Homeಮುಖಪುಟಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ...

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

2002ರ ಗುಜರಾತ್ ಗಲಭೆ ವೇಳೆ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಸದಸ್ಯರ ಹತ್ಯೆ ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರಕಾರದ ಆದೇಶವನ್ನು ಸುಪ್ರೀಂಕೋರ್ಟ್ ಇಂದು ರದ್ದುಗೊಳಿಸಿದೆ.

ಗುಜರಾತ್ ಸರ್ಕಾರ ಅಪರಾಧಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಿ ಅವರನ್ನು ಬಿಡುಗಡೆಗೊಳಿಸುವ ಹಕ್ಕು ಗುಜರಾತ್‌ ಸರ್ಕಾರಕ್ಕಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಇದರಿಂದಾಗಿ ಎಲ್ಲ 11 ಅಪರಾಧಿಗಳು ಮತ್ತೆ ಜೈಲಿಗೆ ಹೋಗಬೇಕಾಗಿದೆ.

2022ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು ಅಪರಾಧಿಗಳನ್ನು ಬಿಡುಗಡೆ ಮಾಡಿದೆ. ಅಪರಾಧಿಗಳಾದ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶಾಮ್‌ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್ ಚಂದನಾ ಅವರನ್ನು ಬಿಡುಗಡೆ ಮಾಡಲಾಗಿತ್ತು. ಇದು ಪ್ರತಿಪಕ್ಷಗಳು, ಮತ್ತು ನಾಗರಿಕ ಸಮಾಜದಿಂದ ಖಂಡನೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು.

ಜೈಲಿನಿಂದ ಬಿಡುಗಡೆಯಾದ ಅಪರಾಧಿಗಳಿಗೆ ಅದ್ದೂರಿ ಸ್ವಾಗತ ಮಾಡಲಾಗಿತ್ತು. ಆ ಬಳಿಕ ಅಪರಾಧಿಗಳು ಬಿಜೆಪಿ ಸಂಸದ ಮತ್ತು ಶಾಸಕರೊಂದಿಗೆ ವೇದಿಕೆ ಹಂಚಿಕೊಂಡಿರುವುದು ಕೂಡ ಕಂಡುಬಂದಿದೆ. ಅಪರಾಧಿಗಳಲ್ಲಿ ಒಬ್ಬರಾದ ರಾಧೇಶ್ಯಾಮ್ ಶಾ ಅವರು ವಕೀಲಿ ವೃತ್ತಿಯನ್ನು ಪ್ರಾರಂಭಿಸಿದ್ದರು. ಇದನ್ನು ಸುಪ್ರೀಂಕೋರ್ಟ್‌ನ ಗಮನಕ್ಕೆ ತರಲಾಗಿತ್ತು.

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬದ ಸದಸ್ಯರ ಹತ್ಯೆ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್‌ ಬಾನು, ತೃಣಮೂಲ ಕಾಂಗ್ರೆಸ್‌ ಪಕ್ಷದ ಮಹುವಾ ಮೊಯಿತ್ರಾ, ಸಿಪಿಐ(ಎಂ) ಪಾಲಿಟ್‌ ಬ್ಯುರೋ ಸದಸ್ಯೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್‌ ಹಾಗೂ ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್‌ ರೇಖಾ ವರ್ಮಾ ಸಹಿತ ಹಲವರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸುಪ್ರೀಂ ಕೋರ್ಟ್‌ 11 ದಿನಗಳ ಕಾಲ ಅರ್ಜಿ ವಿಚಾರಣೆ ನಡೆಸಿದ್ದು, ಅಕ್ಟೋಬರ್‌ನಲ್ಲಿ ತೀರ್ಪು ಕಾಯ್ದಿರಿಸಿತ್ತು.

1992ರ ಶಿಕ್ಷೆ ಕಡಿತ ನೀತಿಯಾನುಸಾರ ಗುಜರಾತ್‌ ಸರ್ಕಾರ ಅಪರಾಧಿಗಳನ್ನು ಬಿಡುಗಡೆಗೊಳಿಸಿತ್ತು. ಆದರೆ ಈ ಕಾನೂನಿನ ಸ್ಥಾನದಲ್ಲಿ 2014ರಲ್ಲಿ ಜಾರಿಗೊಳಿಸಲಾದ ಕಾನೂನಿನ ಪ್ರಕಾರ ದೊಡ್ಡ ಶಿಕ್ಷೆ ಎದುರಿಸುವ ಪ್ರಕರಣಗಳಲ್ಲಿ ಶಿಕ್ಷೆ ಕಡಿತಗೊಳಿಸುವುದನ್ನು ನಿಷೇಧಿಸಲಾಗಿದೆ.

1992ರ ನೀತಿಯ ಪ್ರಕಾರ ಕ್ಷಮಾಧಾನ ನಿರ್ಧರಿಸಲು ಗುಜರಾತ್ ಸರ್ಕಾರಕ್ಕೆ ನಿರ್ದೇಶಿಸಿದ ಮೇ 13, 2022ರ ಸುಪ್ರೀಂಕೋರ್ಟ್‌ ಆದೇಶವನ್ನು ಸತ್ಯಗಳನ್ನು ಮರೆಮಾಚುವ ಮೂಲಕ ಪಡೆಯಲಾಗಿದೆ ಎಂದು ಪೀಠವು ಹೇಳಿದೆ. ಬಿಲ್ಕಿಸ್ ಬಾನು ಪ್ರಕರಣವನ್ನು ಮುಕ್ತ ಮತ್ತು ನ್ಯಾಯಯುತ ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಯಿತು. ಆದ್ದರಿಂದ ಮಹಾರಾಷ್ಟ್ರ ಸರ್ಕಾರ ಮಾತ್ರವೇ ಹೊರತು ಗುಜರಾತ್ ಸರ್ಕಾರವು ಕ್ಷಮಾಧಾನ ನೀಡಲು ಅರ್ಹತೆ ಹೊಂದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. 2004ರಲ್ಲಿ ಪ್ರಕರಣದ ವಿಚಾರಣೆಯನ್ನು ಗುಜರಾತ್‌ನಿಂದ ಮುಂಬೈಗೆ ವರ್ಗಾಯಿಸಲಾಗಿತ್ತು.

ಜೈಲಿನಲ್ಲಿ 14 ವರ್ಷಗಳನ್ನು ಪೂರ್ಣಗೊಳಿಸಿದ ಕಾರಣ ಮತ್ತು ವಯಸ್ಸು, ಅಪರಾಧದ ಸ್ವರೂಪ, ಜೈಲಿನಲ್ಲಿನ ನಡವಳಿಕೆ ಮುಂತಾದ ಅಂಶಗಳಿಂದಾಗಿ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗುಜರಾತ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜ್ ಕುಮಾರ್ ಹೇಳಿದ್ದರು.

ಇದನ್ನು ಓದಿ; ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...