Homeಕರ್ನಾಟಕಯಾರು ಗಿಳಿ, ಯಾರು ಹದ್ದು? ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರು..

ಯಾರು ಗಿಳಿ, ಯಾರು ಹದ್ದು? ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರು..

ಒಟ್ಟಿನಲ್ಲಿ ಇವರಿಬ್ಬರ ನಡುವೆ ನಡೆಯುತ್ತಿರು ವಾದ-ಪ್ರತಿವಾದಗಳು ಎಲ್ಲಿಗೆ ಮುಟ್ಟುತ್ತವೆ ಎಂದು ತಿಳಿಯುತ್ತಿಲ್ಲ. ಆದರೆ ಉಪಚುನಾವಣೆಯಲ್ಲಿ ಮೈತ್ರಿ ಸಾಧ್ಯವಿಲ್ಲ ಎಂಬುದನ್ನು ಸಾರಿ ಹೇಳುತ್ತಿವೆ. 

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರಾಗಿದೆ. ಉಪಚುನಾವಣೆ ದಿನಾಂಕ ನಿಗಧಿಯಾದ ಕೂಡಲೇ ಇವರಿಬ್ಬರ ಜಗಳ ತಾರಕಕ್ಕೇರಿದ್ದು ಮೈತ್ರಿ ಮುಗಿದ ಮಾತು ಎಂಬುದನ್ನು ತೋರಿಸುತ್ತಿದೆ.

ಇದು ನಿನ್ನೆ ಕುಮಾರಸ್ವಾಮಿಯವರು ಬೆಂಗಳೂರಿನಲ್ಲಿ ಪತ್ರಕರ್ತರೊಡನೆ ಮಾತನಾಡುತ್ತಾ ಕೊಟ್ಟ ಹೇಳಿಕೆಗಳಿಂದ ಆರಂಭವಾಯಿತು. “ಮಂಡ್ಯ, ತುಮಕೂರು ಮತ್ತು ಕೋಲಾರದಲ್ಲಿನ ಮೈತ್ರಿ ಅಭ್ಯರ್ಥಿಗಳ ಸೋಲಿಗೆ ಸಿದ್ದರಾಮಯ್ಯನವರು ಸಾಕಿದ್ದ ಮುದ್ದಿನ ಗಿಳಿಗಳು ಕುಕ್ಕಿದ್ದೇ ಕಾರಣ” ಎಂದು ಎಚ್.ಡಿ.ಕೆ ಹೇಳಿಕೆ ನೀಡಿದ್ದರು.

ಮುಂದುವರೆದು ಮೈಸೂರಿನಲ್ಲಿ ಸಿದ್ದರಾಮಯ್ಯನವರ ಸ್ವಯಂಕೃತ ಅಪರಾಧದಿಂದ ಸೋಲಾಗಿದೆ ಅಷ್ಟೇ. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ನಾನು ಶಕ್ತಿಮೀರಿ ಕೆಲಸ ಮಾಡಿದ್ದೆವು ಆದರೂ ಸಿದ್ದರಾಮಯ್ಯನವರು ಹೊಸಕೋಟೆಯಲ್ಲಿ ಮಾತನಾಡುತ್ತಾ ಮಂಡ್ಯದಲ್ಲಿ ಸ್ವಾಭಿಮಾನಕ್ಕೆ ಗೆಲುವಾಗಿದೆ ಎಂದು ಹೇಳುವ ಮೂಲಕ ನಮ್ಮನ್ನು ಸೋಲಿಸಿದ್ದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಎಂದು ಎಚ್.ಡಿ.ಕೆ ಕಿಡಿ ಕಾರಿದ್ದರು.

ಇದಕ್ಕೆ ಇಂದು ಟ್ವಿಟ್ಟರ್ ನಲ್ಲಿ ಉತ್ತರ ನೀಡಿದ್ದ ಸಿದ್ದರಾಮಯ್ಯನವರು, ಹೌದು ಕುಮಾರಸ್ವಾಮಿಯವರೆ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಮತ್ತೆ ತಿರುಗೇಟು ನೀಡಿದ ಎಚ್.ಡಿ ಕುಮಾರಸ್ವಾಮಿಯವರು ಸಿದ್ದರಾಮಯ್ಯನವರು ಸಾಕಿದ ಗಿಳಿಯಲ್ಲ ನಾನು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಗಿಣಿಯೆಂದು ತಪ್ಪು ತಿಳಿದು ಹದ್ದನ್ನು ಅಪ್ಪಿಕೊಂಡಿದ್ದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಸಾವಿರ ಗಿಣಿಗಳನ್ನು ಬೆಳೆಸಿದ್ದೇ ದೇವೇಗೌಡರು. ಅವರಿಗೇ ಆ ಗಿಣಿಗಳು ಹೇಗೆ ಕುಕ್ಕುತ್ತಿವೆ ಎಂದು ನೋಡುತ್ತಿದ್ದೇನೆ.. ಸಿದ್ದರಾಮಯ್ಯನವರು ಸಹ ಕುಕ್ಕುತ್ತಿದ್ದಾರೆ.

ಸಿದ್ದರಾಮಯ್ಯನವರಿಂದ ನಾನು ಮುಖ್ಯಮಂತ್ರಿ ಆಗಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಮುಖ್ಯಮಂತ್ರಿ ಆಗಿದ್ದೆ. ನಾನು ಮುಖ್ಯಮಂತ್ರಿ ಆದುದ್ದನ್ನು ಸಿದ್ದರಾಮಯ್ಯನವರು ಸಹಿಸಿಕೊಳ್ಳಲ್ಲಿಲ್ಲ. ನನ್ನನ್ನು ರಾಮನಗರದ ಜನ ಸಾಕಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಕೂಡಲೇ ಈ ಸರ್ಕಾರ ಬೀಳುತ್ತದೆ ಎಂದು ಅವರು ಎಲ್ಲಾ ಕಡೆ ಹೇಳುತ್ತಾ ತಿರುಗಾಡುತ್ತಿದ್ದರು.

ಸಿದ್ದರಾಮಯ್ಯನವರು ಸಾಕಿದ ಗಿಳಿಯಲ್ಲ ನಾನು, ಅವರು ತಮ್ಮ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಬೇಕು ಎಂದು ಎಚ್.ಡಿ.ಕೆ ಹೇಳಿದ್ದಾರೆ.

ಇದಕ್ಕೆ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯನವರು ಉತ್ತರ ನೀಡಿದ್ದಾರೆ.

ಸನ್ಮಾನ್ಯ ಕುಮಾರಸ್ವಾಮಿ ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ? ನಿಮ್ಮನ್ನು ಸಾಕಿದ್ದು ದೇವೇಗೌಡರು, ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು. ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ. ಈ ಬಗ್ಗೆ ಯಡಿಯೂರಪ್ಪ ಅವರನ್ನು ಕೇಳಿ, ಹೇಳ್ತಾರೆ.

ಕುಮಾರಸ್ವಾಮಿ ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ. ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ. ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ‌ ನೀವು, ನಿಮ್ಮ ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪತ್ರಕರ್ತರ ಜೊತೆ ಮಾತನಾಡಿದ ಸಿದ್ದರಾಮಯ್ಯನವರು, “ಕುಮಾರಸ್ವಾಮಿಯವರು ಪ್ರಜ್ಞೆ ಇಟ್ಟುಕೊಂಡು ಮಾತಾಡುತ್ತಾರೆ ಅನ್ನಿಸುತ್ತಿಲ್ಲ. ಜಿ.ಟಿ ದೇವೇಗೌಡ ಯಾವ ಪಾರ್ಟಿ? ಅವರೇ ಮೈಸೂರಿನಲ್ಲಿ, ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಗೆ ಓಟು ಹಾಕಿ ಎಂದು ಕುಮಾರಸ್ವಾಮಿಯವರೆ ಹೇಳಿದ್ದಾರೆ ಎಂದಿದ್ದರು. ಇದರ ಏನರ್ಥ” ಎಂದು ಟೀಕಿಸಿದ್ದಾರೆ.

ಒಟ್ಟಿನಲ್ಲಿ ಇವರಿಬ್ಬರ ನಡುವೆ ನಡೆಯುತ್ತಿರು ವಾದ-ಪ್ರತಿವಾದಗಳು ಎಲ್ಲಿಗೆ ಮುಟ್ಟುತ್ತವೆ ಎಂದು ತಿಳಿಯುತ್ತಿಲ್ಲ. ಆದರೆ ಉಪಚುನಾವಣೆಯಲ್ಲಿ ಮೈತ್ರಿ ಸಾಧ್ಯವಿಲ್ಲ ಎಂಬುದನ್ನು ಸಾರಿ ಹೇಳುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗೋ: 5 ತಿಂಗಳಲ್ಲಿ 600 ಕ್ಕೂ ಹೆಚ್ಚು ಜನರಿಗೆ ಮರಣದಂಡನೆ; 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ವಿಶ್ವಸಂಸ್ಥೆ 

ಆಫ್ರಿಕಾ ಖಂಡದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವು ಹದಗೆಡುತ್ತಿರುವ ಮಾನವೀಯ ಮತ್ತು ಮಾನವ ಹಕ್ಕುಗಳ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸಶಸ್ತ್ರ ಗುಂಪುಗಳು, ವಿದೇಶಿ ಹಸ್ತಕ್ಷೇಪ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ...

60 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ, 1 ತಿಂಗಳ ಎಲ್‌ಪಿಜಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ: ಕೇಂದ್ರ ಸರ್ಕಾರ

ಭಾರತದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣವಾಗಿ ಸುರಕ್ಷಿತ ಹಾಗೂ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಗುರುವಾರ ಪ್ರತಿಪಾದಿಸಿದೆ. "ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತ, ಸಂಘಟಿತ ತಪ್ಪು ಮಾಹಿತಿಯ ಅಭಿಯಾನದಿಂದ ನಿವಾಸಿಗಳು ಮೋಸಹೋಗಬಾರದು" ಎಂದು ಎಚ್ಚರಿಸಿದೆ. "ಭಾರತವು...

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...

ಮಹಾರಾಷ್ಟ್ರ: ಪ್ರತಿಷ್ಠಿತ ಶಾಲೆಯಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಟ್ರಸ್ಟಿಯ ಮಗ ಬಂಧನ

ಮಹಾರಾಷ್ಟ್ರದ ಡೊಂಬಿವ್ಲಿಯ ಸಾಗವ್ ಪ್ರದೇಶದ ಪ್ರಸಿದ್ಧ ಶಾಲೆಯಲ್ಲಿ ಶಾಲಾ ಟ್ರಸ್ಟಿಯ ಮಗ ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅದಲ್ಲದೇ ಶಿಕ್ಷಕಿಯನ್ನು ದೈಹಿಕ ಸಂಬಂಧಕ್ಕಾಗಿ ಪೀಡಿಸಿರುವ ಆರೋಪದ ಮೇಲೆ...

ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ. ಮಾರ್ಚ್ 21ರಂದು...

ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು...

ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...