Homeಮುಖಪುಟಅರ್ಜುನ ಪ್ರಶಸ್ತಿ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

- Advertisement -
- Advertisement -

ಭಾರತೀಯ ಕ್ರಿಕೆಟಿಗ, ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.

2023ರಲ್ಲಿ ಅದ್ಭುತ ಪ್ರದರ್ಶನ ನೀಡಿದ ಶಮಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪ್ರತಿಷ್ಠಿತ ಗೌರವಕ್ಕೆ ಮೊಹಮ್ಮದ್ ಶಮಿ ಹೆಸರನ್ನು ಶಿಫಾರಸು ಮಾಡಿತ್ತು.

ಪ್ರಶಸ್ತಿಗೆ ನಾಮನಿರ್ದೇಶನಗೊಂಡಾಗ ಶಮಿಯು ಸಂತಸವನ್ನು ವ್ಯಕ್ತಪಡಿಸಿದ್ದರು. ಈ ಪ್ರಶಸ್ತಿಯು ಒಂದು ಕನಸು, ಹಲವಾರು ಮಂದಿ ತಮ್ಮ ಜೀವಿತಾವಧಿ ಮುಗಿದರೂ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗುವುದಿಲ್ಲ. ಈ ಪ್ರಶಸ್ತಿಗೆ ನನ್ನನ್ನು ನಾಮಕರಣ ಮಾಡಿದ್ದಕ್ಕೆ ನನಗೆ ಸಂತೋಷವಾಗಿದೆ ಮತ್ತು ನಾನು ಹೆಮ್ಮೆಪಡುತ್ತೇನೆ. ಇದು ಅನೇಕರಿಗೆ ನನಸಾಗದ ಕನಸಾಗಿದೆ ಎಂದು ಶಮಿ ಸೋಮವಾರ ದೇಶದ ಎರಡನೇ ಅತಿದೊಡ್ಡ ಕ್ರೀಡಾ ಗೌರವಕ್ಕೆ ನಾಮನಿರ್ದೇಶನಗೊಂಡ ಬಗ್ಗೆ ಮಾತನಾಡುತ್ತಾ ಹೇಳಿದ್ದಾರೆ.

2023ರ ಏಕದನ ವಿಶ್ವಕಪ್‌ ಪಂದ್ಯದಲ್ಲಿ ಮೊಹಮ್ಮದ್ ಶಮಿ ಭಾರತೀಯ ತಂಡದ ಪ್ರಕಾಶಮಾನವಾದ ತಾರೆಗಳಲ್ಲಿ ಒಬ್ಬರಾಗಿದ್ದರು. ಶಮಿ ಕೇವಲ ಏಳು ಪಂದ್ಯಗಳಲ್ಲಿ 24 ವಿಕೆಟ್‌ಗಳನ್ನು ಪಡೆದರು. ಈ ಮೂಲಕ ಹಲವಾರು ದಾಖಲೆಗಳನ್ನು ಮುರಿದರು ಮತ್ತು ಪಂದ್ಯಾವಳಿಯ ಇತಿಹಾಸದಲ್ಲಿ ಭಾರತದ ಸಾರ್ವಕಾಲಿಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಶಮಿ ಈ ಟೂರ್ನಿಯಲ್ಲಿ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗಿಂತ ಹೆಚ್ಚು ವಿಕೆಟ್‌ಗಳನ್ನು ಗಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು.

ಶಮಿ ಉತ್ತರಪ್ರದೇಶದ ಅಮ್ರೋಹದ ಸಹಸ್ಪುರ ಗ್ರಾಮದ ನಿವಾಸಿಯಾಗಿದ್ದಾರೆ. ಅವರ ತಂದೆ ತೌಸೀಫ್‌ ಅಲಿ ರೈತರಾಗಿದ್ದಾರೆ. ಇವರ ತಂದೆ ತಾಯಿಗೆ ಐವರು ಮಕ್ಕಳು. ಶಮಿ ತಮ್ಮ ಯೌವನದಲ್ಲಿ ವೇಗದ ಬೌಲರ್ ಆಗಿದ್ದರು. ಶಮಿ 15 ವರ್ಷದವನಾಗಿದ್ದಾಗ ಅವರ ಮನೆಯಿಂದ 22 ಕಿಲೋಮೀಟರ್ ದೂರದಲ್ಲಿರುವ ಮೊರದಾಬಾದ್‌ನಲ್ಲಿರುವ ಕ್ರಿಕೆಟ್ ತರಬೇತುದಾರ ಬದ್ರುದ್ದೀನ್ ಸಿದ್ದಿಕ್ ಬಳಿಗೆ ತರಬೇತಿಗೆ ತೆರಳಿದ್ದರು. ಅಲ್ಲಿ ಪರಿಶ್ರಮದಿಂದ ತರಭೇತಿಯನ್ನು ಪಡೆದರು. ಆದರೆ ಉತ್ತರಪ್ರದೇಶದ ಅಂಡರ್‌ 19 ತಂಡಕ್ಕೆ ಪ್ರವೇಶ ಸಿಕ್ಕಿರಲಿಲ್ಲ. 2005ರಲ್ಲಿ ಇವರನ್ನು ರಾಜ್ಯ ತಂಡಕ್ಕೆ ಆಯ್ಕೆ ಮಾಡುವ ಉದ್ದೇಶದಿಂದ ಕೋಚ್‌ ಬದ್ರುದ್ದೀನ್ ಕೊಲ್ಕತ್ತಾಗೆ ಕಳುಹಿಸಿದ್ದರು. ಆ ಬಳಿಕ ಅವರು ಬಂಗಾಳ ಕ್ರಿಕೆಟ್‌ ಅಸೋಸಿಯೇಷನ್‌ ಮಾಜಿ ಸಹಾಯಕ ಕಾರ್ಯದರ್ಶಿ ದೇಬಬ್ರತ ದಾಸ್‌ ಅವರ ಕ್ಲಬ್‌ನಲ್ಲಿ ತರಬೇತಿಯನ್ನು ಪಡೆದಿದ್ದರು. ಶಮಿ ಅವರನ್ನು 2010-11ರಲ್ಲಿ ರಣಜಿ ಟ್ರೋಪಿಗೆ ಬಂಗಾಳ ತಂಡಕ್ಕೆ ಸೇರಿಸಲಾಗಿತ್ತು. ಬಳಿಕ 2010ರಲ್ಲಿ ಅವರು ಟ್ವೆಂಟಿ20 ಪಂದ್ಯಗಳಲ್ಲಿ ಆಡಿದ್ದರು. 2013ರಲ್ಲಿ ಅವರು ಅಂತಾರಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು.

ಏಷ್ಯನ್ ಗೇಮ್ಸ್‌ನ ತಾರೆಗಳಿಗೂ ಪ್ರಶಸ್ತಿ ಪ್ರಧಾನ:
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಏಷ್ಯನ್ ಗೇಮ್ಸ್ ತಾರೆ ಶೀತಲ್ ದೇವಿ ಅವರಿಗೆ ಅರ್ಜುನ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಇದಲ್ಲದೆ ಭಾರತದ ಏಷ್ಯನ್ ಗೇಮ್ಸ್ ಹೀರೋಗಳಾದ ಅದಿತಿ ಗೋಪಿಚಂದ್ ಸ್ವಾಮಿ, ಶ್ರೀಶಂಕರ್ ಮುರಳಿ, ಪಾರುಲ್ ಚೌಧರಿ, ಇಶಾ ಸಿಂಗ್ ಮತ್ತು ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

2023 ರಲ್ಲಿ ಅರ್ಜುನ ಪ್ರಶಸ್ತಿ ಪಡೆದ ಕ್ರೀಡಾಪಟುಗಳ ಪಟ್ಟಿ

-ಓಜಸ್ ಪ್ರವೀಣ್ ಡಿಯೋಟಾಲೆ (ಬಿಲ್ಲುಗಾರಿಕೆ)
-ಅದಿತಿ ಗೋಪಿಚಂದ್ ಸ್ವಾಮಿ (ಬಿಲ್ಲುಗಾರಿಕೆ)
-ಶ್ರೀಶಂಕರ್ ಎಂ (ಅಥ್ಲೆಟಿಕ್ಸ್)
-ಪಾರುಲ್ ಚೌಧರಿ (ಅಥ್ಲೆಟಿಕ್ಸ್)
-ಮೊಹಮೀದ್ ಹುಸಾಮುದ್ದೀನ್ (ಬಾಕ್ಸಿಂಗ್)
-ಆರ್ ವೈಶಾಲಿ (ಚೆಸ್)
-ಮೊಹಮ್ಮದ್ ಶಮಿ (ಕ್ರಿಕೆಟ್)
-ಅನುಷ್ ಅಗರ್ವಾಲಾ (ಈಕ್ವೆಸ್ಟ್ರಿಯನ್)
-ದಿವ್ಯಾಕೃತಿ ಸಿಂಗ್ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್)
-ದೀಕ್ಷಾ ದಾಗರ್ (ಗಾಲ್ಫ್)
-ಕ್ರಿಶನ್ ಬಹದ್ದೂರ್ ಪಾಠಕ್ (ಹಾಕಿ)
-ಪುಖ್ರಂಬಂ ಸುಶೀಲಾ ಚಾನು (ಹಾಕಿ)
-ಪವನ್ ಕುಮಾರ್ (ಕಬಡ್ಡಿ)
-ರಿತು ನೇಗಿ (ಕಬಡ್ಡಿ)
-ನಸ್ರೀನ್ (ಖೋ-ಖೋ)
-ಪಿಂಕಿ (ಲಾನ್ ಬೌಲ್ಸ್)
-ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್)
-ಇಶಾ ಸಿಂಗ್ (ಶೂಟಿಂಗ್)
-ಹರಿಂದರ್ ಪಾಲ್ ಸಿಂಗ್ ಸಂಧು (ಸ್ಕ್ವಾಷ್)
-ಅಹಿಕಾ ಮುಖರ್ಜಿ (ಟೇಬಲ್ ಟೆನಿಸ್)
-ಸುನಿಲ್ ಕುಮಾರ್ (ಕುಸ್ತಿ)
-ಆಂಟಿಮ್ (ಕುಸ್ತಿ)
-ನವೋರೆಮ್ ರೋಶಿಬಿನಾ ದೇವಿ (ವುಶು)
-ಶೀತಲ್ ದೇವಿ (ಪ್ಯಾರಾ ಆರ್ಚರಿ)
-ಇಲ್ಲೂರಿ ಅಜಯ್ ಕುಮಾರ್ ರೆಡ್ಡಿ (ಅಂಧ ಕ್ರಿಕೆಟ್)
-ಪ್ರಾಚಿ ಯಾದವ್ (ಪ್ಯಾರಾ ಕ್ಯಾನೋಯಿಂಗ್)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...