Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ಆಶಾ ಭಾವನೆ ಮೂಡಿಸಿದ ಮಹಾರಾಷ್ಟ್ರದ ಕ್ಷಮಾದಾನ ನೀತಿ

ಬಿಲ್ಕಿಸ್ ಬಾನು ಪ್ರಕರಣ: ಆಶಾ ಭಾವನೆ ಮೂಡಿಸಿದ ಮಹಾರಾಷ್ಟ್ರದ ಕ್ಷಮಾದಾನ ನೀತಿ

- Advertisement -
- Advertisement -

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಜೈಲಿನಿಂದ ಅವಧಿಪೂರ್ವ ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಈ ಬೆನ್ನಲ್ಲೇ ಅಪರಾಧಿಗಳು ಬಿಡುಗಡೆ ಕೋರಿ ಮಹಾರಾಷ್ಟ್ರ ಸರ್ಕಾರದ ಮೊರೆ ಹೋಗಬಹುದು, ಮಹಾರಾಷ್ಟ್ರದ ಹಿಂದುತ್ವವಾದಿ ಸರ್ಕಾರ ಅವರನ್ನು ಬಿಡುಗಡೆ ಮಾಡಬಹುದು ಎಂಬ ಆತಂಕ ಸ್ವತಃ ಬಿಲ್ಕಿಸ್ ಬಾನು ಸೇರಿದಂತೆ ಬಹುತೇಕರಿಗೆ ಶುರುವಾಗಿದೆ. ಆದರೆ, ಮಹಾರಾಷ್ಟ್ರದ ಒಂದು ಕಾನೂನು ಈ ಆತಂಕವನ್ನು ದೂರ ಮಾಡುವ ಆಶಾ ಭಾವನೆ ಜೀವಪರರಲ್ಲಿ ಮೂಡಿಸಿದೆ.

ಬಿಲ್ಕಿಸ್ ಬಾನು ಪ್ರಕರಣ ಗುಜರಾತ್‌ನಲ್ಲಿ ನಡೆದಿದ್ದರೂ, ಸುಪ್ರೀಂ ಕೋರ್ಟ್‌ ಆದೇಶದಂತೆ ವಿಚಾರಣೆ ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ನಡೆದಿತ್ತು. ಮಹಾರಾಷ್ಟ್ರದ ಗ್ರೇಟರ್ ಮುಂಬೈ ವಿಶೇಷ ನ್ಯಾಯಾಲಯ 2008ರ ಜನವರಿ 21ರಂದು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹಾಗಾಗಿ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಮಹಾರಾಷ್ಟ್ರ ಸರ್ಕಾರಕ್ಕಿದೆ. ಸೋಮವಾರ ಸುಪ್ರೀಂ ಕೋರ್ಟ್‌ ತೀರ್ಪು ನಿಡುವಾಗಲೂ ಗುಜರಾತ್‌ ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಇಲ್ಲ ಎಂದಿರುವುದು ಕೂಡ ಇದೇ ವಿಚಾರಕ್ಕೆ.

ಆದರೆ, ಮುಂಬೈ ನ್ಯಾಯಾಲಯದ ತೀರ್ಪಿನ ಪ್ರಕಾರ 11 ಅಪರಾಧಿಗಳು ಕ್ಷಮಾದಾನ ಪಡೆಯುವ ಮೊದಲು ಕನಿಷ್ಠ 18 ವರ್ಷ ಶಿಕ್ಷೆ ಅನುಭವಿಸಿರಬೇಕು. ಇದರರ್ಥ ಎಲ್ಲಾ ಹನ್ನೊಂದು ಅಪರಾಧಿಗಳು 2026ರಲ್ಲಿ ಮಾತ್ರ ಕ್ಷಮಾದಾನ ಪಡೆಯಲು ಅರ್ಹರಾಗಿರುತ್ತಾರೆ. ಅಲ್ಲದೆ ಅತೀವ ಹಿಂಸೆಗೆ ತುತ್ತಾದ ಮಹಿಳೆಯರ ಪ್ರಕರಣಗಳನ್ನು 2008ರ ಮಹಾರಾಷ್ಟ್ರ ಕ್ಷಮಾದಾನ ನೀತಿ ಪ್ರತ್ಯೇಕವಾಗಿ ಗುರುತಿಸಿದ್ದು, ಇದರ ಅಡಿಯಲ್ಲಿ ಅಪರಾಧಿಗಳು 28 ವರ್ಷಗಳ ಶಿಕ್ಷೆ ಅನುಭವಿಸಿದ ನಂತರವಷ್ಟೇ ಕ್ಷಮಾದಾನಕ್ಕೆ ಅರ್ಹರಾಗಿರುತ್ತಾರೆ. ಈ ನಿಯಮ ಪ್ರಕರಣದ 11 ಅಪರಾಧಿಗಳಿಗೆ ಅನ್ವಯವಾಗುವ ಸಾಧ್ಯತೆಯಿದ್ದು, ಕನಿಷ್ಠ ಇನ್ನೂ 12 ವರ್ಷಗಳ ಕಾಲ ಅಂದರೆ 2036ರವರೆಗೆ ಅವರು ಸೆರೆವಾಸ ಅನುಭವಿಸಬೇಕಾಗಬಹುದು. 2008ರ ನೀತಿಗೆ ಮೊದಲು, ಮಹಾರಾಷ್ಟ್ರದಲ್ಲಿ 1992ರ ನೀತಿಯಡಿ ಕ್ಷಮಾದಾನ ನೀಡಲಾಗುತ್ತಿತ್ತು.

ಅಪರಾಧಿಗಳು 28 ವರ್ಷಗಳ ಶಿಕ್ಷೆ ಅನುಭವಿಸಿದ ನಂತರವಷ್ಟೇ ಕ್ಷಮಾದಾನಕ್ಕೆ ಅರ್ಹರಾಗಿರುತ್ತಾರೆ ಎಂಬ ಮಹಾರಾಷ್ಟ್ರದ 2008ರ ಕ್ಷಮಾದಾನ ನೀತಿ ಬಿಲ್ಕಿಸ್ ಬಾನು ಮತ್ತು ಆಕೆಯನ್ನು ಬೆಂಬಲಿಸುವ ಮನುಷ್ಯರಲ್ಲಿ ಆಶಾಭಾವನೆ ಮೂಡಿಸಿದೆ. ಆದರೂ, ಈಗ ಅತೀವ ಸಂತಸಪಡುವಂತಿಲ್ಲ.

ಮುಂದೆ ನಡೆಯಬೇಕಾಗಿರುವುದು ಅಪರಾಧಿಗಳು ಸುಪ್ರೀಂ ಕೋರ್ಟ್‌ ಆದೇಶದಂತೆ ಎರಡು ವಾರಗಳಲ್ಲಿ ಜೈಲಿಗೆ ಮರಳಬೇಕು. ಒಂದು ವೇಳೆ ಅವರು ತಪ್ಪಿಸಿಕೊಂಡರೆ ಪೊಲೀಸರು ಬಂಧಿಸಿ ಕರೆ ತರಲಿದ್ದಾರೆ. ಜೈಲು ಸೇರುವ ಮುನ್ನ ಅಥವಾ ನಂತರ ಅವರು ಕ್ಷಮಾದಾನ ಕೋರಿ ಮಹಾರಾಷ್ಟ್ರ ಸರ್ಕಾರದ ಮೊರೆ ಹೋಗಬಹುದು. ಮಹಾರಾಷ್ಟ್ರ ಸರ್ಕಾರ ಅವರನ್ನು ಬಿಡುಗಡೆ ಮಾಡಿದರೆ, ಬಿಲ್ಕಿಸ್ ಬಾನು ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿ ಬಿಡುಗಡೆ ಪ್ರಶ್ನಿಸುವ ಸಾಧ್ಯತೆ ಇದೆ. ಬಳಿಕ ಪ್ರಕರಣ ಸುಪ್ರೀಂ ಕೋರ್ಟ್‌ ತೀರ್ಪಿನ ಮೇಲೆ ನಿರ್ಧರಿತವಾಗಿರುತ್ತದೆ.

ಒಂದು ವೇಳೆ ಮಹಾರಾಷ್ಟ್ರ ಸರ್ಕಾರ ಬಿಡುಗಡೆ ಮನವಿ ತಳ್ಳಿ ಹಾಕಿದರೆ, ಅತ್ಯಾಚಾರಿಗಳು ತಮ್ಮ ಶಿಕ್ಷೆಯ ಅವಧಿ ಮುಗಿಯುವವರೆಗೆ ಜೈಲಿನಲ್ಲಿ ಇರಬೇಕಾಗುತ್ತದೆ. ಇದರಿಂದ ಒಂದು ಹಂತದಲ್ಲಿ ಬಿಲ್ಕಿಸ್ ಬಾನು ಹೋರಾಟಕ್ಕೆ ಜಯ ಸಿಕ್ಕಿದಂತಾಗುತ್ತದೆ.

ಗುಜರಾತ್‌ ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್‌ ಅಸಮಧಾನ

ನಿನ್ನೆ ಪ್ರಕಟವಾದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, “ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸರ್ಕಾರ ಮಹಾರಾಷ್ಟ್ರ ಸರ್ಕಾರದ ಅಧಿಕಾರ ಕಸಿದುಕೊಂಡಿದ್ದು ಸರಿಯಲ್ಲ. ಅಪರಾಧಿಗಳಿಗೆ ಕ್ಷಮಾದಾನ ನೀಡುವ ಮನವಿಯನ್ನು ನಿರ್ಧರಿಸಲು ಗುಜರಾತ್‌ ಸಮರ್ಥವಾಗಿದೆ ಎಂದು ಘೋಷಿಸಿದ ಮೇ 2022ರ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಗುಜರಾತ್ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕಿತ್ತು. ಸಿಆರ್‌ಪಿಸಿ 437ನೇ ಸೆಕ್ಷನ್‌ ಪ್ರಕಾರ ಮಹಾರಾಷ್ಟ್ರವೇ ಸೂಕ್ತ ಸರ್ಕಾರ ಎಂದು ಗುಜರಾತ್ ಈ ಹಿಂದೆ ಸರಿಯಾಗಿ ವಾದಿಸಿತ್ತು. ಆದರೆ ಅದನ್ನು ಸರ್ವೋಚ್ಚ ನ್ಯಾಯಾಲಯ ತಳ್ಳಿಹಾಕಿದಾಗ ಗುಜರಾತ್ ಮರುಪರಿಶೀಲನಾ ಅರ್ಜಿ ಸಲ್ಲಿಸಬಹುದಿತ್ತು. ಮೇ 13, 2022ರ ತೀರ್ಪನ್ನು ತಿದ್ದುಪಡಿ ಮಾಡುವಂತೆ ಕೋರಿ ಗುಜರಾತ್ ಸರ್ಕಾರ ಏಕೆ ಮರುಪರಿಶೀಲನೆ ಸಲ್ಲಿಸಲಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ಈ ಪ್ರಕರಣದಲ್ಲಿ ಬಿಡುಗಡೆ ಎಂಬುದು ಅಧಿಕಾರ ಮತ್ತು ನ್ಯಾಯವ್ಯಾಪ್ತಿಯಿಲ್ಲದ ಆದೇಶಗಳಿಂದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

ಅತ್ಯಾಚಾರಿಗಳು ಕನಿಷ್ಠ 28 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು

ಅಪರಾಧಿಗಳ ಬಿಡುಗಡೆಗೆ ಯಾವ ನೀತಿ ಅನ್ವಯಿಸುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆಯ ಕೊರತೆಯಿದೆ. ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಧೀಶರು 2008ರ ನೀತಿ ಅನ್ವಯಿಸಿದ್ದರು. ಮತ್ತೊಂದೆಡೆ 1992ರ ನೀತಿ ಅನ್ವಯಿಸಿದರೂ ಕೂಡ, ಲೈಂಗಿಕ ವಿಷಯಗಳಿಗೆ ಸಂಬಂಧಿಸಿದ ಕೊಲೆಗಳಿಗಾಗಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವವರ ಪ್ರಕರಣಗಳಲ್ಲಿ ಕನಿಷ್ಠ 22 ವರ್ಷಗಳನ್ನು ಪೂರೈಸಿದ ನಂತರವೇ ವಿನಾಯಿತಿ ದೊರೆಯಲಿದ್ದು, ಅಸಾಧಾರಣ ಹಿಂಸಾಚಾರ ಅಥವಾ ವಿಕೃತತೆಯನ್ನು ಒಳಗೊಂಡಿದ್ದರೆ ಕನಿಷ್ಠ ಶಿಕ್ಷೆಯ ಅವಧಿ 28 ವರ್ಷಗಳಾಗುತ್ತವೆ. ಈ ನೀತಿ ಅನ್ವಯ ಪ್ರಕರಣದ ಅಪರಾಧಿಗಳು 2030 ಅಥವಾ 2036ರ ನಂತರವಷ್ಟೇ ಬಿಡುಗಡೆಗೆ ಅರ್ಹರಾಗುತ್ತಾರೆ.

ಸುಪ್ರೀಂ ತೀರ್ಪಿನ ಬಗ್ಗೆ ಯಾರು ಏನಂದ್ರು?

“ನಾನು ಸುಪ್ರೀಂ ಕೋರ್ಟ್‌ ತೀರ್ಪನ್ನು ಸ್ವಾಗತಿಸುತ್ತೇನೆ. ಆದರೆ, ನ್ಯಾಯಾಲಯ ತೀರ್ಪು ನೀಡುವಾಗ, ಗುಜರಾತ್ ಸರ್ಕಾರ ತನ್ನೆಲ್ಲ ಮಿತಿಗಳನ್ನು ಮೀರಿ, ಅನ್ಯಾಯದ ಮಾರ್ಗದ ಮೂಲಕ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದೆ. ಇದು ನನಗೆ ಆಘಾತವನ್ನು ಉಂಟು ಮಾಡಿದೆ. ಅತ್ಯಂತ ಕ್ರೂರ ಕೃತ್ಯ ಎಸಗಿದವರನ್ನು ರಕ್ಷಣೆ ಮಾಡುವ ದರ್ದು ಗುಜರಾತ್ ಸರ್ಕಾರಕ್ಕೆ ಯಾಕಿದೆ? ಗುಜರಾತ್ ಸರ್ಕಾರ ಅಪರಾಧಿಗಳ ಬಿಡುಗಡೆಗೆ ಯಾಕಿಷ್ಟು ಮುತುವರ್ಜಿ ವಹಿಸುತ್ತಿದೆ ಎಂದು ತಿಳಿಯುತ್ತಿಲ್ಲ. ಅಪರಾಧಿಗಳು ಮಹಾರಾಷ್ಟ್ರ ಸರ್ಕಾರದ ಮೊರೆ ಹೋದರೆ ನಾವು ಹೋರಾಟ ಮುಂದುವರಿಸುತ್ತೇವೆ. ಬಿಲ್ಕಿಸ್ ಮೇಲೆ ದೌರ್ಜನ್ಯ ನಡೆದ ಕೆಲ ದಿನಗಳಲ್ಲೇ ನಾನು ಆಕೆಯನ್ನು ಭೇಟಿಯಾಗಿದ್ದೆ. ಅವತ್ತು ಆಕೆಯ ಮುಖದಲ್ಲಿದ್ದ ನೋವು, ಇವತ್ತಿಗೂ ನನ್ನ ಕಣ್ಣ ಮುಂದೆ ಬರುತ್ತಿದೆ” ಎಂದು ಬಿಲ್ಕಿಸ್ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಸಾಮಾಜಿಕ ಹೋರಾಟಗಾರ್ತಿ ಸುಭಾಶಿನಿ ಅಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪಿನ ಬೆನ್ನಲ್ಲೇ ಟಿವಿ ವಾಹಿನಿಯೊಂದರಲ್ಲಿ ಮಾತನಾಡಿದ ಮಹಿಳಾ ಹಕ್ಕುಗಳ ವಕೀಲೆ ಆಭಾ ಸಿಂಗ್, “ಬಿಲ್ಕಿಸ್ ಬಾನುಗೆ ನ್ಯಾಯ ದೊರೆತಿದೆ, ಆಕೆಗೆ ನ್ಯಾಯ ದೊರಕಿಸಿ ಕೊಡಲಾಗಿದೆ. ಇದೊಂದು ದೊಡ್ಡ ಜಯ. ಒಳ್ಳೆಯದನ್ನು ಯೋಚನೆ ಮಾಡುವ ಎಲ್ಲಾ ಮನುಷ್ಯರಿಗೆ ಸಿಕ್ಕ ಜಯ. ಗುಜರಾತ್ ಸರ್ಕಾರ ತಪ್ಪಾದ ರೀತಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತೊಬ್ಬರು ವಕೀಲೆ ಫ್ಲಾವಿಯ ಇಗ್ನಿಸ್ ಮಾತನಾಡಿ, ನಾನು ತೀರ್ಪು ಸ್ವಾಗತಿಸುತ್ತೇನೆ. ಇದೊಂದು ಅತ್ಯದ್ಭುತ ತೀರ್ಪ. ಅಪರಾಧಿಗಳನ್ನು ಬಿಡುಗಡೆ ಮಾಡಿದ್ದಾಗ ಹೂಮಾಲೆ ಹಾಕಿ ಸ್ವಾಗತಿಸುವ ಮೂಲಕ, ನ್ಯಾಯ ನಿರೀಕ್ಷೆ ಮಾಡುವ ಸರ್ವರಿಗೂ ಅವಮಾನ ಮಾಡಲಾಗಿತ್ತು. ಸುಪ್ರೀಂ ಕೋರ್ಟ್‌ ಒಳ್ಳೆಯ ತೀರ್ಪಿನ ಮೂಲಕ ನಮನ್ನು ನಿರಾಳವಾಗಿಸಿದೆ ಎಂದಿದ್ದಾರೆ.

ಹಿರಿಯ ವಕೀಲೆ ವೃಂದಾ ಗ್ರೋವರ್ ಅವರು ಸುಪ್ರೀಂ ತೀರ್ಪನ್ನು ಸ್ವಾಗತಿಸಿದ್ದಾರೆ. ಗುಜರಾತ್ ಸರ್ಕಾರ ತಪ್ಪಾದ ರೀತಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಗುಜರಾತ್ ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಇಲ್ಲ. ಆದರೂ, ಸರ್ಕಾರ ಮಿತಿಗಳನ್ನು ಮೀರಿ ಅಪರಾಧಿಗಳನ್ನು ರಕ್ಷಿಸುವ ಪ್ರಯತ್ನ ಮಾಡಿದೆ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ ಎಂದಿದ್ದಾರೆ.

ಇದನ್ನೂ ಓದಿ : ಸುಪ್ರೀಂ ತೀರ್ಪಿನ ಬೆನ್ನಲ್ಲೇ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಮನೆಗಳಿಗೆ ಬೀಗ: ತಲೆ ಮರೆಸಿಕೊಂಡ್ರಾ ಅಪರಾಧಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...