Homeಮುಖಪುಟಅರ್ಜುನ ಪ್ರಶಸ್ತಿ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

- Advertisement -
- Advertisement -

ಭಾರತೀಯ ಕ್ರಿಕೆಟಿಗ, ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.

2023ರಲ್ಲಿ ಅದ್ಭುತ ಪ್ರದರ್ಶನ ನೀಡಿದ ಶಮಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪ್ರತಿಷ್ಠಿತ ಗೌರವಕ್ಕೆ ಮೊಹಮ್ಮದ್ ಶಮಿ ಹೆಸರನ್ನು ಶಿಫಾರಸು ಮಾಡಿತ್ತು.

ಪ್ರಶಸ್ತಿಗೆ ನಾಮನಿರ್ದೇಶನಗೊಂಡಾಗ ಶಮಿಯು ಸಂತಸವನ್ನು ವ್ಯಕ್ತಪಡಿಸಿದ್ದರು. ಈ ಪ್ರಶಸ್ತಿಯು ಒಂದು ಕನಸು, ಹಲವಾರು ಮಂದಿ ತಮ್ಮ ಜೀವಿತಾವಧಿ ಮುಗಿದರೂ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗುವುದಿಲ್ಲ. ಈ ಪ್ರಶಸ್ತಿಗೆ ನನ್ನನ್ನು ನಾಮಕರಣ ಮಾಡಿದ್ದಕ್ಕೆ ನನಗೆ ಸಂತೋಷವಾಗಿದೆ ಮತ್ತು ನಾನು ಹೆಮ್ಮೆಪಡುತ್ತೇನೆ. ಇದು ಅನೇಕರಿಗೆ ನನಸಾಗದ ಕನಸಾಗಿದೆ ಎಂದು ಶಮಿ ಸೋಮವಾರ ದೇಶದ ಎರಡನೇ ಅತಿದೊಡ್ಡ ಕ್ರೀಡಾ ಗೌರವಕ್ಕೆ ನಾಮನಿರ್ದೇಶನಗೊಂಡ ಬಗ್ಗೆ ಮಾತನಾಡುತ್ತಾ ಹೇಳಿದ್ದಾರೆ.

2023ರ ಏಕದನ ವಿಶ್ವಕಪ್‌ ಪಂದ್ಯದಲ್ಲಿ ಮೊಹಮ್ಮದ್ ಶಮಿ ಭಾರತೀಯ ತಂಡದ ಪ್ರಕಾಶಮಾನವಾದ ತಾರೆಗಳಲ್ಲಿ ಒಬ್ಬರಾಗಿದ್ದರು. ಶಮಿ ಕೇವಲ ಏಳು ಪಂದ್ಯಗಳಲ್ಲಿ 24 ವಿಕೆಟ್‌ಗಳನ್ನು ಪಡೆದರು. ಈ ಮೂಲಕ ಹಲವಾರು ದಾಖಲೆಗಳನ್ನು ಮುರಿದರು ಮತ್ತು ಪಂದ್ಯಾವಳಿಯ ಇತಿಹಾಸದಲ್ಲಿ ಭಾರತದ ಸಾರ್ವಕಾಲಿಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಶಮಿ ಈ ಟೂರ್ನಿಯಲ್ಲಿ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗಿಂತ ಹೆಚ್ಚು ವಿಕೆಟ್‌ಗಳನ್ನು ಗಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು.

ಶಮಿ ಉತ್ತರಪ್ರದೇಶದ ಅಮ್ರೋಹದ ಸಹಸ್ಪುರ ಗ್ರಾಮದ ನಿವಾಸಿಯಾಗಿದ್ದಾರೆ. ಅವರ ತಂದೆ ತೌಸೀಫ್‌ ಅಲಿ ರೈತರಾಗಿದ್ದಾರೆ. ಇವರ ತಂದೆ ತಾಯಿಗೆ ಐವರು ಮಕ್ಕಳು. ಶಮಿ ತಮ್ಮ ಯೌವನದಲ್ಲಿ ವೇಗದ ಬೌಲರ್ ಆಗಿದ್ದರು. ಶಮಿ 15 ವರ್ಷದವನಾಗಿದ್ದಾಗ ಅವರ ಮನೆಯಿಂದ 22 ಕಿಲೋಮೀಟರ್ ದೂರದಲ್ಲಿರುವ ಮೊರದಾಬಾದ್‌ನಲ್ಲಿರುವ ಕ್ರಿಕೆಟ್ ತರಬೇತುದಾರ ಬದ್ರುದ್ದೀನ್ ಸಿದ್ದಿಕ್ ಬಳಿಗೆ ತರಬೇತಿಗೆ ತೆರಳಿದ್ದರು. ಅಲ್ಲಿ ಪರಿಶ್ರಮದಿಂದ ತರಭೇತಿಯನ್ನು ಪಡೆದರು. ಆದರೆ ಉತ್ತರಪ್ರದೇಶದ ಅಂಡರ್‌ 19 ತಂಡಕ್ಕೆ ಪ್ರವೇಶ ಸಿಕ್ಕಿರಲಿಲ್ಲ. 2005ರಲ್ಲಿ ಇವರನ್ನು ರಾಜ್ಯ ತಂಡಕ್ಕೆ ಆಯ್ಕೆ ಮಾಡುವ ಉದ್ದೇಶದಿಂದ ಕೋಚ್‌ ಬದ್ರುದ್ದೀನ್ ಕೊಲ್ಕತ್ತಾಗೆ ಕಳುಹಿಸಿದ್ದರು. ಆ ಬಳಿಕ ಅವರು ಬಂಗಾಳ ಕ್ರಿಕೆಟ್‌ ಅಸೋಸಿಯೇಷನ್‌ ಮಾಜಿ ಸಹಾಯಕ ಕಾರ್ಯದರ್ಶಿ ದೇಬಬ್ರತ ದಾಸ್‌ ಅವರ ಕ್ಲಬ್‌ನಲ್ಲಿ ತರಬೇತಿಯನ್ನು ಪಡೆದಿದ್ದರು. ಶಮಿ ಅವರನ್ನು 2010-11ರಲ್ಲಿ ರಣಜಿ ಟ್ರೋಪಿಗೆ ಬಂಗಾಳ ತಂಡಕ್ಕೆ ಸೇರಿಸಲಾಗಿತ್ತು. ಬಳಿಕ 2010ರಲ್ಲಿ ಅವರು ಟ್ವೆಂಟಿ20 ಪಂದ್ಯಗಳಲ್ಲಿ ಆಡಿದ್ದರು. 2013ರಲ್ಲಿ ಅವರು ಅಂತಾರಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು.

ಏಷ್ಯನ್ ಗೇಮ್ಸ್‌ನ ತಾರೆಗಳಿಗೂ ಪ್ರಶಸ್ತಿ ಪ್ರಧಾನ:
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಏಷ್ಯನ್ ಗೇಮ್ಸ್ ತಾರೆ ಶೀತಲ್ ದೇವಿ ಅವರಿಗೆ ಅರ್ಜುನ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಇದಲ್ಲದೆ ಭಾರತದ ಏಷ್ಯನ್ ಗೇಮ್ಸ್ ಹೀರೋಗಳಾದ ಅದಿತಿ ಗೋಪಿಚಂದ್ ಸ್ವಾಮಿ, ಶ್ರೀಶಂಕರ್ ಮುರಳಿ, ಪಾರುಲ್ ಚೌಧರಿ, ಇಶಾ ಸಿಂಗ್ ಮತ್ತು ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

2023 ರಲ್ಲಿ ಅರ್ಜುನ ಪ್ರಶಸ್ತಿ ಪಡೆದ ಕ್ರೀಡಾಪಟುಗಳ ಪಟ್ಟಿ

-ಓಜಸ್ ಪ್ರವೀಣ್ ಡಿಯೋಟಾಲೆ (ಬಿಲ್ಲುಗಾರಿಕೆ)
-ಅದಿತಿ ಗೋಪಿಚಂದ್ ಸ್ವಾಮಿ (ಬಿಲ್ಲುಗಾರಿಕೆ)
-ಶ್ರೀಶಂಕರ್ ಎಂ (ಅಥ್ಲೆಟಿಕ್ಸ್)
-ಪಾರುಲ್ ಚೌಧರಿ (ಅಥ್ಲೆಟಿಕ್ಸ್)
-ಮೊಹಮೀದ್ ಹುಸಾಮುದ್ದೀನ್ (ಬಾಕ್ಸಿಂಗ್)
-ಆರ್ ವೈಶಾಲಿ (ಚೆಸ್)
-ಮೊಹಮ್ಮದ್ ಶಮಿ (ಕ್ರಿಕೆಟ್)
-ಅನುಷ್ ಅಗರ್ವಾಲಾ (ಈಕ್ವೆಸ್ಟ್ರಿಯನ್)
-ದಿವ್ಯಾಕೃತಿ ಸಿಂಗ್ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್)
-ದೀಕ್ಷಾ ದಾಗರ್ (ಗಾಲ್ಫ್)
-ಕ್ರಿಶನ್ ಬಹದ್ದೂರ್ ಪಾಠಕ್ (ಹಾಕಿ)
-ಪುಖ್ರಂಬಂ ಸುಶೀಲಾ ಚಾನು (ಹಾಕಿ)
-ಪವನ್ ಕುಮಾರ್ (ಕಬಡ್ಡಿ)
-ರಿತು ನೇಗಿ (ಕಬಡ್ಡಿ)
-ನಸ್ರೀನ್ (ಖೋ-ಖೋ)
-ಪಿಂಕಿ (ಲಾನ್ ಬೌಲ್ಸ್)
-ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್)
-ಇಶಾ ಸಿಂಗ್ (ಶೂಟಿಂಗ್)
-ಹರಿಂದರ್ ಪಾಲ್ ಸಿಂಗ್ ಸಂಧು (ಸ್ಕ್ವಾಷ್)
-ಅಹಿಕಾ ಮುಖರ್ಜಿ (ಟೇಬಲ್ ಟೆನಿಸ್)
-ಸುನಿಲ್ ಕುಮಾರ್ (ಕುಸ್ತಿ)
-ಆಂಟಿಮ್ (ಕುಸ್ತಿ)
-ನವೋರೆಮ್ ರೋಶಿಬಿನಾ ದೇವಿ (ವುಶು)
-ಶೀತಲ್ ದೇವಿ (ಪ್ಯಾರಾ ಆರ್ಚರಿ)
-ಇಲ್ಲೂರಿ ಅಜಯ್ ಕುಮಾರ್ ರೆಡ್ಡಿ (ಅಂಧ ಕ್ರಿಕೆಟ್)
-ಪ್ರಾಚಿ ಯಾದವ್ (ಪ್ಯಾರಾ ಕ್ಯಾನೋಯಿಂಗ್)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...