Homeಮುಖಪುಟಮಿಜೋರಾಂ ಮ್ಯಾನ್ಮಾರ್ ನಿರಾಶ್ರಿತರಿಗೆ ನೆರವು ನೀಡುವುದನ್ನು ಮುಂದುವರಿಸಲಿದೆ: ಸಿಎಂ ಲಾಲ್ದುಹೋಮ

ಮಿಜೋರಾಂ ಮ್ಯಾನ್ಮಾರ್ ನಿರಾಶ್ರಿತರಿಗೆ ನೆರವು ನೀಡುವುದನ್ನು ಮುಂದುವರಿಸಲಿದೆ: ಸಿಎಂ ಲಾಲ್ದುಹೋಮ

- Advertisement -
- Advertisement -

ಕೇಂದ್ರದ ಬೆಂಬಲದೊಂದಿಗೆ, ಮ್ಯಾನ್ಮಾರ್‌ನ ನಿರಾಶ್ರಿತರಿಗೆ ಮತ್ತು ಮಣಿಪುರದಿಂದ ಆಂತರಿಕವಾಗಿ ಸ್ಥಳಾಂತರಗೊಂಡ ಜನರಿಗೆ ತಮ್ಮ ಸರ್ಕಾರ ನೆರವು ನೀಡುವುದನ್ನು ಮುಂದುವರಿಸಲಿದೆ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ತಿಳಿಸಿದ್ದಾರೆ.

ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಬಂದ ಬಳಿಕ, ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು ಈ ಮಾತನ್ನು ಹೇಳಿದ್ದಾರೆ.

ಮ್ಯಾನ್ಮಾರ್ ಪ್ರಜೆಗಳಿಗೆ ನಿರಾಶ್ರಿತರ ಸ್ಥಾನಮಾನ ನೀಡಲು ಸಾಧ್ಯವಾಗದಿದ್ದರೂ, ಅವರಿಗೆ ಸಹಾಯ ಒದಗಿಸುವಲ್ಲಿ ನಮ್ಮೊಂದಿಗೆ ಸಹಕರಿಸಲು ಕೇಂದ್ರ ಸಿದ್ಧವಾಗಿದೆ. ಅದೇ ರೀತಿ ಜನಾಂಗೀಯ ಹಿಂಸಾಚಾರದಿಂದ ತಮ್ಮ ಮನೆಗಳನ್ನು ತೊರೆದ ಮಣಿಪುರದ ಜನರಿಗೂ ಕೂಡ ಕೇಂದ್ರದ ಸಹಬಾಗಿತ್ವದಲ್ಲಿ ಸಹಾಯ ನೀಡಲಾಗುವುದು ಎಂದು ಲಾಲ್ದುಹೋಮ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ತಮ್ಮ ತಾಯ್ನಾಡಿನಲ್ಲಿ ಮಿಲಿಟರಿ ದಂಗೆಯ ನಂತರ, ಫೆಬ್ರವರಿ 2021 ರಿಂದ ಮ್ಯಾನ್ಮಾರ್‌ನ ಚಿನ್ ಸಮುದಾಯಕ್ಕೆ ಸೇರಿದ 31,000ಕ್ಕೂ ಹೆಚ್ಚು ಜನರು ಮಿಜೋರಾಂಗೆ ಬಂದು ಆಶ್ರಯ ಪಡೆದಿದ್ದಾರೆ. ಮಣಿಪುರದಲ್ಲಿ ಜನಾಂಗೀಯ ಸಂಘರ್ಷದಿಂದ ರಾಜ್ಯ ತೊರೆದಿರುವ 9,000ಕ್ಕೂ ಹೆಚ್ಚು ಜನರು ಮಿಜೋರಾಂನಲ್ಲಿ ಆಶ್ರಯ ಪಡೆದಿದ್ದಾರೆ.

ಮ್ಯಾನ್ಮಾರ್‌ನ ಚಿನ್ ಸಮುದಾಯ ಮತ್ತು ಮಣಿಪುರದ ಕುಕಿ-ಜೋ ಸಮುದಾಯಗಳ ಜೊತೆ ಮಿಜೋರಾಂನ ಮಿಜೋಗಳು ಜನಾಂಗೀಯ ಸಂಬಂಧಗಳನ್ನು ಹೊಂದಿದ್ದು, ಹಾಗಾಗಿ, ಯಾವುದೇ ಸಂಘರ್ಷವಿಲ್ಲದೆ ಈ ಎರಡೂ ಸಮುದಾಯಗಳು ಮಿಜೋರಾಂನಲ್ಲಿ ಆಶ್ರಯ ಪಡೆದಿವೆ.

ಮ್ಯಾನ್ಮಾರ್‌ನಲ್ಲಿ ಪರಿಸ್ಥಿತಿ ಸಹಜ ಸ್ಥಿತಿ ಮರಳುವವರೆಗೆ ಮಿಜೋರಾಂನಲ್ಲಿ 2021ರಿಂದ ಆಶ್ರಯ ಪಡೆದಿರುವ ಮ್ಯಾನ್ಮಾರ್ ಪ್ರಜೆಗಳನ್ನು ಕೇಂದ್ರ ಸರ್ಕಾರ ಗಡಿಪಾರು ಮಾಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಲಾಲ್ದುಹೋಮಕ್ಕೆ ಅವರಿಗೆ ಭರವಸೆ ಕೊಟ್ಟಿದ್ದಾಗಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಬೇಲಿ ಹಾಕಲು ಮುಂದಾಗಿರುವ ಕೇಂದ್ರವು ತನ್ನ ನಿರ್ಧಾರದಿಂದ ಹಿಂದೆ ಸರಿಯುವ ವಿಶ್ವಾಸವನ್ನು ಸಿಎಂ ಲಾಲ್ದುಹೋಮ ವ್ಯಕ್ತಪಡಿಸಿದ್ದಾರೆ.

ಮಿಜೋರಾಂನ ಭಾರತ ಮತ್ತು ಮ್ಯಾನ್ಮಾರ್‌ ಗಡಿಯಲ್ಲಿ ಬೇಲಿ ಅಳವಡಿಸುವುದಾಗಿ ಕೇಂದ್ರ ಸರ್ಕಾರ ಇತ್ತೇಚೆಗೆ ಹೇಳಿತ್ತು. ಸುಮಾರು 300 ಕಿಮೀ ವ್ಯಾಪ್ತಿಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪ್ರಸ್ತುತ ಯಾವುದೇ ಬೇಲಿ ಇಲ್ಲ. ಇಲ್ಲಿ ಎರಡೂ ದೇಶಗಳ ಜನರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸುಮಾರು 16 ಕಿ.ಮೀಗಳಷ್ಟು ಯಾವುದೇ ವೀಸಾ ಇಲ್ಲದೆ ಪ್ರವೇಶಿಸಬಹುದು.

ಇದನ್ನೂ ಓದಿ : ಜ.20 ರಿಂದ 25ರವರೆಗೆ ರೈಲು ಪ್ರಯಾಣ ಬೇಡ: ಮುಸ್ಲಿಂ ಸಮುದಾಯಕ್ಕೆ ಧುಬ್ರಿ ಸಂಸದರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...