Homeಕರ್ನಾಟಕಶ್ರೀರಾಮಚಂದ್ರ ಯಾರೊಬ್ಬರ ಸ್ವತ್ತಲ್ಲ; ಬಿಜೆಪಿಯವರು ಭ್ರಮೆಯಲ್ಲಿದ್ದಾರೆ: ಕಾಂಗ್ರೆಸ್

ಶ್ರೀರಾಮಚಂದ್ರ ಯಾರೊಬ್ಬರ ಸ್ವತ್ತಲ್ಲ; ಬಿಜೆಪಿಯವರು ಭ್ರಮೆಯಲ್ಲಿದ್ದಾರೆ: ಕಾಂಗ್ರೆಸ್

- Advertisement -
- Advertisement -

ಇದೇ 22ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಜ್ಜಾಗಿದೆ. ಶ್ರೀರಾಮಮಂದಿರ ಟ್ರಸ್ಟ್ ಹಾಗೂ ಬಿಜೆಪಿ ದೇಶದಾದ್ಯಂತ ಭರ್ಜರಿ ಪ್ರಚಾರ ನಡೆಸುತ್ತಿದೆ. ಮಸೀದಿ ಕೆಡವಿ, ಆ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಿದ್ದು, ಸಮಾರಂಭದಲ್ಲಿ ಭಾಗವಹಿಸುವ ಕುರಿತು ಕಾಂಗ್ರೆಸ್ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

‘ಶ್ರೀರಾಮಚಂದ್ರ ಯಾರೊಬ್ಬರ ಸ್ವತ್ತೂ ಅಲ್ಲ. ಆದರೆ ರಾಮನ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಬಿಜೆಪಿಯವರು ಶ್ರೀರಾಮ ತಮ್ಮೊಬ್ಬರ ಸ್ವತ್ತು ಎಂಬ ಭ್ರಮೆಯಲ್ಲಿದ್ದಾರೆ. ಈ ಬಗ್ಗೆ ನಮ್ಮ ಅನುಕಂಪವಿದೆ. ಬಿಜೆಪಿಯವರು ರಾಮ ಭಕ್ತರ ವೇಷದಲ್ಲಿರುವ ಸಮಾಜ ಕಂಟಕರು. ಜನವಿರೋಧಿ ಬಿಜೆಪಿಯು ಕಾಂಗ್ರೆಸ್ ಪಕ್ಷವನ್ನು ರಾಮವಿರೋಧಿ ಎಂದು ಬಿಂಬಿಸುವ ದುಷ್ಟ ಯತ್ನದಲ್ಲಿದೆ’ ಎಂದು ಟೀಕಿಸಿದೆ.

‘ಜನವರಿ 22ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದು ರಾಜ್ಯ ಬಿಜೆಪಿಗೆ ಸಂತಸ ತರುವ ಬದಲು ಸಂಕಟ ತಂದಿರುವುದು ಅವರ ಧರ್ಮವಿಕೃತಿಗೆ ಸಾಕ್ಷಿ. ಅವರಿಗೆ ಭಕ್ತಿ, ಪೂಜೆ, ಪುನಸ್ಕಾರ, ಸಂಸ್ಕಾರ ಬೇಕಿಲ್ಲ. ಅವರಿಗೆ ಬೇಕಿರುವುದು ಅದರ ಹೆಸರಿನಲ್ಲಿ ರಾಜಕೀಯ. ಅವರದು ಧರ್ಮದ ದಾರಿ ತಪ್ಪಿಸುವ ಹುನ್ನಾರ’ ಎಂದು ಕಿಡಿಕಾರಿದೆ.

‘ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು. ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ. 1985-86 ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ. 1989ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್ ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ’ ಎಂದು ಕಾಂಗ್ರೆಸ್ ನೆನಪಿಸಿದೆ.

‘ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ, ರಾಮನ ಹೆಸರೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ ರಾಜ್ಯ ಬಿಜೆಪಿಗೆ ‘ಸನ್ಮತಿ ದೇ ಭಗವಾನ್’ ಎಂದು ಹೇಳಬೇಕಾಗಿ ಬಂದಿರೋದು ದುರಂತ’ ಎಂದು ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ; ಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...