Homeಅಂತರಾಷ್ಟ್ರೀಯಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಿದ ಪ್ರಮುಖ ವಿರೋಧ ಪಕ್ಷ: ದೇಶದಾದ್ಯಂತ ಹಿಂಸಾಚಾರ

ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಿದ ಪ್ರಮುಖ ವಿರೋಧ ಪಕ್ಷ: ದೇಶದಾದ್ಯಂತ ಹಿಂಸಾಚಾರ

- Advertisement -
- Advertisement -

ಬಾಂಗ್ಲಾದೇಶದಲ್ಲಿ ನಾಳೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಇಂದು ರಾಜಧಾನಿ ಢಾಕಾದ ಹೊರವಲಯದಲ್ಲಿ 4 ಮತಗಟ್ಟೆಗಳು ಸೇರಿದಂತೆ ಕನಿಷ್ಠ 5 ಪ್ರಾಥಮಿಕ ಶಾಲೆಗಳಿಗೆ ಅಪರಿಚಿತರು ಬೆಂಕಿ ಹಚ್ಚಿದ್ದು, ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ದೇಶದಾದ್ಯಂತ ಹಿಂಸಾಚಾರಗಳು ವರದಿಯಾಗುತ್ತಿದೆ.

ಬಾಂಗ್ಲಾದೇಶದ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ದೇಶದಲ್ಲಿನ ಸಾರ್ವತ್ರಿಕ ಚುನಾವಣೆಯನ್ನು ಬಹಿಷ್ಕರಿಸಿದೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಉಸ್ತುವಾರಿ ಸರಕಾರದ ನೇತೃತ್ವದಲ್ಲಿ ಚುನಾವಣೆ ನಡೆಯಬೇಕು ಎಂದು ಬಿಎನ್‌ಪಿ ಆಗ್ರಹಿಸಿತ್ತು. ಪ್ರಧಾನಮಂತ್ರಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷ ನಾಲ್ಕನೇ ಬಾರಿಗೆ ನೇರ ಅಧಿಕಾರವನ್ನು ಪಡೆಯಲು ನಕಲಿ ಮತದ ಮೂಲಕ ಷಡ್ಯಂತರ ನಡೆಸಿದೆ ಎಂದು ಆರೋಪಿಸಿತ್ತು.

ಪ್ರತಿಪಕ್ಷ BNP ಮತದಾನದಿಂದ ದೂರವಿರಲು ನಾಗರಿಕರನ್ನು ಕೇಳಿಕೊಂಡಿದ್ದು, ಶನಿವಾರದಿಂದ ದೇಶದಲ್ಲಿ 2 ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. ಸಾಮಾನ್ಯ ದಿನಗಳಲ್ಲಿ ದಟ್ಟಣೆಯಿಂದ ಕೂಡಿದ್ದ ಢಾಕಾದ ರಸ್ತೆಗಳು ಇಂದು ಬಹುತೇಕ ನಿರ್ಜನವಾಗಿದ್ದವು, ಭದ್ರತಾ ಪಡೆಗಳು ಶಸ್ತ್ರಸಜ್ಜಿತ ವಾಹನಗಳಲ್ಲಿ ನಗರದಲ್ಲಿ ಗಸ್ತು ತಿರುಗುತ್ತಿದ್ದರು.

ರಾಜೀನಾಮೆ ನೀಡಲು ಮತ್ತು ಉಸ್ತುವಾರಿ ಸರಕಾರದ ನೇತೃತ್ವದಲ್ಲಿ ಚುನಾವಣೆಯನ್ನು ನಡೆಸಲು ಅಧಿಕಾರವನ್ನು ಬಿಟ್ಟುಕೊಡಲು ಹಸೀನಾ ಅವರು ನಿರಾಕರಿಸಿದ್ದಾರೆ. ಸರ್ಕಾರ ವಿರೋಧಿ ಪ್ರತಿಭಟನೆಗೆ ಪ್ರತಿಪಕ್ಷಗಳು ಜನರನ್ನು ಪ್ರಚೋದಿಸುತ್ತಿದೆ. ಇದರಿಂದಾಗಿ ಅಕ್ಟೋಬರ್ ಅಂತ್ಯದಿಂದ ಢಾಕಾದಲ್ಲಿ ಕನಿಷ್ಠ 10 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಸೀನಾ ಪ್ರತ್ಯಾರೋಪ ಮಾಡಿದ್ದಾರೆ.

ಗಾಜಿಪುರ ಪೊಲೀಸ್ ಮುಖ್ಯಸ್ಥ ಕಾಜಿ ಶಫೀಕುಲ್ ಆಲಂ ಈ ಕುರಿತು ಮಾಹಿತಿಯನ್ನು ನೀಡಿದ್ದು, ಚುನಾವಣೆಗೆ ಅಡ್ಡಿಪಡಿಸುವ ಗುರಿಯಿಂದ ಕೃತ್ಯ ನಡೆಸಲಾಗುತ್ತಿದೆ. ನಾವು ಗಸ್ತು ತಿರುಗುವಿಕೆಯನ್ನು ಹೆಚ್ಚಿಸಿದ್ದೇವೆ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಹೆಚ್ಚಿನ ಕ್ರಮವನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

ಈಶಾನ್ಯ ಜಿಲ್ಲೆಗಳಾದ ಮೌಲವಿಬಜಾರ್ ಮತ್ತು ಹಬಿಗಂಜ್‌ನಲ್ಲಿ ಮತಗಟ್ಟೆಗಳ ಮೇಲೆ ಬೆಂಕಿ ಹಚ್ಚಲಾಗಿದೆ. ಕಳೆದ ಎರಡು ದಿನಗಳಿಂದ ದೇಶಾದ್ಯಂತ ಇದೇ ರೀತಿಯ ಘಟನೆಗಳು ವರದಿಯಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಗ್ಲಾ ಕರಾವಳಿ ಜಿಲ್ಲೆ ಖುಲ್ನಾದಲ್ಲಿ, ಶಾಲೆಗೆ ಬೆಂಕಿ ಹಚ್ಚಲು ಯತ್ನಿಸಿದವರನ್ನು ಹಿಡಿದು ಸ್ಥಳೀಯ ನಾಗರಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಶುಕ್ರವಾರ ಅದೇ ಪ್ರದೇಶದಲ್ಲಿ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಬೆಂಕಿ ಹಚ್ಚುವ ಮತ್ತೊಂದು ಪ್ರಯತ್ನವನ್ನು ಸ್ಥಳೀಯರು ತಪ್ಪಿಸಿದ್ದಾರೆ ಎಂದು ಖುಲ್ನಾ ಪೊಲೀಸ್ ಮುಖ್ಯಸ್ಥ ಸೈದುರ್ ರೆಹಮಾನ್ ಹೇಳಿದ್ದಾರೆ.

ಸುಮಾರು 8,00,000 ಪೊಲೀಸರು, ಅರೆಸೇನಾ ಪಡೆಯನ್ನು ಮತದಾನಕ್ಕೆ ನಿಯೋಜಿಸಲಾಗಿದೆ.  ಶಾಂತಿ ಕಾಪಾಡಲು ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಅಧಿಕಾರಿಗಳನ್ನು ದೇಶಾದ್ಯಂತ ನಿಯೋಜಿಸಲಾಗಿದೆ.

ಶುಕ್ರವಾರ ರಾತ್ರಿ ನಡೆದ ಪ್ರತ್ಯೇಕ ಘಟನೆಯಲ್ಲಿ ಪ್ಯಾಸೆಂಜರ್ ರೈಲಿಗೆ ಬೆಂಕಿ ಹಚ್ಚಿದ ಶಂಕಿತ ದಾಳಿಯಲ್ಲಿ ಮಗು ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಎಂಟು ಮಂದಿ ಗಾಯಗೊಂಡಿದ್ದಾರೆ. ಕಳೆದ ತಿಂಗಳು ಪ್ರತಿಪಕ್ಷಗಳು ಕರೆ ನೀಡಿದ್ದ ದೇಶವ್ಯಾಪಿ ಮುಷ್ಕರದ ವೇಳೆ ಪ್ರತಿಭಟನಾಕಾರರು ರೈಲಿಗೆ ಬೆಂಕಿ ಹಚ್ಚಿ ನಾಲ್ವರು ಸಾವನ್ನಪ್ಪಿದ್ದರು.

ಬೆನಾಪೋಲ್ ಎಕ್ಸ್‌ಪ್ರೆಸ್‌ನಲ್ಲಿ ಶುಕ್ರವಾರ ನಡೆದ ಘಟನೆಯು ನಿಸ್ಸಂದೇಹವಾಗಿ ಮಾನವೀಯತೆಯ ವಿರುದ್ಧದ ವಿಧ್ವಂಸಕ ಕ್ರೌರ್ಯ ಎಂದು ಬಿಎನ್‌ಪಿಯ ಹಿರಿಯ ನಾಯಕ ರುಹುಲ್ ಕಬೀರ್ ರಿಜ್ವಿ ಹೇಳಿದ್ದಾರೆ. ಘಟನೆಗೆ ಆಡಳಿತ ಪಕ್ಷವನ್ನು ದೂಷಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಭಾನುವಾರ (ನಾಳೆ) ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಪ್ರಮುಖ ಪ್ರತಿಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಚುನಾವಣೆಯನ್ನು ಬಹಿಷ್ಕರಿಸಿದ್ದರಿಂದ ಪ್ರಧಾನಿ ಶೇಖ್ ಹಸೀನಾ ಅವರು ಸತತ ನಾಲ್ಕನೇ ಅವಧಿಗೆ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಭ್ರಷ್ಟಾಚಾರದ ಆರೋಪದಲ್ಲಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ ನಾಯಕ, ಮಾಜಿ ಪ್ರಧಾನಿ ಖಲೀದಾ ಜಿಯಾ (78) ಗೃಹಬಂಧನದಲ್ಲಿದ್ದಾರೆ.

ಇದನ್ನು ಓದಿ: ‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್‌ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...