Homeಮುಖಪುಟ2005ರ ನವೆಂಬರ್‌ ಬಳಿಕ ಸೇವೆಗೆ ಸೇರಿದವರಿಗೂ ಒಪಿಎಸ್: ಮಹಾರಾಷ್ಟ್ರ ಸರ್ಕಾರ

2005ರ ನವೆಂಬರ್‌ ಬಳಿಕ ಸೇವೆಗೆ ಸೇರಿದವರಿಗೂ ಒಪಿಎಸ್: ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ನವೆಂಬರ್ 2005ರ ನಂತರ ಸೇವೆಗೆ ಸೇರ್ಪಡೆಗೊಂಡ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಆಯ್ದುಕೊಳ್ಳಲು ಅವಕಾಶ ನೀಡುವ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅನುಮೋದಿಸಿದೆ.

ಒಪಿಎಸ್ ಮರುಸ್ಥಾಪಿಸಲು ಒತ್ತಾಯಿಸಿ ಕಳೆದ ವರ್ಷ ಎರಡು ಬಾರಿ ನೌಕರರು ಮುಷ್ಕರ ನಡೆಸಿದ್ದರು. ಇದೀಗ ಸರ್ಕಾರ ಒಪಿಸ್ ಆಯ್ದುಕೊಳ್ಳಲು ಅವಕಾಶ ನೀಡಲು ಮುಂದಾಗಿರುವುದರಿಂದ ಸರಿ ಸುಮಾರು 26,000 ರಾಜ್ಯ ಸರ್ಕಾರಿ ಉದ್ಯೋಗಿಗಳಿಗೆ ಪ್ರಯೋಜನವಾಗಲಿದೆ.

“ರಾಜ್ಯ ಸಚಿವ ಸಂಪುಟ ಅನುಮೋದಿಸಿದ ಪ್ರಸಾವನೆಯ ಪ್ರಕಾರ, ರಾಜ್ಯ ಸರ್ಕಾರಿ ನೌಕರರು ನವೆಂಬರ್ 2005ರ ನಂತರ ಸೇವೆಗಳಿಗೆ ಸೇರಿದ್ದರೆ, ಅಂದರೆ ನವೆಂಬರ್ 2005ರ ಮೊದಲು ಜಾಹೀರಾತು ಮಾಡಲಾದ ಹುದ್ದೆಗಳಿಗೆ ಒಪಿಎಸ್ ಆಯ್ಕೆಯನ್ನು ಪಡೆಯಲಿದ್ದಾರೆ. ಇದು ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿದೆ ಮತ್ತು ಕೇಂದ್ರ ಸರ್ಕಾರ ಇದರಲ್ಲಿ ಬದಲಾವಣೆಗಳನ್ನು ಮಾಡಿದೆ” ಎಂದು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ನಿತಿನ್ ಕರೀರ್ ತಿಳಿಸಿದ್ದಾರೆ.

ಒಪಿಎಸ್ ಆಯ್ಕೆ ಮಾಡಿಕೊಳ್ಳಲು ಆರು ತಿಂಗಳ ಸೀಮಿತ ಸಮಯ ನೀಡಲಾಗಿದೆ. ನಂತರ ಉದ್ಯೋಗಿಗಳು ಎನ್‌ಪಿಎಸ್‌ನಿಂದ ಒಪಿಎಸ್‌ ಅಥವಾ ಒಪಿಎಸ್‌ನಿಂದ ಎನ್‌ಪಿಎಸ್‌ಗೆ ಬದಲಾವಣೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಹೊರಡಿಸಿದ ಪ್ರಕಟನೆಯಲ್ಲಿ ಹೇಳಿದೆ.

ಒಪಿಎಸ್ ಆಯ್ದುಕೊಳ್ಳುವವರು, ಅದಕ್ಕಾಗಿ ಗೊತ್ತುಪಡಿಸಿದ ಪ್ರಾಧಿಕಾರವನ್ನು ಸಂಪರ್ಕಿಸಬೇಕು. ಪ್ರಾಧಿಕಾರ ಅನುಮೋದಿಸಿದರೆ ಉದ್ಯೋಗಿಗಳು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ನಿಂದ ಒಪಿಎಸ್‌ ಬದಲಾಗಳಿದ್ದಾರೆ. ಎನ್‌ಪಿಎಸ್‌ನಲ್ಲಿ ಉದ್ಯೋಗಿಗಳ ಕೊಡುಗೆಯನ್ನು ವ್ಯಕ್ತಿಯ ಸಾಮಾನ್ಯ ಭವಿಷ್ಯ ನಿಧಿಗೆ (ಜಿಪಿಎಫ್) ಜಮಾ ಮಾಡಲಾಗುತ್ತದೆ ಎಂದು ಸಿಎಂ ಕಚೇರಿ ತಿಳಿಸಿದೆ.

ಒಪಿಎಸ್ ಆಯ್ದುಕೊಳ್ಳಲು ಅವಕಾಶ ನೀಡುವ ನಿರ್ಧಾರದಿಂದ ನವೆಂಬರ್ 2005 ರ ನಂತರ ರಾಜ್ಯ ಸರ್ಕಾರದ ಹುದ್ದೆಗಳಿಗೆ ಆಯ್ಕೆಯಾದ ಸುಮಾರು 26,000 ನೌಕರರಿಗೆ ಪ್ರಯೋಜನವಾಗಲಿದೆ. ನವೆಂಬರ್ 2005ರ ಮೊದಲು ಸೇವೆಗೆ ಸೇರಿದ 9.5 ಲಕ್ಷ ರಾಜ್ಯ ಸರ್ಕಾರಿ ಉದ್ಯೋಗಿಗಳು ಈಗಾಗಲೇ ಒಪಿಎಸ್ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಶ್ವಾಸ್ ಕಾಟ್ಕರ್ ಹೇಳಿದ್ದಾರೆ.

ಮಹಾರಾಷ್ಟ್ರದ 1.6 ದಶ ಲಕ್ಷಕ್ಕೂ ಹೆಚ್ಚು ರಾಜ್ಯ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಪರಿಚಯಿಸಲು ಒತ್ತಾಯಿಸುತ್ತಿದ್ದಾರೆ. ಇದಕ್ಕಾಗಿ ಅವರು ಕಳೆದ ವರ್ಷ ಎರಡು ಬಾರಿ ಮುಷ್ಕರ ನಡೆಸಿದ್ದಾರೆ. ಒಪಿಎಸ್ ಮರುಸ್ಥಾಪನೆಯ ಕಾರ್ಯಸಾಧ್ಯತೆಯ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ಸುಬೋಧ್ ಕುಮಾರ್ ನೇತೃತ್ವದ ಸಮಿತಿಯನ್ನು ರಚಿಸಿದ್ದು, ಅದು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಡಿಸೆಂಬರ್ 2023ರಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿ ಕುರಿತು ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

1.6 ದಶ ಲಕ್ಷಕ್ಕಿಂತಲೂ ಹೆಚ್ಚು ಸರ್ಕಾರಿ ಉದ್ಯೋಗಿಗಳಲ್ಲಿ ಅರ್ಧದಷ್ಟು ಜನರು 2005ರ ನಂತರ ಸೇವೆಗೆ ಸೇರಿದ್ದಾರೆ ಮತ್ತು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಇದು ಒಪಿಎಸ್‌ನಷ್ಟು ಲಾಭದಾಯಕವಲ್ಲ. ಎನ್‌ಪಿಎಸ್ ಅಡಿಯಲ್ಲಿ, ರಾಜ್ಯ ಸರ್ಕಾರಿ ನೌಕರನು ತಮ್ಮ ಮೂಲ ವೇತನದ ಶೇ.10 ಮತ್ತು ತುಟ್ಟಿ ಭತ್ಯೆಯನ್ನು ರಾಜ್ಯವು ಹೊಂದಾಣಿಕೆಯ ಕೊಡುಗೆಯಾಗಿ ನೀಡಬೇಕಾಗುತ್ತದೆ. ಈ ಹಣವನ್ನು ನಂತರ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA)ಅನುಮೋದಿಸಿದ ಹಲವಾರು ಪಿಂಚಣಿ ನಿಧಿಗಳ ಪೈಕಿ ಒಂದರಲ್ಲಿ ಹೂಡಿಕೆ ಮಾಡಲಾಗುತ್ತದೆ ಮತ್ತು ಆದಾಯವು ಮಾರುಕಟ್ಟೆಗೆ ಸಂಬಂಧಿಸಿರುತ್ತದೆ.

ಒಪಿಎಸ್ ಅಡಿಯಲ್ಲಿ ನಿವೃತ್ತಿ ಬಳಿಕ ಸರ್ಕಾರಿ ನೌಕರರು ಅವರ ಕೊನೆಯ ಸಂಬಳದ ಶೇ. 50ರಷ್ಟು ಮಾಸಿಕ ಪಿಂಚಣಿ ಪಡೆಯಲಿದ್ದಾರೆ. ಇದಕ್ಕೆ ನೌಕರರ ಕೊಡುಗೆ (Employee Contribution)ಯ ಅಗತ್ಯವಿಲ್ಲ.

ನವೆಂಬರ್ 2005 ರಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಸುಮಾರು ₹1.10 ಲಕ್ಷ ಕೋಟಿಗಳಷ್ಟು ಸಾಲದ ಹಿನ್ನೆಲೆ ಅನಿಶ್ಚಿತ ಆರ್ಥಿಕ ಪರಿಸ್ಥಿತಿಯ ಕಾರಣ ಮುಂದಿಟ್ಟು ಒಪಿಎಸ್ ಸ್ಥಗಿತಗೊಳಿಸಲು ನಿರ್ಧರಿಸಿತ್ತು.

ಇದನ್ನೂ ಓದಿ : ಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...