Homeಮುಖಪುಟ'ಅಲ್-ಅರೇಬಿಯಾ' ವರದಿಗಾರನ ಕುಟುಂಬದ 20 ಸದಸ್ಯರನ್ನು ಹತ್ಯೆ ಮಾಡಿದ ಇಸ್ರೇಲ್‌

‘ಅಲ್-ಅರೇಬಿಯಾ’ ವರದಿಗಾರನ ಕುಟುಂಬದ 20 ಸದಸ್ಯರನ್ನು ಹತ್ಯೆ ಮಾಡಿದ ಇಸ್ರೇಲ್‌

- Advertisement -
- Advertisement -

ಗಾಝಾದ ದಕ್ಷಿಣ ನಗರವಾದ ಖಾನ್ ಯೂನಿಸ್‌ ನಗರದಲ್ಲಿ ಇಸ್ರೇಲ್‌ ನಡೆಸಿದ ಬಾಂಬ್‌ ದಾಳಿಯಲ್ಲಿ ಅಲ್-ಅರೇಬಿಯಾದ ವರದಿಗಾರ ಮೊಹಮ್ಮದ್ ಅವದ್ ಅವರ ಕುಟುಂಬದ 20 ಮಂದಿ ಮೃತಪಟ್ಟಿದ್ದು, ಗಾಝಾದಲ್ಲಿ ಇಸ್ರೇಲ್‌ ಹತ್ಯಾಕಾಂಡವನ್ನು ಮುಂದುವರಿಸಿದೆ.

ಅಲ್-ಅರೇಬಿಯಾದ ವರದಿಗಾರ ಮೊಹಮ್ಮದ್ ಅವದ್ ಅವರ ಕುಟುಂಬಸ್ಥರು ಆಶ್ರಯ ಪಡೆದಿದ್ದ ಮನೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆದಿದೆ. ತನ್ನ ಸಹೋದರ, ಅತ್ತಿಗೆ, ಸೊಸೆಯಂದಿರು ಮತ್ತು ಸೋದರಳಿಯರು ಸೇರಿ 20 ಮಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಅವದ್ ಅಲ್-ಅರೇಬಿಯಾಗೆ ತಿಳಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಇಸ್ರೇಲ್‌ ವೈಮಾನಿಕ ದಾಳಿಯನ್ನು ನಡೆಸಿದ್ದು, ಅವರಿಗೆ ಮನೆಯಿಂದ ಓಡಿಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಅವಾದ್ ಅವರ ಮೂವರು ಸಂಬಂಧಿಕರು ಈ ಹಿಂದೆ ಗಾಝಾ ಪಟ್ಟಿಯಲ್ಲಿ ನುಸೈರಾತ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದರು.

ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 7 ರಂದು ಗಾಝಾದ ಮೇಲೆ ಇಸ್ರೇಲ್ ತನ್ನ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದಾಗಿನಿಂದ ಕನಿಷ್ಠ 22,700 ಪ್ಯಾಲೆಸ್ತೀನಿಯನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಈ ಪ್ರದೇಶದ 2.3 ಮಿಲಿಯನ್ ಜನಸಂಖ್ಯೆಯಲ್ಲಿ 85 ಪ್ರತಿಶತಕ್ಕಿಂತಲೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ಮೃತರಲ್ಲಿ 70 ಪ್ರತಿಶತ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ.

ಗಾಝಾದಲ್ಲಿ ಪ್ರತಿದಿನ ಕೊಲ್ಲಲ್ಪಡುವ ಮಕ್ಕಳ ಸಂಖ್ಯೆ ‘100 ಕ್ಕಿಂತ ಹೆಚ್ಚು’ ಎಂದು ವೈದ್ಯರು ಶಾಕಿಂಗ್‌ ಅಂಕಿ-ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ ಇಸ್ರೇಲ್‌ ಸೇನೆಯು ಗಾಝಾಪಟ್ಟಿಯಲ್ಲಿ 125 ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ.  318 ಜನರು ಗಾಯಗೊಂಡಿದ್ದಾರೆ ಎಂದು ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಖೆದ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಾಝಾ ನಗರ ಮತ್ತು ಉತ್ತರದ ಮೂರು ಪ್ರಮುಖ ಆಸ್ಪತ್ರೆಗಳ ನಿರ್ದೇಶಕರು ಸೇರಿದಂತೆ 99 ಆರೋಗ್ಯ ಕಾರ್ಯಕರ್ತರನ್ನು ಇಸ್ರೇಲ್‌ ಪಡೆಗಳು ಬಂಧಿಸಿವೆ.  ದಕ್ಷಿಣ ಗಝಾ ನಗರವಾದ ಖಾನ್ ಯೂನಿಸ್‌ನಲ್ಲಿ ನಾಸರ್ ಮೆಡಿಕಲ್ ಕಾಂಪ್ಲೆಕ್ಸ್ ಮತ್ತು ಅಲ್-ಅಮಲ್ ಆಸ್ಪತ್ರೆಯ ಮೇಲೆ ಇಸ್ರೇಲ್‌ ದಾಳಿ ನಡೆಸುತ್ತಿದೆ. ಆಸ್ಪತ್ರೆಗಳನ್ನು ರಕ್ಷಿಸಲು ಅಂತರಾಷ್ಟ್ರೀಯ ಸಂಸ್ಥೆಗಳು ತುರ್ತು ಕ್ರಮ ತೆಗೆದುಕೊಳ್ಳುವಂತೆ ಕರೆ ನೀಡಿವೆ.

ನೆತನ್ಯಾಹು ವಿರುದ್ಧ ಇಸ್ರೇಲ್‌ನಲ್ಲಿ ಪ್ರತಿಭಟನೆ

ಗಾಝಾ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ ವಿರುದ್ದ ಇಸ್ರೇಲ್‌ನಲ್ಲಿ ವ್ಯಾಪಕವಾದ ಪ್ರತಿಭಟನೆ ಮುಂದುವರಿದಿದೆ.  ಹಮಾಸ್‌ ಒತ್ತೆಯಾಳುಗಳಾಗಿರಿಸಿರುವ ಇಸ್ರೇಲ್‌ ನಾಗರಿಕರನ್ನು ವಾಪಾಸ್ಸು ಕರೆತರಬೇಕು, ಪ್ರಧಾನಿ ನೆತನ್ಯಾಹು  ರಾಜೀನಾಮೆ ನೀಡಬೇಕು, ಗಾಝಾ ಮೇಲಿನ ಯುದ್ಧವನ್ನು ಕೊನೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಅ.7ರಂದು ಹಮಾಸ್ ವಶಕ್ಕೆ ಪಡೆದುಕೊಂಡ ಇಸ್ರೇಲ್‌ ಒತ್ತೆಯಾಳುಗಳ ಬೆಂಬಲಿಗರು, ಸ್ನೇಹಿತರು ಮತ್ತು ಕುಟುಂಬಗಳು ಶನಿವಾರ ಟೆಲ್ ಅವಿವ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇಸ್ರೇಲ್‌ ಗಾಝಾ ಮೇಲೆ ಯುದ್ಧ ಘೋಷಣೆ ಬಳಿಕ ಈ ಪ್ರತಿಭಟನೆಗಳು ಪ್ರಾರಂಭವಾಗಿದ್ದವು. ಆದರೆ ಇದೀಗ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹೆಚ್ಚಿನ ಸಂಖ್ಯೆಯ ಇಸ್ರೇಲ್‌ ನಾಗರಿಕರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ.

ಪ್ರತಿಭಟನಕಾರರು ಬುಷಾ ಬುಷಾ, ಬುಷಾ, ಅಂದರೆ ಅವಮಾನ, ಅವಮಾನ ಎಂದು ಸರ್ಕಾರವನ್ನು ಉಲ್ಲೇಖಿಸಿ ಘೋಷಣೆಗಳನ್ನು ಕೂಗಿದ್ದಾರೆ. ಕೆಲವರು ಅ.7ರ ಘಟನೆಗಳಿಗೆ ನೆತನ್ಯಾಹು ಮತ್ತು ಅವರ ಸರಕಾರದ ಇತರ ಅಧಿಕಾರಿಗಳನ್ನು ದೂಷಿಸಿದ್ದಾರೆ.

ಇದನ್ನು ಓದಿ: ‘ಜೈಲಿನಲ್ಲಿ ಸತ್ತರೆ ಒಳ್ಳೆಯದು’: ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...