Homeಅಂತರಾಷ್ಟ್ರೀಯಇಸ್ರೇಲ್‌ ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ: ಆಂಟೋನಿ ಬ್ಲಿಂಕೆನ್

ಇಸ್ರೇಲ್‌ ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ: ಆಂಟೋನಿ ಬ್ಲಿಂಕೆನ್

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್‌ ನಡೆಸುವ ಯುದ್ಧ ಅಪರಾಧಕ್ಕೆ ಅಮೆರಿಕಾ ಬೆಂಬವನ್ನು ನೀಡುತ್ತಿದೆ. ಈ ಮೊದಲು ಅಮೆರಿಕ ಇಸ್ರೇಲ್‌ಗೆ ಶಸ್ತ್ರಶಸ್ತ್ರಗಳನ್ನು, ಯುದ್ಧ ವಿಮಾನಗಳನ್ನು ಕಳುಹಿಸಿತ್ತು. ಕದನ ವಿರಾಮಕ್ಕೆ ಆಗ್ರಹಿಸಿದ ಯುಎನ್‌ ನಿರ್ಣಯವನ್ನು ಕೂಡ ಯುಎಸ್‌ ತನ್ನ ವಿಟೋ ಅಧಿಕಾರ ಬಳಸಿ ತಡೆ ನೀಡಿತ್ತು. ಇದೀಗ ಇಸ್ರೇಲ್‌ ಹತ್ಯಾಕಾಂಡದ ಬಗ್ಗೆ US ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಕಳವಳ ವ್ಯಕ್ತಪಡಿಸಿದ್ದು, ಗಾಝಾದಲ್ಲಿನ ನಾಗರಿಕರನ್ನು ರಕ್ಷಿಸುವಂತೆ ಆಗ್ರಹಿಸಿದ್ದಾರೆ.

ಕತಾರ್‌ಗೆ ಬೇಟಿ ನೀಡಿದ ಆಂಟೋನಿ ಬ್ಲಿಂಕೆನ್, ಹಲವಾರು ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರು ಈಗಾಗಲೇ ಕೊಲ್ಲಲ್ಪಟ್ಟಿದ್ದಾರೆ. ಅಲ್ ಜಜೀರಾ ಪತ್ರಕರ್ತರಾದ ಹಮ್ಜಾ ವೇಲ್ ಅಲ್-ದಹದೌ ಮತ್ತು ಮುಸ್ತಫಾ ತುರಾಯ ಅವರ ಹತ್ಯೆ ಊಹಿಸಲಾಗದ ದುರಂತ ಎಂದು ಆಂಟೋನಿ ಬ್ಲಿಂಕೆನ್ ಅವರು ಹೇಳಿದ್ದಾರೆ.

ಪ್ಯಾಲೆಸ್ತೀನ್‌ ನಾಗರಿಕರಿಗೆ ತಮ್ಮ ಮನೆಗೆ ಮರಳಲು ಅವಕಾಶ ನೀಡಬೇಕು ಮತ್ತು ನಾಗರಿಕರನ್ನು ಗಾಝಾ ಪಟ್ಟಿಯಿಂದ ಸ್ಥಳಾಂತರಿಸಬಾರದು ಎಂದು ಬ್ಲಿಂಕನ್ ಹೇಳಿದ್ದಾರೆ. ಒಂದು ವಾರದ ಬಳಿಕ ಆಂಟೋನಿ ಬ್ಲಿಂಕೆನ್ ಇಸ್ರೇಲ್‌ಗೆ ಭೇಟಿ ನೀಡಲಿದ್ದು, ಗಾಝಾದಲ್ಲಿ ನಾಗರಿಕರ ಸಾವುನೋವುಗಳನ್ನು ತಡೆಗಟ್ಟಲು ಹೆಚ್ಚಿನದನ್ನು ಮಾಡುವ ಅಗತ್ಯವನ್ನು ಹೇಳಿದ್ದಾರೆ.

ಅದೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕತಾರ್ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅಲ್ ಥಾನಿ, ಮಂಗಳವಾರ ಲೆಬನಾನ್‌ನಲ್ಲಿ ಹಿರಿಯ ಹಮಾಸ್ ಅಧಿಕಾರಿಯ ಹತ್ಯೆಯು ಇಸ್ರೇಲ್ ಮತ್ತು ಹಮಾಸ್ ನಡುವೆ ಮಾತುಕತೆ ನಡೆಸುವ ಕತಾರ್ ಪ್ರಯತ್ನಗಳ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಇಬ್ಬರು ಪತ್ರಕರ್ತರ ಹತ್ಯೆ

ಗಾಝಾದ ಸ್ವತಂತ್ರ ಪತ್ರಕರ್ತರಾದ ಹಮ್ಜಾ ವೇಲ್ ಅಲ್-ದಹದೌಹ್ ಮತ್ತು ಮುಸ್ತಫಾ ತುರಾಯಾ ಅವರು ದಕ್ಷಿಣ ಗಾಝಾದಲ್ಲಿ ರಫಾ ಮತ್ತು ಖಾನ್ ಯೂನಿಸ್ ನಡುವೆ ತೆರಳುವಾಗ ಮೃತಪಟ್ಟಿದ್ದಾರೆ. ಇತ್ತೀಚೆಗೆ ಇಸ್ರೇಲ್‌ ಬಾಂಬ್ ದಾಳಿ ಮಾಡಿದ ವಲಯಕ್ಕೆ ವರದಿ ಮಾಡಲು ಹೊರಟಿದ್ದ ವೇಳೆ ಇಸ್ರೇಲ್‌ ದಾಳಿಗೆ ಇವರು ಬಲಿಯಾಗಿದ್ದಾರೆ.

ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ಪೋಸ್ಟ್ ಮಾಡಲಾದ ವೀಡಿಯೊವು ವೇಲ್ ಅಲ್-ದಹದೌಹ್ ತನ್ನ ಮಗನ ದೇಹದ ಪಕ್ಕದಲ್ಲಿ ಅಳುತ್ತಿರುವುದನ್ನು ಮತ್ತು ಅವನ ಕೈಯನ್ನು ಹಿಡಿದಿರುವುದನ್ನು ತೋರಿಸಿದೆ.

ಅಲ್ ಜಝೀರಾ ಮೀಡಿಯಾ ನೆಟ್‌ವರ್ಕ್, ಇಸ್ರೇಲ್‌ ಪಡೆಗಳು ಪ್ಯಾಲೆಸ್ತೀನ್‌ ಪತ್ರಕರ್ತರ ಕಾರನ್ನು ಗುರಿಯಾಗಿಸಿಕೊಂಡಿರುವುದನ್ನು ಬಲವಾಗಿ ಖಂಡಿಸುತ್ತದೆ ಎಂದು ಹೇಳಿದ್ದು, ಇಸ್ರೇಲ್ ಪತ್ರಿಕಾ ಸ್ವಾತಂತ್ರ್ಯದ ತತ್ವಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದೆ.

ಘಟನೆಯ ಬಗ್ಗೆ ಇಸ್ರೇಲ್‌ ಸೇನೆಯು ತಕ್ಷಣ ಪ್ರತಿಕ್ರಿಯಿಸಲಿಲ್ಲ. ಶನಿವಾರದವರೆಗೆ 77 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಸಂಘರ್ಷವನ್ನು ವರದಿ ಮಾಡುವಾಗ ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತರಾಷ್ಟ್ರೀಯ ಮಾಧ್ಯಮ ಹಕ್ಕುಗಳ ವಾಚ್‌ಡಾಗ್‌ನ ಪತ್ರಕರ್ತರ ರಕ್ಷಣಾ ಸಮಿತಿ ಹೇಳಿದೆ. ಇದರಲ್ಲಿ 70 ಪ್ಯಾಲೆಸ್ತೀನಿಯನ್ನರು, ನಾಲ್ವರು ಇಸ್ರೇಲ್‌ ಪತ್ರಕರ್ತರು ಮತ್ತು ಮೂವರು ಲೆಬನಾನಿ ಪತ್ರಕರ್ತರು ಮೃತಪಟ್ಟಿದ್ದಾರೆ. ಇವರು ರಾಯಿಟರ್ಸ್, ಏಜೆನ್ಸ್ ಫ್ರಾನ್ಸ್-ಪ್ರೆಸ್ ಮತ್ತು ಟರ್ಕಿಯ ಅನಾಡೋಲು ಸುದ್ದಿ ಸಂಸ್ಥೆ ಸೇರಿದಂತೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನು ಓದಿ: ಬಿಲ್ಕಿಸ್ ಬಾನು ಪ್ರಕರಣ; 2 ವಾರಗಳಲ್ಲಿ ಜೈಲಿಗೆ ಮರಳುವಂತೆ 11 ಅಪರಾಧಿಗಳಿಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...