Homeಮುಖಪುಟಕೋಮು ಶಕ್ತಿಗಳ ವಿರುದ್ಧ ತೊಡೆ ತಟ್ಟಿದ್ದ ದೇವೇಗೌಡರು ಕಳೆದುಹೋಗಿದ್ದಾರೆ, ಹುಡುಕಿ ಕೊಡಿ: ಕಾಂಗ್ರೆಸ್

ಕೋಮು ಶಕ್ತಿಗಳ ವಿರುದ್ಧ ತೊಡೆ ತಟ್ಟಿದ್ದ ದೇವೇಗೌಡರು ಕಳೆದುಹೋಗಿದ್ದಾರೆ, ಹುಡುಕಿ ಕೊಡಿ: ಕಾಂಗ್ರೆಸ್

- Advertisement -
- Advertisement -

ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್‌.ಡಿ ‘ದೇವೇಗೌಡರು ಕಳೆದು ಹೋಗಿದ್ದಾರೆ, ಹುಡುಕಿ ಕೊಡಿ’ ಎಂದು ರಾಜ್ಯ ಕಾಂಗ್ರೆಸ್ ಕಾಳೆದಿದೆ. ಕನ್ನಡದ ಪ್ರಮುಖ ಪತ್ರಿಕೆಯೊಂದರಲ್ಲಿ ಪ್ರಕಟವಾದ ದೇವೇಗೌಡರ ಹಳೆಯ ಹೇಳಿಕೆಯೊಂದನ್ನು ಉಲ್ಲೇಖಿಸಿ ಕಾಂಗ್ರೆಸ್ ಲೇವಡಿ ಮಾಡಿದೆ.

ಪತ್ರಿಕೆಯಲ್ಲಿ ಪ್ರಕಟಗೊಂಡಿದ್ದೇನು?

25 ವರ್ಷಗಳ ಹಿಂದೆ ಯಾರು ಏನು ಹೇಳಿದ್ದರು? ಯಾವ ಪ್ರಮುಖ ಘಟನೆಗಳು ನಡೆದಿತ್ತು ಎಂಬುವುದನ್ನು ಪತ್ರಿಕೆ ಪ್ರಕಟಿಸುತ್ತಿದೆ. ಇಂದು (ಜ.9) 25 ವರ್ಷಗಳ ಹಿಂದೆ ದೇವೇಗೌಡರು ನೀಡಿದ್ದ ಪ್ರಮುಖ ಹೇಳಿಕೆಯೊಂದನ್ನು ಪ್ರಕಟಿಸಿದೆ.

“ಆರೆಸ್ಸೆಸ್, ವಿಹೆಚ್‌ಪಿ, ಭಜರಂಗದಳ ಮತ್ತು ಶಿವಸೇನೆಯಂತಹ ಕೋಮು ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಆಗ್ರಹಿಸಿದ್ದಾರೆ. ದಕ್ಷಿಣ ಗುಜರಾತ್‌ನಲ್ಲಿ ಕ್ರೈಸ್ತರ ಮೇಲೆ ನಡೆದ ದಾಳಿಗೆ ಈ ಸಂಘಟನೆಗಳು ಕಾರಣ ಎಂದು ಅವರು ಆರೋಪಿಸಿದ್ದಾರೆ. ಈ ಸಂಘಟನೆಗಳು ರಾಷ್ಟ್ರದ ವಿವಿಧ ಭಾಗಗಳಲ್ಲಿ ಧರ್ಮಾದಂತೆಯನ್ನು ಹಬ್ಬಿಸುತ್ತಿವೆ. ಅವುಗಳ ಚಟುವಟಿಕೆಗಳಿಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಮೋದ್ ಮಹಾಜನ್ ಬೆಂಬಲ ನೀಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ” ಎಂಬ ದೇವೇಗೌಡರ ಹೇಳಿಕೆಯನ್ನು ಪತ್ರಿಕೆ ಸ್ಮರಿಸಿದೆ. ಇದನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಕಾಳೆಲೆದಿದೆ.

ಪ್ರಸ್ತುತ ದೇವೇಗೌಡರ ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಹೊಂದಾಣಿಕೆ ಮಾಡಕೊಂಡಿದೆ. ಅಲ್ಲದೆ, ರಾಮ ಮಂದಿರರ ವಿಚಾರವಾಗಿ ದೇವೇಗೌಡರು ಮತ್ತು ಕುಮಾರಸ್ವಾಮಿ ಬಿಜೆಪಿಗರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡುತ್ತಿದ್ದಾರೆ.

ಈ ಹಿನ್ನೆಲೆ, ಹಳೆಯ ದೇವೇಗೌಡರು ಕಳೆದು ಹೋಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. “25 ವರ್ಷಗಳ ಹಿಂದೆ ಕೋಮು ಶಕ್ತಿಗಳ ವಿರುದ್ಧ ತೊಡೆ ತಟ್ಟಿದ್ದ ಅಂದಿನ ದೇವೇಗೌಡರು ಈಗ ಕಳೆದುಹೋಗಿದ್ದಾರೆ! ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್, ಬಜರಂಗದಳದಂತಹ ವಿಧ್ವಂಸಕ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದು ದೇವೇಗೌಡರಿಗೆ ನೆನಪಿದೆಯೇ? ಈಗ ಅದೇ ವಿಚ್ಛಿದ್ರಕಾರಿ ಸಂಘಟನೆಗಳೊಂದಿಗೆ ಕೈಜೋಡಿಸಿದ್ದು ದೇವೇಗೌಡರ ದುರಂತವೋ, ಅವರನ್ನು ಸೆಕ್ಯುಲರ್ ಎಂದು ನಂಬಿದ್ದವರ ದುರಂತವೋ ತಿಳಿಯದು!” ಎಂದು ಕಾಂಗ್ರೆಸ್ ಹೇಳಿದೆ.

ರಾಮ ಮಂದಿರ ಉದ್ಘಾಟನೆಗೆ ದೇವೇಗೌಡರಿಗೆ ಆಹ್ವಾನ :

ಅಯೋಧ್ಯೆ ರಾಮ ಮಂದಿರಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸಲಾಗಿದೆ. ರಾಮ ಮಂದಿರ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎನ್​.ಮಿಶ್ರಾ, ಆರ್‌ಎಸ್‌ಎಸ್​ ಹಿರಿಯ ನಾಯಕ ರಾಮ್​ ಲಾಲ್ ಹಾಗೂ ವಿಹೆಚ್‌ಪಿಯ ಹಿರಿಯ ನಾಯಕ ಅಲೋಕ್​ ಕುಮಾರ್​, ಡಿಸೆಂಬರ್ 19,2023ರಂದು ದೆಹಲಿಯ ದೇವೇಗೌಡರ ನಿವಾಸಕ್ಕೆ ತೆರಳಿ ಆಹ್ವಾನ ನೀಡಿದ್ದರು. ಈ ವಿಚಾರವನ್ನು ಟ್ವೀಟ್ ಮೂಲಕ ದೇವೇಗೌಡರು ಹಂಚಿಕೊಂಡಿದ್ದರು. “ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಲಾಗಿದೆ. ಆಹ್ವಾನ ಸ್ವೀಕರಿಸಿದ ನನಗೆ ತುಂಬಾ ಸಂತೋಷ ಆಗಿದೆ” ಎಂದು ಟ್ವಿಟರ್​ನಲ್ಲಿ ದೇವೇಗೌಡರು ಬರೆದುಕೊಂಡಿದ್ದರು.

ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಅತ್ಯಂತ ಜಾತ್ಯತೀತ ನಾಯಕ ಎಂದು ಪರಿಗಣಿಸಲ್ಪಟ್ಟಿದ್ದ ದೇವೇಗೌಡರು, ಪ್ರಸ್ತುತ ಕೇಸರಿ ಪಾಳೆಯದ ಮಿತ್ರರಾಗಿ ರೂಪಾಂತರಗೊಂಡಿದ್ದಾರೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಲು ಇಚ್ಛಿಸುತ್ತೇನೆ ಎಂದು ಹೇಳುತ್ತಿದ್ದ ಗೌಡರು, ಈಗ ಅಂತಹ ಆಲೋಚನೆಗಳನ್ನು ತಮ್ಮೊಳಗೆ ಅದುಮಿ ಇಟ್ಟುಕೊಳ್ಳಬೇಕಾಗಬಹುದು.

ಇದನ್ನೂ ಓದಿ : ಜ.22ರಂದು ದೇವಸ್ಥಾನಗಳಲ್ಲಿ ‘ವಿಶೇಷ’ ಪೂಜೆಗೆ ಸೂಚನೆ; ‘ಮೃದು ಹಿಂದುತ್ವ’ದ ಮೊರೆ ಹೋಯ್ತಾ ಕಾಂಗ್ರೆಸ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...