Homeಮುಖಪುಟದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

ದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

- Advertisement -
- Advertisement -

ತಮಿಳುನಾಡಿನ ಉದುಮಲ್‌ಪೇಟ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೋರ್ವನ ಕೊಲೆ ಪ್ರಕರಣದ ಆರೋಪಿಗಳು ಸಂತ್ರಸ್ತನ ಕುಟುಂಬಕ್ಕೆ ಪ್ರಕರಣವನ್ನು ಕೈಬಿಡುವಂತೆ ಹಣದ ಆಮಿಷ ಮತ್ತು ಬೆದರಿಕೆಯನ್ನು ಹಾಕಿದ್ದಾರೆ. ಈ ಕುರಿತು ಸಂತ್ರಸ್ತನ ಕುಟುಂಬವೇ ಹೇಳಿಕೆಯನ್ನು ನೀಡಿದ್ದು, ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪದ ಆರೋಪವನ್ನು ಮಾಡಿದ್ದಾರೆ.

2023ರ ನ.27ರಂದು ಪರಿಶಿಷ್ಟ ಪಂಗಡದ ನರಿಕುರವರ್ ಸಮುದಾಯಕ್ಕೆ ಸೇರಿದ ಸೆಂಕೋಟ್ಟೈ (55) ಅವರನ್ನು ಉದುಮಲಪೇಟೆಯ ತಾಂಥೋಣಿಯಲ್ಲಿ ಥಳಿಸಿ ಹತ್ಯೆ ಮಾಡಲಾಗಿತ್ತು. ಉದುಮಲಪೇಟೆ ಪೊಲೀಸರು ದುಷ್ಕರ್ಮಿಗಳ ಪರವಾಗಿ ನಿಂತಿದ್ದಾರೆ ಮತ್ತು ವೀಡಿಯೊ ಸಾಕ್ಷ್ಯವನ್ನು ನಾಶಪಡಿಸಿದ್ದಾರೆ ಎಂದು ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್ ಆರೋಪಿಸಿದ್ದಾರೆ.

ಏನಿದು ಘಟನೆ?

2023ರ ನ.27ರಂದು ಸೆಂಕೋಟ್ಟೈ ತನ್ನ ಸೋದರಳಿಯ ಕುಮಾರ್ (25) ಜೊತೆಗೆ ತಾಂಥೋನಿಯಲ್ಲಿ  ಪಕ್ಷಿಗಳನ್ನು ಬೇಟೆಯಾಡುತ್ತಿದ್ದರು ಎನ್ನಲಾಗಿದೆ. ಎಫ್‌ಐಆರ್‌ನಲ್ಲಿ ಕುಮಾರ್ ಉಲ್ಲೇಖದ ಪ್ರಕಾರ, ಅವರು ಬೇಟೆಯಾಡಲು ಬಳಸಿದ ಕಲ್ಲು ಸೆಲ್ವಕುಮಾರ್ ಎಂಬವರ ಮನೆಯ ಮೇಲ್ಛಾವಣಿಗೆ ಬಿದ್ದಿದೆ. ಇದೇ ಕಾರಣಕ್ಕೆ  ಆರೋಪಿಗಳು ಆತನ ವಿರುದ್ಧ ಕೋಳಿ ಕಳ್ಳತನಕ್ಕೆ ಯತ್ನಿಸಿದ್ದಾನೆಂದು ನಿಂದಿಸುತ್ತಾರೆ. ಬಳಿಕ ಇತರರನ್ನು ಗುಂಪು ಸೇರಿಸಿ ಕುಮಾರ್ ಮತ್ತು ಸೆಂಕೋಟ್ಟೈ ಅವರನ್ನು ಎರಡು ಮರಗಳಿಗೆ ಕಟ್ಟಿಹಾಕಿ ಥಳಿಸಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಸೆಂಕೋಟ್ಟೈ ಅವರನ್ನು ಉದುಮಲ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಹಲ್ಲೆಯಿಂದ ಕುಮಾರ್‌ಗೆ ತೀವ್ರ ಗಾಯಗಳಾಗಿದ್ದವು. ಕುಮಾರ್ ಅದೇ ದಿನ ಪೊಲೀಸ್ ದೂರು ನೀಡಿದ್ದಾರೆ ಮತ್ತು ಸೆಲ್ವಕುಮಾರ್ ಮತ್ತು ಇತರ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರಕಾರಣವನ್ನು ಕೈಬಿಡಲು ಆಮಿಷ

ಇದೀಗ ಸೆಂಕೋಟ್ಟೈ ಅವರ ಕುಟುಂಬ ಪ್ರಕಾರಣವನ್ನು ಕೈಬಿಡಲು ನಮಗೆ ಆರೋಪಿಗಳು ಹಣದ ಆಮಿಷ ನೀಡುತ್ತಿದ್ದಾರೆ, ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್, ದುಷ್ಕರ್ಮಿಗಳ ಬಳಿ ಇರುವ ವಿಡಿಯೋ ಸಾಕ್ಷ್ಯವನ್ನು ಸಂಗ್ರಹಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ. ಇಬ್ಬರು ವ್ಯಕ್ತಿಗಳು ಕುಮಾರ್ ಮತ್ತು ಸೆಂಕೋಟ್ಟೈ ದೈಹಿಕವಾಗಿ ಹಲ್ಲೆ ಮಾಡಿದ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ. ಆ ವೀಡಿಯೊಗಳನ್ನು ಅಳಿಸಲು ಪೊಲೀಸರು ಅವರನ್ನು ಕೇಳಿದ್ದಾರೆ ಎಂದು ನಾವು ಅನುಮಾನಿಸುತ್ತೇವೆ. ಗ್ರಾಮದಲ್ಲಿ ಪ್ರಬಲ ಬಹುಸಂಖ್ಯಾತರಾಗಿರುವ ಗೌಂಡರ್ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಪೊಲೀಸರು ಅವರ ಪರ ನಿಂತಿದ್ದಾರೆ ಎಂದು ಥಾನರಾಜ್ ಅವರು ಹೇಳಿದ್ದಾರೆ.

ತಮಿಳುನಾಡು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗವು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ವಿಚಾರಣೆ ನಡೆಸಬೇಕು. ಆರೋಪಿಗಳಿಗೆ ಶಿಕ್ಷಿಯನ್ನು ಕೊಡಿಸಿದರೆ ಅದು ಬುಡಕಟ್ಟು ಸಮುದಾಯಕ್ಕೆ ಭಯ ಮುಕ್ತವಾಗಿ ಬದುಕಲು ಸಹಾಯ ಮಾಡುತ್ತದೆ. ಸೆಂಕೋಟ್ಟೈ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಅವರ ಮಕ್ಕಳಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಥಾನರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪೊಲೀಸ್‌ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅವರು ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಅಥವಾ ಆರೋಪಿ ಸೆಲ್ವಕುಮಾರ್ ಪರ ನಿಂತಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದು, ನಮಗೆ ತಿಳಿದಿರುವಂತೆ ಯಾವುದೇ ವೀಡಿಯೊಗಳಿಲ್ಲ ಮತ್ತು ಪ್ರಕರಣದಲ್ಲಿ ಹೆಸರಿಸಲಾದವರ ಆರೋಪಿಗಳ ಫೋನ್‌ಗಳನ್ನು ನಾವು ಪರಿಶೀಲಿಸಿದ್ದೇವೆ ಎಂದು ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಸೆಲ್ವಕುಮಾರ್ ಸೇರಿದಂತೆ ನಾಲ್ವರನ್ನು ಮಾತ್ರ ಕುಮಾರ್ ಉಲ್ಲೇಖಿಸಿದ್ದರು. ಅವರಿಗೆ ಇತರ ಆರೋಪಿಗಳ ಹೆಸರುಗಳು ತಿಳಿದಿರಲಿಲ್ಲ. ನಾವು ತನಿಖೆಯ ವೇಳೆ ಹೆಚ್ಚಿನ ವ್ಯಕ್ತಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಕಂಡುಕೊಂಡಿದ್ದೇವೆ. ಈವರೆಗೆ ಆರು ಮಂದಿಯನ್ನು ರಿಮಾಂಡ್ ಮಾಡಿದ್ದೇವೆ. ಉದುಮಲ್‌ಪೇಟೆಯ ಉಪ ಪೊಲೀಸ್ ಆಯುಕ್ತ ಜೆ ಸುಕುಮಾರನ್ ಅವರು ತನಿಖೆಯ ನೇತೃತ್ವವನ್ನು ವಹಿಸಿಕೊಂಡಿದ್ದಾರೆ. ಪೊಲೀಸ್ ತನಿಖೆಯ ವೇಳೆ ಹೆಚ್ಚಿನ ಆರೋಪಿಗಳು ಶಾಮೀಲಾಗಿರುವುದು ಕಂಡು ಬಂದರೆ ಹೆಚ್ಚಿನ ಜನರನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 294 (b), 342, 324, 506, 302 ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...