Homeಕರ್ನಾಟಕಮುಖ್ಯಮಂತ್ರಿ ಜೊತೆಗಿನ ಸಭೆ ಯಶಸ್ವಿ: ಮುಷ್ಕರ ಕೈಬಿಟ್ಟ ಅತಿಥಿ ಉಪನ್ಯಾಸಕರು

ಮುಖ್ಯಮಂತ್ರಿ ಜೊತೆಗಿನ ಸಭೆ ಯಶಸ್ವಿ: ಮುಷ್ಕರ ಕೈಬಿಟ್ಟ ಅತಿಥಿ ಉಪನ್ಯಾಸಕರು

- Advertisement -
- Advertisement -

ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗಿನ ಮಾತುಕತೆ ಬಳಿಕ ಮುಷ್ಕರ ಅಂತ್ಯಗೊಳಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಸಿಎಂ ನೀಡಿದ ಭರವಸೆಗಳಿಗೆ ಅತಿಥಿ ಉಪನ್ಯಾಸಕರು ಒಪ್ಪಿದ್ದು, ಮುಷ್ಕರ ಕೈಬಿಟ್ಟು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲು ಒಪ್ಪಿದ್ದಾರೆ.

ಮುಖ್ಯಮಂತ್ರಿಗಳು ನೀಡಿದ ಭರವಸೆಗಳೇನು?

  • ಮಹಿಳಾ ಅತಿಥಿ ಉಪನ್ಯಾಸಕರಿಗೆ ಇದೇ ಜನವರಿ ತಿಂಗಳಿನಿಂದ ಜಾರಿಗೆ ಬರುವಂತೆ ಮೂರು ತಿಂಗಳ ಕಾಲ ಹೆರಿಗೆ ರಜೆಯನ್ನು ಸಂಬಳ ಸಹಿತ ನೀಡುವುದು.
  • ಅತಿಥಿ ಉಪನ್ಯಾಸಕರ ಮೆರಿಟ್ ಆಧರಿಸಿ, ಸ್ವಇಚ್ಛೆ ವ್ಯಕ್ತಪಡಿಸಿದಲ್ಲಿ ಹಾಲಿ ಇರುವ ಕಾಲೇಜಿನಲ್ಲೇ ಕೌನ್ಸಿಲಿಂಗ್‌ಗೆ ಒಳಪಡದೆ ಮುಂದುವರೆಯಲು ಅವಕಾಶ.
  • ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ರಜೆ ನೀಡುವ ಕುರಿತು ಪರಿಶೀಲಿಸಲಾಗಿದ್ದು, ರಜೆಯ 1 ದಿನದ ಕಾರ್ಯಭಾರವನ್ನು ಇತರೆ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೊಳಪಟ್ಟು 15/19 ಗಂಟೆಗಳ ಕಾರ್ಯಭಾರ ನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಮಾಸಿಕ 1 ದಿನ ರಜೆ ನೀಡುವುದು.
  • ಅತಿಥಿ ಉಪನ್ಯಾಸಕರಿಗೆ ಪ್ರತಿ ವರ್ಷ ಅರ್ಜಿಗಳನ್ನು ಕರೆಯದೆ, ದಾಖಲೆಗಳನ್ನು ಪರಿಶೀಲನೆ ಮಾಡುವುದರ ಬದಲು ಹಿಂದಿನ ವರ್ಷದ ಅರ್ಜಿಯನ್ನೇ ನಂತರದ ವರ್ಷಗಳಲ್ಲಿನ ಆಯ್ಕೆಗೆ ಪರಿಗಣಿಸುವುದು. ಈ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವ ನಿಟ್ಟಿನಲ್ಲಿ ಆಯ್ಕೆಯಾದ ಅತಿಥಿ ಉಪನ್ಯಾಸಕರ ದಾಖಲೆಗಳನ್ನು ಕೇಂದ್ರೀಕೃತ ಡೇಟಾ ಬೇಸ್ ಸೃಷ್ಟಿಸಿ ನಿರ್ವಹಿಸುವುದು.
  • ಹಿಂದಿನ ಸೇವೆಯನ್ನು ಆಧರಿಸಿ ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಿ, ಅತಿಥಿ ಉಪನ್ಯಾಸಕರಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಕೃಪಾಂಕವನ್ನು ನೀಡುವುದರ ಬಗ್ಗೆ ಪರಿಶೀಲಾಗಿದ್ದು, ಸರ್ವೋಚ್ಚ ನ್ಯಾಯಾಲಯ ಉಮಾದೇವಿ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಆಧಾರದಲ್ಲಿ ಹಾಗೂ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ನೀಡಿರುವ ತೀರ್ಪುಗಳ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರನ್ನು ಸೇವಾ ಸಕ್ರಮಾತಿಗೊಳಿಸಲು ಅವಕಾಶ ಇಲ್ಲದಿರುವುದರಿಂದ ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ಪ್ರಾಧ್ಯಾಪಕರು, ತಾಂತ್ರಿಕ ಶಿಕ್ಷಣ ಇಲಾಖೆಯ ಇಂಜಿನಿಯರಿಂಗ್‌ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು ಹಾಗೂ ಪಾಲಿಟೆಕ್ನಿಕ್‌ ಉಪನ್ಯಾಸಕರುಗಳ ಮುಂದಿನ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂದರ್ಭದಲ್ಲಿ ಕನಿಷ್ಠ 05 ವರ್ಷಗಳಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಪ್ರತಿ ವರ್ಷ ಶೇ.1 ರಂತೆ ಗರಿಷ್ಠ ಶೇ.5 ರಷ್ಟು ಕೃಪಾಂಕ (Weightage) ನೀಡುವ ಅವಕಾಶವನ್ನು ವಿಶೇಷ ನಿಯಮಗಳಲ್ಲಿ ಅಳವಡಿಸುವುದು.
  • 10-15 ವರ್ಷಗಳಿಗೂ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿ, 60 ವರ್ಷ ಮೀರಿದ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ಇಲ್ಲದಿರುವುದರಿಂದ ಇವರಿಗೆ ಭದ್ರತಾ ರೂಪದಲ್ಲಿ ಇಡಿಗಂಟು ಸೌಲಭ್ಯವನ್ನು ಅವರುಗಳು ಸಲ್ಲಿಸಿರುವ ಸೇವಾ ಅವಧಿ ಪರಿಗಣಿಸಿ ವಾರ್ಷಿಕ ರೂ.50,000 ಮೊತ್ತದಂತೆ (ಉದಾಹರಣೆಗೆ 10 ವರ್ಷ ಸೇವೆ ಸಲ್ಲಿಸಿದಲ್ಲಿ 10 ವರ್ಷ x50,000=5,00,000)ಇಡಿಗಂಟು ನೀಡುವುದು.

    ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ಅವರ ಕುಟುಂಬದ ಎಲ್ಲರಿಗೂ ವಾರ್ಷಿಕ ರೂ.5 ಲಕ್ಷದ ಆರೋಗ್ಯ ವಿಮಾ ಸೌಲಭ್ಯವನ್ನು ನೀಡುವ ನಿಟ್ಟಿನಲ್ಲಿ ಅತಿಥಿ ಉಪನ್ಯಾಸಕರಿಂದ ವಂತಿಗೆ ರೂಪದಲ್ಲಿ ಮಾಸಿಕ ರೂ.400 ಸ್ವೀಕರಿಸಿ, ಅಷ್ಟೇ ಮೊತ್ತದ ವಂತಿಗೆಯನ್ನು (ಅತಿಥಿ ಉಪನ್ಯಾಸಕರಿಂದ ರೂ.400 + ಸರ್ಕಾರದಿಂದ ರೂ.400 ಒಟ್ಟು ರೂ.800) ಸರ್ಕಾರದಿಂದ ಭರಿಸಿ ಆರೋಗ್ಯ ವಿಮಾ ಸೌಲಭ್ಯವನ್ನು ಅನುಷ್ಠಾನಗೊಳಿಸುವುದು.

  • ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಗೌರವ ಧನಕ್ಕೆ ಅವರ ಸೇವೆಯನ್ನು ಪರಿಗಣಿಸಿ ಐದು ವರ್ಷ ಪೂರೈಸಿದವರಿಗೆ ರೂ.6,000 ಹೆಚ್ಚಳ, ಹತ್ತು ವರ್ಷ ಪೂರೈಸಿದವರಿಗೆ ರೂ.7,000 ಹೆಚ್ಚಳ ಹಾಗೂ 15 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ ರೂ. 8000 ಹೆಚ್ಚಳ ಮಾಡುವುದು.

ಜನವರಿ 1ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಪ್ರಾರಂಭಿಸಿದ್ದ ಅತಿಥಿ ಉಪನ್ಯಾಸಕರು, ಜನವರಿ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ತಲುಪಿ ಅನಿರ್ದಿಷ್ಟಾವಧಿ ಮುಷ್ಕರ ಕುಳಿತಿದ್ದರು. ಕೆಲ ಉಪನ್ಯಾಸಕರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಸೇವಾ ಭದ್ರತೆ ಅಥವಾ ಖಾಯಂ ನೇಮಕಾತಿ ಕುರಿತು ಸರ್ಕಾರ ಮಾತನಾಡುವವರೆಗೆ ಮುಷ್ಕರ ಕೈ ಬಿಡುವುದಿಲ್ಲ ಎಂದು ತಿಳಿಸಿದ್ದರು.

ಇದಕ್ಕೂ ಮುನ್ನ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅತಿಥಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿ, 5 ಸಾವಿರ ರೂಪಾಯಿ ವೇತನ ಹೆಚ್ಚಳ ಸೇರಿದಂತೆ ನಾಲ್ಕು ಭರವಸೆಗಳನ್ನು ನೀಡಿದ್ದರು. ಅದನ್ನು ತಿರಸ್ಕರಿಸಿದ್ದ ಉಪನ್ಯಾಸಕರು, ನಮಗೆ ಪರ್ಯಾಯ ವ್ಯವಸ್ಥೆ ಬೇಡ ಸೇವಾ ಭದ್ರತೆ ಕೊಡಿ ಎಂದು ಆಗ್ರಹಿಸಿದ್ದರು. ಆದರೆ, ಸಿಎಂ ಜೊತೆಗಿನ ಸಭೆ ಬಳಿಕ ಮುಷ್ಕರ ಕೈಬಿಡಲು ನಿರ್ಧಿರಿಸಿದ್ದಾರೆ.

ಇದನ್ನೂ ಓದಿ: ‘ಸಂಘ’ದೋಷದ ಫಲ: ದೇವೇಗೌಡರ ‘ಕಾಂಗ್ರೆಸ್‌ ಮುಕ್ತ’ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...