Homeಮುಖಪುಟನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಆರೋಪಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ, ದಾಭೋಲ್ಕರ್‌ ಪುತ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಐವರು ಆರೋಪಿಗಳಲ್ಲಿ ಓರ್ವನಾದ ವಿಕ್ರಮ್ ಭಾವೆಗೆ ಬಾಂಬೆ ಹೈಕೋರ್ಟ್‌ 2021ರ ಮೇ 6ರಂದು ಜಾಮೀನು ನೀಡಿತ್ತು. ದಾಭೋಲ್ಕರ್‌ ಪುತ್ರಿ ಮುಕ್ತಾ ದಾಭೋಲ್ಕರ್‌ ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.

ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್‌ ಮತ್ತು ಎಸ್‌.ವಿಎ.ನ್‌ ಭಟ್ಟಿ ಅವರಿದ್ದ ಪೀಠ, ಪ್ರಕರಣದ ಆರೋಪಿಗೆ ಜಾಮೀನು ಮಂಜೂರು ವೇಳೆ ಹೈಕೋರ್ಟ್ ಸ್ಪಷ್ಟ ಕಾರಣಗಳನ್ನು ನೀಡಿತ್ತು ಎಂದು ಹೇಳಿದೆ.

ಮುಕ್ತಾ ದಾಭೋಲ್ಕರ್‌ ಪರ ಹಾಜರಿದ್ದ ಹಿರಿಯ ವಕೀಲ ಆನಂದ್‌ ಗ್ರೋವರ್‌, ಇದು ಗಂಭೀರ ಪ್ರಕರಣವಾಗಿದ್ದು, ವಿಕ್ರಮ್ ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷಿಯೊಬ್ಬರು ವಿಧಿವಿಜ್ಞಾನ ಪರೀಕ್ಷೆಯ ವೇಳೆ ಮಾಹಿತಿ ನೀಡಿರುವ ಬಗ್ಗೆ ಪೀಠದ ಗಮನಕ್ಕೆ ತಂದಿದ್ದಾರೆ.

ಆದರೆ ಕೋರ್ಟ್‌ ಹೇಳಿಕೆಯು ತಾಳೆಯಾಗುವುದಿಲ್ಲ ಎಂಬುದನ್ನು ಹೈಕೋರ್ಟ್‌ ಗಮನಿಸಿದೆ. ಮಾತ್ರವಲ್ಲ ಆರೋಪಿಯು 2021ರ ಮೇ 6 ರಿಂದಲೂ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಹೇಳಿ ಪೀಠವು ಅರ್ಜಿಯನ್ನು ತಿರಸ್ಕರಿಸಿದೆ.

ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು 2013ರ ಆಗಸ್ಟ್‌ 20ರಂದು ಪುಣೆಯಲ್ಲಿ ದ್ವಿಚಕ್ರವಾಹನದಲ್ಲಿ ಬಂದಿದ್ದ ಹಂತಕರು ಗುಂಡಿಟ್ಟು ಹತ್ಯೆ ಮಾಡಿದ್ದರು. ದಾಬೋಲ್ಕರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸನಾತನ ಸಂಸ್ಥೆಯ ವೀರೇಂದ್ರ ಸಿನ್ಹ ತಾವ್ಡೆ, ಸಚಿನ್‌ ಅದುರೆ ಮತ್ತು ಶರದ್ ಕಲಾಸ್ಕರ್‌ ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಿತ್ತು. ದಾಭೋಲ್ಕರ್‌ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಸಚಿನ್‌ ಅಂದುರೆ ಮತ್ತು ಶರದ್‌ ಕಲಾಸ್ಕರ್ ಅವರು ಸ್ಥಳದಿಂದ ಪರಾರಿಯಾಗಲು ನೆರವಾದ ಆರೋಪ ವಿಕ್ರಮ್‌ ಮೇಲಿತ್ತು.

ವಿಚಾರವಾದಿ ದಾಬೋಲ್ಕರ್ ಅವರ ಹತ್ಯೆಯಂತೆಯೇ ಗೋವಿಂದ ಪನ್ಸಾರೆ ಅವರನ್ನು 2015ರ ಫೆಬ್ರವರಿ 20ರಂದು, ಎಂಎಂ ಕಲ್ಬುರ್ಗಿ ಅವರನ್ನು 2015ರ ಆಗಸ್ಟ್ 30ರಂದು, ಗೌರಿ ಲಂಕೇಶ್ ಅವರನ್ನು 2017ರ ಸೆಪ್ಟಂಬರ್ 5ರಂದು ಹತ್ಯೆಗೈಯಲಾಗಿತ್ತು.

ಇದನ್ನು ಓದಿ: ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಿದ ಪ್ರಮುಖ ವಿರೋಧ ಪಕ್ಷ: ದೇಶದಾದ್ಯಂತ ಹಿಂಸಾಚಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...