Homeಮುಖಪುಟ‘ಭಾರತ ಅಂತಹ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ…’; ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಪಟೇಲ್

‘ಭಾರತ ಅಂತಹ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ…’; ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಪಟೇಲ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿರುವ ಮಾಲ್ಡೀವ್ಸ್‌ನ ಮೂವರು ಮಂತ್ರಿಗಳ ಹೇಳಿಕೆಗಳು ‘ಭಾರತದ ಘನತೆಗೆ ಸವಾಲಾಗಿದೆ’ ಎಂದು ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಹೇಳಿದ್ದಾರೆ ಎಂದು ಸೋಮವಾರ ಎನ್‌ಡಿಟಿವಿ ವರದಿ ಮಾಡಿದೆ.

‘ಭಾರತವು ಅಂತಹ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ. ಇಡೀ ದೇಶವು ಪ್ರಧಾನಿಯವರೊಟ್ಟಿಗೆ ಒಗ್ಗಟ್ಟನ್ನು ತೋರಿಸಿದೆ. ಪ್ರಧಾನಿ ಮತ್ತು ಲಕ್ಷದ್ವೀಪಗಳ ಪರವಾಗಿ ನಿಂತಿರುವ ಭಾರತದ ಜನರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.

‘ನಾವು ಅವರ ಕ್ಷಮೆಯಾಚನೆ ಬಗ್ಗೆ ಮಾತನಾಡಲು ಹೋಗುವುದಿಲ್ಲ.. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ … ಅವರು ಅಂತಹ ಟೀಕೆಗಳನ್ನು ಮಾಡುವ ಅಗತ್ಯವಿಲ್ಲ. ಅವರ ತಪ್ಪುಗಳಿಗಾಗಿ ಅಲ್ಲಿನ ಸರ್ಕಾರದಿಂದ ಅವರು ಶಿಕ್ಷೆಗೆ ಒಳಗಾಗಿದ್ದಾರೆ. ಇದನ್ನೆಲ್ಲಾ ಭಾರತ ಸಹಿಸುವುದಿಲ್ಲ ಎಂದು ತೋರಿಸಿದೆ. ತನ್ನ ಪ್ರಧಾನಿಗೆ ಯಾವುದೇ ಅವಮಾನ ಆಗದಂತೆ ಬಾಲಿವುಡ್ ಸೆಲೆಬ್ರಿಟಿಗಳು, ಕ್ರಿಕೆಟಿಗರು ಮತ್ತು ಸಾಮಾನ್ಯ ಜನರವರೆಗೆ ಭಾರತವು ಮಾಲ್ಡೀವ್ಸ್‌ಗೆ ತಕ್ಕ ಪ್ರತ್ಯುತ್ತರವನ್ನು ನೀಡಿದೆ’ ಎಂದರು.

ಮಾಲ್ಡೀವಿಯನ್ ಸಚಿವರಾದ ಮರ್ಯಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜಿದ್ ಅವರು ಎಕ್ಸ್ ನಲ್ಲಿ ಮೋದಿಯವರ ಬಗ್ಗೆ ವಿಮರ್ಶಾತ್ಮಕ ಟೀಕೆಗಳನ್ನು ಪೋಸ್ಟ್ ಮಾಡಿದ ನಂತರ ಈ ಗದ್ದಲ ಪ್ರಾರಂಭವಾಯಿತು. ಪ್ರಧಾನಿಯವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದದ್ದರು. ಪ್ರಧಾನಮಂತ್ರಿಯವರ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಲಕ್ಷದ್ವೀಪವನ್ನು ಪರ್ಯಾಯ ರಜೆಯ ತಾಣವಾಗಿಸಿಕೊಳ್ಳಲು ಪ್ರೇರೇಪಿಸಿತು.

ಮಾಲ್ಡೀವ್ಸ್ ದ್ವೀಪವು ಆದಾಯಕ್ಕಾಗಿ ಭಾರತೀಯ ಪ್ರವಾಸಿಗರ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ತಮ್ಮ ಸಚಿವರ ಹೇಳಿಕೆಯ ಬಗ್ಗೆ ದ್ವೀಪ ರಾಷ್ಟ್ರವು ತಡಮಾಡದೆ ಪ್ರತಿಕ್ರಿಯಿಸಿದೆ. ‘ಸರ್ಕಾರಿ ಹುದ್ದೆಗಳಲ್ಲಿದ್ದಾಗ ಸಾಮಾಜಿಕ ಮಾಧ್ಯಮದಲ್ಲಿ ಇಂತಹ ಪೋಸ್ಟ್‌ ಮಾಡಿದವರನ್ನು ಅಮಾನತುಗೊಳಿಸಲಾಗಿದೆ’ ಎಂದು ದ್ವೀಪ ರಾಷ್ಟ್ರ ಹೇಳಿದೆ.

ಈ ಘಟನೆಯು ರಾಜಕೀಯ ಮತ್ತು ರಾಜತಾಂತ್ರಿಕ ಬಿಕ್ಕಟ್ಟಾಗಿ ಮಾರ್ಪಟ್ಟಿದ್ದು, ವಿಶೇಷವಾಗಿ ಆ ದೇಶದ ವಿರೋಧ ಪಕ್ಷದ ಶಾಸಕರು ಆಡಳಿತ ಪಕ್ಷದ ಮೇಲೆ ದಾಳಿ ಮಾಡಲು ಇದನ್ನು ಬಳಸುತ್ತಿದ್ದಾರೆ. ಮಾಜಿ ಅಧ್ಯಕ್ಷ ಮೊಹಮದ್ ನಶೀದ್ ಅವರು ಸಚಿವರ ಹೇಳಿಕೆಗಳನ್ನು “ಭಯಾನಕ” ಎಂದು ಕರೆದಿದ್ದಾರೆ. ಈ ಮಧ್ಯೆ ಭಾರತವು ದೆಹಲಿಯಲ್ಲಿ ಮಾಲ್ಡೀವ್ಸ್ ರಾಯಭಾರಿಯನ್ನು ಕರೆಸಿ ಪ್ರತಿಭಟನೆ ವ್ಯಕ್ತಪಡಿಸಿದೆ.

ಚೀನಾದ ಪರವಾಗಿದ್ದಾರೆ ಎನ್ನಲಾದ ಮೊಹಮ್ಮದ್ ಮುಯಿಝು ಅವರು ದ್ವೀಪ ರಾಷ್ಟ್ರದ ನಾಯಕರಾಗಿ ಆಯ್ಕೆಯಾದಾಗಿನಿಂದ ಎರಡು ರಾಷ್ಟ್ರಗಳ ನಡುವಿನ ಸಂಬಂಧಗಳು ಹದಗೆಟ್ಟಿದೆ. ಮುಯಿಝು ಅವರು ಅಧ್ಯಕ್ಷರಾಗಿ ಆಯ್ಕೆಯಾದ ನಂತರ, ರಾಷ್ಟ್ರೀಯ ಭದ್ರತೆಯ ಆಧಾರದ ಮೇಲೆ ಮಾಲ್ಡೀವ್ಸ್‌ನಿಂದ ಭಾರತೀಯ ಪಡೆಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ಇದನ್ನೂ ಓದಿ; ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಪುನಃ ಜೈಲು; ತೀರ್ಪು ಸ್ವಾಗತಿಸಿದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...