಿಸಿದ ಹಲವಾರು ಪಿಂಚಣಿ ನಿಧಿಗಳ ಪೈಕಿ ಒಂದರಲ್ಲಿ ಹೂಡಿಕೆ ಮಾಡಲಾಗುತ್ತದೆ ಮತ್ತು ಆದಾಯವು ಮಾರುಕಟ್ಟೆಗೆ ಸಂಬಂಧಿಸಿರುತ್ತದೆ.

ಒಪಿಎಸ್ ಅಡಿಯಲ್ಲಿ ನಿವೃತ್ತಿ ಬಳಿಕ ಸರ್ಕಾರಿ ನೌಕರರು ಅವರ ಕೊನೆಯ ಸಂಬಳದ ಶೇ. 50ರಷ್ಟು ಮಾಸಿಕ ಪಿಂಚಣಿ ಪಡೆಯಲಿದ್ದಾರೆ. ಇದಕ್ಕೆ ನೌಕರರ ಕೊಡುಗೆ (Employee Contribution)ಯ ಅಗತ್ಯವಿಲ್ಲ.

ನವೆಂಬರ್ 2005 ರಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಸುಮಾರು ₹1.10 ಲಕ್ಷ ಕೋಟಿಗಳಷ್ಟು ಸಾಲದ ಹಿನ್ನೆಲೆ ಅನಿಶ್ಚಿತ ಆರ್ಥಿಕ ಪರಿಸ್ಥಿತಿಯ ಕಾರಣ ಮುಂದಿಟ್ಟು ಒಪಿಎಸ್ ಸ್ಥಗಿತಗೊಳಿಸಲು ನಿರ್ಧರಿಸಿತ್ತು.

ಇದನ್ನೂ ಓದಿ : ಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...