Homeಮುಖಪುಟಫಾತಿಮಾ ಶೇಖ್: 19ನೇ ಶತಮಾನದ ಶಿಕ್ಷಣತಜ್ಞೆ, ಭಾರತ ಮರೆತ ‘ಸ್ತ್ರೀವಾದದ ಐಕಾನ್’

ಫಾತಿಮಾ ಶೇಖ್: 19ನೇ ಶತಮಾನದ ಶಿಕ್ಷಣತಜ್ಞೆ, ಭಾರತ ಮರೆತ ‘ಸ್ತ್ರೀವಾದದ ಐಕಾನ್’

- Advertisement -
- Advertisement -

ಪ್ರತಿ ವರ್ಷ ಜನವರಿ 3 ರಂದು ನಾವು ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ಆಚರಿಸುತ್ತೇವೆ. ಅವರು ಭಾರತದ ಮೊದಲ ಮಹಿಳಾ ಶಿಕ್ಷಕಿ ಮತ್ತು ಹೆಣ್ಣು ಮಕ್ಕಳಿಗಾಗಿ ಶಾಲೆಯನ್ನು ಪ್ರಾರಂಭಿಸಿದ ಮೊದಲ ಭಾರತೀಯ ಮಹಿಳೆ. ಹೆಣ್ಣು ಮಕ್ಕಳಿಗಾಗಿ ಶಿಕ್ಷಣ ಕ್ರಾಂತಿಯನ್ನೇ ಮಾಡಿದ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ ಅವರಿಗೆ ಹೆಗಲಾಗಿದ್ದ ಮತ್ತೊಬ್ಬ ಧೀಮಂತ ಮಹಿಳೆ ಫಾತಿಮಾ ಶೇಖ್.

ಅವರು ಫುಲೆಯವರ ಭಿಡೆವಾಡ ಶಾಲೆಯಲ್ಲಿ ಹುಡುಗಿಯರಿಗೆ ಅಕ್ಷರ ಕಲಿಸುವ ಕೆಲಸ ಮಾಡಿದರು. ಮನೆಮನೆಗೆ ತೆರಳಿ ತಮ್ಮ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಪೋಷಕರನ್ನು ಪ್ರೋತ್ಸಾಹಿಸುತ್ತಿದ್ದರು. ಜೊತೆಗೆ ಫುಲೆ ಅವರ ಶಾಲೆಗಳ ವ್ಯವಹಾರಗಳನ್ನೂ ನಿರ್ವಹಿಸುತ್ತಿದ್ದರು. ಆಕೆಯ ಕೊಡುಗೆ ಇಲ್ಲದಿದ್ದರೆ ಇಡೀ ಬಾಲಕಿಯರ ಶಿಕ್ಷಣ ಯೋಚನೆ ಸಾಕಾರಗೊಳ್ಳುತ್ತಿರಲಿಲ್ಲ. ಆದ್ದರಿಂದ ಇತಿಹಾಸ ತಜ್ಞರು ಅವರನ್ನು 19ನೇ ಶತಮಾನದ ಶಿಕ್ಷಣತಜ್ಞೆ ಎಂದು ಕರೆಯುತ್ತಾರೆ.

1831ರ ಜನವರಿ 9ರಂದು ಜನಿಸಿದ ಫಾತಿಮಾ ಶೇಖ್, 1900 ಅಕ್ಟೋಬರ್ 9ರಂದು ನಿಧನರಾದರು. ಫಾತಿಮಾ ಶೇಖ್ ಭಾರತದ ಮೊಟ್ಟ ಮೊದಲ ಮುಸ್ಲಿಂ ಮಹಿಳಾ ಶಿಕ್ಷಣತಜ್ಞೆ. ಸಾವಿತ್ರಿಬಾಯಿ ಫುಲೆ ಅವರೊಂದಿಗೆ ಅವರು ಪುಣೆಯಲ್ಲಿ ತುಳಿತಕ್ಕೊಳಗಾದ ಸಮುದಾಯಗಳ ಮಹಿಳೆಯರು ಮತ್ತು ಮಕ್ಕಳಿಗೆ ಅಕ್ಷರ ಕಲಿಸಿದರು.

ಸ್ವಾತಂತ್ರ್ಯ ಪೂರ್ವದ ಭಾರತದಲ್ಲಿ ಶಿಕ್ಷಣದ ಪ್ರವರ್ತಕರಾಗಿದ್ದ ಫಾತಿಮಾ, ದಲಿತ, ಆದಿವಾಸಿ, ಮುಸ್ಲಿಂ ಸಮುದಾಯಗಳ ಮಹಿಳೆಯರು ಮತ್ತು ಅವರ ಮಕ್ಕಳ ಶಿಕ್ಷಣದ ಹಕ್ಕಿಗಾಗಿ ಅವರು ದೃಢವಾಗಿ ನಿಂತಿದ್ದರು. ಏಕೆಂದರೆ, ಈ ವರ್ಗಗಳು ಹಿಂದೂ ಧರ್ಮ ಮತ್ತು ಸಂಪ್ರದಾಯದ ಹೆಸರಿನಲ್ಲಿ ಶಿಕ್ಷಣದಿಂದ ವಂಚಿತರಾಗಿದ್ದರು. ಅವರು ಅಸ್ಪೃಶ್ಯರು, ಮುಸ್ಲಿಂ ಸಮುದಾಯಗಳ ಮಹಿಳೆಯರು ಮತ್ತು ಅವರ ಮಕ್ಕಳಿಗೆ ಶಿಕ್ಷಣ ನೀಡಲು ಫುಲೆ ದಂಪತಿಗಳೊಂದಿಗೆ ಕೆಲಸ ಮಾಡಿದರು. ಇದು ಜ್ಯೋತಿಬಾ ಫುಲೆ ನೇತೃತ್ವದ ಸತ್ಯಶೋಧಕ್ (‘ಸತ್ಯದ ಹುಡುಕಾಟ’) ಚಳುವಳಿಯ ಒಂದು ಭಾಗವಾಗಿತ್ತು.

ಹೆಣ್ಣು ಮಕ್ಕಳಿಗೆ ಹಾಗೂ ದಲಿತರಿಗೆ ಶಿಕ್ಷಣ ನೀಡಿದ್ದಕ್ಕಾಗಿ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರನ್ನು ಕುಟುಂಬ ಮತ್ತು ಗ್ರಾಮದ ಸದಸ್ಯರು ಗ್ರಾಮದಿಂದ ಹೊರಹಾಕಿದ್ದರು. 1848 ರಲ್ಲಿ ದಲಿತ ಮಕ್ಕಳು ಮತ್ತು ಮಹಿಳೆಯರಿಗಾಗಿ ಮೊದಲ ಶಾಲೆಯನ್ನು ಪ್ರಾರಂಭಿಸುವ ಅವರ ಪ್ರಯತ್ನವನ್ನು ‘ಧರ್ಮ ವಿರೋಧಿ ಕೃತ್ಯ’ ಎಂದು ಹೆಸರಿಸಿದಾಗ, ಫಾತಿಮಾ ಶೇಖ್ ಮತ್ತು ಅವರ ಸಹೋದರ ಉಸ್ಮಾನ್ ಅವರಿಗೆ ಸಹಾಯ ಮಾಡಿದರು. ಫುಲೆಯವರ ವಿಚಾರಗಳಿಂದ ಪ್ರೇರಿತರಾದ ಉಸ್ಮಾನ್ ತಮ್ಮ ಸಹೋದರಿಯನ್ನು ವಿದ್ಯಾಭ್ಯಾಸ ಮಾಡಲು ಪ್ರೇರೇಪಿಸಿದರು. ಸಾವಿತ್ರಿಬಾಯಿಯವರೊಂದಿಗೆ ಶೇಖ್ ಶಿಕ್ಷಕರಾಗಿ ತರಬೇತಿ ಪಡೆಯಲು ಶ್ರಮಿಸಿದರು.

ಫುಲೆ ದಂಪತಿಗಳ ಜೊತೆಗೆ ಶೇಖ್ ಕೂಡ ಸಾಮಾಜಿಕ ಅವಮಾನದ ಕಷ್ಟಗಳನ್ನು ಎದುರಿಸಿದರು. ಏಕೆಂದರೆ, ಅವರು ಬ್ರಾಹ್ಮಣ ಜಾತಿಯ ಕಟ್ಟುನಿಟ್ಟಿನ ರಚನೆಗಳ ವಿರುದ್ಧ ಹೋರಾಡಿದರು. ಅವರು ಪ್ರಬಲ ಜಾತಿಗಳ ಜನರು ಮತ್ತು ತಮ್ಮದೇ ಸಮುದಾಯದ ವ್ಯಕ್ತಿಗಳಿಂದ ಕಲ್ಲು ಮತ್ತು ಹಸುವಿನ ಸಗಣಿಯಿಂದ ದಾಳಿಯನ್ನೂ ಎದುರಿಸಿದರು. ಶೇಖ್ ಅವರನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಸಮುದಾಯಗಳು ‘ಅಧರ್ಮಿ’ ಎಂದು ಪರಿಗಣಿಸಿದ್ದರು.

ಯಾವುದಕ್ಕೂ ಜಗ್ಗದ ಶೇಖ್.. ತಾವು ಕಲಿತು, ಹೆಣ್ಣು ಮಕ್ಕಳಿಗೂ ಕಲಿಸಿದರು. ಕುಟುಂಬಗಳು ತಮ್ಮ ಹುಡುಗಿಯರನ್ನು ಶಾಲೆಗೆ ಕಳುಹಿಸಲು ಪ್ರೋತ್ಸಾಹಿಸುವ ಸಲುವಾಗಿ ಮನೆಮನೆಗೆ ಭೇಟಿ ನೀಡಿದರು.

ಜೊತೆಜೊತೆಗೆ ಶಾಲಾ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದರು. ಶೇಖ್ ಅವರ ಕೊಡುಗೆಗಳಿಲ್ಲದಿದ್ದರೆ, ಫುಲೆಯವರ ಶೀಕ್ಷಣ ಕ್ರಾಂತಿಯ ಗುರಿ ಅಪೂರ್ಣವಾಗುತ್ತಿತ್ತು. ಶೇಖ್ ಅವರು ಶಿಕ್ಷಣದ ಧ್ಯೇಯವನ್ನು ಜೀವಂತವಾಗಿಡಲು ಶ್ರಮಿಸಿದ್ದಲ್ಲದೆ, ಸಾವಿತ್ರಿಬಾಯಿಯವರಿಗೆ ಮತ್ತು ಸತ್ಯಶೋಧಕ ಚಳುವಳಿಗೆ ಬೆಂಬಲವಾಗಿ ನಿಂತಿದ್ದರು. ಸಾವಿತ್ರಿಬಾಯಿ ಫುಲೆ ಅವರು ಜ್ಯೋತಿರಾವ್ ಫುಲೆ ಅವರಿಗೆ ಬರೆದ ಪತ್ರಗಳಲ್ಲಿ ಇದನ್ನು ಕಾಣಬಹುದು. ಅದರಲ್ಲಿ ಅವರು ಫಾತಿಮಾ ಶೇಖ್ ಬಗ್ಗೆ ಮೆಚ್ಚುಗೆ ಮತ್ತು ಪ್ರೀತಿಯಿಂದ ಮಾತನಾಡುತ್ತಾರೆ. ಶೇಖ್ ಆಕೆಯ ಜೀವನ ಅಥವಾ ಕೆಲಸದ ಬಗ್ಗೆ ಯಾವುದೇ ವಿಷಯವನ್ನು ದಾಖಲಿಸಿಲ್ಲ; ಇತರರು ಕೂಡಾ ಬರೆದಿಲ್ಲ. ಆದರೆ, ಸಾವಿತ್ರಿಬಾಯಿಯವರ ಪತ್ರಗಳು ಫಾತಿಮಾ ಶೇಖ್ ಅವರು ನೀಡಿದ ಕೊಡುಗೆಗಳ ಮಾಹಿತಿಯ ಪ್ರಮುಖ ಮೂಲವಾಗಿದೆ.

ಸುದೀರ್ಘ ಹೋರಾಟ ಹಾಗೂ ಬರಹಗಾರರ ಪ್ರಚಾರದಿಂದ ಸಾವಿತ್ರಿಬಾಯಿ ಇಂದು ಸೂಕ್ತ ಮನ್ನಣೆಯನ್ನು ಪಡೆದಿದ್ದಾರೆ. ಆದರೆ, ಶೇಖ್ ಅವರು ಭಾರತೀಯ ಇತಿಹಾಸದಲ್ಲಿ ಹೆಚ್ಚಾಗಿ ಗುರುತಿಸಲ್ಪಟ್ಟಿಲ್ಲ. ಅವರ ಕೊಡುಗೆಗಳನ್ನು ಬೇಕಂತಲೇ ನಿರ್ಲಕ್ಷಿಸಲಾಗಿದೆ. ಆಕೆ, ಧಾರ್ಮಿಕ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಪರವಾಗಿ ಹೋರಾಡಿದವರಲ್ಲಿ ಒಬ್ಬರಾಗಿದ್ದಾರೆ. ದಲಿತ -ಮುಸ್ಲಿಂ ಸಮುದಾಯಗಳ ಮಹಿಳೆಯರು ಮತ್ತು ಮಕ್ಕಳಿಗೆ ಶಿಕ್ಷಣ ಕಲಿಸುವ ಕೆಲಸದಲ್ಲಿದ್ದ ಅವರು, ಹಿಂದೂಗಳಿಂದ ಮಾತ್ರವಲ್ಲದೆ ಸಾಂಪ್ರದಾಯಿಕ ಮುಸ್ಲಿಮರಿಂದಲೂ ವಿರೋಧವನ್ನು ಎದುರಿಸಿದರು.

19ನೇ ಶತಮಾನದಲ್ಲಿ ಹಿಂದೂ ಮಹಿಳೆಯರಂತೆ ಮುಸ್ಲಿಮ್ ಮಹಿಳೆಯರಿಗೂ ಶಿಕ್ಷಣ ಪಡೆಯಲು ಅವಕಾಶ ಇರಲಿಲ್ಲ. ಸಾಮಾಜಿಕ ಕಟ್ಟುಪಾಡುಗಳು ಉತ್ತುಂಗದಲ್ಲಿದ್ದ ಕಾಲಘಟ್ಟದಲ್ಲಿ ಅವರು ಬ್ರಾಹ್ಮಣ್ಯದ ಪ್ರಾಬಲ್ಯವನ್ನು ಮತ್ತು ಇಸ್ಲಾಂ ಮೂಲಭೂತವಾದವನ್ನು, ಮುಸ್ಲಿಂ ಮಹಿಳೆಯಾಗಿ ಎದುರು ಹಾಕಿಕೊಳ್ಳಬೇಕಾಗಿರಲಿಲ್ಲ. ಫುಲೆ ದಂಪತಿಗಳಿಂದ ಪ್ರಭಾವಿತರಾಗಿದ್ದ ಅವರು, ದಲಿತರು, ಆದಿವಾಸಿ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳಿಗಾಗಿ ಹೋರಾಡುವುದನ್ನು ಮುಂದುವರಿಸಿದರು.

ಮಹಾರಾಷ್ಟ್ರ ಸರ್ಕಾರವು 2014 ರಲ್ಲಿ ಶೇಖ್ ಅವರ ಕೊಡುಗೆಗಳನ್ನು ಗುರುತಿಸಲು ಮತ್ತು ಮೌಲ್ಯೀಕರಿಸಲು ಪ್ರಯತ್ನಗಳನ್ನು ಮಾಡಿತು. ಡಾ. ಎ.ಪಿ.ಜೆ. ಅಬ್ದುಲ್ ಕಲಾಂ, ಸರ್ ಸೈಯದ್ ಅಹ್ಮದ್ ಖಾನ್ ಮತ್ತು ಜಾಕಿರ್ ಹುಸೇನ್ ಅವರ ಜತೆಗೆ ಉರ್ದು ಶಾಲಾ ಪಠ್ಯಪುಸ್ತಕಗಳಲ್ಲಿ ಸಂಕ್ಷಿಪ್ತ ವಿವರವನ್ನು ಪ್ರಕಟಿಸಿತು.

ಇದನ್ನೂ ಓದಿ; ಸಾವಿತ್ರಿಬಾಯಿ ಫುಲೆ ಬ್ಯಾನರ್ ಹರಿದ ಕಿಡಿಗೇಡಿಗಳು; ಐವರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...