Homeಮುಖಪುಟಹಲಾಲ್ ಉತ್ಪನ್ನಗಳ ನಿಷೇಧ: ಉತ್ತರಪ್ರದೇಶ ಸರಕಾರಕ್ಕೆ ಸುಪ್ರೀಂಕೋರ್ಟ್‌ ನೊಟೀಸ್‌

ಹಲಾಲ್ ಉತ್ಪನ್ನಗಳ ನಿಷೇಧ: ಉತ್ತರಪ್ರದೇಶ ಸರಕಾರಕ್ಕೆ ಸುಪ್ರೀಂಕೋರ್ಟ್‌ ನೊಟೀಸ್‌

- Advertisement -
- Advertisement -

ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ವಿತರಣೆ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರಕ್ಕೆ ವಿವರಣೆ ಕೋರಿ ಸುಪ್ರೀಂಕೋರ್ಟ್‌ ನೊಟೀಸ್‌ ಜಾರಿಗೊಳಿಸಿದೆ.

ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಜಮಿಯತ್ ಉಲಮಾ-ಎ-ಮಹಾರಾಷ್ಟ್ರ ಸಂಘಟನೆ, ಉತ್ತರಪ್ರದೇಶ ಸರಕಾರ ಹಲಾಲ್‌ ಉತ್ಪನ್ನಗಳ ಮಾರಾಟ, ತಯಾರಿಕೆ, ಸಂಗ್ರಹಣೆ  ನಿಷೇಧಿಸಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಹಲಾಲ್-ಪ್ರಮಾಣೀಕೃತ ಉತ್ಪನ್ನಗಳ ಕುರಿತು ನವೆಂಬರ್ 18ರಂದು ಉತ್ತರಪ್ರದೇಶ ಸರಕಾರ ಆದೇಶಿಸಿತ್ತು. ಆದೇಶವು ವಿವಾದಕ್ಕೆ ಕಾರಣವಾಗಿತ್ತು. ಹಲಾಲ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲು ರಾಜ್ಯಾದ್ಯಂತ ಮಾಲ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಹಲಾಲ್‌ ಉತ್ಪನ್ನಗಳ ನಿಷೇಧವು ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಇದು ಚಿಲ್ಲರೆ ವ್ಯಾಪಾರಿಗಳಿಗೆ ಗೊಂದಲವನ್ನು ಉಂಟುಮಾಡುವ ಮತ್ತು ಕಾನೂನುಬದ್ಧ ವ್ಯಾಪಾರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿತ್ತು.

ನಾವು ಆರ್ಟಿಕಲ್ 32 ರ ಅಡಿಯಲ್ಲಿ ಅದನ್ನು ಏಕೆ ಪರಿಗಣಿಸಬೇಕು? ಎಂದು ವಿಚಾರಣೆಯ ಆರಂಭದಲ್ಲಿ ನ್ಯಾಯಮೂರ್ತಿ ಗವಾಯಿ ಅವರು ಹಲಾಲ್ ಇಂಡಿಯಾವನ್ನು ಪ್ರತಿನಿಧಿಸುವ ಹಿರಿಯ ವಕೀಲ ಸಿದ್ಧಾರ್ಥ್ ಅಗರ್ವಾಲ್ ಅವರಿಗೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಹಿರಿಯ ವಕೀಲರು ಹಲಾಲ್ ನಿಷೇಧದಿಂದಾಗುವ ವ್ಯಾಪಾರ ಮತ್ತು ವಾಣಿಜ್ಯದ ಮೇಲೆ ಅದರ ಪ್ರಭಾವವನ್ನು ಉಲ್ಲೇಖಿಸಿದ್ದಾರೆ. ಒಂದು ನಿರ್ದಿಷ್ಟ ಆದೇಶವನ್ನು ಉಚ್ಚ ನ್ಯಾಯಾಲಯವು ತಡೆಹಿಡಿದರೆ, ಆ ತಡೆಯಾಜ್ಞೆಯು ದೇಶಾದ್ಯಂತ ಅನ್ವಯಿಸುತ್ತದೆ ಎಂದು ಕೋರ್ಟ್‌ ಹೇಳಿದೆ.

ಈ ಸ್ವರೂಪದ ಅಧಿಸೂಚನೆಯನ್ನು ನೀಡಬಹುದೇ ಮತ್ತು ಎರಡನೆಯದಾಗಿ ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳ ಘಟಕಗಳನ್ನು ಕಾನೂನು ಕ್ರಮಕ್ಕೆ ಒಳಪಡಿಸಬಹುದೇ ಎಂಬುದರ ಕುರಿತು ನಿಮ್ಮ ಗಮನವು ಅಗತ್ಯವಿದೆ ಎಂದು ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.

ಜಮಿಯತ್ ಉಲಮಾ-ಎ-ಮಹಾರಾಷ್ಟ್ರವನ್ನು ಪ್ರತಿನಿಧಿಸುವ ಹಿರಿಯ ವಕೀಲ ರಾಜು ರಾಮಚಂದ್ರನ್ ಅವರು ಉತ್ತರ ಪ್ರದೇಶ ಸರಕಾರದ ನಿಷೇಧ ಆದೇಶವು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವಾದಿಸಿದರು.

ಆರ್ಟಿಕಲ್ 32 ರ ಅಡಿಯಲ್ಲಿ ಅರ್ಜಿಗಳನ್ನು ಪರಿಗಣಿಸಲು ಆರಂಭದಲ್ಲಿ ಕೋರ್ಟ್‌ ಮುಂದಾಗದಿದ್ದರೂ, ಪೀಠವು ಅಂತಿಮವಾಗಿ ನೋಟಿಸ್ ನೀಡಲು ನಿರ್ಧರಿಸಿತು. ನ್ಯಾಯಮೂರ್ತಿ ಗವಾಯಿ ಅವರು ಈ ಬಗ್ಗೆ ಉತ್ತರಪ್ರದೇಶ ಸರಕಾರಕ್ಕೆ ನೊಟೀಸ್ ಜಾರಿ ಮಾಡಿದ್ದಾರೆ.  ಆದರೆ ಆದೇಶಕ್ಕೆ ತಡೆ ನೀಡಲು ಕೋರ್ಟ್‌ ನಿರಾಕರಿಸಿದೆ, ಅಂತಹ ಮನವಿಯನ್ನು ಮುಂದಕ್ಕೆ ಪರಿಗಣಿಸಲಾಗುವುದು ಎಂದು ಪೀಠವು ಹೇಳಿದೆ.

ಏನಿದು ಆದೇಶ?

ಉತ್ತರಪ್ರದೇಶ ಸರ್ಕಾರ ಹಲಾಲ್ ಟ್ಯಾಗ್ ಹೊಂದಿರುವ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನ.18ರಂದು ನಿಷೇಧಿಸಿ ಆದೇಶ ಹೊರಡಿಸಿತ್ತು. ಆದರೆ ರಫ್ತಿಗಾಗಿ ತಯಾರಿಸಿದ ಉತ್ಪನ್ನಗಳು ಈ ನಿರ್ಬಂಧಗಳಿಗೆ ಒಳಪಟ್ಟಿರುವುದಿಲ್ಲ.

ಉತ್ತರಪ್ರದೇಶದೊಳಗೆ ಹಲಾಲ್ ಪ್ರಮಾಣೀಕೃತ ಔಷಧಗಳು, ವೈದ್ಯಕೀಯ ಸಾಧನಗಳು ಮತ್ತು ಸೌಂದರ್ಯವರ್ಧಕಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಅಧಿಕೃತ ಆದೇಶ ತಿಳಿಸಲಾಗಿತ್ತು.

ಆಹಾರ ಉತ್ಪನ್ನಗಳ ಹಲಾಲ್ ಪ್ರಮಾಣೀಕರಣವು ಒಂದು ಸಮಾನಾಂತರ ವ್ಯವಸ್ಥೆಯಾಗಿದ್ದು ಅದು ಆಹಾರ ಪದಾರ್ಥಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಗೊಂದಲವನ್ನು ಸೃಷ್ಟಿಸುತ್ತದೆ ಮತ್ತು ಆಹಾರ ಕಾನೂನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಯ ಸೆಕ್ಷನ್ 89ರ ಅಡಿಯಲ್ಲಿ ಸಮರ್ಥನೀಯವಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಆಹಾರ ಪದಾರ್ಥಗಳ ಗುಣಮಟ್ಟವನ್ನು ನಿರ್ಧರಿಸುವ ಹಕ್ಕು ಸೆಕ್ಷನ್ 29ರಲ್ಲಿ ನೀಡಲಾದ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಮಾತ್ರ ಇರುತ್ತದೆ. ಅವರು ಕಾಯಿದೆಯ ನಿಬಂಧನೆಗಳ ಪ್ರಕಾರ ಸಂಬಂಧಿತ ಮಾನದಂಡಗಳನ್ನು ಪರಿಶೀಲಿಸುತ್ತಾರೆ ಎಂದು ಆದೇಶದಲ್ಲಿ ಹೇಳಲಾಗಿತ್ತು.

ಇದಲ್ಲದೆ ಚಿಲ್ಲರೆ ಮಾರಾಟಗಾರರಿಗೆ ನಕಲಿ ಹಲಾಲ್ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಮಾರಾಟವನ್ನು ಹೆಚ್ಚಿಸಲು ಜನರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕಂಪನಿ ಮತ್ತು ಇತರ ಕೆಲವು ಸಂಸ್ಥೆಗಳ ವಿರುದ್ಧ ಲಕ್ನೋ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು. ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಜಮಿಯತ್ ಉಲ್ಲೆಮಾ ಹಿಂದ್ ಹಲಾಲ್ ಟ್ರಸ್ಟ್,  ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಸೇರಿ ಕೆಲವು ಸಂಸ್ಥೆಗಳ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು.

ಇದನ್ನು ಓದಿ: ಪಶ್ಚಿಮ ಬಂಗಾಳ: ಇಡಿ ಅಧಿಕಾರಿಗಳ ಮೇಲೆ ಗುಂಪು ದಾಳಿ; ಮೂವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...