Homeಮುಖಪುಟಪ್ರತಿಪಕ್ಷಗಳ ಬಹಿಷ್ಕಾರದ ನಡುವೆ ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ

ಪ್ರತಿಪಕ್ಷಗಳ ಬಹಿಷ್ಕಾರದ ನಡುವೆ ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ

- Advertisement -
- Advertisement -

ಪ್ರಬಲ ಪ್ರತಿಪಕ್ಷ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ(ಬಿಎನ್‌ಪಿ) ಮತ್ತು ಅದರ ಬೆಂಬಲಿಗ ಪಕ್ಷಗಳು ಚುನಾವಣೆ ಬಹಿಷ್ಕರಿಸಿರುವ ನಡುವೆಯೂ ಇಂದು (ಜ.7) ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಯ ಮತದಾನ ನಡೆಯುತ್ತಿದೆ.

ಬೆಳಿಗ್ಗೆ 8 ಗಂಟೆಗೆ ಮತದಾನ ಪ್ರಾರಂಭಗೊಂಡಿದ್ದು, ಸಂಜೆ 4 ಗಂಟೆಗೆ ಕೊನೆಗೊಳ್ಳಲಿದೆ. ಎಲೆಕ್ಟ್ರಾನಿಕ್ ಮತಯಂತ್ರ ಸಮಸ್ಯೆಯಿಂದ ರಾಜಧಾನಿ ಢಾಕಾದಿಂದ 70 ಕಿಲೋ ಮೀಟರ್ (43.5 ಮೈಲಿ) ದೂರದಲ್ಲಿರುವ ನರಸಿಂಗಡಿಯ ಕೇಂದ್ರ ಜಿಲ್ಲೆಯ ಮತದಾನ ಕೇಂದ್ರದಲ್ಲಿ ಮತದಾನವನ್ನು ಸ್ಥಗಿತಗೊಳಿಸಲಾಗಿದೆ. ಉಳಿದಂತೆ ದೇಶದಾದ್ಯಂತ ಮತದಾನ ಮುಂದುವರೆದಿದೆ.

ಹಾಲಿ ಪ್ರಧಾನಿ ಶೇಖ್ ಹಸೀನಾ ಐದನೇ ಭಾರೀ ಆಯ್ಕೆಯಾಗುವ ಉತ್ಸಾಹದಲ್ಲಿದ್ದು, ಅವರ ಅವಾಮಿ ಲೀಗ್ ನೇತೃತ್ವದ ಮೈತ್ರಿಕೂಟ ಐದನೇ ಭಾರೀ ಸರ್ಕಾರ ರಚಿಸುವ ಎಲ್ಲಾ ಸಾಧ್ಯತೆಗಳಿವೆ.

ಚುನಾವಣೆ ಬಹಿಷ್ಕರಿಸಿರುವ ಬಿಎನ್‌ಪಿ ಶನಿವಾರದಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ಕೊಟ್ಟಿದೆ. ಪರಿಣಾಮ ದೇಶದ ವಿವಿದೆಡೆ ಹಿಂಸಾಚಾರ ನಡೆದಿದೆ. ಎಲ್ಲೆಡೆ ಸೇನೆ ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಚುನಾವಣೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿ ಬಿಎನ್‌ಪಿ ನೇತೃತ್ವದಲ್ಲಿ ಪ್ರತಿಪಕ್ಷಗಳು ಚುನಾವಣೆ ಬಹಿಷ್ಕರಿಸಿವೆ. ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷ ದುರ್ಬಲ ಅಭ್ಯರ್ಥಿಗಳನ್ನು ತಮ್ಮ ಅಭ್ಯರ್ಥಿಗಳ ವಿರುದ್ದ ಸ್ವತಂತ್ರ ಅಭ್ಯರ್ಥಿಗಳಾಗಿ ಚುನಾವಣೆಗೆ ನಿಲ್ಲಿಸಿ ಜನರಿಗೆ ಮೋಸ ಮಾಡ್ತಿದೆ ಎಂದು ಬಿಎನ್‌ಪಿ ಆರೋಪಿಸಿದೆ. ಈ ಆರೋಪವನ್ನು ಅವಾಮಿ ಲೀಗ್ ತಳ್ಳಿ ಹಾಕಿದೆ.

ಕಳೆದ ಅಕ್ಟೋಬರ್‌ನಲ್ಲಿ ಬಾಂಗ್ಲಾದೇಶದಲ್ಲಿ ಸರ್ಕಾರದ ವಿರುದ್ದ ಪ್ರತಿಭಟನೆ ಭುಗಿಲೆದ್ದಿತ್ತು. ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆ ಮತ್ತು ಚುನಾವಣೆಯ ಮೇಲ್ವಿಚಾರಣೆಗಾಗಿ ಉಸ್ತುವಾರಿ ಸರ್ಕಾರವನ್ನು ರಚಿಸಲು ಒತ್ತಾಯಿಸಿ ಹಮ್ಮಿಕೊಂಡಿದ್ದ ಬೃಹತ್ ಸರ್ಕಾರಿ ವಿರೋಧಿ ಜಾಥಾ ಹಿಂಸಾಚಾರಕ್ಕೆ ತಿರುಗಿತ್ತು.

ಪ್ರಧಾನಿ ಹಸೀನಾ ಅವರ ಆಡಳಿತವು ಚುನಾವಣೆಯ ಉಸ್ತುವಾರಿಯಾಗಿ ಹಂಗಾಮಿ ಸರ್ಕಾರವನ್ನು ರಚಿಸಲು ಯಾವುದೇ ಸಾಂವಿಧಾನಿಕ ಅವಕಾಶವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಿದ ಪ್ರಮುಖ ವಿರೋಧ ಪಕ್ಷ: ದೇಶದಾದ್ಯಂತ ಹಿಂಸಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...