Homeಕರ್ನಾಟಕ'ಸಂಘ'ದೋಷದ ಫಲ: ದೇವೇಗೌಡರ 'ಕಾಂಗ್ರೆಸ್‌ ಮುಕ್ತ' ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

‘ಸಂಘ’ದೋಷದ ಫಲ: ದೇವೇಗೌಡರ ‘ಕಾಂಗ್ರೆಸ್‌ ಮುಕ್ತ’ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಂತ್ಯ ಕಾಣಲಿದೆ ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ನಿನ್ನೆ ಹೇಳಿಕೆಯನ್ನು ಕೊಟ್ಟಿದ್ದರು. ಇದಕ್ಕೆ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ಗಳ ಮೂಲಕ ಪ್ರತಿಕ್ರಿಯಿಸಿದ್ದು, ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಇದುಸಂಘ’ದೋಷದ ಫಲ ಎಂದು ಹೇಳಿದ್ದಾರೆ.

ದೇವೇಗೌಡ ಅವರ ಹೇಳಿಕೆ ಬಗ್ಗೆ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ ಮಾಡಿದ ಸಿದ್ದರಾಮಯ್ಯ, ನನ್ನ ಮತ್ತು ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಮತ್ತು ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡ ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು “ಸಂಘ”ದೋಷದ ಫಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಾತ್ಯತೀತ ಜನತಾ ಪಕ್ಷ ಎನ್ನುವುದು “ಬಿಜೆಪಿಯ ಬಿ ಟೀಮ್” ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ. ಈ ಪಕ್ಷದ ಜಾತ್ಯತೀತ ಮುಖವನ್ನು ನಿಜ ಎಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ. ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ. ಜಾತ್ಯತೀತತೆ ಮತ್ತು ಸೌಹಾರ್ದತೆಯ ಪರಂಪರೆಯ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಎಚ್.ಡಿ. ದೇವೇಗೌಡ, 60 ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಕರ್ನಾಟಕದಲ್ಲಿ ಇವರು ಅಂತ್ಯ ಕಾಣುತ್ತಿದ್ದಾರೆ ಎಂದು ಇವತ್ತೇ ಹೇಳುತ್ತಿದ್ದೇನೆ. ನಾವು ಅವರನ್ನು ಸೋಲಿಸಿಯೇ ತೀರುತ್ತೇವೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಂತ್ಯ ಕಾಣಲಿದೆ. ಅಲ್ಲಿ ಪ್ರಧಾನಿ ಮೋದಿಯವರು ಶ್ರೀರಾಮ ಅನ್ನುತ್ತಾ ಉಪವಾಸ, ನದಿಸ್ನಾನ, ತಣ್ಣೀರು ಸ್ನಾನ ಇವೆಲ್ಲ ಮಾಡುತ್ತಿದ್ದಾರೆ. ಇಲ್ಲಿ ಇವರಿಗೆ ಸಿದ್ದರಾಮ ಮಾತ್ರ. ಸಿದ್ದರಾಮ ಹೆಸರಿನಲ್ಲಿ ಎನ್‌ಡಿಎ ಸೋಲಿಸಿ 20 ಸೀಟು ಗೆಲ್ಲುತ್ತೇವೆ ಎಂಬ ಅಹಂಕಾರದಿಂದ ಇವೆಲ್ಲ ಮಾಡುತ್ತಿದ್ದಾರೆ. 20 ಸೀಟು ಗೆಲ್ಲುವುದು ಅವರ ಕನಸು ಮಾತ್ರ ಎಂದು ಹೇಳಿಕೆ ಕೊಟ್ಟಿದ್ದರು.

 

ಇದನ್ನು ಓದಿ: ‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್‌ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...