Homeಮುಖಪುಟ'ಕುಸ್ತಿ ಚಾಂಪಿಯನ್‌ಶಿಪ್': WFI ಲೆಟರ್‌ಹೆಡ್‌ನಲ್ಲಿ ಸುತ್ತೋಲೆ ಹೊರಡಿಸಿದ ಸಂಜಯ್ ಸಿಂಗ್!

‘ಕುಸ್ತಿ ಚಾಂಪಿಯನ್‌ಶಿಪ್’: WFI ಲೆಟರ್‌ಹೆಡ್‌ನಲ್ಲಿ ಸುತ್ತೋಲೆ ಹೊರಡಿಸಿದ ಸಂಜಯ್ ಸಿಂಗ್!

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ನ ಅಮಾನತುಗೊಂಡಿರುವ ಸಮಿತಿಗೆ ‘ಸೀನಿಯರ್ ನ್ಯಾಷನಲ್ ಚಾಂಪಿಯನ್‌ಶಿಪ್’ ನಡೆಸಲು ಯಾವುದೇ ಅಧಿಕಾರವಿಲ್ಲ ಮತ್ತು ಸಂಸ್ಥೆಯು ನಡೆಸುವ ಯಾವುದೇ ಕಾರ್ಯಕ್ರಮವನ್ನು ‘ಅನುಮೋದಿತವಲ್ಲದ’ ಮತ್ತು ‘ಮಾನ್ಯತೆ ಪಡೆಯದ’ ಎಂದು ಪರಿಗಣಿಸಲಾಗುವುದು ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಕಳೆದ ತಿಂಗಳು WFI ಗೆ ಚುನಾವಣೆ ನಡೆದು ಸಂಜಯ್ ಸಿಂಗ್ ಅವರನ್ನು ಭಾರತೀಯ ಕುಸ್ತಿ ಫೆಡರೇಷನ್‌ನ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿತ್ತು. ಬ್ರಿಜ್‌ ಭೂಷಣ್‌ ಆಪ್ತ ಸಂಜಯ್ ಸಿಂಗ್ ಆಯ್ಕೆಗೆ ಕುಸ್ತಿಪಟುಗಳು ವಿರೋಧಿಸಿದ್ದರು. ಇದರ ಬೆನ್ನಲ್ಲೇ ಸಚಿವಾಲಯವು ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಭಾರತೀಯ ಕುಸ್ತಿ ಫೆಡರೇಷನ್‌ನ ಸಮಿತಿಯನ್ನು ಅಮಾನತುಗೊಳಿಸಿತ್ತು. ಬಳಿಕ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಮೂರು ಸದಸ್ಯರ ತಾತ್ಕಾಲಿಕ ಸಮಿತಿಯನ್ನು ರಚಿಸಿತ್ತು.

ಅಮಾನತುಗೊಂಡ ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಅವರು ಶೀಘ್ರದಲ್ಲೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳನ್ನು ಆಯೋಜಿಸುವುದಾಗಿ ಹೇಳಿದ್ದರು. ಪುಣೆಯಲ್ಲಿ 2024ರ  ಜನವರಿ 29 ರಿಂದ31ರವರೆಗೆ ಸೀನಿಯರ್ ನ್ಯಾಶನಲ್ ವ್ರೆಸ್ಲಿಂಗ್ ಚಾಂಪಿಯನ್‌ಶಿಪ್ 2023ನ್ನು ಆಯೋಜಿಸುವ ಬಗ್ಗೆ ನೀವು 06.01.2024ರ ಲೆಟರ್‌ಹೆಡ್‌ನಲ್ಲಿ ಸುತ್ತೋಲೆಯನ್ನು ಹೊರಡಿಸಿದ್ದೀರಿ ಎಂದು ಸಚಿವಾಲಯದ ಗಮನಕ್ಕೆ ಬಂದಿದೆ. 24.12.2023ರ ಈ ಸಚಿವಾಲಯದ ಆದೇಶದ ಪ್ರಕಾರ, ಅಂತಹ ಸುತ್ತೋಲೆಯನ್ನು ನೀಡಲು ಅಥವಾ ರತದ ಕುಸ್ತಿ ಫೆಡರೇಶನ್‌ನ ಲೆಟರ್‌ಹೆಡ್‌ನ್ನು ಬಳಸಲು ನಿಮಗೆ ಯಾವುದೇ ಅಧಿಕಾರವಿಲ್ಲ ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಲೆಟರ್‌ಹೆಡ್‌ನ್ನು ಬಳಸುವುದನ್ನು ನಿಲ್ಲಿಸಬೇಕು ಮತ್ತು ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿಯ ನಿಬಂಧನೆಗಳನ್ನು ಉಲ್ಲಂಘಿಸಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಹೆಸರು, ಲೋಗೋಗಳು ಮತ್ತು ಚಿಹ್ನೆಗಳನ್ನು ಬಳಸುವುದನ್ನು ನಿಲ್ಲಿಸಬೇಕು ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಸಂಜಯ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ಸಚಿವಾಲಯವು, ನೀವು ಅಥವಾ ಡಬ್ಲ್ಯುಎಫ್‌ಐನ ಅಮಾನತುಗೊಳಿಸಿದ ಕಾರ್ಯಕಾರಿ ಸಮಿತಿ ಸದಸ್ಯರು ಆಯೋಜಿಸುವ ಯಾವುದೇ ಚಾಂಪಿಯನ್‌ಶಿಪ್‌ ಸ್ಪರ್ಧೆಗಳನ್ನು ಅನುಮೋದಿತ ಮತ್ತು ಮಾನ್ಯತೆ ಪಡೆದ ಸ್ಪರ್ಧೆಗಳೆಂದು ಪರಿಗಣಿಸಲಾಗುವುದಿಲ್ಲ. ಡಬ್ಲ್ಯುಎಫ್‌ಐನ ಅಮಾನತುಗೊಂಡ ಸಮಿತಿ ನಡೆಸುವ ಚಾಂಪಿಯನ್‌ಶಿಪ್‌ ಸ್ಪರ್ಧೇಗಳಲ್ಲಿ ನೀಡುವ ಪ್ರಮಾಣಪತ್ರಗಳು ಮತ್ತು ಪದಕಗಳು ಯಾವುದನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ಯಾವುದೇ ಯೋಜನೆಯಡಿ ಅರ್ಹತೆಗಾಗಿ ಅಥವಾ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿಗಾಗಿ, ಕ್ರೀಡಾ ಪ್ರಶಸ್ತಿಗಳಿಗೆ ಅಥವಾ ಶಾಲಾ ಮತ್ತು ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಪರಿಗಣಿಸಲಾಗುವುದಿಲ್ಲ ಎಂದು ಸಚಿವಾಲಯವು ಹೇಳಿದೆ.

ಮುಂದಿನ ಆದೇಶದವರೆಗೆ ತಾತ್ಕಾಲಿಕ ಸಮಿತಿಯ ಮೇಲ್ವಿಚಾರಣೆಯಲ್ಲಿ ಆಯೋಜಿಸಲಾದ ವಿವಿಧ ವಯೋಮಾನದ ವಿಭಾಗಗಳಿಗೆ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ಗಳನ್ನು ಮಾತ್ರ ಕ್ರೀಡಾ ಸಂಹಿತೆಯ ಅಡಿಯಲ್ಲಿ ಪರಿಗಣಿಸಲಾಗುವುದು ಎಂದು ಇಲಾಖೆಯು ತಿಳಿಸಿದೆ. ಫೆಬ್ರವರಿ 2-5 ರಿಂದ ಜೈಪುರದಲ್ಲಿ ಹಿರಿಯ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳನ್ನು ಆಯೋಜಿಸುವುದಾಗಿ ತಾತ್ಕಾಲಿಕ ಸಮಿತಿಯು ಘೋಷಿಸಿದೆ.

ಭಾರತೀಯ ಕುಸ್ತಿ ಫೆಡರೇಷನ್‌ ಕಳೆದ ಒಂದು ವರ್ಷದಿಂದ ಭಾರೀ ಚರ್ಚೆಯಲ್ಲಿದೆ. ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್‌ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ಬ್ರಿಜ್ ಭೂಷಣ್ ಸಿಂಗ್‌ ಸಿಂಗ್‌ ವಿರುದ್ಧ ಪೋಕ್ಸ್‌ ಸೇರಿ ಹಲವು ಸೆಕ್ಸನ್‌ಗಳಡಿಯಲ್ಲಿ ಕೇಸ್‌ ದಾಖಲಾಗಿದೆ. ಆ ಬಳಿಕ ಇತ್ತೀಚೆಗೆ ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥರನ್ನಾಗಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿಕಟವರ್ತಿ ಸಂಜಯ್ ಸಿಂಗ್‌ನ್ನು ನೇಮಿಸಲಾಗಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶವನ್ನು ಕುಸ್ತಿಪಟುಗಳು ವ್ಯಕ್ತಪಡಿಸಿದ್ದರು. ಸಾಕ್ಷಿ ಮಲಿಕ್‌ ಅವರು ಕುಸ್ತಿಯನ್ನು ತ್ಯಜಿಸುವುದಾಗಿ ಘೋಷಿಸಿದ್ದರು.  ಭಜರಂಗ್ ಪುನಿಯಾ ಅವರು ಪದ್ಮಶ್ರೀ ಮತ್ತು ವಿನೇಶ್ ಫೋಗಟ್ ಅವರು ಅರ್ಜುನ ಪ್ರಶಸ್ತಿ ಮತ್ತು ಖೇಲ್ ರತ್ನವನ್ನು ಹಿಂದಿರುಗಿಸಿದರು. ಆ ಬಳಿಕ ನೂತನ ಸಮಿತಿಯನ್ನು ಅಮಾನತುಗೊಳಿಸಿ ಕ್ರೀಡಾ ಸಚಿವಾಲಯ ಆದೇಶಿಸಿತ್ತು.

ಇದನ್ನು ಓದಿ: ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...