Homeಕರ್ನಾಟಕ'ಸಂಘ'ದೋಷದ ಫಲ: ದೇವೇಗೌಡರ 'ಕಾಂಗ್ರೆಸ್‌ ಮುಕ್ತ' ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

‘ಸಂಘ’ದೋಷದ ಫಲ: ದೇವೇಗೌಡರ ‘ಕಾಂಗ್ರೆಸ್‌ ಮುಕ್ತ’ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಂತ್ಯ ಕಾಣಲಿದೆ ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ನಿನ್ನೆ ಹೇಳಿಕೆಯನ್ನು ಕೊಟ್ಟಿದ್ದರು. ಇದಕ್ಕೆ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ಗಳ ಮೂಲಕ ಪ್ರತಿಕ್ರಿಯಿಸಿದ್ದು, ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಇದುಸಂಘ’ದೋಷದ ಫಲ ಎಂದು ಹೇಳಿದ್ದಾರೆ.

ದೇವೇಗೌಡ ಅವರ ಹೇಳಿಕೆ ಬಗ್ಗೆ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ ಮಾಡಿದ ಸಿದ್ದರಾಮಯ್ಯ, ನನ್ನ ಮತ್ತು ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಮತ್ತು ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡ ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು “ಸಂಘ”ದೋಷದ ಫಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಾತ್ಯತೀತ ಜನತಾ ಪಕ್ಷ ಎನ್ನುವುದು “ಬಿಜೆಪಿಯ ಬಿ ಟೀಮ್” ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ. ಈ ಪಕ್ಷದ ಜಾತ್ಯತೀತ ಮುಖವನ್ನು ನಿಜ ಎಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ. ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ. ಜಾತ್ಯತೀತತೆ ಮತ್ತು ಸೌಹಾರ್ದತೆಯ ಪರಂಪರೆಯ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಎಚ್.ಡಿ. ದೇವೇಗೌಡ, 60 ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಕರ್ನಾಟಕದಲ್ಲಿ ಇವರು ಅಂತ್ಯ ಕಾಣುತ್ತಿದ್ದಾರೆ ಎಂದು ಇವತ್ತೇ ಹೇಳುತ್ತಿದ್ದೇನೆ. ನಾವು ಅವರನ್ನು ಸೋಲಿಸಿಯೇ ತೀರುತ್ತೇವೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಂತ್ಯ ಕಾಣಲಿದೆ. ಅಲ್ಲಿ ಪ್ರಧಾನಿ ಮೋದಿಯವರು ಶ್ರೀರಾಮ ಅನ್ನುತ್ತಾ ಉಪವಾಸ, ನದಿಸ್ನಾನ, ತಣ್ಣೀರು ಸ್ನಾನ ಇವೆಲ್ಲ ಮಾಡುತ್ತಿದ್ದಾರೆ. ಇಲ್ಲಿ ಇವರಿಗೆ ಸಿದ್ದರಾಮ ಮಾತ್ರ. ಸಿದ್ದರಾಮ ಹೆಸರಿನಲ್ಲಿ ಎನ್‌ಡಿಎ ಸೋಲಿಸಿ 20 ಸೀಟು ಗೆಲ್ಲುತ್ತೇವೆ ಎಂಬ ಅಹಂಕಾರದಿಂದ ಇವೆಲ್ಲ ಮಾಡುತ್ತಿದ್ದಾರೆ. 20 ಸೀಟು ಗೆಲ್ಲುವುದು ಅವರ ಕನಸು ಮಾತ್ರ ಎಂದು ಹೇಳಿಕೆ ಕೊಟ್ಟಿದ್ದರು.

 

ಇದನ್ನು ಓದಿ: ‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್‌ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...