Homeಮುಖಪುಟಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆ 'ಪ್ರಜಾಪ್ರಭುತ್ವ ವಿರೋಧಿ': ಸಿಪಿಐ(ಎಂ)

ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆ ‘ಪ್ರಜಾಪ್ರಭುತ್ವ ವಿರೋಧಿ’: ಸಿಪಿಐ(ಎಂ)

- Advertisement -
- Advertisement -

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಪತ್ರ ಬರೆದಿದ್ದು, ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತ ಪ್ರಸ್ತಾವನೆಯು ‘ಪ್ರಜಾಪ್ರಭುತ್ವ ವಿರೋಧಿ’ ಮತ್ತು ಸಂವಿಧಾನದ ಪ್ರಕಾರ ಒಕ್ಕೂಟ ವ್ಯವಸ್ಥೆಯ ಮೂಲಭೂತ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತ ಉನ್ನತ ಮಟ್ಟದ ಸಮಿತಿಗೆ ಅವರು ಬರೆದ ಪತ್ರದಲ್ಲಿ, ಸಮಿತಿಗೆ ಸಿಪಿಐ(ಎಂ) ವಿರೋಧವನ್ನು ವ್ಯಕ್ತಪಡಿಸಿದ್ದು, ಸಮಿತಿಯ ಕಾರ್ಯಸೂಚಿ ಮತ್ತು ಉದ್ದೇಶವು ಪೂರ್ವ ನಿರ್ಧಾರಿತವಾಗಿದೆ. ಸಿಪಿಐ(ಎಂ) ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿದಾಗಿನಿಂದಲೂ ತನ್ನ ವಿರೋಧ ವ್ಯಕ್ತಪಡಿಸಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯನ್ನು ಹೇರಲು ಪ್ರಯತ್ನಿಸುತ್ತಿರುವುದಕ್ಕೆ ಪಕ್ಷದ ಬಲವಾದ ಆಕ್ಷೇಪಣೆಯನ್ನು ಉಲ್ಲೇಖಿಸಿದ ಅವರು, ಪ್ರಸ್ತಾವನೆಯು ಸಂವಿಧಾನದ ತತ್ವಗಳು ಮತ್ತು ಆತ್ಮಕ್ಕೆ ವಿರುದ್ಧವಾಗಿದೆ ಎಂದು ಯೆಚೂರಿ ಹೇಳಿದ್ದಾರೆ.

ಸಂವಿಧಾನದ ಪೀಠಿಕೆಯನ್ನು ಉಲ್ಲೇಖಿಸಿದ ಅವರು, ಚುನಾಯಿತ ಪ್ರತಿನಿಧಿಗಳು ಜನರಿಗೆ ಮತ್ತು ಕಾರ್ಯಾಂಗಕ್ಕೆ ಹೊಣೆಗಾರರಾಗಿದ್ದಾರೆ ಅಥವಾ ಚುನಾವಣೆಯ ಪರಿಣಾಮವಾಗಿ ಅಧಿಕಾರ ವಹಿಸಿಕೊಳ್ಳುವ ಸರ್ಕಾರವು ಶಾಸಕಾಂಗಕ್ಕೆ ಜವಾಬ್ದಾರರಾಗಿರುತ್ತಾರೆ. ನಮ್ಮ ಸಂವಿಧಾನದ ಈ ಅಂಶಗಳನ್ನು ತಿರುಚಲಾಗುವುದಿಲ್ಲ, ದುರ್ಬಲಗೊಳಿಸುವುದನ್ನು ಬಿಟ್ಟುಬಿಡುವುದಿಲ್ಲ ಎಂದು ನಾವು ನಂಬುತ್ತೇವೆ. ಅಂತಹ ಪ್ರಸ್ತಾಪವು ಅಂತರ್ಗತವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಮತ್ತು ನಮ್ಮ ಒಕ್ಕೂಟ ವ್ಯವಸ್ಥೆಯ ಮೂಲಭೂತ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ ಅವರು, 2018ರಲ್ಲಿ ಕಾನೂನು ಆಯೋಗಕ್ಕೆ ಸಲ್ಲಿಸಿದ ಟಿಪ್ಪಣಿಯನ್ನು ಉಲ್ಲೇಖಿಸಿದ್ದಾರೆ.

ಸಮಿತಿಯ ಅಕ್ಟೋಬರ್ 18, 2023ರ ಪತ್ರವು ಏಕಕಾಲದಲ್ಲಿ ಚುನಾವಣೆಗಳನ್ನು ಆಯೋಜಿಸಲು ಸೂಕ್ತವಾದ ಕಾನೂನು ತಿದ್ದುಪಡಿ ಮತ್ತು ಆಡಳಿತಾತ್ಮಕ ಚೌಕಟ್ಟನ್ನು ನಿರ್ಮಿಸಲು ಶಿಫಾರಸುಗಳನ್ನು ಮಾಡುವುದು ಸಮಿತಿಯ ಕಾರ್ಯವಾಗಿದೆ ಎಂದು ಹೇಳಿದೆ. ಇದರಿಂದ ಏಕಕಾಲಿಕ ಚುನಾವಣೆಯ ಬಗ್ಗೆ ನಿರ್ಧಾರವನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ ಮತ್ತು ಈಗ ಅದರ ಅನುಷ್ಠಾನದ ಪ್ರಶ್ನೆಯಾಗಿದೆ ಎಂಬುವುದು ತಿಳಿದು ಬರುತ್ತದೆ ಎಂದು ಹೇಳಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೆ ನಡೆಸಲು ಸಂವಿಧಾನಕ್ಕೆ ತಿದ್ದುಪಡಿ ಮಾಡಬೇಕಾಗುತ್ತದೆ. ಸಂವಿಧಾನದ ಅಡಿಯಲ್ಲಿ, ಒಂದು ಸರ್ಕಾರವು ಅವಿಶ್ವಾಸ ನಿರ್ಣಯದ ವೇಳೆ ಶಾಸಕಾಂಗದ ವಿಶ್ವಾಸವನ್ನು ಕಳೆದುಕೊಂಡರೆ ರಾಜೀನಾಮೆ ನೀಡಬೇಕು. ಪರ್ಯಾಯ ಸರ್ಕಾರ ರಚಿಸಲಾಗದಿದ್ದರೆ, ಸದನವನ್ನು ವಿಸರ್ಜಿಸಿ ಮಧ್ಯಂತರ ಚುನಾವಣೆಗೆ ಹೋಗಬೇಕಿದೆ. ಲೋಕಸಭೆ ಅಥವಾ ಶಾಸಕಾಂಗದ ಜೀವಿತಾವಧಿಯನ್ನು ವಿಸ್ತರಿಸುವ ಯಾವುದೇ ಪ್ರಯತ್ನವು ಸಂವಿಧಾನ ವಿರೋಧಿ ಮಾತ್ರವಲ್ಲದೆ ಪ್ರಜಾಪ್ರಭುತ್ವ ವಿರೋಧಿಯೂ ಆಗಿರುತ್ತದೆ ಎಂದು ಸಿಪಿಐ(ಎಂ) ಹೇಳಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಸಂವಿಧಾನದ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಕುರಿತು ಪರಿಶೀಲಿಸಿ ಶಿಫಾರಸುಗಳನ್ನು  ಮಾಡಲು ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಂವಿಧಾನ, ಜನಪ್ರತಿನಿಧಿ ಕಾಯಿದೆ-1950 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು ಮತ್ತು ಇತರ ಕಾನೂನುಗಳಿಗೆ ನಿರ್ದಿಷ್ಟ ತಿದ್ದುಪಡಿಗಳನ್ನು ಪರಿಶೀಲಿಸಲು ಮತ್ತು ತಿದ್ದುಪಡಿ ಕುರಿತ ಶಿಫಾರಸ್ಸಿಗೆ ಸಮಿತಿ ರಚಿಸಲಾಗಿದೆ.

ಸೆ.1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು  ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ಜೊತೆ ನಡೆಸಿದ ಸಭೆಯ ಬಳಿಕ ಏಕಕಾಲದಲ್ಲಿ ಸಂಸತ್ತಿಗೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸುವ ಬಗ್ಗೆ ಪರಿಶೀಲಿಸಲು ಕೋವಿಂದ್ ಅವರ ನೇತೃತ್ವದ ಸಮಿತಿ ರಚಿಸಿದ್ದರು.

ಸರ್ಕಾರದ ಸೆ.1ರ ಅಧಿಸೂಚನೆಯಲ್ಲಿ ಕೋವಿಂದ್ ಅವರನ್ನು ಹೊರತುಪಡಿಸಿ, ಸಮಿತಿಯಲ್ಲಿ ಅಮಿತ್‌ ಶಾ, ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ. ಸಿಂಗ್, ಹಿರಿಯ ವಕೀಲ ಹರೀಶ್ ಸಾಳ್ವೆ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇತರ ಸದಸ್ಯರಾಗಿದ್ದರು. ಅಧೀರ್ ರಂಜನ್ ಚೌದರಿ ಸಮಿತಿಯ ಭಾಗವಾಗಲು ನಿರಾಕರಿಸಿದ್ದರು.

ಇದನ್ನು ಓದಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...