Homeಮುಖಪುಟಒಬಿಸಿ ಪಾಲಿನ ತಟ್ಟೆಯಲ್ಲಿ ಮರಾಠರು ತಿನ್ನಲು ಸಾಧ್ಯವಿಲ್ಲ: ಪ್ರಕಾಶ್ ಅಂಬೇಡ್ಕರ್

ಒಬಿಸಿ ಪಾಲಿನ ತಟ್ಟೆಯಲ್ಲಿ ಮರಾಠರು ತಿನ್ನಲು ಸಾಧ್ಯವಿಲ್ಲ: ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ಇತರ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಮರಾಠರ ಕೋಟಾಗಳನ್ನು ಪ್ರತ್ಯೇಕವಾಗಿ ಇರಿಸಿದರೆ ಮಾತ್ರ ಮಹಾರಾಷ್ಟ್ರದಲ್ಲಿ ಪ್ರಗತಿ ಸಾಧ್ಯ. ಒಬಿಸಿ ಮೀಸಲಾತಿಯ ಪಾಲನ್ನು ಮರಾಠರು ತಿನ್ನಲು ಸಾಧ್ಯವಿಲ್ಲ ಎಂಬುದು ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಪಾಟೀಲ್ ಅವರಿಗೆ ಹೇಳಬೇಕು ಎಂದು ವಂಚಿತ್ ಬಹುಜನ ಅಘಾಡಿ (ವಿಬಿಎ) ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಭಾನುವಾರ ಹೇಳಿದ್ದಾರೆ.

ಮರಾಠರಿಗೆ ಒಬಿಸಿ ಕೋಟಾ ನೀಡಬೇಕು ಎಂದು ಬೇಡಿಕೆ ಇಟ್ಟಿರುವ ಜಾರಂಗೆ ಪಾಟೀಲ್ ಅವರ ಬೇಡಿಕೆಗಳನ್ನು ಎದುರಿಸಲು ಒಬಿಸಿ ಸಂಘಟನೆಗಳು ನಾಂದೇಡ್ ಜಿಲ್ಲೆಯಲ್ಲಿ ಆಯೋಜಿಸಿದ್ದ ರ‍್ಯಾಲಿಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.

‘ರಾಜ್ಯ ಸರ್ಕಾರಕ್ಕೆ ಹೊಸ ಜಾತಿಯನ್ನು ರಚಿಸಲು ಯಾವುದೇ ಅಧಿಕಾರವಿಲ್ಲ. ಆದರೆ, ಅಸ್ತಿತ್ವದಲ್ಲಿರುವ ಜಾತಿಯು ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಮಾತ್ರ ಸಾಧ್ಯ ಎಂದು ಹೇಳಿದರು.

‘ಈಗಿನ ಆಡಳಿತ ವರ್ಗವನ್ನು ಅಲುಗಾಡಿಸಲು ನೀವು ಹೋರಾಟ [ಮರಾಠಾ ಆಂದೋಲನ] ಮಾಡುತ್ತಿದ್ದರೆ ಅದು ಒಳ್ಳೆಯದು ಎಂದು ನಾನು ಜಾರಂಗೆ ಪಾಟೀಲರಿಗೆ ವಿವರಿಸಿದೆ. ಈಗಿನ ಕೊಳೆತ ನಾಯಕತ್ವಕ್ಕೆ ದಲಿತರು, ಒಬಿಸಿಗಳು ಅಥವಾ ಮರಾಠಾ ಸಮುದಾಯದ ಬಡ ವರ್ಗಗಳಿಗೆ ನ್ಯಾಯ ಸಿಗುವುದನ್ನು ನೋಡುವ ಆಸಕ್ತಿಯೇ ಇಲ್ಲ. ಜಾರಂಗೆ ಪಾಟೀಲ್ ನೇತೃತ್ವದಲ್ಲಿ ಹೊಸ [ಮರಾಠ ಸಮುದಾಯ] ನಾಯಕತ್ವವನ್ನು ನಾನು ಸ್ವಾಗತಿಸುತ್ತೇನೆ. ಅವರು ಒಬಿಸಿ ಮೀಸಲಾತಿ ಫಲಕದ ಬಳಿ ಬರಬಾರದು ಎಂದು ಅವರು ತಿಳಿದಿರಬೇಕು’ ಎಂದು ಅಂಬೇಡ್ಕರ್ ಹೇಳಿದರು.

ಜಾರಂಗೆ ಪಾಟೀಲ್ ಮತ್ತು ಮರಾಠರು ಮೀಸಲಾತಿಗಾಗಿ ಬೇರೆ ತಟ್ಟೆ ಬಯಸಿದರೆ, ಒಬಿಸಿಗಳು ಖಂಡಿತವಾಗಿಯೂ ಸಮುದಾಯಕ್ಕೆ ಸಹಾಯ ಮಾಡುತ್ತಾರೆ. ಆಗ ಎರಡೂ ಕೋಟಾಗಳು ಪ್ರತ್ಯೇಕವಾಗಿರುತ್ತವೆ. ಆದರೆ, ನಮ್ಮ ತಟ್ಟೆಯಿಂದ ತಿನ್ನಬೇಡಿ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳೆರಡೂ ಮೀಸಲಾತಿಯನ್ನು ಹೊಂದಿವೆ. ಆದರೆ ಅವು ಪ್ರತ್ಯೇಕ ಕೋಟಾಗಳಾಗಿವೆ. ಮರಾಠ ಮತ್ತು ಒಬಿಸಿ ಕೋಟಾಗಳು ಪ್ರತ್ಯೇಕವಾಗಿ ಉಳಿದರೆ ಮಾತ್ರ ಮಹಾರಾಷ್ಟ್ರದಲ್ಲಿ ಬದಲಾವಣೆ ಸಾಧ್ಯ’ ಎಂದು ಹೇಳಿದರು.

ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಕೇಸರಿ ಪಕ್ಷವು ದೇಶದ ಸಂವಿಧಾನವನ್ನು ಬದಲಾಯಿಸಲು ಸಂಚು ನಡೆಸುತ್ತಿದೆ. ಈ ಸಂವಿಧಾನವನ್ನು ಉಳಿಸಿದರೆ ಮಾತ್ರ, ನಮ್ಮ ಮೀಸಲಾತಿಯು ಉಳಿಯುತ್ತದೆ’ ಎಂದು ಅಂಬೇಡ್ಕರ್ ಹೇಳಿದರು.

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂವಿಧಾನದ ಬಗ್ಗೆ ಬಹಿರಂಗ ಚರ್ಚೆಗೆ ಎಂದಿಗೂ ಮುಂದಾಗುವುದಿಲ್ಲ. ನಮ್ಮ ಸಂವಿಧಾನದಲ್ಲಿ ಯಾವುದು ಕೆಟ್ಟದು ಹೇಳಿ ಎಂದು ನಾನು ಅವರನ್ನು ಕೇಳಲು ಹೊರಟಿದ್ದೆ. ಆದರೆ, ಅವರು ಎಂದಿಗೂ ಮುಖಾಮುಖಿ ಚರ್ಚೆಗೆ ಬರುವುದಿಲ್ಲ’ ಎಂದು ಅಂಬೇಡ್ಕರ್ ಆರೋಪಿಸಿದರು.

ಇದನ್ನೂ ಓದಿ; ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...