Homeಮುಖಪುಟಫಾತಿಮಾ ಶೇಖ್: 19ನೇ ಶತಮಾನದ ಶಿಕ್ಷಣತಜ್ಞೆ, ಭಾರತ ಮರೆತ ‘ಸ್ತ್ರೀವಾದದ ಐಕಾನ್’

ಫಾತಿಮಾ ಶೇಖ್: 19ನೇ ಶತಮಾನದ ಶಿಕ್ಷಣತಜ್ಞೆ, ಭಾರತ ಮರೆತ ‘ಸ್ತ್ರೀವಾದದ ಐಕಾನ್’

- Advertisement -
- Advertisement -

ಪ್ರತಿ ವರ್ಷ ಜನವರಿ 3 ರಂದು ನಾವು ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ಆಚರಿಸುತ್ತೇವೆ. ಅವರು ಭಾರತದ ಮೊದಲ ಮಹಿಳಾ ಶಿಕ್ಷಕಿ ಮತ್ತು ಹೆಣ್ಣು ಮಕ್ಕಳಿಗಾಗಿ ಶಾಲೆಯನ್ನು ಪ್ರಾರಂಭಿಸಿದ ಮೊದಲ ಭಾರತೀಯ ಮಹಿಳೆ. ಹೆಣ್ಣು ಮಕ್ಕಳಿಗಾಗಿ ಶಿಕ್ಷಣ ಕ್ರಾಂತಿಯನ್ನೇ ಮಾಡಿದ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ ಅವರಿಗೆ ಹೆಗಲಾಗಿದ್ದ ಮತ್ತೊಬ್ಬ ಧೀಮಂತ ಮಹಿಳೆ ಫಾತಿಮಾ ಶೇಖ್.

ಅವರು ಫುಲೆಯವರ ಭಿಡೆವಾಡ ಶಾಲೆಯಲ್ಲಿ ಹುಡುಗಿಯರಿಗೆ ಅಕ್ಷರ ಕಲಿಸುವ ಕೆಲಸ ಮಾಡಿದರು. ಮನೆಮನೆಗೆ ತೆರಳಿ ತಮ್ಮ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಪೋಷಕರನ್ನು ಪ್ರೋತ್ಸಾಹಿಸುತ್ತಿದ್ದರು. ಜೊತೆಗೆ ಫುಲೆ ಅವರ ಶಾಲೆಗಳ ವ್ಯವಹಾರಗಳನ್ನೂ ನಿರ್ವಹಿಸುತ್ತಿದ್ದರು. ಆಕೆಯ ಕೊಡುಗೆ ಇಲ್ಲದಿದ್ದರೆ ಇಡೀ ಬಾಲಕಿಯರ ಶಿಕ್ಷಣ ಯೋಚನೆ ಸಾಕಾರಗೊಳ್ಳುತ್ತಿರಲಿಲ್ಲ. ಆದ್ದರಿಂದ ಇತಿಹಾಸ ತಜ್ಞರು ಅವರನ್ನು 19ನೇ ಶತಮಾನದ ಶಿಕ್ಷಣತಜ್ಞೆ ಎಂದು ಕರೆಯುತ್ತಾರೆ.

1831ರ ಜನವರಿ 9ರಂದು ಜನಿಸಿದ ಫಾತಿಮಾ ಶೇಖ್, 1900 ಅಕ್ಟೋಬರ್ 9ರಂದು ನಿಧನರಾದರು. ಫಾತಿಮಾ ಶೇಖ್ ಭಾರತದ ಮೊಟ್ಟ ಮೊದಲ ಮುಸ್ಲಿಂ ಮಹಿಳಾ ಶಿಕ್ಷಣತಜ್ಞೆ. ಸಾವಿತ್ರಿಬಾಯಿ ಫುಲೆ ಅವರೊಂದಿಗೆ ಅವರು ಪುಣೆಯಲ್ಲಿ ತುಳಿತಕ್ಕೊಳಗಾದ ಸಮುದಾಯಗಳ ಮಹಿಳೆಯರು ಮತ್ತು ಮಕ್ಕಳಿಗೆ ಅಕ್ಷರ ಕಲಿಸಿದರು.

ಸ್ವಾತಂತ್ರ್ಯ ಪೂರ್ವದ ಭಾರತದಲ್ಲಿ ಶಿಕ್ಷಣದ ಪ್ರವರ್ತಕರಾಗಿದ್ದ ಫಾತಿಮಾ, ದಲಿತ, ಆದಿವಾಸಿ, ಮುಸ್ಲಿಂ ಸಮುದಾಯಗಳ ಮಹಿಳೆಯರು ಮತ್ತು ಅವರ ಮಕ್ಕಳ ಶಿಕ್ಷಣದ ಹಕ್ಕಿಗಾಗಿ ಅವರು ದೃಢವಾಗಿ ನಿಂತಿದ್ದರು. ಏಕೆಂದರೆ, ಈ ವರ್ಗಗಳು ಹಿಂದೂ ಧರ್ಮ ಮತ್ತು ಸಂಪ್ರದಾಯದ ಹೆಸರಿನಲ್ಲಿ ಶಿಕ್ಷಣದಿಂದ ವಂಚಿತರಾಗಿದ್ದರು. ಅವರು ಅಸ್ಪೃಶ್ಯರು, ಮುಸ್ಲಿಂ ಸಮುದಾಯಗಳ ಮಹಿಳೆಯರು ಮತ್ತು ಅವರ ಮಕ್ಕಳಿಗೆ ಶಿಕ್ಷಣ ನೀಡಲು ಫುಲೆ ದಂಪತಿಗಳೊಂದಿಗೆ ಕೆಲಸ ಮಾಡಿದರು. ಇದು ಜ್ಯೋತಿಬಾ ಫುಲೆ ನೇತೃತ್ವದ ಸತ್ಯಶೋಧಕ್ (‘ಸತ್ಯದ ಹುಡುಕಾಟ’) ಚಳುವಳಿಯ ಒಂದು ಭಾಗವಾಗಿತ್ತು.

ಹೆಣ್ಣು ಮಕ್ಕಳಿಗೆ ಹಾಗೂ ದಲಿತರಿಗೆ ಶಿಕ್ಷಣ ನೀಡಿದ್ದಕ್ಕಾಗಿ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರನ್ನು ಕುಟುಂಬ ಮತ್ತು ಗ್ರಾಮದ ಸದಸ್ಯರು ಗ್ರಾಮದಿಂದ ಹೊರಹಾಕಿದ್ದರು. 1848 ರಲ್ಲಿ ದಲಿತ ಮಕ್ಕಳು ಮತ್ತು ಮಹಿಳೆಯರಿಗಾಗಿ ಮೊದಲ ಶಾಲೆಯನ್ನು ಪ್ರಾರಂಭಿಸುವ ಅವರ ಪ್ರಯತ್ನವನ್ನು ‘ಧರ್ಮ ವಿರೋಧಿ ಕೃತ್ಯ’ ಎಂದು ಹೆಸರಿಸಿದಾಗ, ಫಾತಿಮಾ ಶೇಖ್ ಮತ್ತು ಅವರ ಸಹೋದರ ಉಸ್ಮಾನ್ ಅವರಿಗೆ ಸಹಾಯ ಮಾಡಿದರು. ಫುಲೆಯವರ ವಿಚಾರಗಳಿಂದ ಪ್ರೇರಿತರಾದ ಉಸ್ಮಾನ್ ತಮ್ಮ ಸಹೋದರಿಯನ್ನು ವಿದ್ಯಾಭ್ಯಾಸ ಮಾಡಲು ಪ್ರೇರೇಪಿಸಿದರು. ಸಾವಿತ್ರಿಬಾಯಿಯವರೊಂದಿಗೆ ಶೇಖ್ ಶಿಕ್ಷಕರಾಗಿ ತರಬೇತಿ ಪಡೆಯಲು ಶ್ರಮಿಸಿದರು.

ಫುಲೆ ದಂಪತಿಗಳ ಜೊತೆಗೆ ಶೇಖ್ ಕೂಡ ಸಾಮಾಜಿಕ ಅವಮಾನದ ಕಷ್ಟಗಳನ್ನು ಎದುರಿಸಿದರು. ಏಕೆಂದರೆ, ಅವರು ಬ್ರಾಹ್ಮಣ ಜಾತಿಯ ಕಟ್ಟುನಿಟ್ಟಿನ ರಚನೆಗಳ ವಿರುದ್ಧ ಹೋರಾಡಿದರು. ಅವರು ಪ್ರಬಲ ಜಾತಿಗಳ ಜನರು ಮತ್ತು ತಮ್ಮದೇ ಸಮುದಾಯದ ವ್ಯಕ್ತಿಗಳಿಂದ ಕಲ್ಲು ಮತ್ತು ಹಸುವಿನ ಸಗಣಿಯಿಂದ ದಾಳಿಯನ್ನೂ ಎದುರಿಸಿದರು. ಶೇಖ್ ಅವರನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಸಮುದಾಯಗಳು ‘ಅಧರ್ಮಿ’ ಎಂದು ಪರಿಗಣಿಸಿದ್ದರು.

ಯಾವುದಕ್ಕೂ ಜಗ್ಗದ ಶೇಖ್.. ತಾವು ಕಲಿತು, ಹೆಣ್ಣು ಮಕ್ಕಳಿಗೂ ಕಲಿಸಿದರು. ಕುಟುಂಬಗಳು ತಮ್ಮ ಹುಡುಗಿಯರನ್ನು ಶಾಲೆಗೆ ಕಳುಹಿಸಲು ಪ್ರೋತ್ಸಾಹಿಸುವ ಸಲುವಾಗಿ ಮನೆಮನೆಗೆ ಭೇಟಿ ನೀಡಿದರು.

ಜೊತೆಜೊತೆಗೆ ಶಾಲಾ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದರು. ಶೇಖ್ ಅವರ ಕೊಡುಗೆಗಳಿಲ್ಲದಿದ್ದರೆ, ಫುಲೆಯವರ ಶೀಕ್ಷಣ ಕ್ರಾಂತಿಯ ಗುರಿ ಅಪೂರ್ಣವಾಗುತ್ತಿತ್ತು. ಶೇಖ್ ಅವರು ಶಿಕ್ಷಣದ ಧ್ಯೇಯವನ್ನು ಜೀವಂತವಾಗಿಡಲು ಶ್ರಮಿಸಿದ್ದಲ್ಲದೆ, ಸಾವಿತ್ರಿಬಾಯಿಯವರಿಗೆ ಮತ್ತು ಸತ್ಯಶೋಧಕ ಚಳುವಳಿಗೆ ಬೆಂಬಲವಾಗಿ ನಿಂತಿದ್ದರು. ಸಾವಿತ್ರಿಬಾಯಿ ಫುಲೆ ಅವರು ಜ್ಯೋತಿರಾವ್ ಫುಲೆ ಅವರಿಗೆ ಬರೆದ ಪತ್ರಗಳಲ್ಲಿ ಇದನ್ನು ಕಾಣಬಹುದು. ಅದರಲ್ಲಿ ಅವರು ಫಾತಿಮಾ ಶೇಖ್ ಬಗ್ಗೆ ಮೆಚ್ಚುಗೆ ಮತ್ತು ಪ್ರೀತಿಯಿಂದ ಮಾತನಾಡುತ್ತಾರೆ. ಶೇಖ್ ಆಕೆಯ ಜೀವನ ಅಥವಾ ಕೆಲಸದ ಬಗ್ಗೆ ಯಾವುದೇ ವಿಷಯವನ್ನು ದಾಖಲಿಸಿಲ್ಲ; ಇತರರು ಕೂಡಾ ಬರೆದಿಲ್ಲ. ಆದರೆ, ಸಾವಿತ್ರಿಬಾಯಿಯವರ ಪತ್ರಗಳು ಫಾತಿಮಾ ಶೇಖ್ ಅವರು ನೀಡಿದ ಕೊಡುಗೆಗಳ ಮಾಹಿತಿಯ ಪ್ರಮುಖ ಮೂಲವಾಗಿದೆ.

ಸುದೀರ್ಘ ಹೋರಾಟ ಹಾಗೂ ಬರಹಗಾರರ ಪ್ರಚಾರದಿಂದ ಸಾವಿತ್ರಿಬಾಯಿ ಇಂದು ಸೂಕ್ತ ಮನ್ನಣೆಯನ್ನು ಪಡೆದಿದ್ದಾರೆ. ಆದರೆ, ಶೇಖ್ ಅವರು ಭಾರತೀಯ ಇತಿಹಾಸದಲ್ಲಿ ಹೆಚ್ಚಾಗಿ ಗುರುತಿಸಲ್ಪಟ್ಟಿಲ್ಲ. ಅವರ ಕೊಡುಗೆಗಳನ್ನು ಬೇಕಂತಲೇ ನಿರ್ಲಕ್ಷಿಸಲಾಗಿದೆ. ಆಕೆ, ಧಾರ್ಮಿಕ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಪರವಾಗಿ ಹೋರಾಡಿದವರಲ್ಲಿ ಒಬ್ಬರಾಗಿದ್ದಾರೆ. ದಲಿತ -ಮುಸ್ಲಿಂ ಸಮುದಾಯಗಳ ಮಹಿಳೆಯರು ಮತ್ತು ಮಕ್ಕಳಿಗೆ ಶಿಕ್ಷಣ ಕಲಿಸುವ ಕೆಲಸದಲ್ಲಿದ್ದ ಅವರು, ಹಿಂದೂಗಳಿಂದ ಮಾತ್ರವಲ್ಲದೆ ಸಾಂಪ್ರದಾಯಿಕ ಮುಸ್ಲಿಮರಿಂದಲೂ ವಿರೋಧವನ್ನು ಎದುರಿಸಿದರು.

19ನೇ ಶತಮಾನದಲ್ಲಿ ಹಿಂದೂ ಮಹಿಳೆಯರಂತೆ ಮುಸ್ಲಿಮ್ ಮಹಿಳೆಯರಿಗೂ ಶಿಕ್ಷಣ ಪಡೆಯಲು ಅವಕಾಶ ಇರಲಿಲ್ಲ. ಸಾಮಾಜಿಕ ಕಟ್ಟುಪಾಡುಗಳು ಉತ್ತುಂಗದಲ್ಲಿದ್ದ ಕಾಲಘಟ್ಟದಲ್ಲಿ ಅವರು ಬ್ರಾಹ್ಮಣ್ಯದ ಪ್ರಾಬಲ್ಯವನ್ನು ಮತ್ತು ಇಸ್ಲಾಂ ಮೂಲಭೂತವಾದವನ್ನು, ಮುಸ್ಲಿಂ ಮಹಿಳೆಯಾಗಿ ಎದುರು ಹಾಕಿಕೊಳ್ಳಬೇಕಾಗಿರಲಿಲ್ಲ. ಫುಲೆ ದಂಪತಿಗಳಿಂದ ಪ್ರಭಾವಿತರಾಗಿದ್ದ ಅವರು, ದಲಿತರು, ಆದಿವಾಸಿ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳಿಗಾಗಿ ಹೋರಾಡುವುದನ್ನು ಮುಂದುವರಿಸಿದರು.

ಮಹಾರಾಷ್ಟ್ರ ಸರ್ಕಾರವು 2014 ರಲ್ಲಿ ಶೇಖ್ ಅವರ ಕೊಡುಗೆಗಳನ್ನು ಗುರುತಿಸಲು ಮತ್ತು ಮೌಲ್ಯೀಕರಿಸಲು ಪ್ರಯತ್ನಗಳನ್ನು ಮಾಡಿತು. ಡಾ. ಎ.ಪಿ.ಜೆ. ಅಬ್ದುಲ್ ಕಲಾಂ, ಸರ್ ಸೈಯದ್ ಅಹ್ಮದ್ ಖಾನ್ ಮತ್ತು ಜಾಕಿರ್ ಹುಸೇನ್ ಅವರ ಜತೆಗೆ ಉರ್ದು ಶಾಲಾ ಪಠ್ಯಪುಸ್ತಕಗಳಲ್ಲಿ ಸಂಕ್ಷಿಪ್ತ ವಿವರವನ್ನು ಪ್ರಕಟಿಸಿತು.

ಇದನ್ನೂ ಓದಿ; ಸಾವಿತ್ರಿಬಾಯಿ ಫುಲೆ ಬ್ಯಾನರ್ ಹರಿದ ಕಿಡಿಗೇಡಿಗಳು; ಐವರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...