Homeಮುಖಪುಟಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

- Advertisement -
- Advertisement -

ಉತ್ತರಪ್ರದೇಶದಲ್ಲಿ ಶಿಕ್ಷಕಿಯೋರ್ವಳ ಸಾಹಸ, ಪರಿಶ್ರಮ 40 ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕನ್ನು ಚೆಲ್ಲಿದೆ. ಸರ್ಕಾರಿ ಶಾಲೆಯ ಶಿಕ್ಷಕಿ ಸೀತಾ ತ್ರಿವೇದಿ  40 ಅಲೆಮಾರಿ ಬುಡಕಟ್ಟು ಮಕ್ಕಳನ್ನು ಭಿಕ್ಷಾಟನೆಯಿಂದ ರಕ್ಷಿಸಿ ಶಾಲೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದು, ಶಿಕ್ಷಕಿಯ ಕಾರ್ಯಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದೆ.

ಉತ್ತರಪ್ರದೇಶದ ಬಜೇರಾ ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕಿ ಸೀತಾ ತ್ರಿವೇದಿ ಅವರು ಶಿಕ್ಷಣ ವಂಚಿತ ಕಲಬಾಜ್ ಸಮುದಾಯಕ್ಕೆ ಸೇರಿದ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಅವರ ಪೋಷಕರಿಗೆ ಮನವರಿಕೆ ಮಾಡಿ ಅವರ ವಾರ್ಡ್‌ಗಳಲ್ಲಿನ ಶಾಲೆಗೆ ಮಕ್ಕಳನ್ನು ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಜೇರಾ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ತ್ರಿವೇದಿ ಅವರಿಗೆ ಕೆಲವು ವರ್ಷಗಳ ಹಿಂದೆ ಮಕ್ಕಳ ಗಣತಿಯನ್ನು ನಡೆಸುವ ಕೆಲಸವನ್ನು ನೀಡಲಾಗಿತ್ತು. ಸಮೀಕ್ಷೆಗಾಗಿ ಸಮೀಪದ ಗ್ರಾಮಕ್ಕೆ ಭೇಟಿ ನೀಡಿದಾಗ ಸ್ಥಳೀಯರು ಶಿಕ್ಷಕಿಯನ್ನು ಕಲಬಾಜ್ ಸಮುದಾಯದವರ ಮನೆಗಳಿಗೆ ಹೋಗದಂತೆ ತಡೆದಿದ್ದಾರೆ. ಆದರೆ ಅವರು ತನ್ನ ಕಾರ್ಯವನ್ನು ಮುಂದುವರಿಸಿದ್ದರು. ಈ ವೇಳೆ ಅವರು ಕಲಬಾಜ್‌ ಸಮುದಾಯಕ್ಕೆ ಸೇರಿದ ಯಾವುದೇ ಮಕ್ಕಳು ಶಾಲೆಗೆ ಹೋಗುವುದಿಲ್ಲ ಮತ್ತು ಅವರು ಕಟುಂಬದ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುವ  ಕೆಲಸವನ್ನು ಮಾಡುತ್ತಾರೆ ಎಂದು ಕಂಡುಕೊಂಡಿದ್ದಾರೆ ಮತ್ತು ಮಕ್ಕಳನ್ನು ಶಾಲೆಗೆ ಸೇರಿಸುವ ಸಾಹಸಕ್ಕೆ ಮುಂದಾಗಿದ್ದಾರೆ. ತ್ರಿವೇದಿ ಮಕ್ಕಳನ್ನು ಶಾಲೆಗೆ ಸೇರಿಸಲು ಪ್ರಯತ್ನಿಸುತ್ತಿದ್ದಂತೆ ಕಲಬಾಜ್ ಸಮುದಾಯ ಹಿರಿಯರು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿಕ್ಷಕಿ ಸೀತಾ ತ್ರಿವೇದಿ, ನಾನು ಪ್ರತಿ ಮನೆಗೆ ಭೇಟಿ ನೀಡಿ ಹಿರಿಯರಿಗೆ ಶಿಕ್ಷಣದ ಮಹತ್ವದ ಬಗ್ಗೆ ಹೇಳಿದ್ದೇನೆ. ಬುಡಕಟ್ಟು ಸಮುದಾಯದ ಮಕ್ಕಳು ಶಿಕ್ಷಣ ಪಡೆದ ನಂತರ ಅಧಿಕಾರಿಗಳು ಮತ್ತು ಯಶಸ್ವಿ ಉದ್ಯಮಿಗಳಾಗಿರುವ ಕಥೆಗಳನ್ನು ನಾನು ಅವರಿಗೆ ಹೇಳಿದ್ದೇನೆ. ಇದು ಅವರ ಮೇಲೆ ಪರಿಣಾಮ ಬೀರಿತು ಮತ್ತು ಅವರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಪ್ರಾರಂಭಿಸಿದರು ಎಂದು ನೆನಪಿಸಿಕೊಂಡಿದ್ದಾರೆ.

ಶಾಲೆಗೆ ಮಕ್ಕಳನ್ನು ಸೇರಿಸಿದಾಗ ಎದುರಾಗಿದ್ದ ಸಮಸ್ಯೆ!

ಕಲಬಾಜ್ ಸಮುದಾಯದ 40 ಮಕ್ಕಳನ್ನು ಮನವೊಲಿಕೆ ಮಾಡಿ ಸೀತಾ ತ್ರಿವೇದಿ ಶಾಲೆಗೆ ದಾಖಲು ಮಾಡಿದ್ದಾರೆ. ಮಕ್ಕಳನ್ನು ದಾಖಲಿಸಿಕೊಂಡರೂ, ಇತರ ಸಮುದಾಯದ ವಿದ್ಯಾರ್ಥಿಗಳು ಅವರನ್ನು ಸ್ವೀಕರಿಸಲು ಸಿದ್ಧರಿಲ್ಲದ ಕಾರಣ ತ್ರಿವೇದಿಗೆ ಮತ್ತೊಂದು ಸವಾಲು ಎದುರಾಗಿತ್ತು. ಕಲಾಬಾಜ್ ಸಮುದಾಯದ ಮಕ್ಕಳೊಂದಿಗೆ ಇತರ ಸಮುದಾಯದ ಮಕ್ಕಳು ಮಧ್ಯಾಹ್ನದ ಊಟಕ್ಕೆ ಕುಳಿತುಕೊಳ್ಳದಿರುವುದನ್ನು ನಾನು ಗಮನಿಸಿದ್ದೇನೆ. ನಾನು ಇತರ ಮಕ್ಕಳ ಪೋಷಕರನ್ನು ಕರೆದು ಕಲಬಾಜ್ ಸಮುದಾಯದ ಮಕ್ಕಳ ಬಗ್ಗೆ ತಾರತಮ್ಯ ಮಾಡದಂತೆ ಕೇಳಿಕೊಂಡಿದ್ದೇನೆ.  ಪೋಷಕರ ಸಹಕಾರದಿಂದ ಈ ಸಮಸ್ಯೆಗೆ ಪರಿಹಾರವಾಗಿತ್ತು. ಪೋಷಕರ ಬಳಿ ಸಾಕಷ್ಟು ಹಣವಿಲ್ಲದ ಕಾರಣ ಈ ಮಕ್ಕಳಿಗೆ ಬಟ್ಟೆ ಮತ್ತು ಪುಸ್ತಕಗಳನ್ನು ಆಗಾಗ್ಗೆ ಖರೀದಿಸಿ ನಾನು ಕೊಡುತ್ತಿದ್ದೇನೆ ಎಂದು ತ್ರಿವೇದಿ ಹೇಳಿದ್ದಾರೆ.

ಸೀತಾ ತ್ರಿವೇದಿ ಅವರ ಈ ಕೆಲಸಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದ್ದು, ತ್ರಿವೇದಿಯವರ ಪ್ರಯತ್ನ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಉಮೇಶ್ ಪ್ರತಾಪ್ ಸಿಂಗ್ ಶ್ಲಾಘಿಸಿದ್ದಾರೆ. ಈ ಮಕ್ಕಳು ಸಮಾಜದ ಹಿತದೃಷ್ಟಿಯಿಂದ ಮುಂದೆ ಸಾಗುತ್ತಾರೆ ಮತ್ತು ಶಿಕ್ಷಣ ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ರೀತಿಯ ಪ್ರಯತ್ನಗಳ ಮೂಲಕ ಜಾತಿ ಆಧಾರಿತ ತಾರತಮ್ಯ ಕೂಡ ಕೊನೆಗೊಳ್ಳುತ್ತವೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ  ಶಿಕ್ಷಾ ಅಧಿಕಾರಿ ರಣವೀರ್ ಸಿಂಗ್ ಅವರು, ಶಿಕ್ಷಕಿಯೋರ್ವರು ಮಾಡಿದ ಪ್ರಯತ್ನಗಳನ್ನು ಗಮನಿಸಿದ್ದೇವೆ. ಶಿಕ್ಷಕರ ಪ್ರಯತ್ನ ಶ್ಲಾಘನೀಯವಾಗಿದ್ದು, ಜಿಲ್ಲೆಯ ಒಂದೇ ಒಂದು ಮಗು ಶಾಲೆಯಿಂದ ದೂರ ಉಳಿಯದಂತೆ ಇತರೆ ಶಾಲೆಗಳಲ್ಲೂ ಇಂತಹ ಪ್ರಯತ್ನ ನಡೆಯಲಿ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ.

ಕಲಬಾಜ್ ಸಮುದಾಯ

16ನೇ ಶತಮಾನದಲ್ಲಿ ಮೊಘಲ್ ಸಾಮ್ರಾಜ್ಯದ ಅಡಳಿತದ ಸಮಯದಲ್ಲಿ ಉತ್ತರ ಪ್ರದೇಶಕ್ಕೆ ವಲಸೆ ಬಂದವರು ಕಲಾಬಾಜ್ ಜನರು. ಇವರು ಮೂಲತಃ ರಜಪೂತರು ಎಂದು ಹೇಳುತ್ತಾರೆ. ಈ ಸಮುದಾಯದ ಹೆಚ್ಚಿನ ಉತ್ತರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅವರು ಅಲೆಮಾರಿ ಸಮುದಾಯವಾಗಿದ್ದರು,  ಹಿಂದಿ ಮಾತನಾಡುತ್ತಾರೆ ಆದರೆ ತಮ್ಮದೇ ಆದ ನಿರ್ದಿಷ್ಟ ಉಪಭಾಷೆಯನ್ನು ಹೊಂದಿದ್ದಾರೆ.

ಇವರಲ್ಲಿ ಹೆಚ್ಚಿನವರು ಭೂರಹಿತರಾಗಿದ್ದಾರೆ. ಅದ್ಭುತವಾದ ಜಿಮ್ನಾಸ್ಟಿಕ್ ಸಾಹಸ, ಜಾನುವಾರುಗಳನ್ನು ನೋಡಿಕೊಳ್ಳುವುದು ಅಥವಾ ಬೈಸಿಕಲ್‌ಗಳನ್ನು ದುರಸ್ತಿ ಮಾಡುವುದು. ಕೆಲವರು ದಿನಗೂಲಿಗಳಾಗಿ ಕೂಡ ಕೆಲಸ ಮಾಡುತ್ತಾರೆ. ಹೆಚ್ಚಿನವರು ಬಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದಾರೆ.  2011ರ ಜನಗಣತಿಯು ಉತ್ತರಪ್ರದೇಶದಲ್ಲಿ ಕಲಾಬಾಜ್ ಸಮುದಾಯದ 11,199 ಜನರಿದ್ದಾರೆ ಎಂದು ಹೇಳಿದೆ. ಈ ಸಮುದಾಯವು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದೆ.

ಇದನ್ನು ಓದಿ:ಎಐಸಿಸಿ ಸೆಂಟ್ರಲ್‌ ವಾರ್‌ರೂಂ ಅಧ್ಯಕ್ಷರಾಗಿ ಶಶಿಕಾಂತ್‌ ಸೆಂಥಿಲ್‌ ನೇಮಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...