Homeಮುಖಪುಟಅಕ್ರಮ ಗಣಿಗಾರಿಕೆ ಮನಿ ಲಾಂಡರಿಂಗ್ ಪ್ರಕರಣ; ಹರಿಯಾಣದ ಮಾಜಿ ಶಾಸಕನನ್ನು ಬಂಧಿಸಿದ ಇಡಿ

ಅಕ್ರಮ ಗಣಿಗಾರಿಕೆ ಮನಿ ಲಾಂಡರಿಂಗ್ ಪ್ರಕರಣ; ಹರಿಯಾಣದ ಮಾಜಿ ಶಾಸಕನನ್ನು ಬಂಧಿಸಿದ ಇಡಿ

- Advertisement -
- Advertisement -

ಅಕ್ರಮ ಗಣಿಗಾರಿಕೆ ಸಂಬಂಧದ ಮನಿ ಲಾಂಡರಿಂಗ್ ತನಿಖೆಯಲ್ಲಿ ಹರಿಯಾಣದ ಮಾಜಿ ಶಾಸಕ ದಿಲ್ಬಾಗ್ ಸಿಂಗ್ ಮತ್ತು ಅವರ ಸಹಾಯಕ ಕುಲ್ವಿಂದರ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜಾರಿ ನಿರ್ದೇಶನಾಲಯವು ಯಮುನಾ ನಗರ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್ಎಲ್‌ಡಿ)ದ ಮಾಜಿ ಶಾಸಕ ಸಿಂಗ್, ಸೋನಿಪತ್‌ನ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರಿಗೆ ಸಂಬಂಧಿಸಿದ ಜಾಗಗಳ ಮೇಲೆ ಜನವರಿ 4ರಂದು ದಾಳಿ ನಡೆಸಿತ್ತು. ಐದು ದಿನಗಳ ತೀವ್ರ ಹುಡುಕಾಟದ ನಂತರ ಸೋಮವಾರದಂದು ಪರಿಶೀಲನೆ ಕೊನೆಗೊಂಡಿದೆ.

ಸುಮಾರು 20 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಹರ್ಯಾಣದ ಮಾಜಿ ಶಾಸಕ ಮತ್ತು ಅವರ ಸಹಾಯಕರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಬಂಧಿಸಲಾಗಿದ್ದು, ಇಬ್ಬರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆಗಾಗಿ ತನಿಖಾ ಸಂಸ್ಥೆಯು ಮತ್ತಷ್ಟು ದಿನಗಳ ಕಾಲ ವಶಕ್ಕೆ ಕೋರಲಿದೆ ಎನ್ನಲಾಗಿದೆ.

ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಪ್ರಕರಣವನ್ನೂ ದಾಖಲಿಸಲಾಗಿದ್ದು, ಕನಿಷ್ಠ ಐದು “ಅಕ್ರಮ” ರೈಫಲ್‌ಗಳು, 300 ಬುಲೆಟ್‌ಗಳು ಮತ್ತು ಕಾರ್ಟ್ರಿಡ್ಜ್‌ಗಳು, 100ಕ್ಕೂ ಹೆಚ್ಚು ಮದ್ಯದ ಬಾಟಲಿಗಳು, ₹5 ಕೋಟಿ ನಗದನ್ನು ದಿಲ್ಬಾಗ್ ಸಿಂಗ್ ಮತ್ತು ಅವರಿಗೆ ಸಂಬಂಧಿತ ವ್ಯಕ್ತಿಗಳ ಜಾಗಗಳಿಂದ ಇಡಿ ವಶಪಡಿಸಿಕೊಂಡಿದೆ. ಕೇಂದ್ರ ತನಿಖಾ ಸಂಸ್ಥೆಯು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ಪರವಾನಗಿ ಅವಧಿ ಮುಗಿದಿರುವುದರಿಂದ, ತನಿಖಾ ಸಂಸ್ಥೆಯು ಪ್ರತಾಪ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ.

ಅಕ್ರಮವಾಗಿ ಮದ್ಯದ ಬಾಟಲಿಗಳನ್ನು ಸಂಗ್ರಹಿಸಿದ್ದಕ್ಕಾಗಿ ಮತ್ತೊಂದು ಪೊಲೀಸ್ ದೂರು ದಾಖಲಿಸಿದ ಇಡಿ, ಹರಿಯಾಣ ಅಬಕಾರಿ ಇಲಾಖೆಯೊಂದಿಗೆ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ. ಯಮುನಾ ನಗರ ಜಿಲ್ಲೆಯ ರಾಯನ್ವಾಲಾ ಗ್ರಾಮದ ಫಾರ್ಮ್‌ ಹೌಸ್‌ನಲ್ಲಿ ವೈನ್ ಬಾಕ್ಸ್ ಮತ್ತು ಬಾಟಲಿಗಳು ಪತ್ತೆಯಾಗಿವೆ.

ಗುತ್ತಿಗೆ ಅವಧಿ ಮುಗಿದ ನಂತರವೂ ಯಮುನಾ ನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಈ ಹಿಂದೆ ನಡೆದಿರುವ ಬಂಡೆಗಳು, ಜಲ್ಲಿಕಲ್ಲು, ಅಕ್ರಮ ಮರಳು ಗಣಿಗಾರಿಕೆ ಆರೋಪದ ಮೇಲೆ ತನಿಖೆ ನಡೆಸಲು ಹರಿಯಾಣ ಪೊಲೀಸರು ದಾಖಲಿಸಿದ ಹಲವಾರು ಎಫ್ಐಆರ್‌ಗಳಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣವು ಬೆಳಕಿಗೆ ಬಂದಿದೆ. ರಾಯಲ್ಟಿ ಮತ್ತು ತೆರಿಗೆಗಳ ಸಂಗ್ರಹವನ್ನು ಸರಳಗೊಳಿಸಲು, ಗಣಿಗಾರಿಕೆ ಪ್ರದೇಶಗಳಲ್ಲಿ ತೆರಿಗೆ ವಂಚನೆಯನ್ನು ತಡೆಗಟ್ಟಲು ಹರಿಯಾಣ ಸರ್ಕಾರವು 2020 ರಲ್ಲಿ ಪರಿಚಯಿಸಿದ ಆನ್ಲೈನ್ ಪೋರ್ಟಲ್ ‘ಇ-ರಾವಣ’ ಯೋಜನೆಯಲ್ಲಿನ ವಂಚನೆಯನ್ನು ಕೇಂದ್ರೀಯ ಸಂಸ್ಥೆ ತನಿಖೆ ನಡೆಸುತ್ತಿದೆ.

ಇಬ್ಬರು ರಾಜಕಾರಣಿಗಳೊಂದಿಗೆ ಸಂಬಂಧ ಹೊಂದಿರುವ ‘ಸಿಂಡಿಕೇಟ್’ ಗುಂಪು ಈ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಇಡಿ ಮೂಲಗಳು ಹೇಳಿವೆ.

ಇದನ್ನೂ ಓದಿ; ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಪುನಃ ಜೈಲು; ತೀರ್ಪು ಸ್ವಾಗತಿಸಿದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...