Homeಕರ್ನಾಟಕನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ: ಸಚಿವ ಸಂಪುಟ ಸಭೆ ಇ

ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ: ಸಚಿವ ಸಂಪುಟ ಸಭೆ ಇ

- Advertisement -
- Advertisement -

ರಾಜ್ಯದಲ್ಲಿ ಉಂಟಾಗಿರುವ ಕನ್ನಡ ನಾಮಫಲಕ ಗೊಂದಲಕ್ಕೆ ಇತಿಶ್ರಿ ಹಾಡಲು ಸರ್ಕಾರ ಮುಂದಾಗಿದ್ದು, ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸಂಬಂಧ ಸುಗ್ರಿವಾಜ್ಞೆ ಹೊರಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಮಸೂದೆ’ ಮಂಡಿಸಿ ಅನುಮೋದನೆ ಪಡೆಯಲಾಗಿತ್ತು. ಈ ಮಸೂದೆ ಪ್ರಕಾರ, ಶೇ.50:50 ಅನುಪಾತದ ನಿಯಮವಿದೆ. ಅಂದರೆ, ನಾಮಫಲಕಗಳಲ್ಲಿ ಶೇ.50ರಷ್ಟು ಕನ್ನಡ ಕಡ್ಡಾಯಗೊಳಿಸಲಾಗಿದೆ.

ಇತ್ತೀಚೆಗೆ ಸಿದ್ದರಾಮಯ್ಯ ಸರ್ಕಾರ ಶೇ. 60ರಷ್ಟು ಕನ್ನಡ ಕಡ್ಡಾಯ ಮಾಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆ ಮಸೂದೆಗೆ ತಿದ್ದುಪಡಿ ತರಲು ಸರ್ಕಾರ ನಿರ್ಧರಿಸಿದೆ. ಫೆಬ್ರವರಿ 28ರೊಳಗೆ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗೋರಿಕೋದ್ಯಮಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.

ಕನ್ನಡ ಸಂಸ್ಕೃತಿ ನಿರ್ದೇಶಕರ ಬದಲಿಗೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದವರನ್ನು ಸಂಚಾಲಕರನ್ನಾಗಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯವರನ್ನು ಸದಸ್ಯರನ್ನಾಗಿ ಮಾಡಲಾಗುವುದು. ಈ ಅಂಶವು ತಿದ್ದುಪಡಿಯಲ್ಲಿ ಒಳಗೊಂಡಿದೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ತಿಳಿಸಿದ್ದಾರೆ.

ನಾಮಫಲಕಗಳಲ್ಲಿ ಮೇಲಿನ ಅರ್ಧಭಾಗದಲ್ಲಿ ಕನ್ನಡ ಹೆಸರು ಅಳವಡಿಸಬೇಕು ಎಂದು ಈ ಹಿಂದೆ ಕಾನೂನು ಹೇಳಿತ್ತು. ಸಿದ್ದರಾಮಯ್ಯ ಸರ್ಕಾರ ಮೇಲಿನ ಅರ್ಧ ಭಾಗದ ಬದಲು, ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಿದೆ. ನಾಮಫಲಕಗಳಲ್ಲಿ ಕನ್ನಡ ಹೆಸರು ಮೇಲಿನ ಭಾಗದಲ್ಲೇ ಇರಬೇಕೆಂದು ಸೂಚಿಸಿದೆ.

ನಾಮಫಲಕಗಳಲ್ಲಿ ಕನ್ನಡ ಬಳಸದೇ ಇರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣಗೌಡರ ಬಣದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ದೇವನಹಳ್ಳಿ ಸಮೀಪದ ಸಾದಹಳ್ಳಿ ಗೇಟ್‌ನಿಂದ ಹೊರಟ ಮೆರವಣಿಗೆ ಭಾರೀ ಸಂಚಲನ ಮೂಡಿಸಿತ್ತು. ಕರವೇ ಕಾರ್ಯಕರ್ತರು ಕೆಲವು ಕಡೆಗಳಲ್ಲಿ ನಾಮಫಲಕಗಳನ್ನು ಒಡೆದು ಹಾಕಿದ್ದರು. ಇದರಿಂದ ಹೋರಾಟ ಹಿಂಸೆಗೆ ತಿರುಗಿತ್ತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು.

ನಾರಾಯಣಗೌಡ ಸೇರಿದಂತೆ 40ಕ್ಕೂ ಹೆಚ್ಚು ಜನರನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿತ್ತು. ಅವರಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ ರಕ್ಷಣಾ ವೇದಿಕೆಯು, ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಶುಕ್ರವಾರದಿಂದ ಆರಂಭಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರ ಹೋರಾಟವನ್ನು ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳು ಬೆಂಬಲಿಸಿದ್ದವು.

2023ರ ಮಾರ್ಚ್‌ ತಿಂಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ 2022ರ ಸೆಕ್ಷನ್‌ 17(6) ರಲ್ಲಿ ನಾಮಫಲಕಗಳಲ್ಲಿನ ಅರ್ಧ ಭಾಗವು (ಶೇ.50) ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿತ್ತು. ಇದೀಗ ನಿಯಮಕ್ಕೆ ತಿದ್ದುಪಡಿ ತಂದು ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿನ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ : ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ ವಿಸ್ತೃತ ಪೀಠಕ್ಕೆ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...