Homeಮುಖಪುಟಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

ಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

- Advertisement -
- Advertisement -

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14 ಮಂದಿಯ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್‌ ಸರಕಾರದ ಆದೇಶನ್ನು ಇಂದು ಸುಪ್ರೀಂಕೋರ್ಟ್‌ ರದ್ದುಗೊಳಿಸಿ ತೀರ್ಪು ನೀಡಿತ್ತು, ಈ ಐತಿಹಾಸಿಕ ತೀರ್ಪಿನ ಬಗ್ಗೆ ಬಿಲ್ಕಿಸ್ ಬಾನು  ಆಶಾಭಾವನೆಯನ್ನು ವ್ಯಕ್ತಪಡಿಸಿದ್ದಾರೆ, ಆದರೆ ವಿಜಯದ ಸಂತಸದಲ್ಲಿಲ್ಲ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿದೆ.

ಕ್ಷಮಾಧಾನ ನೀಡುವ ವಿಷಯದಲ್ಲಿ ಗುಜರಾತ್ ಸರ್ಕಾರದ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದರಿಂದ ಕುಟುಂಬಕ್ಕೆ ನಿರಾಳವಾಗಿದೆ ಎಂದು ಮೂಲಗಳು ತಿಳಿಸಿವೆ. ನ್ಯಾಯಾಲಯದ ಪ್ರಕ್ರಿಯೆಗಳು ಮುಕ್ತಾಯಗೊಳ್ಳದ ಕಾರಣ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಕುಟುಂಬ ನಿರಾಕರಿಸಿದೆ.

ಬಿಲ್ಕಿಸ್‌ಗೆ ನಿಕಟವಾದ ಮೂಲವೊಂದು ಹೇಳುವಂತೆ, ಸುಪ್ರೀಂಕೋರ್ಟ್‌ ಆದೇಶವು ನ್ಯಾಯಾಂಗದಲ್ಲಿ ನಮ್ಮ ನಂಬಿಕೆಯನ್ನು ಮರುಸ್ಥಾಪಿಸಿದೆ ಮತ್ತು ನ್ಯಾಯವು ಜೀವಂತವಾಗಿದೆ ಎಂದು ನಮಗೆ ಸಮಾಧಾನವನ್ನು ನೀಡುತ್ತದೆ. ಆದರೆ ನಾವು ಇನ್ನೂ ವಿಜಯದ ಸಂತಸದಲ್ಲಿಲ್ಲ, ಏಕೆಂದರೆ ಅಪರಾಧಿಗಳು ಬೇರೆ ರಾಜ್ಯದಿಂದ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಲು ಸಿದ್ಧರಾಗುತ್ತಾರೆ. ಅಪರಾಧಿಗಳು ಕ್ಷಮಾಪಣೆಗಾಗಿ ಅರ್ಜಿ ಸಲ್ಲಿಸುವಾಗ ಜೈಲಿನ ಹೊರಗೆ ಉಳಿಯುವ ಬಗ್ಗೆ ಅಪರಾಧಿಗಳ ಮನವಿಯನ್ನು ನ್ಯಾಯಾಲಯವು ಪರಿಗಣಿಸುತ್ತದೆಯೇ ಎಂಬುದು ಸದ್ಯಕ್ಕೆ ನಮ್ಮ ಮನಸ್ಸಿನಲ್ಲಿರುವ ಒಂದು ಸಂದೇಹವಾಗಿದೆ. ಅವರನ್ನು ಮತ್ತೆ ಜೈಲಿಗೆ ಕಳುಹಿಸುವವರೆಗೂ ನಮ್ಮ ಹೋರಾಟ ಕೊನೆಗೊಂಡಂತೆ ಕಂಡು ಬರುವುದಿಲ್ಲ ಎಂದು ಹೇಳಿದ್ದಾರೆ.

ಆಗಸ್ಟ್ 2022ರಲ್ಲಿ ಅಪರಾಧಿಗಳನ್ನು ಕ್ಷಮಾದಾನದ ಮೂಲಕ ಗುಜರಾತ್‌ ಸರಕಾರ ಬಿಡುಗಡೆಗೊಳಿಸಿದ ಬಳಿಕ    ಬಿಲ್ಕಿಸ್ ಮತ್ತು ಅವರ ಕುಟುಂಬವು ಅಜ್ಞಾತ ಸ್ಥಳದಲ್ಲಿ ವಾಸಿಸುತ್ತಿದ್ದಾರೆ.

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14ಮಂದಿಯನ್ನು ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಗುಜರಾತ್‌ ಸರಕಾರ ಬಿಡುಗಡೆ ಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್‌ ಬಾನು, ತೃಣಮೂಲ ಕಾಂಗ್ರೆಸ್‌ ಪಕ್ಷದ ಮಹುವಾ ಮೊಯಿತ್ರಾ, ಸಿಪಿಐ(ಎಂ) ಪಾಲಿಟ್‌ ಬ್ಯುರೋ ಸದಸ್ಯೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್‌ ಹಾಗೂ ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್‌ ರೇಖಾ ವರ್ಮಾ ಸಹಿತ ಹಲವರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸುಪ್ರೀಂ ಕೋರ್ಟ್‌ 11 ದಿನಗಳ ಕಾಲ ಅರ್ಜಿ ವಿಚಾರಣೆ ನಡೆಸಿದ್ದು, ಅಕ್ಟೋಬರ್‌ನಲ್ಲಿ ತೀರ್ಪು ಕಾಯ್ದಿರಿಸಿತ್ತು.

ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಇಂದು ಗುಜರಾತ್‌ ಸರಕಾರದ ಆದೇಶನ್ನು ರದ್ದುಗೊಳಿಸಿ, ಅಪರಾಧಿಗಳಿಗೆ ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸೂಚಿಸಿದೆ. 1992ರ ನೀತಿಯ ಪ್ರಕಾರ ಕ್ಷಮಾಧಾನ ನಿರ್ಧರಿಸಲು ಗುಜರಾತ್ ಸರ್ಕಾರಕ್ಕೆ ನಿರ್ದೇಶಿಸಿದ ಮೇ 13, 2022ರ ಸುಪ್ರೀಂಕೋರ್ಟ್‌ ಆದೇಶವನ್ನು ಸತ್ಯಗಳನ್ನು ಮರೆಮಾಚುವ ಮೂಲಕ ಪಡೆಯಲಾಗಿದೆ ಎಂದು ಪೀಠವು ಹೇಳಿದೆ.

ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಗುಜರಾತ್‌ ಕೋಮುಗಲಭೆ ವೇಳೆ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಈ ವೇಳೆ ಅವರಿಗೆ 21 ವರ್ಷ ವಯಸ್ಸಾಗಿತ್ತು ಮತ್ತು ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. 2002ರ ಕೋಮುಗಲಭೆಯಲ್ಲಿ ಮೃತಪಟ್ಟ ಏಳು ಕುಟುಂಬದ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು.

ಇದನ್ನು ಓದಿ: ದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...